BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ
ತುಮಕೂರು

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

By News Desk BenkiyabaleUpdated:September 12, 2025 3:49 pm

ತುಮಕೂರು: ಅಂಗವಿಕಲತೆ ಶಾಪವೂ ಅಲ್ಲ. ವರವೂ ಅಲ್ಲ. ವಾಸ್ತವವೆಂಬುದನ್ನು ಅಂಗವೈಕಲ್ಯಕ್ಕೊಳಗಾದ ಮಕ್ಕಳು ಮತ್ತು ಅವರ ಪೋಷಕರು ಅರ್ಥ ಮಾಡಿಕೊಂಡು ಸರಕಾರ, ಸರಕಾರೇತರ ಸಂಸ್ಥೆಗಳು ನೀಡುವ ಸಹಕಾರ ಪಡೆದು, ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ: ಸಿದ್ದರಾಮಣ್ಣ ತಿಳಿಸಿದ್ದಾರೆ.
ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ‘ಮೊಬಲಿಟಿ ಇಂಡಿಯಾ ತುಮಕೂರು’ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಆರೈಕೆದಾರರಿಗೆ ಪುನಶ್ಚೇತನ ಸೇವೆಯಲ್ಲಿ ಆರಂಭಿಕ ಮದ್ಯಸ್ಥಿಕೆ, ನಿರಾಮಯ ಆರೋಗ್ಯ ಕಾರ್ಡು ವಿತರಣೆ ಹಾಗು ಅರಿವಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಲಚೇತನ ಮಕ್ಕಳ ಆರೈಕೆಗೆ ತಾಳ್ಮೆ ಅತಿ ಮುಖ್ಯ ಎಂದರು.
ಮೊಬಿಲಿಟಿ ಇಂಡಿಯಾ ಕಳೆದ ಹತ್ತಾರು ವರ್ಷಗಳಿಂದ ಇಡೀ ಭಾರತದಾದ್ಯಂತ ವಿಕಲಚೇತನರ ಪುನಶ್ಚೇತನಕ್ಕೆ ದುಡಿಯುತ್ತಿರುವ ಸಂಸ್ಥೆಯಾಗಿದೆ. ರಾಜ್ಯದಲ್ಲಿ ಸುಮಾರು ೧೧,೪೫,೨೬೫ ಅಂಗವಿಕಲರಿದ್ದು, ಜಿಲ್ಲೆಯಲ್ಲಿ ಸುಮಾರು ೪೦,೦೦೦ಕ್ಕೂ ಹೆಚ್ಚು ವಿಕಲಚೇತನರಿದ್ದಾರೆ. ಇವರಲ್ಲಿ ೦-೧೮ ವರ್ಷ ವಯಸ್ಸಿನ ಸುಮಾರು ೧೧೮೧ ಮಕ್ಕಳನ್ನು ಗುರುತಿಸಿ, ಅವರ ಪುನಶ್ಚೇತನಕ್ಕೆ ಅಗತ್ಯ ಪರಿಕರಗಳನ್ನು ವಿತರಿಸಿ, ಅವುಗಳ ಬಳಕೆಯ ಮೂಲಕ ಹೇಗೆ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬಹುದು ಎಂಬ ತರಬೇತಿಯನ್ನು ಇಂದು ಹಮ್ಮಿಕೊಳ್ಳಲಾಗಿದ್ದು, ವಿಕಲಚೇತನ ಮಕ್ಕಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಹಿರಿಯ ಪ್ರಾಧ್ಯಾಪಕ ಹಾಗೂ ತುಮಕೂರು ವಿವಿ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಜಿ. ಪರುಶುರಾಮ್ ಮಾತನಾಡಿ, ಅಂಗವಿಕಲರ ಸಮುದಾಯ ಆಧಾರಿತ ಕಾರ್ಯಕ್ರಮಗಳಲ್ಲಿ ಮೊಬಿಲಿಟಿ ಇಂಡಿಯಾ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮೊದಲಿಗೆ ೦-೧೮ ವರ್ಷದ ಅಂಗವಿಕಲ ಮಕ್ಕಳನ್ನು ಗುರುತಿಸಿ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರ ಜೀವನ ಮಟ್ಟ ಸುಧಾರಿಸಲು ಅಗತ್ಯ ಪರಿಕರಗಳನ್ನು ವೈಜ್ಞಾನಿಕ ರೀತಿಯಲ್ಲಿ ತಯಾರಿಸಿ ಬಳಕೆ ಮಾಡುವ ತರಬೇತಿ ನೀಡಿ, ವಿಕಚೇತನರ ಬಾಳಿನಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿದೆ ಎಂದರು.
