BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಶೋಷಿತ ಸಮುದಾಯದ ಆಶಾಕಿರಣ ಎಲ್.ಜಿ.ಹಾವನೂರು’
ತುಮಕೂರು

‘ಶೋಷಿತ ಸಮುದಾಯದ ಆಶಾಕಿರಣ ಎಲ್.ಜಿ.ಹಾವನೂರು’

ಯುವಜನ ಸಹಕಾರಿ ಕ್ಷೇತ್ರ ಪ್ರವೇಶಿಸಲು ಸಚಿವ ಕೆ.ಎನ್.ರಾಜಣ್ಣ ಕರೆ
By News Desk BenkiyabaleUpdated:March 25, 2025 4:49 pm

ತುಮಕೂರು: ಸಮಾಜಮುಖಿ ನಾಯಕರಾದ ಎಲ್.ಜಿ.ಹಾವನೂರು ಅವರು ಶೋಷಿತ ಸಮುದಾಯಗಳ ಏಳಿಗೆಗೆ ಶ್ರಮಿಸಿದ್ದರು. ದೂರದೃಷ್ಟಿ ಚಿಂತನೆಯ ಅವರು ಹಿಂದುಳಿದ ವರ್ಗ, ಶೋಷಿತ ವರ್ಗಗಳಿಗೆ ಶಕ್ತಿ ತುಂಬಿದ್ದರು ಎಂದು ಹೇಳಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಹಾವನೂರ ಕೊಡುಗೆ ಸ್ಮರಿಸಿದರು.
ವಾಲ್ಮೀಕಿ ಪತ್ತಿನ ಸಹಕಾರ ಸಂಘ, ಜಿಲ್ಲಾ ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ವಾಲ್ಮೀಕಿ ವಿದ್ಯಾವರ್ಧಕ ಸಂಘ, ಪ್ರಗತಿಪರ ವಕೀಲರ ವೇದಿಕೆ, ಶಬರಿ ಮಹಿಳಾ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಂಗಳವಾರ ನಗರದ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಎಲ್.ಜಿ.ಹಾವನೂರರ ನೂರನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಮುಂದಿನ ವರ್ಷ ಹಾವನೂರರ ಜನ್ಮ ದಿನವನ್ನು ಅದ್ದೂರಿಯಾಗಿ ಆಚರಿಸೋಣ ಎಂದರು.
ಮುಖ್ಯಮAತ್ರಿ ದೇವರಾಜ ಅರಸು ಸರ್ಕಾರ ಸ್ಥಾಪಿಸಿದ್ದ ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥರಾಗಿದ್ದ ಎಲ್.ಜಿ.ಹಾವನೂರು ಅವರು ಕರ್ನಾಟಕದ ಹಿಂದುಳಿದ ವರ್ಗಗಳ ಅಧ್ಯಯನಾತ್ಮಕ ವರದಿ ರಚಿಸಿದ್ದರು. ಈ ವರದಿಯು ಹಿಂದುಳಿದ ವರ್ಗಗಳ ಒಂದು ವೈಜ್ಞಾನಿಕ ಅಧ್ಯಯನ ಎಂದು ಸುಪ್ರೀಂ ಕೋರ್ಟ್ನ ಪ್ರಶಂಸೆಗೂ ಪಾತ್ರವಾಗಿತ್ತು. ದೇವರಾಜ ಅರಸು ಅವರು ಈ ವರದಿಯನ್ನು ಹಿಂದುಳಿದ ವರ್ಗಗಳ ಬೈಬಲ್ ಎಂದು ಕರೆದಿದ್ದರು. ಈ ವರದಿ ತಯಾರಿಸಲು ಹಾವನೂರರು ವಿವಿಧ ಹಳ್ಳಿಗಳ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸಂದರ್ಶಿಸಿ ಮಾಹಿತಿ ಸಂಗ್ರಹಿಸಿದ್ದರು. ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ತಮ್ಮ ದೇಶದ ಸಂವಿಧಾನ ರಚನಾ ಸಲಹಾ ಸಮಿತಿಗೆ ಎಲ್.ಜಿ.ಹಾವನೂರರನ್ನು ಆಹ್ವಾನಿಸಿದ್ದರು. ಹಾವನೂರು ಅವರ ಸಂವಿಧಾನ ಪ್ರಜ್ಞೆಗೆ ಇದೊಂದು ಸಾಕ್ಷಿಯಾಗಿದೆ ಎಂದು ಹೇಳಿದರು.
