BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ
ಇತರೆ ಸುದ್ಧಿಗಳು

ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ

By News Desk BenkiyabaleUpdated:May 09, 2023 4:42 pm

ತುಮಕೂರು


ರಾಜ್ಯದಲ್ಲಿ ಇಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ.
ನಾಳೆ ಜಿಲ್ಲೆಯ 2683 ಮತಗಟ್ಟೆಗಳಲ್ಲಿ ನಡೆಯುವ ಮತದಾನ ಕಾರ್ಯಕ್ಕೆ 11644 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಜಿಲ್ಲಾ ಕೇಂದ್ರ ತುಮಕೂರು ಸೇರಿದಂತೆ 10 ತಾಲ್ಲೂಕು ಕೇಂದ್ರಗಳಿಂದಲೂ 11 ವಿಧಾನಸಭಾ ಕ್ಷೇತ್ರಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‍ಗಳನ್ನು ಪಡೆದು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ತೆರಳಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ 262 ಮತಗಟ್ಟೆಗಳಿಗೆ 1152 ಅಧಿಕಾರಿಗಳು ಮತ್ತು ಸಿಬ್ಬಂದಿ, ತಿಪಟೂರು ಕ್ಷೇತ್ರದ 233 ಮತಗಟ್ಟೆಗಳಿಗೆ 1024 ಅಧಿಕಾರಿಗಳು, ತುರುವೇಕೆರೆ ಕ್ಷೇತ್ರದ 229 ಮತಗಟ್ಟೆಗಳಿಗೆ 1008 ಅಧಿಕಾರಿಗಳು, ಕುಣಿಗಲ್ ಕ್ಷೇತ್ರದ 264 ಮತಗಟ್ಟೆಗಳಿಗೆ 1160 ಅಧಿಕಾರಿಗಳು, ತುಮಕೂರು ನಗರ ಕ್ಷೇತ್ರದ 254 ಮತಗಟ್ಟೆಗಳಿಗೆ 1116 ಅಧಿಕಾರಿಗಳು ಮತ್ತು ಸಿಬ್ಬಂದಿ, ತುಮಕೂರು ಗ್ರಾಮಾಂತರ ಕ್ಷೇತ್ರದ 226 ಮತಗಟ್ಟೆಗಳಿಗೆ 996 ಅಧಿಕಾರಿಗಳು ಮತ್ತು ಸಿಬ್ಬಂದಿ, ಕೊರಟಗೆರೆ ಕ್ಷೇತ್ರದ 242 ಮತಗಟ್ಟೆಗಳಿಗೆ 904 ಅಧಿಕಾರಿಗಳು, ಗುಬ್ಬಿ ಕ್ಷೇತ್ರದ 212 ಮತಗಟ್ಟೆಗಳಿಗೆ 932 ಸಿಬ್ಬಂದಿ, ಸಿರಾ ಕ್ಷೇತ್ರದ 267 ಮತಗಟ್ಟೆಗಳಿಗೆ 1176 ಅಧಿಕಾರಿಗಳು, ಪಾವಗಡ ಕ್ಷೇತ್ರದ 246 ಮತಗಟ್ಟೆಗಳಿಗೆ 1084 ಅಧಿಕಾರಿಗಳು ಹಾಗೂ ಮಧುಗಿರಿ ಕ್ಷೇತ್ರದ 248 ಮತಗಟ್ಟೆಗಳಿಗೆ 1092 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಲಾಗಿದೆ.
ತುಮಕೂರು ನಗರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ಕಾರಿ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಮತಯಂತ್ರಗಳೊಂದಿಗೆ ತೆರಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ವೋದಯ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮತಗಟ್ಟೆಗಳಿಗೆ ಚಿ.ನಾ.ಹಳ್ಳಿಯ ಸರ್ಕಾರಿ ಸ್ವತಂತ್ರ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ತಿಪಟೂರು ಕ್ಷೇತ್ರದ ಮತಗಟ್ಟೆಗಳಿಗೆ ತಿಪಟೂರಿನ ಸರ್ಕಾರಿ ಬಾಲಕರ ಪ.ಪೂ. ಕಾಲೇಜು, ತುರುವೇಕೆರೆಯ ಮತಗಟ್ಟೆಗಳಿಗೆ ತುರುವೇಕೆರೆ ಸರ್ಕಾರಿ ಪ.ಪೂ. ಕಾಲೇಜು, ಕುಣಿಗಲ್ ಮತಗಟ್ಟೆಗಳಿಗೆ ಸರ್ಕಾರಿ ಮಹಾತ್ಮಗಾಂಧಿ ಪ.ಪೂ. ಕಾಲೇಜು, ಗುಬ್ಬಿ ಮತಗಟ್ಟೆಗಳಿಗೆ ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆಯ ಸರ್ಕಾರಿ ಪ.ಪೂ. ಕಾಲೇಜು, ಸಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪ.ಪೂ. ಕಾಲೇಜು ಹಾಗೂ ಮಧುಗಿರಿ ಕ್ಷೇತ್ರಕ್ಕೆ ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ಕರೆದೊಯ್ಯಲಾಯಿತು.
ಜಿಲ್ಲೆಯಲ್ಲಿ ಒಟ್ಟು 1120698 ಪುರುಷ ಮತದಾರರು, 1127126 ಮಹಿಳಾ ಮತದಾರರು, 108 ಇತರೆ ಸೇರಿದಂತೆ ಜಿಲ್ಲೆಯಲ್ಲಿ 2247932 ಮತದಾರರು ಹಾಗೂ 776 ಸೇವಾ ಮತದಾರರು ನಾಳೆ ತಮ್ಮ ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ.
2683 ಮತಗಟ್ಟೆಗಳಿಗೆ 362 ಬಸ್‍ಗಳು, 106 ಜೀಪ್ ಬುಲೇರೋ, ಮಿನಿಬಸ್ ಸೇರಿದಂತೆ ಒಟ್ಟು 564 ವಾಹನಗಳನ್ನು ಬಳಸಿಕೊಳ್ಳಲಾಗುವುದು ಎಂದ ಅವರು, 2683 ಮತಗಟ್ಟೆಗಳ ಪೈಕಿ 510 ಕ್ರಿಟಿಕಲ್ ಮತಗಟ್ಟೆಗಳು(ವಲ್ನರೆಬಲ್) ಹಾಗೂ 1363 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಪೆÇಲೀಸರು ಮತ್ತು 500 ತಮಿಳುನಾಡು ಪೆÇಲೀಸರು ಹಾಗೂ ಹೋಂಗಾರ್ಡ್ಸ್‍ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

 

(Visited 1 times, 1 visits today)
tumkur
Previous Articleಮತದಾನ ಮಾಡಲು 12 ಪರ್ಯಾಯ ದಾಖಲೆಗಳು
Next Article ಚುನಾವಣೆ : ಸಕಲ ಸಿದ್ಧತೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.