BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೇ ೧೩ರಂದು ಕೆಎನ್‌ಆರ್ ಅಮೃತ ಮಹೋತ್ಸವ
ತುಮಕೂರು

ಮೇ ೧೩ರಂದು ಕೆಎನ್‌ಆರ್ ಅಮೃತ ಮಹೋತ್ಸವ

By News Desk BenkiyabaleUpdated:May 06, 2025 3:18 pm
ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಮೇ.೧೩ರಂದು  ಹಮ್ಮಿಕೊಂಡಿರುವ ಕೆ.ಎನ್.ಆರ್.ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ,ರಾಜಣ್ಣನವರ  ಪರ ಶಕ್ತಿ ಪ್ರದರ್ಶನವಲ್ಲ, ಬದಲಿಗೆ ಅವರ ಅಭಿಮಾನ ದರ್ಶನ ಸಮಾವೇಷವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ತುಮಕೂರು ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷರಾದ ಎನ್.ಗೋವಿಂದರಾಜು ತಿಳಿಸಿದ್ದಾರೆ.
ನಗರದ ಕನ್ನಡ ಭವನದಲ್ಲಿ ಕೆ.ಎನ್.ಆರ್.ಅಭಿನಂದನಾ ಗ್ರಂಥ ಬಿಡುಗಡೆ ಸಮಿತಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ನಾನು ಕೂಡ ಕೆ.ಎನ್.ರಾಜಣ್ಣನವರ ಅಭಿಮಾನಿ.ಅಹಿಂದ ಸಮುದಾಯಕ್ಕೆ ಕೆ.ಎನ್.ರಾಜಣ್ಣ ಅವರು ಮಾರ್ಗದರ್ಶಕರಿದ್ದಂತೆ ಎಂದರು.
ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಐದು ದಶಕಗಳ ರಾಜಕೀಯ ಜೀವನವನ್ನು ಅವಲೋಕಿಸಿದರೆ ಜಿಲ್ಲೆಯ ರಾಜಕೀಯ, ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಇಂತಹ ಓರ್ವ ರಾಜಕಾರಣಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಅವರ ಅಭಿಮಾನಿಗಳು ೭೫ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ “ಸಹಕಾರ ಸಾರ್ವಬೌಮ” ಅಭಿನಂದನಾ ಗ್ರಂಥ ಸಮರ್ಪಣೆಯನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗೋವಿಂದರಾಜು ನುಡಿದರು.
ಮಾಜಿ ಶಾಸಕ ಎಸ್.ಷಪಿ ಅಹಮದ್ ಮಾತನಾಡಿ,ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಎಲ್ಲಾ ವರ್ಗದ ಜನರಿಗೆ ಬೇಕಾದ ವ್ಯಕ್ತಿ, ಹಾಗಾಗಿ ನಗರದ ೩೫ ವಾರ್ಡುಗಳಲ್ಲಿ ಜನರನ್ನು ಸಮಾರ ಂಭಕ್ಕೆ ಕರೆತರುವ ಕೆಲಸವನ್ನು ಮುಖಂಡರುಗಳು ಮಾಡಬೇಕಾಗಿದೆ.ಮೇ.೧೩ರ ಕೆ.ಎನ್.ಆರ್.ಅಮೃತ ಮಹೋತ್ಸವ ಕಾರ್ಯಕ್ರಮ ಹಬ್ಬದ ರೀತಿಯಲ್ಲಿ ನಡೆಯಬೇಕು.ಪ್ರತಿ ವಾರ್ಡಿನಿಂದ ಒಂದು ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡ ಬೇಕೆಂದು ಕಾರ್ಯಕರ್ತರಿಗೆ, ಮುಖಂಡರಿಗೆ ಸಲಹೆ ನೀಡಿದರು.
ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ,ಕೆ.ಎನ್.ಆರ್.ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರಿಗೆ ಒಂದು ರೀತಿಯ ಪಕ್ಷ ಸಂಘಟನೆಯ ಜೊತೆಗೆ, ನಗರಪಾಲಿಕೆಯ ಚುನಾವಣಾ ತಾಲೀಮು ಎಂಬAತಿದೆ.ಇಲ್ಲಿ ತಮ್ಮ ಶಕ್ತಿ ಏನು ಎಂಬುದನ್ನು ಮುಖಂಡರು ವ್ಯಕ್ತಪಡಿಸಬೇಕು. ಮುಖ್ಯಮಂತ್ರಿಗಳು,ಕೆಪಿಸಿಸಿ ಅಧ್ಯಕ್ಷರು,ಪಕ್ಷದ ಮುಖಂಡರುಗಳು  ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ತಾವುಗಳು ಹೆಚ್ಚಿನ ಜವಾಬ್ದಾರಿ ವಹಿಸುವಂತೆ ಕರೆ ನೀಡಿದರು.
