BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಬ್ಬರದ ಮಳೆಗೆ ಬೆಳೆನಾಶ : ರೈತ ಕಂಗಾಲು
ತುಮಕೂರು ಜಿಲ್ಲಾ ಸುದ್ಧಿಗಳು

ಅಬ್ಬರದ ಮಳೆಗೆ ಬೆಳೆನಾಶ : ರೈತ ಕಂಗಾಲು

By News Desk BenkiyabaleUpdated:October 22, 2024 5:48 pm

ತುಮಕೂರು:


ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು, ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.
ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ,ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ,ಮನೆಗಳು,ಗುಡಿಸಲುಗಳು ನೆಲಕಚ್ಚಿವೆ.ಜನ ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ.ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಳೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ರೈತ ಸಂಘದ ಆಗ್ರಹವಾಗಿದೆ ಎಂದರು.
ರೈತರು ಹತ್ತಾರು ವರ್ಷಗಳಿಂದ ಸರಕಾರಿ ಭೂಮಿಯನ್ನು ಉಳುಮೆ ಮಾಡುತ್ತಾ ಫಾರಂ ನಂ ೫೦,೫೩ ಮತ್ತು ೫೭ ಅಡಿಯಲ್ಲಿ ಸರಕಾರಕ್ಕೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೂ ಬಡವರಿಗೆ ಭೂಮಿ ಸಿಕ್ಕಿಲ್ಲ.ಆದರೆ ಉಳ್ಳುವರಿಗೆ ಭೂಮಿ ದೊರೆಯುತ್ತಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳೇ ಬಗರ್‌ಹುಕ್ಕಂ ಸಾಗುವಳಿ ಅರ್ಜಿಗಳನ್ನು ತುರ್ತು ವಿಲೇವರಿ ಮಾಡುವಂತೆ ಸೂಚನೆ ನೀಡಿದ್ದರೂ ತಹಶೀಲ್ದಾರರುಗಳು ಗಮನಹರಿಸಿದಂತೆ ಕಂಡು ಬರುತ್ತಿಲ್ಲ.ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಬಗರ್‌ಹುಕ್ಕಂ ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಆರ್ಹ ರೈತರಿಗೂ ಭೂಮಿ ಮಂಜೂರು ಮಾಡಬೇಕೆಂದು ರೈತ ಸಂಘ ಆಗ್ರಹಿಸುತ್ತದೆ ಎಂದು ಗೋವಿಂದರಾಜು ತಿಳಿಸಿದರು.
ಕುಲಾಂತರಿ ಬೀಜದಿಂದ ವಾತಾವರಣದ ಮೇಲಾಗುವ ದುಷ್ಪರಿಣಾಮಗಳ ಕುರಿತು ಪ್ರೊ.ಎಂ.ಎನ್.ನAಜುAಡಸ್ವಾಮಿ ಅವರ ಕಾಲದಿಂದ ರೈತ ಸಂಘ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ.ಅಲ್ಲದೆ ವಾಮಮಾರ್ಗದಿಂದ ದೇಶಕ್ಕೆ ನುಸುಳಿದ ಬಿಟಿ ಹತ್ತಿಯಿಂದ ಪರಿಸರದ ಮೇಲಾಗಿರುವ ಕೆಟ್ಟ ಪರಿಣಾಮಗಳ ಕುರಿತು ಹಲವಾರು ತಜ್ಞರು ತಮ್ಮ ಅಭಿಪ್ರಾಯ ಮಂಡಿಸಿ ಕುಲಾಂತರಿ ತಳಿ ಬೀಜಗಳ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದರೂ ಸುಪ್ರಿಂ ಕೋರ್ಟು ಕುಲಾಂತರಿ ಬೀಜ ನೀತಿಯ ಕುರಿತು ಸಮಿತಿ ರಚಿಸಲು ಎಂ.ಎನ್.ಸಿ. ಕಂಪನಿಗಳಾದ ಮ್ಯಾನ್ಸೆಂಟೋ ಮತ್ತು ಬೇಯರ್ ಕಂಪನಿಗಳ ನೇತೃತ್ವದಲ್ಲಿ ರೈತರು,ಕೃಷಿ ತಜ್ಞರು,ಸಾರ್ವಜನಿಕರನ್ನು ಒಳಗೊಂಡ ಸಮಿತಿಯನ್ನು ೪ ತಿಂಗಳಲ್ಲಿ ರಚಿಸುವಂತೆ ನಿರ್ದೇಶನ ನೀಡಿರುವುದು ಅತ್ಯಂತ ಅಪಾಯಕಾರಿಯಾಗಿದೆ ಎಂದರು.
