BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಚಿವ ಸೋಮಣ್ಣ ಛಲವಂತ ಕೆಲಸಗಾರ: ಸಿದ್ಧಲಿಂಗ ಶ್ರೀ
ತುಮಕೂರು

ಸಚಿವ ಸೋಮಣ್ಣ ಛಲವಂತ ಕೆಲಸಗಾರ: ಸಿದ್ಧಲಿಂಗ ಶ್ರೀ

ರೈಲು ನಿಲ್ದಾಣಕ್ಕೆ ಸಿದ್ಧಗಂಗಾಶ್ರೀ ಹೆಸರು: ಸಂಘನೆಗಳ ಸಂಭ್ರಮಾಚರಣೆ
By News Desk BenkiyabaleUpdated:April 26, 2025 3:10 pm

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ಉತ್ತಮ ಜನಪರ ಕೆಲಸಗಾರರು, ಹಿಡಿದ ಕೆಲಸವನ್ನು ಮಾಡಿ ಮುಗಿಸುವ ಛಲಗಾರ. ಅವರು ರೈಲ್ವೆ ಸಚಿವರಾದ ನಂತರ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗುತ್ತಿವೆ, ನೆನೆಗುದಿಗೆ ಬಿದ್ದಿದ್ದ ಕೆಲಸಗಳಿಗೆ ಚಾಲನೆ ದೊರಕಿದೆ ಎಂದು ಸಿದ್ಧಗಂಗಾ ಮಠ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ನಗರದ ರೈಲು ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದ ಸಂದರ್ಭದಲ್ಲಿ ಸಚಿವ ವಿ.ಸೋಮಣ್ಣ ಅಭಿಮಾನಿ ಬಳಗ, ಜಿಲ್ಲಾ ಕನ್ನಡ ಸೇನೆ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸಿಹಿ ವಿತರಿಸಿ ಸಂಭ್ರಮ ಆಚರಿಸುವ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸೋಮಣ್ಣ ಅವರು ಕೇಂದ್ರ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಬಸವ ಜಯಂತಿ ಆಚರಣೆಗೆ ಕಾರಣರಾದರು ಎಂದು ಅಭಿನಂದಿಸಿದರು.
ರೈಲು ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯಲ್ಲಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲು ಹಾಗೂ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿಗಳ ನಾಮಕರಣ ಮಾಡಲು ಸಚಿವ ಸೋಮಣ್ಣ ಕಾಳಜಿ ವಹಿಸಿದ್ದಾರೆ ಎಂದು ಹೇಳಿದ ಸಿದ್ಧಲಿಂಗ ಸ್ವಾಮೀಜಿಗಳು, ಸೋಮಣ್ಣ ಅವರು ಹಿಡಿದ ಕೆಲಸವನ್ನು ಮಾಡಿ ಮುಗಿಸುವುದರಲ್ಲಿ ಹೆಸರಾದವರು, ಇವರು ರೈಲ್ವೆ ಮಂತ್ರಿಯಾದಮೇಲೆ ಜಿಲ್ಲೆಯಲ್ಲಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಾಗುತ್ತಿವೆ. ಅತ್ಯಗತ್ಯವಾಗಿದ್ದ ರೈಲ್ವೆ ಅಂಡರ್‌ಪಾಸ್, ಮೇಲ್ಸೇತುವೆಗಳನ್ನು ಆದ್ಯತೆ ಮೇಲೆ ಮಾಡುತ್ತಿದ್ದಾರೆ. ಎಷ್ಟೋ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು-ದಾವಣಗೆರೆ, ತುಮಕೂರು-ರಾಯದುರ್ಗ ರೈಲು ಮಾರ್ಗ ನಿರ್ಮಾಣ ಯೋಜನೆಯ ಕಾಮಗಾರಿಗೆ ವೇಗ ದೊರಕಿಸಿದ್ದಾರೆ. ಹೆಚ್ಚು ಜನರು ರೈಲು ಪ್ರಯಾಣ ಅವಲಂಬಿಸಿದ್ದಾರೆ, ಇಲಾಖೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ ಒದಗಿಸಲಿ ಎಂದು ಸ್ವಾಮೀಜಿ ಹೇಳಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಸೋಮಣ್ಣ ಅವರು ತುಮಕೂರು ಕ್ಷೇತ್ರದ ಸಂಸದರಾಗಿ, ನಂತರ ಕೇಂದ್ರ ಸಚಿವರಾಗಿ ರೈಲ್ವೆ ನಿಲ್ದಾಣ ಅಭಿವೃದ್ಧಿ, ಸ್ವಾಮೀಜಿಗಳ ಹೆಸರಿಡುವುದು ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದ ತುಮಕೂರು ಕ್ಷೇತ್ರದ ಜನರ ಋಣ ತೀರಿಸುವ ಪ್ರಯತ್ನ ಮಾಡಿದ್ದಾರೆ ಎಂದರು.
ಸಾಧಾರಣ ನಿಲ್ದಾಣವಾಗಿ ಅಭಿವೃದ್ಧಿ ಆಗಲಿದ್ದ ತುಮಕೂರು ರೈಲ್ವೆ ನಿಲ್ದಾಣವನ್ನು ಸುಮಾರು ೮೭ ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತವಾಗಿ, ಸಿದ್ಧಗಂಗಾ ಮಠ ಹೋಲಿಕೆಯ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಅವರು, ನಿಲ್ದಾಣಕ್ಕೆ ಸ್ವಾಮೀಜಿಗಳ ಹೆಸರು ಇಡಬೇಕು ಎಂದು ಎಲ್ಲಾ ಸಂಘಸAಸ್ಥೆಗಳು, ಸಾರ್ವಜನಿಕರು ಚಳವಳಿ ರೂಪದ ಮನವಿ ಮಾಡಿದ್ದರು. ಸಚಿವ ಸೋಮಣ್ಣನವರ ಪ್ರಯತ್ನದಿಂದ ಆಶಯ ಈಡೇರಿದೆ. ರೈಲು ಪ್ರಯಾಣಿಕರ ಮೇಲೆ ಸದಾ ಡಾ.ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಇರಲಿ ಎಂದು ಆಶಿಸಿದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ರೈಲ್ವೆ ನಿಲ್ದಾಣವನ್ನು ಸುಸಜ್ಜಿತವಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಿ, ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರಿಡಲು ಸಹಕರಿಸಿರುವ ಸಚಿವ ವಿ.ಸೋಮಣ್ಣ ಅವರಿಗೆ ಅಭಿನಂದನೆಗಳು. ಪುನರ್ ನಿರ್ಮಾಣವಾಗುವ ರೈಲ್ವೆ ನಿಲ್ದಾಣದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ, ಗ್ರಂಥಾಲಯ ಸ್ಥಾಪಿಸಿ ಶ್ರೀಗಳಿಗೆ ಸಂಬAಧಿಸಿದ, ಅವರ ಸೇವಾ ಸಾಧನೆ ಪರಿಚಯಿಸುವ ಕೃತಿಗಳು ಹಾಗೂ ಅವರ ವಿಶೇಷ ಫೋಟೊಗಳ ಪ್ರದರ್ಶನ ಮಾಡಿ ಮುಂದಿನ ತಲೆಮಾರಿನವರಿಗೆ ಶ್ರೀಗಳ ಸೇವೆಯನ್ನು ಪರಿಚಯಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.