ಅಹಿಂದ ಮುಖಂಡ ವಿರೂಪಾಕ್ಷ ಡ್ಯಾಗೇರಹಳ್ಳಿ ಮಾತನಾಡಿ,ಕೆ.ಎನ್.ರಾಜಣ್ಣ ಅವರ ನಾಲ್ಕು ದಶಕಗಳ ರಾಜಕಾರಣದಲ್ಲಿ ಶೋಷಿತ ಸಮುದಾಯಗಳ ದ್ವನಿಯಾಗಿ ಕೆಲಸ ಮಾಡಿದ್ದಾರೆ.ವಂಚಿತ ಸಮು ದಾಯಗಳ ನ್ಯಾಯದ ಪರವಾಗಿ ಕೆಲಸ ಮಾಡಿದ್ದಾರೆ. ಕೆ.ಎನ್.ರಾಜಣ್ಣ ಅವರ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಮತ್ತೊಬ್ಬ ಅಹಿಂದ ನಾಯಕನ ಉದಯಕ್ಕೆ ವೇದಿಕೆಯಾಗಲಿ ಎಂದರು.
 ಹೋರಾಟಗಾರ ಕೊಟ್ಟ ಶಂಕರ ಮಾತನಾಡಿ,ಕೆ.ಎನ.ರಾಜಣ್ಣ ಅವರು ಅಖಂಡ ಶೋಷಿತ ಸಮುದಾಯಗಳ ಪ್ರತಿನಿಧಿಯಾಗಿ ಸದನದ ಒಳಗೆ ಮತ್ತು ಹೊರಗೆ ಕೆಲಸ ಮಾಡಿದ್ದಾರೆ.ಈ ಕಾರ್ಯ ಕ್ರಮದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಉಳಿಯುವಂತಹ ಕಾರ್ಯಕ್ರಮವಾಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ,ಕೆ.ಎನ್.ರಾಜಣ್ಣ ಅವರ ೭೫ನೇ ವರ್ಷ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈಗಾಗಲೇ ಎಲ್ಲಾ ಸಿದ್ದತೆ ಗಳು ನಡೆದಿವೆ. ತುಮುಲ್,ಡಿಸಿಸಿ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕುಗಳ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಹೊರಗಿನಿಂದ ಬರುವವರಿಗೆ ವಾಹನ, ಊಟ, ತಿಂಡಿ ಎಲ್ಲವನ್ನು ಮಾಡಲಾಗಿದೆ.ಒಂದು ಲಕ್ಷಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊ ಳ್ಳಲಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹಿರಿಯ, ಮುತ್ಸದ್ದಿ ರಾಜಕಾರಿಣಿ ಕಾರ್ಯಕರ್ಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಇರುವಿಕೆಯನ್ನು ಪ್ರದರ್ಶಿಸುವಂತೆ ಸಲಹೆ ನೀಡಿದರು.
ಮುಖಂಡರಾದ ನಯಾಜ್ ಅಹಮದ್,ಮಹಿಳಾ ಕಾಂಗ್ರೆಸ್‌ನ ಗೀತಾ ರುದ್ರೇಶ್,ಸೌಭಾಗ್ಯಮ್ಮ, ಶಿರಾದ ರವಿ,ಕೊರಟಗೆರೆ, ಶಿವಾಜಿ, ಮೈಲಾರಪ್ಪ ಅವರುಗಳು ಕಾರ್ಯಕ್ರಮ ಯಶಸ್ವಿ ಕುರಿತು ಅಗತ್ಯ ಸಲಹೆ, ಸೂಚನೆ ನೀಡಿದರು.
ಸಭೆಯಲ್ಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಮಹೇಶ್, ಫಯಾಜ್,ಅಲ್ಪಸಂಖ್ಯಾತರ ಘಟಕದ ಸಂಜೀವಕುಮಾರ್,ಕೈದಾಳ ರಮೇಶ್,ಯುವ ಕಾಂಗ್ರೆಸ್ ಮೋಹನ್,ಎಂ.ವಿ.ರಾಘವೇAದ್ರ ಸ್ವಾಮಿ, ಗ್ರಾಮಾಂತರದ ಪಂಚಾಕ್ಷರಯ್ಯ,ಒಬಿಸಿ ಘಟಕದ ಅನಿಲ್‌ಕುಮಾರ್, ಮಾಜಿ ಕೌನಿಲರ್ ಎನ್.ಮಹೇಶ್,ಇನಾಯತ್,ಹೆಬ್ಬೂರು ಶ್ರೀನಿವಾಸ ಮೂರ್ತಿ,ಲೋಕೇಶಸ್ವಾಮಿ,ಜಿಯಾ ಸೇರಿದಂತೆ ಜಿಲ್ಲೆಯ ವಿವಿಧ ಮುಖಂಡರುಗಳು ಪಾಲ್ಗೊಂಡಿದ್ದರು.
(Visited 1 times, 1 visits today)
tumkur
Previous Articleಕಾರ್ಮಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ
Next Article ಇಲಾಖೆಯಿಂದ ಸವಲತ್ತುಗಳನ್ನು ಪಡೆದುಕೊಂಡು ಅದುನಿಕ ಕೃಷಿಗೆ ಹೆಚ್ಚು ಒತ್ತು ನೀಡಿ: ಶಾಸಕ
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.