BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ
  • ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
  • ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
  • ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈಚಾರಿಕತೆಗೆ ಹೊಸ ಅರ್ಥ ತಂದುಕೊಟ್ಟ ಶ್ರೇಷ್ಠ ಸಂತ ಕನಕದಾಸ
ತುಮಕೂರು

ವೈಚಾರಿಕತೆಗೆ ಹೊಸ ಅರ್ಥ ತಂದುಕೊಟ್ಟ ಶ್ರೇಷ್ಠ ಸಂತ ಕನಕದಾಸ

By News Desk BenkiyabaleUpdated:November 18, 2024 7:45 pm

ತುಮಕೂರು : ಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಳಿದಾಸ ವಿದ್ಯಾವರ್ಧಕ ಸಂಘ ಮತ್ತು ಜಿಲ್ಲೆಯ ಕುರುಬರ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ಸಂತಶ್ರೇಷ್ಠ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರು ಬಾಲ್ಯದಲ್ಲಿ ಅಪಾರ ದೈವಭಕ್ತಿಯನ್ನು ಹೊಂದಿದ್ದರು. ದೇವರಿಲ್ಲದ ಸ್ಥಳವೇ ಇಲ್ಲಾ ದೇವರು ನಮ್ಮ ಸರಿ-ತಪ್ಪುಗಳನ್ನು ಗಮನಿಸುತ್ತಿರುತ್ತಾನೆ. ಸರಿದಾರಿಯಲ್ಲಿ ನಡೆದಾಗ ಮಾತ್ರ ದೇವರಿಗೆ ನಾವು ಪ್ರಿಯವಾಗುತ್ತೇವೆ ಎಂದು ನಂಬಿದ್ದರು. ಕನಕದಾಸರ ನಂಬಿಕೆಯAತೆ ನಾವು ಮಾಡುವ ಪ್ರತಿಯೊಂದು ಕೆಲಸವನ್ನು ನಮ್ಮ ಸುತ್ತಮುತ್ತಲಿನ ಜನ ಗಮನಿಸುತ್ತಿರುತ್ತಾರೆ ಎಂಬ ಎಚ್ಚರಿಕೆ ಇರಬೇಕು. ಯಾವುದೇ ಕೆಲಸವಾಗಲಿ ಶ್ರದ್ಧೆ- ಭಕ್ತಿಯಿಂದ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ತಿಳಿಸಿದರಲ್ಲದೆ ಕನಕದಾಸರ ಜೀವನ ಮೌಲ್ಯಗಳನ್ನು ನಾವೆಲ್ಲರೂ ಸ್ಮರಿಸಿ ಪಾಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್ ಕನಕದಾಸರು ಕವಿಯಾಗಿ, ಸಂತನಾಗಿ, ಸಮಾಜ ಸುಧಾರಕರಾಗಿ ಸಾರ್ವತ್ರಿಕ ಮೌಲ್ಯಗಳನ್ನು ತಿಳಿಸಿದರು. ಕನಕ ದಾಸರ ಸಾರ್ವಕಾಲಿಕ ಸತ್ಯಗಳನ್ನು ನಾವೆಲ್ಲರೂ ತಿಳಿದು ಬದುಕಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ಮಾತನಾಡಿ ದಾಸಸಾಹಿತ್ಯ ಮತ್ತು ವಚನಸಾಹಿತ್ಯದ ಮೂಲಕ ಸಮಾಜದ ಅಂಕು-ಡೊAಕುಗಳನ್ನು ತಿದ್ದುವ ಕೆಲಸ ಮಾಡಿದ ಶ್ರೇಷ್ಠ ಸಂತ ಕನಕ ದಾಸರ ಸಾಹಿತ್ಯದ ವಿಚಾರಧಾರೆಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಜನಸಾಮಾನ್ಯರೊಂದಿಗೆ ಬದುಕಿ ಜನರಿಗೆ ಸನ್ಮಾರ್ಗದಲ್ಲಿ ನಡೆಯುವುದನ್ನು ಕಲಿಸಿದ ಕನಕ ದಾಸರ ಕೀರ್ತನೆಗಳು ಈಗಲೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಬಿರುದು-ಬಾವಲಿಗಳಿಗಾಗಿ ಗೀತೆಗಳನ್ನು ರಚಿಸದೇ ಜನರ ನೋವು-ನಲಿವುಗಳನ್ನೇ ಕೀರ್ತನೆಗಳನ್ನಾಗಿ ರಚಿಸುವ ಮೂಲಕ ಸದಾಕಾಲ ಜನಮಾನಸದಲ್ಲಿ ಉಳಿದುಕೊಂಡರು ಕನಕ ದಾಸರು. ಕನಕ ದಾಸರ ಕೀರ್ತನೆಗಳು ಸಹಿಷ್ಣುತೆಯ ಬದುಕು ಕಟ್ಟಿಕೊಳ್ಳಲು, ಸಹಬಾಳ್ವೆಯ ಜೀವನ ನಡೆಸಲು ಸ್ಫೂರ್ತಿದಯಕವಾಗಿವೆ. ಜಾತಿ, ಮತ, ಧರ್ಮ, ಕುಲಗಳ ಬಗ್ಗೆ ಕನಕ ದಾಸರು ತಮ್ಮ ಕೀರ್ತನೆಗಳ ಮೂಲಕ ಕೇಳಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು. ಸಮಾಜದಲ್ಲಿ ಬದಲಾವಣೆಗಳನ್ನು ತರಲು ಕನಕ ದಾಸರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಪ್ರಭುದ್ಧರಾಗಬೇಕು ಎಂದು ಲೇಖಕಿ ಡಾ.