ಅ0ಗವಿಕಲ ಮಕ್ಕಳನ್ನು ನೋಡಿಕೊಳ್ಳುವುದು ಸವಾಲಿನ ಕೆಲಸ. ಸಾಮಾನ್ಯ ಮಕ್ಕಳಿಗಿಂತ ಹೆಚ್ಚಿನ ಸಮಯವನ್ನು ಈ ಮಕ್ಕಳಿಗೆ ನೀಡಬೇಕಾಗುತ್ತದೆ. ಇದಕ್ಕಾಗಿ ಪೋಷಕರು ಬೇಸರ ವ್ಯಕ್ತಪಡಿಸದೆ ತಾಳ್ಮೆಯಿಂದ ಕೆಲಸ ಮಾಡಿದರೆ ನಿಮ್ಮ ಮಕ್ಕಳು ಇತರೆ ಮಕ್ಕಳಂತೆ ಸಮಾಜದಲ್ಲಿ ಬದುಕಲು ಸಾಧ್ಯ. ಇದನ್ನು ಅರ್ಥ ಮಾಡಿಕೊಂಡು, ಪ್ರತಿ ಹಂತದ ತರಬೇತಿಯನ್ನು ಎಚ್ಚರಿಕೆಯಿಂದ ಗಮನಿಸಿ ಅದನ್ನು ತಮ್ಮ ದೈನಂದಿನ ಚಟುವಟಿಕೆಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಸಿಡಿಪಿಓ ನಾಗರಾಜು ಮಾತನಾಡಿ, ಅಂಗವಿಕಲ ಮಕ್ಕಳ ಪಾಲನೆ, ಪೋಷಣೆ ನಿಜಕ್ಕೂ ಒಂದು ಸವಾಲಿನ ಕೆಲಸ. ಅಂಗವೈಕಲ್ಯವನ್ನು ಮೆಟ್ಟಿ ನಿಂತು ಸಾಧನೆ ಮಾಡಬೇಕೆಂದರೆ ಮಕ್ಕಳ ಪೋಷಕರು ಬಹಳ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ. ಮೊಬಿಲಿಟಿ ಇಂಡಿಯಾ ಸಂಸ್ಥೆಯು ಪ್ರತಿ ಮಗುವಿನ ಮಾನಸಿಕ ಮತ್ತು ದೈಹಿಕ ತೊಂದರೆಯನ್ನು ಅರ್ಥ ಮಾಡಿಕೊಂಡು, ಅದರ ಪರಿಹಾರಕ್ಕೆ ವೈಜ್ಞಾನಿಕವಾಗಿ ಪರಿಕರಗಳನ್ನು ತಯಾರಿಸಿ ನೀಡುತ್ತಿದೆ. ಇದನ್ನು ಸಮರ್ಥವಾಗಿ ವಿಕಲಚೇತನ ಮಗುವಿನ ದೈನಂದಿನ ವ್ಯಾಯಾಮದಲ್ಲಿ ಅಳವಡಿಸಿಕೊಂಡರೆ ಸಾಮಾನ್ಯ ಮಗುವಿನಂತಾಗಲಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮೊಬಿಲಿಟಿ ಇಂಡಿಯಾ ಕಾರ್ಯಕ್ರಮ ವ್ಯವಸ್ಥಾಪಕ ಆನಂದ ಎಸ್.ಎನ್. ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಗಳ ೪ ತಾಲೂಕುಗಳಲ್ಲಿ ಮೊಬಿಲಿಟಿ ಇಂಡಿಯಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಸಹಾಯಕಿಯರ ಸಹಯೋಗದೊಂದಿಗೆ ೦-೦೬ವರೆಗಿನ ಸುಮಾರು ೧೮೧ ಅಂಗವಿಕಲ ಮಕ್ಕಳನ್ನು ಗುರುತಿಸಿ, ಅವರ ಪುನಶ್ಚೇತನಕ್ಕೆ ಶ್ರಮಿಸುತ್ತಿದೆ. ಮಕ್ಕಳ ಜೊತೆಗೆ ಮಕ್ಕಳ ಪೋಷಕರಿಗೂ ತರಬೇತಿ ನೀಡಿ, ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸಲು ಪ್ರಯತ್ನಿಸುತ್ತಿದೆಯಲ್ಲದೆ ನಿರಾಮಯ ಕಾರ್ಡುಗಳ ಮೂಲಕ ಇಂತಹ ಮಕ್ಕಳಿಗೆ ಸಿಗುವ ಆರೋಗ್ಯ ಸೌಲಭ್ಯಗಳನ್ನು ದೊರಕಿಸಲು ಪ್ರಯತ್ನಿಸಲಾಗುತ್ತಿದೆ. ಇಂದು ೨೧ ಮಕ್ಕಳಿಗೆ ನಿರಾಮಯ ಕಾರ್ಡು ನೀಡುತ್ತಿದ್ದು, ಸುಮಾರು ೧,೦೦,೦೦೦ ರೂ.ಗಳವರೆಗೆ ವಾರ್ಷಿಕ ಸಹಾಯಧನ ದೊರೆಯಲಿದೆ. ಇದರ ಜೊತೆಗೆ ಮಕ್ಕಳ ದೈಹಿಕ ಬೆಳವಣಿಗೆಗೆ ಅಗತ್ಯವಿರುವ ಪರಿಕರಗಳನ್ನು ನೀಡಿ ಆತ್ಮಸ್ಥೆöÊಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮೊಬಿಲಿಟಿ ಇಂಡಿಯಾದ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಜರಿದ್ದರು. ಸುಮಾರು ೫೦ಕ್ಕೂ ಹೆಚ್ಚು ದೈಹಿಕ ಅಂಗವಿಕಲ ಮಕ್ಕಳಿಗೆ ವಿವಿಧ ಪರಿಕರ ಮತ್ತು ನಿರಾಮಯ ಕಾರ್ಡುಗಳನ್ನು ವಿತರಿಸಲಾಯಿತು.

(Visited 1 times, 1 visits today)
tumkur
Previous Articleದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ
Next Article ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.