BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
  • ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

ಕಾರ್ಯಕ್ರಮದಲ್ಲಿ ವಕೀಲರು ಸಮವಸ್ತçದಲ್ಲಿ ಭಾಗವಹಿಸುವಂತೆ ಹಿರಿಯ ವಕೀಲ ಪಾತಣ್ಣ ಮನವಿ
By News Desk BenkiyabaleUpdated:June 20, 2025 3:36 pm

ತುಮಕೂರು: ವಕೀಲರಾಗಿ ವೃತ್ತಿ ಆರಂಭಿಸಿ, ಕ್ಯಾತ್ಸಂದ್ರ್ ಟಿಎಪಿಸಿಎಂಎಸ್‌ನ ಸದಸ್ಯರಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟ ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃ ಎನಿಸಿಕೊಂಡಿದ್ದಾರೆ. ಇಂದು ನಡೆಯುವ ಅವರ ೭೫ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ವಕೀಲರು ಸಮವಸ್ತçದಲ್ಲಿ ಭಾಗವಹಿಸುವಂತೆ ಸಮಾನ ಮನಸ್ಕ ವಕೀಲರ ಬಳಗದ ಪರವಾಗಿ ಹಿರಿಯ ವಕೀಲರಾದ ಪಾತಣ್ಣ ಮನವಿ ಮಾಡಿದ್ದಾರೆ.
ಇಂದು ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾನ ಮನಸ್ಕ ವಕೀಲ ಸಭೆಯಲ್ಲಿ ಮಾತನಾಡಿದ ಅವರು, ೧೯೫೧ರ ಏಪ್ರಿಲ್ ೧೩ ರಂದು ಜನಿಸಿದ ಕೆ.ಎನ್.ರಾಜಣ್ಣ,ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವದ ಗುಣ ಬೆಳೆಸಿಕೊಂಡವರು, ತುಳಿತಕ್ಕೆ ಒಳಗಾದ ಜನರ ಪರವಾಗಿ ದ್ವನಿ ಎತ್ತುವ ನಾಯಕರಲ್ಲಿ ಮೊದಲಿಗರು.ಕರೋನ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ವಕೀಲರಿಗೆ ಶೂನ್ಯ ಬಡ್ಡಿದರದಲ್ಲಿ ಡಿಸಿಸಿ ಬ್ಯಾಂಕಿನಿAದ ಸಾಲ ನೀಡಿ,ಜೀವನ ನಿರ್ವಹಣೆಗೆ ಸಹಕಾರಿಯಾಗಿದ್ದಾರೆ. ಹಾಗಾಗಿ ಅವರ ಕಾರ್ಯಕ್ರಮದಲ್ಲಿ ವಕೀಲರು ಸ್ವಯಂ ಪ್ರೇರಿತರಾಗಿ ವಕೀಲರ ಧೀರಿಸಿನಲ್ಲಿಯೇ ಪಾಲ್ಗೊಂಡರೆ ಕಾರ್ಯಕ್ರಮಕ್ಕೆ ಹೆಚ್ಚಿನ ಕಳೆ ಕಟ್ಟಿದಂತಾಗುತ್ತದೆ ಎಂದರು.
ವಕೀಲರು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ.ಲಿಂಗರಾಜು ಮಾತನಾಡಿ,ಜನಪ್ರಿಯ ನಾಯಕರಾಗಿ ಕೆಎನ್‌ಆರ್ ಅವರ ೭೫ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸ್ವತಹಃ ಮುಖ್ಯಮಂತ್ರಿಗಳು,ಉಪಮುಖ್ಯಮAತ್ರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗಿಯಾಗುತ್ತಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಜಿ.ಪರಮೇಶ್ವರ್ ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಕೆ.ಎನ್.ರಾಜಣ್ಣ ಮತ್ತು ಡಾ.ಜಿ.ಪರಮೇಶ್ವರ್ ಒಳ್ಳೆಯ ಹೆಸರು ಮಾಡಿದ್ದಾರೆ.ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಬೇಕಾದ ವ್ಯಕ್ತಿಯಾಗಿದ್ದಾರೆ ವಕೀಲ ವಿವಿದೊದ್ದೇಶ ಪತ್ತಿನ ಸಹಕಾರ ಸಂಘಕ್ಕೂ ಕೆ,ಎನ್.ರಾಜಣ್ಣ ಅವರಿಂದ ಸಾಕಷ್ಟು ಅನುಕೂಲಗಳಾಗಿವೆ.ಕೆ.ಎನ್.ಆರ್.ಅವರಿಗೆ ಕೃತಜ್ಞತೆ ಸಲ್ಲಿಸಲು ಇದೊಂದು ಸುವರ್ಣ ಅವಕಾಶ.ಎಲ್ಲಾ ವಕೀಲರು ಪಾಲ್ಗೊಳ್ಳಬೇಕೆಂದರು.
ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ಕ್ಯಾತ್ಸಂದ್ರ ವೆಂಕಟೇಶ್ ಮಾತನಾಡಿ,ಅತಿ ಹಿಂದುಳಿದ ಸಮಾಜಕ್ಕೆ ಸೇರಿದ ಕೆ.ಎನ್.ರಾಜಣ್ಣ ಅವರು ಶೋಷಿತರ ಪರವಾಗಿ ಸದಾ ತುಡಿಯುವ ಜೀವವಾಗಿದೆ.ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ್ದು, ಅತಿ ಚಿಕ್ಕ ವಯಸ್ಸಿನಲ್ಲಿಯೇ ಕ್ಯಾತ್ಸಂದ್ರ ವಿ.ಎಸ್.ಎಸ್.ಎನ್.ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಇವರದ್ದು. ಇಂತಹ ವ್ಯಕ್ತಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲರೂ ಪಾಲ್ಗೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು.
ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿಗೌಡ ಮಾತನಾಡಿ, ಕೆ.ಎನ್.ರಾಜಣ್ಣ ಅವರು ಸಹಕಾರ ಕ್ಷೇತ್ರದ ದಿಗ್ಗಜರು.ಬಡವರ ಪರವಾಗಿ ಸದಾ ದ್ವನಿ ಎತ್ತುವ ಕೆ.ಎನ್.ಆರ್. ಜಿಲ್ಲೆಯ ಗಂಡೆದೆಯ ನಾಯಕ.ವಕೀಲರಾಗಿ, ಸಹಕಾರಿ ಕ್ಷೇತ್ರದ ನಾಯಕರಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡುವಲ್ಲಿ ಶ್ರಮಿಸಿದ್ದಾರೆ.ಜಾತ್ಯಾತೀತ, ಪಕ್ಷಾತೀತ ನಾಯಕರಾಗಿರುವ ಸಹಕಾರಿ ಸಚಿವರ ಕಾರ್ಯಕ್ರಮದಲ್ಲಿ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ವಕೀಲರ ವಿವಿದೊದ್ದೇಶ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಹರೀಶಕುಮಾರ್ ಮಾತನಾಡಿ, ೭೫ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಕೆ.ಎನ್.ರಾಜಣ್ಣ ಅವರಿಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿAದ ವಕೀಲರು ಆಗಮಿಸಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ನೀಡುವಂತೆ ಮನವಿ ಮಾಡಿದರು.
ವಕೀಲರ ಸಂಘದ ಮಾಜಿ ಜಂಟಿ ಕಾರ್ಯದರ್ಶಿ ಲೋಕೇಶ್ ಮಾತನಾಡಿ,ತುಮಕೂರು ಜಿಲ್ಲೆಯ ಪ್ರಭಾವಿ ಸಚಿವರಲ್ಲಿ ಕೆ.ಎನ್.ರಾಜಣ್ಣ ಅವರು ಒಬ್ಬರು. ಎಲ್ಲ ವರ್ಗದ ಜನರಿಗೂ ಡಿಸಿಸಿ ಬ್ಯಾಂಕ್ ವತಿಯಿಂದ ತಮ್ಮ ಕೈಲಾದ ಸಹಾಯ ಸಹಕಾರ ನೀಡಿದ್ದಾರೆ.ಹಾಗಾಗಿ ವಕೀಲರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ವಕೀಲರಾದ ರಂಗಧಾಮಯ್ಯ ಮಾತನಾಡಿ,ಕೆ.ಎನ್.ರಾಜಣ್ಣ ಅವರು ಸದನದ ಒಳಗೆ ಮತ್ತು ಹೊರಗೆ ಬಡವರ ಪರವಾಗಿ ದ್ವನಿ ಎತ್ತಿದವರು.ರಾಜ್ಯ ಸರಕಾರದ ಶೂಭಾಗ್ಯ ಮತ್ತು ಕ್ಷೀರ ಭಾಗ್ಯದ ಹಿಂದೆ ಕೆ.ಎನ್.ಆರ್.ಬೆಂಬಲವಿದೆ.ಬೆಳಕಿನ ಶಕ್ತಿ ಯೋಜನೆ, ಗೋಶಾಲೆಗಳಿಗೆ ಬರುವ ರೈತರಿಗೆ ಮಧ್ಯಾಹ್ನದ ಬಿಸಿಯೂಟ ನೀಡಿ ಡಿಸಿಸಿ ಬ್ಯಾಂಕ್ ರೈತರ ಪರ ಎಂಬುದನ್ನು ಸಾಭೀತು ಮಾಡಿದ್ದರು. ಸಾಮಾನ್ಯ ಕ್ಷೇತ್ರದಲ್ಲಿ ಎರಡು ಬಾರಿ ಗೆಲ್ಲುವ ಮೂಲಕ ತಮ್ಮ ಜನಪ್ರಿಯತೆಯನ್ನು ಸಾಭೀತು ಮಾಡಿದ್ದಾರೆ.ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.
ವಕೀಲರಾದ ಕೆ.ಎನ್.ಸ್ವಾಮಿಗೌಡ ಮಾತನಾಡಿ,ದೇವೇಗೌಡ ರೀತಿ, ಕೆ.ಎನ್.ರಾಜಣ್ಣ ಯುವ ನಾಯಕರನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ವಕೀಲರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ವಕೀಲ ಪತ್ತಿನ ಸಹಕಾರ ಸಂಘಕ್ಕೆ ನೇರವು ಸೇರಿದಂತೆ ಹಲವು ಪ್ರಯೋಜನಗಳನ್ನು ಮಾಡಿದ್ದಾರೆ. ಕೆ.ಎನ್.ರಾಜಣ್ಣ ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಲು ನಾವೆಲ್ಲರೂ ಪಾಲ್ಗೊಳ್ಳಬೇಕಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಕೀಲರಾದ ಸುರೇಶ.ಎನ್., ಹೆಚ್.ಎಸ್.ಕುಮಾರಸ್ವಾಮಿ,ರಾಘವೇಂದ್ರ ಬಾಬು,ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
Next Article ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

By News Desk BenkiyabaleAugust 06, 2025 4:02 pm

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ…

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.