ನಗರಪಾಲಿಕೆ ಮಾಜಿ ಸದಸ್ಯೆ ಗಿರಿಜಾ ಧನಿಯಾಕುಮಾರ್, ಸಿದ್ಧಗಂಗಾ ಐಟಿಐ ಕಾಲೇಜು ಪ್ರಾಚಾರ್ಯ ಎನ್.ಸುನಿಲ್, ಎಲ್‌ಐಸಿ ಅಧಿಕಾರಿ ದೊಡ್ಡರಾಜು, ಸರ್ಕಾರಿ ಕಲಾ ಕಾಲೇಜು ಪ್ರಾಚಾರ್ಯ ಪ್ರೊ.ಕರಿಯಣ್ಣ, ಮುಖಂಡರಾದ ಆರ್.ಎನ್.ವೆಂಕಟಾಚಲ, ಸಂತೋಷ್, ಉದಯಕುಮಾರ್, ನಂದಿ ಪ್ರಭಾಕರ್, ರಮೇಶ್ ಬಾಬು, ಲಕ್ಷಿö್ಮÃನಾರಾಯಣ, ಕೊಪ್ಪಲ್ ನಾಗರಾಜು, ನಟರಾಜಶೆಟ್ಟರು, ಗುರುರಾಘವೇಂದ್ರ, ಗೋಲ್ದ್ ಮಧು, ಟಿ.ಕೆ.ಆನಂದ್, ಲಕ್ಷಿö್ಮಕಾಂತರಾಜೇ ಅರಸು, ವಿನಯ್‌ಕುಮಾರ್, ಅತ್ತಿ ಉಮೇಶ್, ಶಾಂತಕುಮಾರ್, ರಾಮರಾಜು ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
Mla jyothiganesh tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಲೇಖನ ಬರವಣಿಗೆ ಒಂದು ಕೌಶಲ್ಯ
Next Article ಭಾರತೀಯರ ಮೇಲೆ ನಡೆದ ದಾಳಿ ಖಂಡನಿಯ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.