BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
  • ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ
  • ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ
  • ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ
  • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ
  • ಬಡವರ ಗೋಳು ಕೇಳುವರ‍್ಯಾರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ ಪ್ರತಿಭಟನೆ
news

ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ ಪ್ರತಿಭಟನೆ

By News Desk BenkiyabaleUpdated:November 05, 2024 6:32 pm

ತುಮಕೂರು: ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ,ಹೇಮಾವತಿ ನಾಲೆಗೆ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಿಕ್ಕಬೋರೇಗೌಡ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ರವೀಶ್ ಅವರ ನೇತೃತ್ವದಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿ¨sಟನೆ ನಡೆಸಿ, ತುಮಕೂರು ತಹಶೀಲ್ದಾರರವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ ಸಿ.ಯತಿರಾಜು,ಮ್ಯಾನ್ಸೆಂಟೋ,ಭೆಯರ್,ಕಾರ್ಗಿಲ್ ಸೇರಿದಂತೆ ಅನೇಕ ಬಹುರಿಂಷ್ಟ್ರೀಯ ಕಂಪನಿಗಳು ಕುಲಾಂತರಿ ತಳಿಗಳನ್ನು ಜಾರಿಗೆ ತರುವ ಮೂಲಕ,ದೇಶಿಯ ತಳಿಗಳನ್ನು ನಾಶಮಾಡಿ, ಜೀವ ವೈವಿದ್ಯತೆಯನ್ನು ಹಾಳುಮಾಡಿ ಕೃಷಿಕ್ಷೇತ್ರವನ್ನು ಮತ್ತು ಆಹಾರ ಸಾರ್ವಭೌಮಕ್ಕವನ್ನು ತನ್ನ ಕೈಯಲ್ಲಿ ಹೊಂದುವ ಹುನ್ನಾರವನ್ನು ಕಳೆದ 25 ವರ್ಷಗಳಿಂದಲೂ ಬಹುರಾಷ್ಟ್ರೀಯ ಕಂಪನಿಗಳು ಮಾಡುತ್ತಲೇ ಬಂದಿವೆ.ಕುಲಾAತರಿ ತಳಿಗಳ ಬೆಳೆಗಳಿಂದ, ಆಪಾರವಾದ ಕೀಟನಾಶಕಗಳ ಸಿಂಪರಣೆಯಿAದ ಮನುಷ್ಯನ ಆರೋಗ್ಯದ ಮೇಲೆ, ಪರಿಸರದ ಮೇಲೆ, ಮಣ್ಣಿನ ಮೇಲೆ ಮತ್ತು ಕುಲಾಂತರಿ ಆಹಾರ ಬಳಸುವ ಜನರ ಮೇಲೆ ಎಂತಹ ಪರಿಣಾಮ ಬೀರುತ್ತದೆ .ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗ ತುತ್ತಾಗಬೇಕಾಗುತ್ತದೆ. ಕೃಷಿ ಮತ್ತು ಆಹಾರ ಸಾರ್ವಭೌಮತ್ವ ಹೋಗುತ್ತದೆ. ಹಾಗಾಗಿ ಸುಪ್ರಿಂಕೋರ್ಟಿನ ನಿರ್ದೇಶನದ ಮೇರೆಗೆ ಕುಲಾಂತರಿ ಬೀಜ ನೀತಿ ರೂಪಿಸಲು ಹೊರಟಿರುವ ಕೇಂದ್ರ ಸರಕಾರ ಇದರಿಂದ ಹಿಂದೆ ಸರಿಯಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ರೈತ ಸಂಘದ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ಮಾತನಾಡಿ,ತುಮಕೂರು ಜಿಲ್ಲೆಯ ರೈತರು ತಮ್ಮ ಪಾಲಿನ ಹೇಮಾವತಿ ನೀರನ್ನು ಪಡೆಯಲು ಒದ್ದಾಡುತ್ತಿರುವಾಗ ನೇರವಾಗಿ ಮಾಗಡಿಗೆ ನೀರು ಹರಿಸಲು ತುಮಕೂರು ಮೂಲ ನಾಲೆಯ 70ನೇ ಕಿಲೋಮೀಟರ್ ನಿಂದ ಲಿಂಕ್‌ಕೆನಲ್ ಪೈಪ್ ಲೈನ್ ಮಾಡಲು ಹೊರಟಿರುವುದರಿಂದ ತುಮಕೂರು ಜಿಲ್ಲೆಯ ಸುಮಾರು 6 ತಾಲೂಕುಗಳ ರೈತರು ಹೇಮಾವತಿ ನೀರಿನಿಂದ ವಂಚಿತರಾಗುತ್ತಾರೆ.ಹAಚಿಕೆಯಾಗಿರುವ ನೀರನ್ನು ಮೂಲ ನಾಲೆಯಿಂದ ಪಡೆಯಲು ಅವಕಾಶವಿರುವ್ಯದರಿಂದ ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ಬಿಡಬೇಕು. ಈ ಸಂಬAಧ ರಾಜ್ಯ ಸರರ್ಕಾರ ಹಠಮಾರಿತನ ಧೋರಣೆಯನ್ನು ಕೈಬಿಟ್ಟು ರೈತರ ಹಿತವನ್ನು ಕಾಪಾಡಬೇಕೆಂದು ರೈತ ಸಂಘದ ಒತ್ತಾಯವಾಗಿದೆ.