BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗರೋತ್ಥಾನ ಯೋಜನೆ ಅನುಷ್ಠಾನ
  • ಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ
  • ರಾಜ್ಯದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದೆ
  • ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
  • ಅಮ್ ಆದ್ಮಿ ಪಕ್ಷದಿಂದ ಭಾರತೀಯ ಸೇನೆಗೆ ಅಭಿನಂದನೆ
  • ಅವ್ಯವಹಾರಗಳ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗೃಹಸಚಿವರಿಗೆ ರೈತರ ಮನವಿ
  • ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ
  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ
ತುಮಕೂರು

ಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ

By News Desk BenkiyabaleUpdated:May 15, 2025 4:15 pm

ತುಮಕೂರು: ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ ೩ ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ ಮಾಡಿಕೊಡುವ ಸಲುವಾಗಿ ಬಿ ಖಾತೆಯನ್ನು ಜಾರಿಗೆ ತರಲಾಗಿದ್ದು, ಈಗಾಗಲೇ ೩ ತಿಂಗಳ ಅವಧಿ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಶೇ.೫೦ರಷ್ಟು ಮಾತ್ರ ಬಿ ಖಾತೆಗಳಾಗಿರುವ ಹಿನ್ನೆಲೆಯಲ್ಲಿ ಉಳಿದವರಿಗೂ ಅನುಕೂಲ ಕಲ್ಪಿಸುವ ಸಲುವಾಗಿ ಬಿ ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ ೩ ತಿಂಗಳ ಕಾಲ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದರು.
ಕಳೆದ ೩೦-೪೦ ವರ್ಷಗಳಿಂದ ಯಾವುದೇ ದಾಖಲಾತಿಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಬಡ ಜನರಿಗೆ ಅನುಕೂಲ ಕಲ್ಪಿಸಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಸೆ ಮೇರೆಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಈ ಸಂಬAಧ ಮಸೂದೆ ಮಂಡಿಸಿ ಬಿ ಖಾತೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ೧೦,೦೦೦ ಎ ಖಾತೆ ಮತ್ತು ೫೮೦೦ ಬಿ ಖಾತೆ ಸೇರಿದಂತೆ ೧೫೮೦೦ ಎ ಮತ್ತು ಬಿ-ಖಾತೆಗಳಿವೆ ಎಂದು ಮಾಹಿತಿ ನೀಡುತ್ತಾ, ಪ್ರಸ್ತುತ ೩ ತಿಂಗಳ ಅವಧಿಯಲ್ಲಿ ಶೇ.೫೦ರಷ್ಟು ಮಾತ್ರ ಬಿ ಖಾತೆಯಾಗಿದೆ. ಉಳಿದ ಶೇ.೫೦ರಷ್ಟು ಬಿ ಖಾತೆ ಆಗಬೇಕಾಗಿದೆ. ಹಾಗಾಗಿ ಉಳಿದವರಿಗೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದರು.
ನಗರೋತ್ಥಾನ ಯೋಜನೆಯಡಿ ೧೦೨ ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಈ ಪೈಕಿ ೪೦ ಕೋಟಿ ರೂ. ಮಾತ್ರ ಖರ್ಚಾಗಿದೆ. ಉಳಿದ ಹಣವನ್ನು ಆದಷ್ಟು ಶೀಘ್ರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸುವಂತೆ ಪಟ್ಟಣ ಪಂಚಾಯತಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಂಬAಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ಇAದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆ ಕಾಪಾಡುವಂತೆಯೂ ಹಾಗೂ ಸಾರ್ವಜನಿಕರಿಗೆ ಶುಚಿ, ರುಚಿಯಾದ ಆಹಾರ ನೀಡುವಂತೆಯೂ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್‌ಗಳಿಗೆ ಸಂಬAಧಪಟ್ಟ ಅಧಿಕಾರಿಗಳು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆಯೂ ಸೂಚಿಸಿರುವುದಾಗಿ ಅವರು ಹೇಳಿದರು.
ಇಂದಿರಾ ಕ್ಯಾಂಟೀನ್‌ಗಳನ್ನು ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಯಾವುದೇ ಕಾರಣಕ್ಕೂ ಈ ಕ್ಯಾಂಟೀನ್‌ಗಳಲ್ಲಿ ಜನರಿಗೆ ತೊಂದರೆಯಾಗದAತೆ ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ಇAದಿರಾ ಕ್ಯಾಂಟೀನ್‌ಗಳಲ್ಲಿ ಸಿಸಿ ಟಿವಿಗಳು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇಂದಿರಾ ಕ್ಯಾಂಟೀನ್ ನಿರ್ವಹಣೆ ಬಗ್ಗೆ ನಿರ್ಲಕ್ಷö್ಯ ತೋರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

(Visited 1 times, 1 visits today)
tumkur
Previous Articleರಾಜ್ಯದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದೆ
Next Article ನಗರೋತ್ಥಾನ ಯೋಜನೆ ಅನುಷ್ಠಾನ
News Desk Benkiyabale

Related Posts

ನಗರೋತ್ಥಾನ ಯೋಜನೆ ಅನುಷ್ಠಾನ

May 15, 2025 4:17 pm ತುಮಕೂರು

ರಾಜ್ಯದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದೆ

May 15, 2025 4:14 pm ತುಮಕೂರು

ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

May 15, 2025 4:13 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ನಗರೋತ್ಥಾನ ಯೋಜನೆ ಅನುಷ್ಠಾನ

May 15, 2025 4:17 pm
ತುಮಕೂರು

ಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ

May 15, 2025 4:15 pm
ತುಮಕೂರು

ರಾಜ್ಯದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದೆ

May 15, 2025 4:14 pm

ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

May 15, 2025 4:13 pm
ತುಮಕೂರು

ಅಮ್ ಆದ್ಮಿ ಪಕ್ಷದಿಂದ ಭಾರತೀಯ ಸೇನೆಗೆ ಅಭಿನಂದನೆ

May 15, 2025 4:12 pm
ತುಮಕೂರು

ಅವ್ಯವಹಾರಗಳ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗೃಹಸಚಿವರಿಗೆ ರೈತರ ಮನವಿ

May 15, 2025 4:10 pm
Our Youtube Channel
Our Picks

ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

May 15, 2025 4:09 pm

ಬಣ್ಣದ ಶಿಬಿರದಲ್ಲಿ ನಾಟಕ ಪ್ರಯೋಗ

May 14, 2025 4:39 pm

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm

ಪೋಕೋ ಪ್ರಕರಣ: ಆರೋಪಿಗೆ ೪೦ ವರ್ಷ ಜೈಲು ಶಿಕ್ಷೆ, ೨ ಲಕ್ಷ ೫೦ ಸಾವಿರ ರೂ. ದಂಡ

May 14, 2025 4:35 pm

ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ

May 12, 2025 3:11 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ನಗರೋತ್ಥಾನ ಯೋಜನೆ ಅನುಷ್ಠಾನ

By News Desk BenkiyabaleMay 15, 2025 4:17 pm

ತುಮಕೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ…

ಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ

May 15, 2025 4:15 pm

ರಾಜ್ಯದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದೆ

May 15, 2025 4:14 pm

ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

May 15, 2025 4:13 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.