ಯುವಜನ ಸಹಕಾರ ಕ್ಷೇತ್ರಕ್ಕೆ ಬನ್ನಿ
ಸಹಕಾರ ಕ್ಷೇತ್ರವು ಜಾತಿ, ಪಕ್ಷ ಮೀರಿ ಬೆಳೆಯುತ್ತಿರುವ ಕ್ಷೇತ್ರ. ತಾನೂ ಬೆಳೆದು ಇತರರನ್ನು ಬೆಳೆಸುವ ಅವಕಾಶ ಸಹಕಾರ ಕ್ಷೇತ್ರದಲ್ಲಿದೆ. ಸಹಕಾರ ಕ್ಷೇತ್ರದಲ್ಲಿ ತೊಡಗಿಕೊಂಡವರು ಜನರ ಸಂಪರ್ಕ ಪಡೆಯಲು, ಸೇವೆ ಮಾಡಲು, ನಾಯಕತ್ವ ರೂಪಿಸಿಕೊಳ್ಳಲು ಅವಕಾಶವಿರುತ್ತದೆ. ಈ ಮೂಲಕ ರಾಜಕಾರಣ ಪ್ರವೇಶಕ್ಕೂ ಸುಲಭದ ದಾರಿಯಾಗಿದೆ. ಈಗಿನವರು ದಿಢೀರ್ ಅಧಿಕಾರ ಬಯಸುತ್ತಾರೆ. ಯುವ ಜನರು ಸಹಕಾರ ಕ್ಷೇತ್ರದಲ್ಲಿ ತೊಡಗಿಕೊಳ್ಳುವ ಮೂಲಕ ಜನರಿಗೆ ಸಹಾಯ ಮಾಡಿ, ಸಹಕಾರ ಪಡೆದು ರಾಜಕಾರಣದಲ್ಲಿ ಭವಿಷ್ಯ ಕಾಣಬಹುದು ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಮಾಜಿ ಮೇಯರ್, ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಜಿ.ಕೃಷ್ಣಪ್ಪ ಮಾತನಾಡಿ, ಕೆ.ಎನ್.ರಾಜಣ್ಣನವರು ನಮ್ಮ ಪಾಲಿನ ಎಲ್.ಜಿ.ಹಾವನೂರು, ಹಿಂದುಳಿದ ವರ್ಗ, ಶೋಷಿತ ಸಮುದಾಯಗಳ ಆಶಾಕಿರಣ. ಇವರಿಗೆ ಮುಖ್ಯ ಮಂತ್ರಿ ಸ್ಥಾನ ದೊರೆತರೆ ಹೆಚ್ಚು ಸಮರ್ಥವಾಗಿ ನಿರ್ವಹಿಸುತ್ತಾರೆ, ಅಂತಹ ಅವಕಾಶ ದೊರೆಯಲಿ ಎಂದು ಆಶಿಸಿದರು.
ಈ ಸಾಲಿನಲ್ಲಿ ಸಹಕಾರ ರತ್ನ ಪ್ರಶಸ್ತಿ ಪಡೆದ ವಿವಿಧ ಹಿರಿಯ ಸಹಕಾರಿಗಳನ್ನು ಈ ವೇಳೆ ಸನ್ಮಾನಿಸಲಾಯಿತು. ಮಾಜಿ ಶಾಸಕ ಗಂಗಹನುಮಯ್ಯ, ಜಿ.ಜೆ.ರಾಜಣ್ಣ, ಹನುಮಂತರಾಯಪ್ಪ, ಪಿ.ಮೂರ್ತಿ, ಹೆಬ್ಬಾಕ ಮಲ್ಲಿಕಾರ್ಜುನ್, ಲಕ್ಷಿö್ಮÃನಾರಾಯಣ, ಮೆಹಬೂಬ್ ಪಾಷಾ, ಬಿ.ಸಿ.ಉಮೇಶ್, ಟಿ.ಹೆಚ್.ಶಿವಾನಂದ್, ಜಿ.ಎಸ್.ರವಿ, ಗುರುಮೂರ್ತಿ ಮೊದಲಾದವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್, ಪ್ರಗತಿಪರ ವಕೀಲರ ವೇದಿಕೆ ಅಧ್ಯಕ್ಷ ಸಿಂಗದಹಳ್ಳಿ ರಾಜ್‌ಕುಮಾರ್, ಹಿರಿಯ ಸಹಕಾರಿ ಹನುಮಂತರಾಯಪ್ಪ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ
Next Article ಇಂದು ಡಿಜಿಟಲ್ ಮಾಧ್ಯಮ: ಸವಾಲು, ಸಾಧ್ಯತೆಗಳು ಕುರಿತು ಕಾರ್ಯಾಗಾರ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.