BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ
ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲ ನೀಡೋಣ: ಆರ್.ರಾಜೇಂದ್ರ
By News Desk BenkiyabaleUpdated:May 09, 2025 3:17 pm

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.೧೩ ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು, ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯ ಪ್ರತಿಕಾರವಾಗಿ ಭಾರತ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದು ಪಾಕಿಸ್ಥಾನ ಮತ್ತು ಭಾರತದ ನಡುವೆ ಯುದ್ದದ ವಾತಾವರಣ ನಿರ್ಮಾಣವಾಗಿದೆ.ಎರಡು ದೇಶಗಳ ನಡುವೆ ನಡೆಯುತ್ತಿರುವ ಕ್ಷಿಪಣ್ಣಿ ಮತ್ತು ಯುದ್ದ ವಿಮಾನಗಳ ಶೆಲ್ ದಾಳಿಯಿಂದ ಉಗ್ರರ ನೆಲೆಗಳು ದ್ವಂಶಗೊAಡಿವೆ. ಇಂತಹ ಸಂದರ್ಭದಲ್ಲಿ ಭಾರತೀಯರೆಲ್ಲರೂ ಸೈನಿಕರೊಂದಿಗೆ ನಿಲ್ಲಬೇಕಾಗಿದೆ. ಹಾಗಾಗಿ ಮೇ.೧೩ರ ಕಾರ್ಯಕ್ರಮವನ್ನು ಮುಂದೂಡಿದ್ದು,ದೇಶದಲ್ಲಿ ವಾತಾವರಣ ತಿಳಿಗೊಂಡ ನಂತರ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಅಭಿನಂದನಾ ಸಮಿತಿ ತಿಳಿಸಲಿದೆ ಎಂದರು.
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾಧಕರು ದಾಳಿ ನಡೆಸಿದ್ದಾರೆ.ಭಯೋತ್ಪಾಧಕರಿಗೆ ಜಾತಿ, ಧರ್ಮ ಎಂಬುದು ಇಲ್ಲ.ಹಾಗಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೀಯಾಳಿಸುವುದು ತರವಲ್ಲ.ಈ ಹಿಂದೆ ರಾಷ್ಟçಪಿತ ಮಹಾತ್ಮಗಾಂಧಿ ಅವರನ್ನು ಕೊಂದಿದ್ದು ಸಹ ಓರ್ವ ವ್ಯಕ್ತಿ, ಆದರೆ ಅಂದು ಕೊಲೆ ಮಾಡಿದ ವ್ಯಕ್ತಿಯನ್ನು ಮಾತ್ರ ಅಪರಾದಿ ಎಂದು ತೀರ್ಮಾನಿಸಲಾಯಿತೇ ಹೊರತು, ಆತನ ಧರ್ಮ ಮತ್ತು ಸಮುದಾಯವನ್ನಲ್ಲ. ಇಂದಿರಾಗಾAಧಿ ಅವರಿಗೆ ಅವರ ಅಂಗರಕ್ಷಕರೇ ಗುಂಡಿಟ್ಟುಕೊAದಾಗ, ಗುಂಡಿಟ್ಟ ವ್ಯಕ್ತಿಗಳ ಸಮುದಾಯವನ್ನು ಅಪರಾಧಿ ಎಂಬAತೆ ಜನತೆ ನಡೆದುಕೊಳ್ಳಲಿಲ್ಲ. ಈ ಘಟನೆಯಲ್ಲಿಯೂ ಒಂದು ಸಮುದಾಯವನ್ನು ಗುರಿಯಾಗಿಸುವುದು ಭಾರತದಂತಹ ಬಹುಸಂಸ್ಕೃತಿಯ ನಾಡಿಗೆ ತರವಲ್ಲ ಎಂದು ಆರ್.ರಾಜೇಂದ್ರ ನುಡಿದರು.
ಮೇ.೧೩ ರಂದು ಕೆ.ಎನ್.ಆರ್. ಅವರ ೭೫ನೇ ವರ್ಷದ ಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆಗೆ ಸಕಲ ಸಿದ್ದತೆಗಳನ್ನು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ೧.೫೦ ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು.ಅದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಅಭಿನಂದನಾ ಸಮಿತಿ ಮತ್ತು ಕೆ.ಎನ್.ಆರ್.ಅಭಿಮಾನಿಗಳು, ಹಿತೈಷಿಗಳು ಮಾಡಿಕೊಂಡಿದ್ದರು.ಆದರೆ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗ,ಇಂತಹ ಅದ್ದೂರಿಯ ಕಾರ್ಯಕ್ರಮ ಮಾಡಿದರೆ ಅದು ಜನರಿಗೆ ಬೇರೆಯದೆ ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಪರಿಸ್ಥಿತಿ ತಿಳಿಯಾಗುವವರೆಗೂ ಕಾಯ್ದು, ತದನಂತರ ಕಾರ್ಯಕ್ರಮ ಮಾಡುವುದಾಗಿ ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ ಹಾಗೂ ಕರ್ನಾಟಕ ಸರಕಾರ ಸಚಿವ ಸಂಪುಟದ ಸಹೋದ್ಯಗಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೆವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರುಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್.ರಾಜೇಂದ್ರ ತಿಳಿಸಿದರು.
ಅಭಿನಂದನಾ ಸಮಿತಿ ಅಧ್ಯಕ್ಷರಾದ ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ,ಸುಮಾರು ೬೦೦ ಪುಟುಗಳ ಎರಡು ಸಂಪುಟಗಳನ್ನು ಒಳಗೊಂಡAತೆ ಸಹಕಾರ ಸಚಿವ ಸಮಗ್ರ ಜೀವನ ಮತ್ತು ಸಾಧನೆಯನ್ನು ಒಳಗೊಂಡ ಅಭಿನಂದನಾ ಗ್ರಂಥ ಮುದ್ರಣ ಆರಂಭವಾಗಿತ್ತು. ಆದರೆ ದೇಶದಲ್ಲಿ ಪಾಕಿಸ್ಥಾನ ಮತ್ತು ಭಾರತದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮೇ.೧೩ ರ ಕಾರ್ಯಕ್ರಮ ಮುಂದೂಡಲಾಗಿದೆ.ಮುAದಿನ ದಿನಗಳಲ್ಲಿಯೂ ಇಷ್ಟೇ ಆಸಕ್ತಿಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿ ಮುರುಳೀ ಕೃಷ್ಣಪ್ಪ, ಎನ್.ಗೋವಿಂದರಾಜು, ಗಂಗಣ್ಣ, ಕೆ.ಎ.ದೇವರಾಜು, ಧನಿಯಕುಮಾರ್, ಲಕ್ಷಿö್ಮನಾರಾಯಣ್, ಕೊಟ್ಟ ಶಂಕರ್, ಪಿ.ಮೂರ್ತಿ, ಡ್ಯಾಗೇರಹಳ್ಳಿ ವಿರೂಪಾಕ್ಷ, ನಾರಾಯಣಗೌಡ, ಟಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ
Next Article ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.