BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿರಬೇಕು-ಪರಂ ಕರೆ
ತುಮಕೂರು

ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿರಬೇಕು-ಪರಂ ಕರೆ

By News Desk BenkiyabaleUpdated:October 09, 2025 2:55 pm
 ತುಮಕೂರು: ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿದ್ದಾಗ ಮಾತ್ರ ಸವಾಲುಗಳನ್ನು ಎದುರಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಕರೆ ನೀಡಿದರು.
ನಗರದ ಹೊರವಲಯದಲ್ಲಿರುವ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ “ತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕ ಸಂಘಟನೆಗಳು ಸಾಮರಸ್ಯದಿಂದ ಒಗ್ಗಟ್ಟಾಗಿರಬೇಕು. ಯಾವುದೇ ಸಂಘಟನೆಗಳು ರಾಜಕೀಯ ಪ್ರವೇಶ ಮಾಡಬಾರದು. ಇದರಿಂದ ಸಂಘಟನೆಗಳ ನಡುವೆ ಒಡಕುಂಟಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಹಲವಾರು ಪ್ರಥಮಗಳು : ರಾಜ್ಯದ ಕಾರ್ಮಿಕ ಸಚಿವರಾಗಿ ಸಂತೋಷ್ ಎಸ್. ಲಾಡ್ ಅವರು ಅಧಿಕಾರವಹಿಸಿಕೊಂಡ ಮೇಲೆ ಕಾರ್ಮಿಕ ವಲಯದಲ್ಲಿ ರಾಜ್ಯ ಗಿಗ್ ಕಾರ್ಮಿಕರ ಯೋಜನೆ, ಆಶಾ ದೀಪ ಯೋಜನೆ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಸೇರಿದಂತೆ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿಯೇ ಹಲವಾರು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ.  ಸರ್ಕಾರ ನೀಡಿರುವ ಕಾರ್ಮಿಕ ಖಾತೆಯನ್ನು ಜವಾಬ್ದಾರಿ ಹಾಗೂ ಕ್ರಿಯಾಶೀಲವಾಗಿ ನಿಭಾಯಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.
ಕಾರ್ಮಿಕ ಕಲ್ಯಾಣಕ್ಕೆ ಹಣದ ಕೊರತೆಯಿಲ್ಲ : ಕಾರ್ಮಿಕ ಕಲ್ಯಾಣ ಯೋಜನೆಗಳಿಗೆ ವೆಚ್ಚ ಮಾಡಲು ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ಸುಮಾರು ೫೦೦೦ ಕೋಟಿ ರೂ.ಗಳ ಹಣ ಕಾರ್ಮಿಕ ಸಚಿವರ ಖಾತೆಯಲ್ಲಿ ಲಭ್ಯವಿದೆ ಎಂದರಲ್ಲದೆ, ಕಾರ್ಮಿಕ ಸಮುದಾಯದಲ್ಲಿ ಶೇ.೯೦ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಇವರ ಶ್ರೇಯೋಭಿವೃದ್ಧಿಗಾಗಿ ಜಾರಿ ಮಾಡಿರುವ ಯೋಜನೆಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರಲ್ಲದೆ, ಕೇಂದ್ರದ ಮೊದಲ ಕಾರ್ಮಿಕ ಸಚಿವ ಡಾ: ಬಿ.ಆರ್. ಅಂಬೇಡ್ಕರ್ ಅವರು ಕಾರ್ಮಿಕರಿಗೆ ಕನಿಷ್ಟ ವೇತನ ಪಾವತಿ, ದುಡಿಮೆ ಸಮಯ ನಿಗದಿ, ಕೆಲಸ ಮಾಡುವ ಸ್ಥಳದಲ್ಲಿ ಮೂಲಭೂತ ಸೌಲಭ್ಯ ಹಾಗೂ ಉತ್ತಮ ವಾತಾವರಣ ಒದಗಿಸಲು ಹೋರಾಟ ನಡೆಸಿ ಸಾಂವಿಧಾನಿಕ ಕಾನೂನನ್ನು ಜಾರಿಗೆ ತಂದರು ಎಂದು ಸ್ಮರಿಸಿದರು.
