BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದಲ್ಲೇ ವಿಶಿಷ್ಟ ಮನೆಬಾಗಿಲಿಗೆ ಮನೆಮಗ ಕಾರ್ಯಕ್ರಮದಲ್ಲಿ ಜನರ ವಾಸ್ತವ ಸಮಸ್ಯೆಗಳ ಅರಿವು: ಶಾಸಕ ಸಿ. ಬಿ. ಸುರೇಶ್ ಬಾಬು
ತುಮಕೂರು

ರಾಜ್ಯದಲ್ಲೇ ವಿಶಿಷ್ಟ ಮನೆಬಾಗಿಲಿಗೆ ಮನೆಮಗ ಕಾರ್ಯಕ್ರಮದಲ್ಲಿ ಜನರ ವಾಸ್ತವ ಸಮಸ್ಯೆಗಳ ಅರಿವು: ಶಾಸಕ ಸಿ. ಬಿ. ಸುರೇಶ್ ಬಾಬು

By News Desk BenkiyabaleUpdated:August 30, 2025 3:01 pm

ಚಿಕ್ಕನಾಯಕನಹಳ್ಳಿ : ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ವಿವಿಧ ಇಲಾಖೆಗಳ ಲ್ಲಿನ ಮದ್ಯವರ್ತಿ ಗಳ ಹಾವಳಿ ತಪ್ಪಿಸಲು ನೇರವಾಗಿ ಜನರ ಮನೆಬಾಗಿಲಿಗೆ ಮನೆ ಮಗನಾಗಿ ಬಂದಿದ್ದು ನಿಮ್ಮ ಸಮಸ್ಯೆಗಳನ್ನು ಸಾಧ್ಯವದಷ್ಟು ಸ್ಥಳದಲ್ಲೇ ಬಗೆ ಹರಿಸಲಾಗುವುದು ಎಂದು ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿಸದರು.
ತಾಲ್ಲೋಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ೧೪ನೇ ವಾರದ ಮನೆಬಾಗಿಲಿಗೆ ಮನೆ ಮಗ ಶೀರ್ಷಿಕೆ ಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಇಂದು ನಿಮ್ಮ ಗ್ರಾಮ ಗಳಿಗೆ ಬಂದಿದ್ದು ನಿಮ್ಮ ಯಾವುದೇ ವೈಯಕ್ತಿಕ ಇಲ್ಲವೇ ಸಾಮಾಜಿಕ ಸಮಸ್ಯೆ ಗಳಿದ್ದರು ಲಿಖಿತದ ಮೂಲಕ ಅರ್ಜಿ ನೀಡಿ ಅದರಲ್ಲಿ ನಿಮ್ಮ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಿ ನಿಮ್ಮ ಅರ್ಜಿಗಳ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲಾಗುವುದು ಹಾಗೂ ಸಾಧ್ಯವದಷ್ಟು ಸ್ಥಳದಲ್ಲೇ ನಿಮ್ಮ ಸಮಸ್ಯೆ ಗಳನ್ನು ಬಗೆ ಹರಿಸಲಾಗುವುದು. ಎಂದ ಅವರು ಪಿ ಡಿ ಒ ಪ್ರತಿ ಗ್ರಾಮಗಳಿಗೆ ಬೇಟಿ ನೀಡಬೇಕು ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಅಗತ್ಯವಿರುವಂತಹ ಮೂಲಭೂತ ಸೌಲಭ್ಯಗಳ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಿದ ಅವರು ಗೋಡೆಕೆರೆ ಗ್ರಾಮಪಂಚಾಯಿತಿಯು ಗಣಿಬಾದಿತ ಪ್ರದೇಶದಲ್ಲಿ ಸೇರಿರುವುದರಿಂದ ಈ ಭಾಗದ ಪ್ರತಿಹಳ್ಳಿಗಳಲ್ಲೂ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತಿದೆ ಇದರೊಂದಿಗೆ ಮನೆಗಳನ್ನು ನೀಡುವುದು ಸೇರಿದಂತೆ ಪ್ರತಿಮನೆಗೊಂದು ಹಸುಗಳನ್ನು ನೀಡುವಂತಹ ಯೋಜನೆಯ ಬಗ್ಗೆ ಕ್ರಮಕೈಗೊಳ್ಳಲಾಗುವುದೆಂದ ಅವರು ಯಾವುದಾದರು ಕೈ ತಪ್ಪಿದ್ದರೆ ಅಂತಹ ರಸ್ತೆಗಳನ್ನು ಮುಂದಿನಗಳಲ್ಲಿ ಮಾಡಲಾಗುವುದು , ಸೊಂಡೆನಹಳ್ಳಿಯ ಅಂಗನಾವಾಡಿ ಕಟ್ಟಡಕ್ಕೆ ಈಗಾಗಲೇ ೨೩ಲಕ್ಷಅನುದಾನ ನೀಡಿದ್ದು ಅದು ಟೆಂಡರ್ ಹಂತದಲ್ಲಿದೆ ಅದೇ ರೀತಿ ಸಮುದಾಯ ಭವನಕ್ಕೆ ಸರ್ಕಾರದಿಂದಅನುದಾನ ಬಂದರೆ ೫೦ಲಕ್ಷ ನೀಡುವ ಭರವಸೆ ನೀಡಿದ ಅವರು ಗೋಡೆಕೆರೆ ಸೇರಿದಂತ ಪ್ರತಿ ಪಿಹೆಚ್ ಸಿಗೂ ಶಾಶ್ವತವಾಗಿ ವೈದ್ಯರ ನೇಮಕಾತಿಯನ್ನು ಮಾಡಲಾಗುತ್ತಿದ್ದು ಇನ್ನು ಮುಂದೆ ವೈದ್ಯರ ಸೇವೆ ದೊರೆಯಲಿದೆ ಹಾಗೂ ಗೋಡೆಕೆರೆ ಗ್ರಾಮಕ್ಕೆ ಮೈಸೂರು ಕಡೆಗೆ, ಬೆಂಗಳೂರು ಕಡೆಗೆ ಹೋಗುವಂತಹ ಹಾಗೂ ಬರುವಂತಹ ಕೆಎಸ್ ಆರ್ ಟಿ ಸಿ ಬಸ್ ಗಳನ್ನು ಬಂದುಹೋಗುವAತೆ ಬಸ್ ವ್ಯವಸ್ಥೆ ಯನ್ನು ಮಾಡುವುದಾಗಿ ತಿಳಿಸದ ಅವರು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು.
ಕಾರ್ಯಕ್ರಮದ ಅದ್ಯಕ್ಷತೆವಹಿಸಿದ್ದ ಗೋಡೆಕೆರೆ ಗ್ರಾ.ಪಂ.ಅದ್ಯಕ್ಷೆ ತೇಜಸ್ವೀನಿ ಮಾತನಾಡಿ ಇಂತಹ ಜನಪಯೋಗಿ ಕಾರ್ಯಕ್ರಮ ಸಾರ್ವಜನಿಕರಿಗೆ ಸಹಕಾರಿಯಾಗಿದೆ ಕಳೆದ ೧೪ವಾರಗಳಿಂದ ವಿವಿಧ ಗ್ರಾಮಪಂಚಾಯಿತಿಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಇಂದು ನಮ್ಮ ಪಂಚಾಯಿತಿಯಲ್ಲಿ ನಡೆಯುತ್ತಿದ್ದು ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳನ್ನು ಬೇಟಿ ಮಾಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರು ನೇರವಾಗಿ ಅರ್ಜಿಗಳನ್ನು ಪಡೆದು ಕೇಲವನ್ನು ಸ್ಥಳದಲ್ಲೇ ಅಧಿಕಾರಿಗಳಿಗೆ ನೀಡಿ ಪರಿಹರಿಸುವಂತೆ ಸೂಚನೆ ನೀಡಿದ್ದು ಇದು ಅಧಿಕಾರಿಗಳು ಹಾಗೂ ಜನರ ನಡುವೆ ಉತ್ತಮ ಬಾಂದವ್ಯ ಮೂಡುತ್ತದೆ ಜನರು ಅಧಿಕಾರಿಗಳನ್ನು ಹಡುಕಿಕೊಂಡು ಅಲೆದಾಡುವುದು ತಪ್ಪುತ್ತದೆ ಇದು ಒಳ್ಳೆಯ ಕಾರ್ಯಕ್ರಮ ಎಂದರು.
ಈ ಸಂದರ್ಭದಲ್ಲಿ ಗೋಡೆಕರೆ ಪಂಚಾಯಿತಿಯ ತರಬೇತಿನಹಳ್ಳಿಯಲ್ಲಿ ಉದ್ಘಾಟನೆಗೊಂಡ ಮನೆಬಾಗಿಲಿಗೆ ಮನೆಮಗ ಕಾರ್ಯಕ್ರಮದಲ್ಲಿ ತರಬೇತಿನಹಳ್ಳಿ ಗ್ರಾಮದಲ್ಲಿನ ರಸ್ತೆಗಳನ್ನು ದುರಸ್ಥಿಮಾಡಿಸುವಂತೆ , ನಡುವನಹಳ್ಳಿ ಗ್ರಾಮದಲ್ಲಿನ ಕಾರ್ಯಕ್ರಮದಲ್ಲಿ ಸಮುದಾಯಭವನ , ಬಾಣದದೇವರಹಟ್ಟಿಗೆ ಹೋಗುವಂತಹ ರಸ್ತೆ ನಿರ್ಮಾಣ, ಸಾಮುಹಿಕ ಶೌಚಾಲಯ, ನಿರ್ಮಿಸುವಂತೆ ಹಾಗೂ ನಡುವನಹಳ್ಳಿಯ ಗುಂಡತೋಪಿನಲ್ಲಿ ವಾಸಿಸುತ್ತಿರುವಂತಹ ಜನರಿಗೆ ನಿವೇಶನ ಮಂಜೂರು ನೀಡುವುದು ಹಾಗೂ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವ ಬಗ್ಗೆ, ನಿವೇಶನರಹಿತರಿಗೆ ನಿವೇಶನ ನೀಡುವುದು , ಕಂದಾಯ ಇಲಾಕೆಯ ಖಾತೆ ಮಾಡಿಸುವಬಗ್ಗೆ, ಮನವಿ ಗಳು ಬಂದರೆ, ಸೊಂಡೆನಹಳ್ಳಿ ಗ್ರಾಮದ ಕಾರ್ಯಕ್ರಮದಲ್ಲಿ ಶಾಲೆಗೆ ಅಡುಗೆ ಕೋಣೆ ನಿರ್ಮಿಸುವಂತೆ, ಸಮುದಾಯಭವನ , ಸೊಂಡೆನಹಳ್ಳಿಗೆ ಉತ್ತಮ ರಸ್ತೆ, ಹಾಗೂ ಟ್ರಾನ್ಸ್ ಫಾರ್ಮರ್ ಸಂಪರ್ಕ, ಗೃಹಲಕ್ಷ್ಮಿ ಯೋಜನೆಗಾಗಿ ಮನವಿಗಳು ಬಂದವು, ಸೋಮನಹಳ್ಳಿ ಗ್ರಾಮದಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಡಿಯುವ ನೀರಿಗಾಗಿ ಶುದ್ದನೀರಿನ ಘಟಕವನ್ನು ನೀಡುವಂತೆ ಹಾಗೂ ರಸ್ತೆಗಳನ್ನು ನಿರ್ಮಿಸುವಂತೆ ಮನವಿಯನ್ನು ನೀಡಲಾಯಿತು. ಗೋಡೆಕೆರೆ ಗ್ರಾಮದಲ್ಲಿ ಗೋಡೆಕೆರೆ ಗ್ರಾಮಕ್ಕೆ ಒಂದು ಬ್ಯಾಂಕ್ ನ್ನು ಪ್ರಾರಂಭಿಸಲು ಪೊಸ್ಟ್ ಆಫೀಸ್ ಕಚೇರಿ ನಿರ್ಮಿಸಲು, ಕೆಎಸ್ ಆರ್ ಟಿಸಿ ಬಸ್ ಗೋಡೆಕೆರೆಗೆ ಬಂದು ಹೋಗುವಂತಹ ವ್ಯವಸ್ಥೆ ಮಾಡಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಶ್ವತ ವೈದ್ಯರನ್ನು ನೇಮಿಸುವಂತೆ ಮನವಿಗಳು ಸಾರ್ವಜನಿಕವಾಗಿ ಅರ್ಜಿಗಳು ಬಂದವು.
ಕಾರ್ಯಕ್ರಮದಲ್ಲಿ ಪಿಎಲ್ ಡಿ ಬ್ಯಾಂಕ್ ಅದ್ಯಕ್ಷ ಹೆಚ್.ಆರ್.ಶಶಿಧರ್, ಶಿರಸ್ಥೇದಾರ್ ರಂಗನಾಥ್, ಇಒ ದೊಡ್ಡಸಿದ್ದಯ್ಯ, ಗೋಡೆಕೆರೆ ಗ್ರಾ.ಪಂ.ಉಪಾದ್ಯಕ್ಷೆ ಯಶೋದಮ್ಮ, ಸದಸ್ಯರುಗಳಾದ ಮಲ್ಲಿಕಯ್ಯ, ತೋಂಟಾರಾದ್ಯ, ಕೃಷ್ಣಮೂರ್ತಿ, ರೂಪಾ, ಸಂಗಮೇಶ್, ಮಂಗಳಗೌರಮ್ಮ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವರಾಜ್ ಕುಮಾರ್, ಸಿಡಿಪಿಒ ಹೊನ್ನಪ್ಪ, ಲೋಕೊಪಯೋಗಿ ಇಲಾಖೆ ಎಇಇ ತಿಮ್ಮಪ್ಪ, ಜಿ.ಪಂ. ಎಇಇ ಮೋಹನ್, ಮಾರುತಿ, ವಲಯಅರಣ್ಯಾಧಿಕಾರಿ ಅಮಿತ್, ಪಿಡಿಒ ಸಂತೋಶ್ , ಕಾರ್ಯದರ್ಶಿ ನಟರಾಜ್ ಟಿ ಸೇರಿದಂತೆ ಇತರರು ಇದ್ದರು.

 

(Visited 1 times, 1 visits today)
tumkur
Previous Articleಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕ
Next Article ನ್ಯಾಯ ಇರುವಡೆ ಶಾಂತಿ, ಸಾಮರಸ್ಯದ ಬದುಕು ಸಾಧ್ಯ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.