ಒಂದು ವೇಆಳೆ ಸರಕಾರ ರೈತರ ವಿರೋಧದ ನಡುವೆಯೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮುಂದುವರೆಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ರೈತ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ದೊಡ್ಡ ಹೊಸೂರು ರವೀಶ್ ಮಾತನಾಡಿ,ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ತಲೆದೊರಿದೆ,ತ್ರಿಫೇಸ್ ವಿದ್ಯುತ್ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರ ಜೊತೆಗೆ ಬರದ ನಡುವೆಯೂ ಬ್ಯಾಂಕುಗಳು ಬೆಳೆ ಕಟಾವಿಗೆ ಮೊದಲೇ ಸಾಲ ಮರುಪಾವತಿಗೆ ಬಲವಂತದ ಕ್ರಮಗಳನ್ನು ಕೈಗೊಳ್ಳುತ್ತಿರುವುದು ರೈತರನ್ನು ಆಂತಕಕ್ಕೆ ದೂಡಿದೆ. ಇದಲ್ಲದೆ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸದೆ ಕಚೇರಿಗೆ ಅಲೆಯುವಂತೆ ಮಾಡಲಾಗಿದೆ. ಈ ಎಲ್ಲಾ ಸಮಸ್ಯೆಗಳ ಕಡೆಗೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಮಾತನಾಡಿ,ತುಮಕೂರು ತಾಲೂಕು ಹೆಬ್ಬೂರು ಹೋಬಳಿ ವೃತ್ತದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳನ್ನು ಜಿಲ್ಲಾಡಳಿತ ನಿಯೋಜನೆ ಮೇಲೆ ಕೆಲಸಕ್ಕೆ ತೆಗೆದುಕೊಂಡಿರುವುದರಿAದ ಹಲವಾರು ಸಮಸ್ಯೆಗಳು ಉದ್ಬವಿಸಿವೆ. ನಾಡ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬAಧಿಸಿದAತೆ ಒಂದು ಕೆಲಸವೂ ನಡೆಯುತ್ತಿಲ್ಲ. ಹಾಗಾಗಿ ಹೆಬ್ಬೂರು ಹೋಬಳಿಯ ಎಲ್ಲಾ ವೃತ್ತದ ಗ್ರಾಮ ಆಡಳಿತಾಧಿಕಾರಿಗಳ ನಿಯೋಜನೆಯನ್ನು ರದ್ದುಪಡಿಸಿ, ಅವರ ಮೂಲ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಮೋಹನ್ ಕುಮಾರ್,ಕೃಷ್ಣಪ್ಪ,ಮಹೇಶ್,ಡಿ.ಕೆ.ರಾಜು, ನರಸಪ್ಪ, ನಾಗರಾಜು, ರಾಮಚಂದ್ರಪ್ಪ, ಸುರೇಶ್,ತಿಮ್ಮೇಗೌಡ,ಎಸ್.ಕೃಷ್ಣಪ್ಪ,ಶ್ರೀನಿವಾಸ್, ನಾರಾಯಣಪ್ಪ,ಪುಟ್ಟಸ್ವಾಮಿ ಗಂಗಾದರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 1 times, 1 visits today)
ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕುಲಾಂತರಿ ಬೀಜ ಪ್ರತಿಭಟನೆ ರಾಜ್ಯ ರೈತ ಸಂಘ
Previous Articleಹಿಂದೂಗಳ ಜಮೀನು ಕಬಳಿಸುವ ಹುನ್ನಾರ: ಬಿಜೆಪಿ
Next Article ಸಂಘಟಿತವಾಗಿ ನಡೆದ ಹೋರಾಟವೇ ಶರಣಚಳವಳಿ: ರಂಜಾನ್ ದರ್ಗಾ
News Desk Benkiyabale

Related Posts

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm news

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm news

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm news
ತಾಜಾ ಸುದ್ಧಿಗಳು

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm

ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ

June 16, 2026 5:05 pm

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

June 15, 2026 5:26 pm
Our Youtube Channel
Our Picks

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm

ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ

June 16, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

By News Desk BenkiyabaleJune 16, 2026 5:29 pm

ತುಮಕೂರು: ಶಾಲೆ ಬಿಟ್ಟ ನಂತರ ಸ್ನೇಹಿತರನ್ನು ಭೇಟಿ ಮಾಡುವುದೇ ಕಷ್ಟ ಅಂತಹುದರಲ್ಲಿ ಪ್ರೌಢಶಾಲೆಯಲ್ಲಿ ಕಲಿತ ಎಲ್ಲಾ ಸ್ನೇಹಿತರನ್ನು ಕಲೆ ಹಾಕಿ…

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.