BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

By News Desk BenkiyabaleUpdated:October 29, 2025 1:49 pm

ತುಮಕೂರು: ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಗುರು-ವಿರಕ್ತ ಮಠಾಧೀಶರೆಲ್ಲಾ ಒಗ್ಗೂಡಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಸಂದೇಶಗಳನ್ನು ಜನತೆಗೆ ಮುಟ್ಟಿಸುವ ೩೦ ದಿನಗಳ ಬಸವ ಸಂಸ್ಕೃತಿ ಅಭಿಯಾನ ಅತ್ಯಂತ ಯಶಸ್ವಿಯಾಯಿತು. ಆದರೆ ಈ ಅಭಿಯಾನದ ನೇತೃತ್ವವನ್ನು ವಹಿಸಿದ್ದ ಕೆಲವು ಮಠಾಧೀಶರ ವಿರುದ್ಧ ಕನ್ನೇರಿ ಮಠದ ಅಧ್ಯಕ್ಷರಾದ ಸಿದ್ದೇಶ್ವರ ಪೂಜ್ಯರು ಬಳಸಿದ ಪದಗಳ ಬಗ್ಗೆ ಬೆಟ್ಟದಹಳ್ಳಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರಸ್ವಾಮಿಗಳು ಅಸಮಧಾನ ವ್ಯಕ್ತಪಡಿಸಿದರು.
ಅವರು ಬಸವಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭಾ, ಜಯದೇವ ವಿದ್ಯಾರ್ಥಿನಿಲಯ ಟ್ರಸ್ಟ್ ನವರು, ಇತರ ಬಸವಪರ ಸಂಘಟನೆಗಳು ನಗರದ ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದಲ್ಲಿ ಶರಣ ಸಂಸ್ಕೃತಿ ಎಂಬ ಹೊಸ ಸಂಸ್ಕೃತಿಯನ್ನು ಹುಟ್ಟುಹಾಕಿದ ಬಸವಣ್ಣ ಎಂದಿಗೂ ಮತ್ತೊಬ್ಬರನ್ನು ಟೀಕಿಸದೆ ತನ್ನನ್ನು ತಾನು ಅರಿತು ಬದುಕನ್ನು ಸಾಗಿಸಿದರೆ ನಿರ್ಮಾಣ ಮಾಡಲು ಸಾಧ್ಯ ಎಂದು ಪ್ರತಿಪಾದಿಸಿ ಅಂದಿನ ಸಮಾಜದಲ್ಲಿ ನೂತನ ವಿಚಾರಗಳನ್ನು ಮುಂದಿಟ್ಟು ಜನಜಾಗೃತಿ ಮೂಡಿಸಿದನು ಎಂದರು.
ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರಾದ ರಾಯಸಂದ್ರ ರವಿ ಮಾತನಾಡಿ ಬಸವ ಸಂಸ್ಕೃತಿ ಭವ್ಯ ಭಾರತದ ಶ್ರೇಷ್ಠ ಸಂಸ್ಕೃತಿ. ಇದು ಸಮಸಮಾಜದ ನಿರ್ಮಾಣಕ್ಕೆ ಮೂಲಬೇರು ಮತ್ತು ದೇಶದ ಆರ್ಥಿಕತೆಗೆ ಸಹಾಯವಾಗುತ್ತದೆ. ಆಧ್ಯಾತ್ಮಿಕ ಬದುಕಿಗೆ ಬಸವತತ್ವ ಶಕ್ತಿ ನೀಡುತ್ತದೆ. ಬಸವಣ್ಣ ಒಬ್ಬ ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ. ನಾವೆಲ್ಲ ಆತನ ಅನುಯಾಯಿಗಳು ವಿನಃ ಅವನ ಸಂದೇಶಗಳ ಬಗ್ಗೆ ಜಾಗೃತಿ ಮೂಡಿಸುವುದೇ ನಮ್ಮ ಉದ್ದೇಶ. ಇದು ಸಫಲವಾಗುವವರೆಗೂ ನಮ್ಮ ಹೋರಾಟ ನಿರಂತರವಾಗಿ ಸಾಗುತ್ತದೆ ಎಂದರು.