ಎನ್.ಆರ್.ಲಲಿತಾಂಬ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮರಳೂರು ಟಿ.ಹೆಚ್. ಹನುಮಂತಪ್ಪ, ಲಿಂಗಾಪುರದ ಶಿವಣ್ಣ ಬಿನ್ ಚಿಕ್ಕಣ್ಣ, ಹರಳಕಟ್ಟೆಯ ಚಿಕ್ಕಲಿಂಗಯ್ಯ; ಸಮಾಜಸೇವೆ ಕ್ಷೇತ್ರದಲ್ಲಿ ಮೆಳೇಕೋಟೆಯ ಎಂ.ಪಿ.ರಮೇಶ್, ಕಾಳಮ್ಮನಗುಡಿ ಬೀದಿಯ ಸಿ.ಎಲ್.ರವಿಕುಮಾರ್, ತುಮಕೂರಿನ ಆರ್.ತಿಪ್ಪೇಸ್ವಾಮಿ, ವೈ.ಎನ್.ಹೊಸಕೋಟೆಯ ಪೂಜಾರಿ ಚೌಡಪ್ಪ; ವೈದ್ಯಕೀಯ ಕ್ಷೇತ್ರದಲ್ಲಿ ಉಪ್ಪಾರಹಳ್ಳಿಯ ಡಾ|| ಶಶಿಧರ್; ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಾರಂಜಿಗುಡಿ ಬೀದಿಯ ಟಿ.ಎಸ್.ಎಂ.ಪಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ತುಮಕೂರು ತಾಲ್ಲೂಕು ಡಿ.ಎಂ.ಪಾಳ್ಯ ಶ್ರೀ ಗುರುರೇವಣಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀಶ್ರೀ ಬಿಂಧುಶೇಖರ ಒಡೆಯರ್ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ|| ಎಂ.ಆರ್.ಹುಲಿನಾಯ್ಕರ್, ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಭೀಮರಾಜು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ಕನಕ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸುನಿತಾ ನಟರಾಜು, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹರಾಜು ಸೇರಿದಂತೆ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 1 times, 1 visits today)
ಕನಕದಾಸರ 537ನೇ ಜಯಂತಿ ತುಮಕೂರು:
Previous Articleಉಚಿತ ಗಾರ್ಮೆಂಟ್ ಟೈಲರಿಂಗ್ ತರಬೇತಿ
Next Article ಕನಕದಾಸರ ಪುತ್ತಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ
News Desk Benkiyabale

Related Posts

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
ತುಮಕೂರು

ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ

June 16, 2025 2:16 pm
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

June 16, 2025 2:07 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

By News Desk BenkiyabaleJune 16, 2025 3:18 pm

ತುಮಕೂರು: ಜಿಲ್ಲೆಯು ಪ್ರಾಚೀನ ಇತಿಹಾಸ ಮತ್ತು ಸಾಹಿತ್ಯಿಕ ಇತಿಹಾಸದಿಂದಲೂ ತುಂಬಾ ಪ್ರಸಿದ್ಧವಾಗಿದೆ. ಕೈದಾಳದಲ್ಲಿರುವ ಶಾಸನ ವಿಭಿನ್ನ ಧರ್ಮದ ಸೌಹಾರ್ಧತೆಯನ್ನು ಬಿಂಬಿಸುವAತಿದೆ.…

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.