ತಜ್ಞರ ಪ್ರಕಾರ ಒಂದು ವೇಳೆ ಈ ಸಮಿತಿ ಜಾರಿಗೆ ಬಂದರೆ, ಭವಿಷ್ಯದಲ್ಲಿ ಪ್ರತಿ ಮನೆಯಲ್ಲಿಯೂ ಒರ್ವ ಕ್ಯಾನ್ಸರ್ ರೋಗಿಯನ್ನು ಕಾಣಬಹುದಾಗಿದೆ.ಕಳೆದ ಸೆಪ್ಟಂಬರ್ ೨೯ರಿಂದ ಅಕ್ಟೋಬರ್ ೦೨ರವರೆಗೆ ದೊಡ್ಡ ಹೊಸೂರು ಸತ್ಯಾಗ್ರಹದಲ್ಲಿ ಇದೇ ವಿಚಾರವಾಗಿ ಹಲವಾರು ಆಯಾಮಗಳಲ್ಲಿ ಚರ್ಚೆ ನಡೆಸಲಾಗಿದೆ.ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಇದನ್ನು ವಿರೋಧಿಸಬೇಕು. ಕರ್ನಾಟಕ ರಾಜ್ಯ ರೈತ ಸಂಘ ನವೆಂಬರ್ ೦೪ ರಂದು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.
ರೈತರು, ರಾಜಕೀಯ ನಾಯಕರುಗಳ ವಿರೋಧದ ನಡುವೆಯೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಮುಂದುವರೆಸಲು ಗುತ್ತಿಗೆದಾರರು ಮುಂದುವರೆಸಲು ಪ್ರಯತ್ನಿಸುತಿದ್ದು,ಇದು ಸರಕಾರ ಮತ್ತು ರೈತರ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.ಯಾವುದೇ ಭೂಸ್ವಾಧೀನವಿಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ.ರೈತರ ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸಿ,ಜಿಲ್ಲೆಯ ಜನತೆಗೆ ನ್ಯಾಯ ಕೊಡಿಸಬೇಕು.ಎಕ್ಸ್ಪ್ರೆಸ್ ಕೆನಾಲ್‌ನಿಂದ ಜಿಲ್ಲೆಯ ೪-೫ ತಾಲೂಕುಗಳಿಗೆ ತೀವ್ರ ಅನ್ಯಾಯವಾಗಲಿದೆ.ಹಾಗಾಗಿ ಜಿಲ್ಲೆಯ ಶಾಸಕರು, ಸಂಸದರು,ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದರು.
ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತಿದ್ದು ಅಕ್ರಮ ಸಕ್ರಮ ಕಾಮಗಾರಿ ತ್ವರಿತವಾಗಿ ಕೈಗೊಳ್ಳುವುದು.ಬಿಕ್ಕೆಗುಡ್ಡ, ಹಾಗಲವಾಡಿ ಏತ ನೀರಾವರಿ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ನವೆಂಬರ್ ೦೪ರಂದು ನಡೆಯುವ ತಾಲೂಕು ಕಚೇರಿ ಎದುರಿನ ಪ್ರತಿಭಟನೆ ವೇಳೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು.ಅಲ್ಲದೆ ಇದೇ ೨೬ ರಂದು ಚಿತ್ರದುರ್ಗದಲ್ಲಿ ನಡೆಯುವ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಪರಿಷ್ಕರಣೆ ವೇಳೆ ಜಿಲ್ಲೆಯಿಂದ ಗೋವಿಂದರಾಜು ಮತ್ತು ದೊಡ್ಡಮಾಳಪ್ಪ ಅವರುಗಳನ್ನು ರಾಜ್ಯ ಸಮಿತಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ,ಜಿಲ್ಲೆಯ ಮುಖಂಡರಾದ ಕಾಳೇಗೌಡ, ಬಸವರಾಜು, ಶಿವಕುಮಾರ್,ಜಗಧೀಶ್, ವೆಂಕಟೇಗೌಡ, ಲಕ್ಷö್ಮಣಗೌಡ, ನಾಗರತ್ನಮ್ಮ, ಚಿಕ್ಕಬೋರೇಗೌಡ, ರಹಮತ್ ಸಾಬ್, ಭಾಗ್ಯಮ್ಮ, ಲೋಕೇಶ್, ರವೀಶ್, ಚನ್ನಬಸಣ್ಣ, ಅರೇಹಳ್ಳಿ ಮಂಜುನಾಥ್, ಶಬ್ಬೀರ ಕೊರಟಗೆರೆ, ಕೆಂಚಪ್ಪ, ಚಿರತೆ ಚಿಕ್ಕಣ್ಣ, ತಿಮ್ಮೇಗೌಡ, ಮಹೇಶ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)
Previous Articleಜನಪ್ರತಿನಿಧಿಗಳು ಜಾತಿ ನಾಯಕರಾಗಬೇಡಿ : ಸಚಿವ ಕೆ.ಎನ್.ರಾಜಣ್ಣ
Next Article ಅಬ್ಬರಿಸಿದ ಮಳೆಗೆ ರಾಗಿ ಬೆಳೆ, ಕೋಳಿ ಆಹುತಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.