೧೦೧ ಅಸಂಘಟಿತ ವರ್ಗಗಳ ಪತ್ತೆ : ಸರ್ಕಾರವು ಬಡಗಿ, ಹಾವು ಹಿಡಿಯುವ, ಗಿಳಿಶಾಸ್ತç ಹೇಳುವ, ತೊಗಲು ಗೊಂಬೆಯಾಡಿಸುವ, ಪ್ರವಾಸಿ ಗೈಡ್, ಮತ್ತಿತರ  ಪಾರಂಪರಿಕ ವೃತ್ತಿ/ಕುಲ ಕಸುಬುಗಳಲ್ಲಿ ತೊಡಗಿಕೊಂಡಿರುವ ೧೦೧ ಅಸಂಘಟಿತ ವರ್ಗಗಳನ್ನು ಪತ್ತೆ ಹಚ್ಚಿ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಿರುವುದು ದೇಶದಲ್ಲಿ ಇದೇ ಮೊದಲು ಎಂದು ತಿಳಿಸಿದರು.
ನೂತನ ಯೋಜನೆಗಳ ಜಾರಿ : ಕಾರ್ಮಿಕ ಸಚಿವ ಸಂತೋಷ ಎಸ್. ಲಾಡ್ ಮಾತನಾಡಿ, ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ  ೧೦೧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ರಾಜ್ಯದ ೨೫,೪೫,೬೦೭ ಹಾಗೂ ಜಿಲ್ಲೆಯ ೧,೧೭,೩೧೩ ಕಾರ್ಮಿಕರನ್ನು ಈ ಯೋಜನೆಗೆ ನೋಂದಾಯಿಸಿ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
 ಸ್ವಿಗ್ಗಿ, ಫ್ಲಿಪ್‌ಕಾರ್ಟ್ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗಾಗಿ ೨ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ಜೀವವಿಮಾ ಸೌಲಭ್ಯ ಸೇರಿದಂತೆ ೪ ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸುವ  ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದೆ.  ಈ ಯೋಜನೆಯಡಿ ರಾಜ್ಯದ ೩೦೨೫೬ ಕಾರ್ಮಿಕರು ಹಾಗೂ ಜಿಲ್ಲೆಯ ೮೦೯ ಕಾರ್ಮಿಕರು ನೋಂದಾಯಿಸಿಕೊ0ಡಿದ್ದು, ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ವಾಹನ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳಿಗಾಗಿ ಜಾರಿಗೆ ತಂದಿರುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ ೯೮ ಅಪಘಾತ ಪ್ರಕರಣಗಳಲ್ಲಿ ೪.೨೨ ಕೋಟಿ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆಯಲ್ಲದೆ, ೭೪ ವಿದ್ಯಾರ್ಥಿಗಳಿಗೆ ೭.೪೦ಲಕ್ಷ ರೂ.ಗಳ ಶೈಕ್ಷಣಿಕ ಧನ ಸಹಾಯವನ್ನು ಪಾವತಿಸಲಾಗಿದೆ. ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ೨ ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ೧ಲಕ್ಷ ರೂ.ಗಳವರೆಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಈವರೆಗೆ ರಾಜ್ಯದಲ್ಲಿ ೬೦೪೭ ಹಾಗೂ ಜಿಲ್ಲೆಯಲ್ಲಿ ೧೭೩ ಕಾರ್ಮಿಕರನ್ನು ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಕಾರ್ಮಿಕರು ಸೇರಿದಂತೆ ರಾಜ್ಯದಲ್ಲಿ ೪೦ಲಕ್ಷ ಕಾರ್ಮಿಕರು ಇರುವ ಬಗ್ಗೆ ಅಂದಾಜಿಸಲಾಗಿದ್ದು, ಇವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನೋಂದಣಿ ಮಾಡಿಕೊಳ್ಳಲು ಪೋರ್ಟಲ್ ಸೃಜಿಸಲಾಗಿದ್ದು, ಅರ್ಹ ಅಸಂಘಟಿತ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾದ ಅರ್ಹ ಕಾರ್ಮಿಕರಿಗೆ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಬದ್ಧವಾಗಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಕನಿಷ್ಠ ೧೦ ರಿಂದ ೧೫ ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟ ಜಾತಿ/ವರ್ಗದವರನ್ನು ನೇಮಕ ಮಾಡಿಕೊಳ್ಳುವ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಟಿಯಿಂದ ಮಾಲೀಕರಿಗೆ ಆರ್ಥಿಕ ನೆರವು ನೀಡುವ ನೂತನವಾಗಿ ಆಶಾದೀಪ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಕಾರ್ಮಿಕರಿಗೆ ಕಾನೂನು ಅರಿವು