ಇತಿಹಾಸ ಸಂಶೋಧಕರಾದ ಡಾ. ಡಿ.ಎನ್.ಯೋಗೀಶ್ವರಪ್ಪ ಮಾತನಾಡಿ ಬಸವಣ್ಣನವರನ್ನು ೧೨ನೇ ಶತಮಾನದಿಂದಲೂ ವಿರೋಧಿಸುವ ಗುಂಪು ಇದ್ದು, ಅದು ಈಗಲೂ ಸಕ್ರೀಯವಾಗಿದೆ. ಇಂದಿನ ಸ್ವಾ ರ್ಥ ಪ್ರಪಂಚದಲ್ಲಿ ಬಸವಣ್ಣನ ವಿಚಾರಗಳು ಸಮಾಜಕ್ಕೆ ದಾರಿದೀಪವಾಗಿವೆ. ಆದರೆ ಆತನ ವಿಚಾರಧಾರೆಗಳನ್ನು ಹೇಳುವವರ ಸಂಖ್ಯೆಯೇ ಇಂದು ಅಧಿಕವಾಗಿದ್ದು, ಅದನ್ನು ಆಚರಿಸುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದಿಸಿದ ಅವರು, ತುಮಕೂರು ನಗರದ ಅಮಾನಿ ಕೆರೆಯ ಉದ್ಯಾನವನದಲ್ಲಿ ಬಸವಣ್ಣನವರ ಪ್ರತಿಮೆಯನ್ನು ಸರ್ಕಾರ ಸ್ಥಾಪಿಸಿ ಬಸವ ಸಂದೇಶವನ್ನು ಸಾರಬೇಕೆಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಲ್ಕೆರೆಮಠದ ತಿಪ್ಪೇರುದ್ರಸ್ವಾಮಿಗಳು ಲಿಂಗಾಯತ ಎನ್ನುವುದು ಒಂದು ಜಾತಿಯಲ್ಲ, ಅದೊಂದು ಶರಣ ತತ್ವ. ಅದು ಜಾತಿಯಾಚೆಗಿನ ಸಿದ್ಧಾಂತ, ಅದೊಂದು ಧರ್ಮ. ಈ ಪರಂಪರೆಯನ್ನು ಜಾತಿಗೆ ಸೀಮಿತ ಮಾಡುವ ಪ್ರಯತ್ನ ಮಾಡಿದರೆ ಅದು ಸಫಲವಾಗುವುದಿಲ್ಲ. ಆ ದ್ದರಿಂದ ಲಿಂಗಾಯತರೆಲ್ಲಾ ಬಸವಾಚರಣೆಗಳನ್ನು ಅಳವಡಿಸಿ ಕೊಂಡು ಆಚರಣೆ ಮಾಡಿ ಎಂದು ಕರೆ ನೀಡಿದರು.
ವಿದ್ಯಾವಾಹಿನಿ ಸಮೂಹ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್, ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಹಾಲನೂರು ಲೇಪಾಕ್ಷ್, ಈ.ಲೋಕೇಶ್ವರಪ್ಪ, ಡಿ.ವಿ.ಶಿವಾನಂದ್, ಶ್ರೀಕಾಂತ್, ಸಿದ್ದಪ್ಪ, ಶೈಲಾ ನಾಗರಾಜ್, ಸುಶೀಲಾ ಸದಾಶಿವಯ್ಯ ಇನ್ನು ಮುಂತಾದವರು ಹಾಜರಿದ್ದರು.
ಬಸವಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿದರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಜಿ.ಬಿ.ನಾಗಭೂಷಣ ವಂದಿಸಿದರು. ಸಾಗರನ ಹಳ್ಳಿ ಪ್ರಭು ನಿರೂಪಿಸಿದರು.

(Visited 1 times, 1 visits today)
Previous Articleರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
Next Article ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.