ಮೂಡಿಸಿ :  ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಕಾರ್ಮಿಕರ ಹಿತ ಕಾಯುವ ಕಾನೂನುಗಳನ್ನು ಜಾರಿ ಮಾಡಿ ಸಂವಿಧಾನಿಕವಾಗಿ ಬೆಂಬಲ ನೀಡುವ ಮೂಲಕ ಅಸಂಘಟಿತ ಕಾರ್ಮಿಕರಿಗೆ ಶಕ್ತಿ ತುಂಬಬೇಕು. ಲಭ್ಯವಿರುವ ಕಾಯ್ದೆ ಕಾನೂನುಗಳ ಬಗ್ಗೆ ಕೈಗಾರಿಕೆ, ಗಣಿಗಾರಿಕೆ ಪ್ರದೇಶಗಳಲ್ಲಿ ದುಡಿಯುತ್ತಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಕಾನೂನು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಮಿಕರ ಉಚಿತ ಚಿಕಿತ್ಸೆಗೆ ಮನವಿ :  ಶಾಸಕ ಜ್ಯೋತಿಗಣೇಶ್ ಮಾತನಾಡಿ, ದೇಶದಲ್ಲಿ ಕೇಂದ್ರದ ಇ-ಶ್ರಮ್ ಪೋರ್ಟಲ್ ಮೂಲಕ ನೋಂದಣಿಯಾಗಿರುವ ಕಾರ್ಮಿಕರ ಪೈಕಿ ೩೦ ಕೋಟಿ ಸಂಘಟಿತ ಕಾರ್ಮಿಕರನ್ನು ಮಾತ್ರ ಗುರುತಿಸಲಾಗಿದ್ದು, ಅಸಂಘಟಿತ ಕಾರ್ಮಿಕರನ್ನು ಪೂರ್ಣ ಪ್ರಮಾಣದಲ್ಲಿ ಪತ್ತೆ ಹಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಅರ್ಹ ಅಸಂಘಟಿತ ಕಾರ್ಮಿಕರನ್ನು ಪತ್ತೆ ಹಚ್ಚಿ ಸಾಮಾಜಿಕ ಭದ್ರತೆ ಒದಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜವಾಬ್ದಾರಿ.  ಎಲ್ಲಾ ಕಾರ್ಮಿಕರಿಗೂ ಬೆಂಗಳೂರಿನ ಇಎಸ್‌ಐನಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಇರುವುದರಿಂದ ಜಿಲ್ಲೆಯಲ್ಲಿರುವ ಖಾಸಗಿ ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಉಚಿತ ಚಿಕಿತ್ಸೆ, ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆಯಾಗಬೇಕು ಎಂದು ಮನವಿ ಮಾಡಿದರು.
ಪಿಂಚಣಿ, ಭವಿಷ್ಯನಿಧಿ ಸೌಲಭ್ಯಕ್ಕೆ ಮನವಿ :  ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಅವರು ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಕಾರ್ಮಿಕರ ಅಸಂಘಟಿತ ವರ್ಗದ ಕಾರ್ಮಿಕರನ್ನು ಸಮಾಜದ ಮುಂಚೂಣಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರಿಗೆ ವಿಮಾ ಸೌಲಭ್ಯ, ಪಿಂಚಣಿ, ಭವಿಷ್ಯನಿಧಿ ಮತ್ತಿತರ ಸೌಲಭ್ಯಗಳನ್ನು ನೀಡುವ ಪ್ರಯತ್ನ ಮಾಡಬೇಕೆಂದು ಮನವಿ ಮಾಡಿದರು.
 ಈ ಸಂದರ್ಭದಲ್ಲಿ ಕಾರ್ಮಿಕ ಆಯಕ್ತ ಡಾ: ಹೆಚ್.ಎನ್. ಗೋಪಾಲಕೃಷ್ಣ ಅವರು ಸಂವಿಧಾನ ಪೀಠಿಕೆ ಬೋಧಿಸಿದರು. ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.
ಜಂಟಿ ಕಾರ್ಮಿಕ ಆಯುಕ್ತ ಡಾ: ಎಸ್.ಬಿ. ರವಿಕುಮಾರ  ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್ ಸ್ವಾಗತಿಸಿದರು.  ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್ ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ ಗೌಡ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜು, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿತಿನ್ ರಾಜ್ ಮೌರ್ಯ, ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಕುಮಾರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಜಿ., ಸೇರಿದಂತೆ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)
tumkur
Previous Articleಕಾಮಗಾರಿಯ ಗುಣಮಟ್ಟ ನಿರ್ಲಕ್ಷೆ ಕಂಡಲ್ಲಿ ಕ್ರಮ
Next Article ಶ್ರೀ ಸಿದ್ಧರ‍್ಥ ವೈದ್ಯಕೀಯ ಕಾಲೇಜಿನಲ್ಲಿ ೫ ನೇ ರಾಷ್ಟ್ರೀಯ ಔಷಧ ಜಾಗೃತಿ ಸಪ್ತಾಹ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.