
ತುಮಕೂರು: ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಮುಜುಗರ, ಹಿಂಜರಿಕೆ ಬಿಟ್ಟು ತಮ್ಮ ಮಕ್ಕಳನ್ನು ಸೇರಿಸಿ ಶಾಲೆಯ ಬಗ್ಗೆ ಅಭಿಮಾನ ಮೆರೆಯಬೇಕು. ದೇಶದ ಅನೇಕ ಮಹನೀಯರು ಸರ್ಕಾರಿ ಶಾಲೆಗಳಲ್ಲೇ ಓದಿ ಉನ್ನತ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು, ಗುಣಮಟ್ಟದ ಸೌಕರ್ಯಗಳಿವೆ ಎಂದು ಶಾಸಕ ಬಿ.ಸುರೇಶ್ಗೌಡರು ಹೇಳಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡದ ನವೀಕರಣಕ್ಕೆ ೧.೪ ಕೋಟಿ ರೂ. ವೆಚ್ಚದ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನೂ ಸರ್ಕಾರಿ ಶಾಲೆಯಲ್ಲೇ ಓದಿದ್ದು, ಶಾಲೆ ಕೇವಲ ಕಟ್ಟಡವಲ್ಲ, ಇದೊಂದು ಜ್ಞಾನ ದೇಗುಲ. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿ, ಅವುಗಳನ್ನು ಕಾಳಜಿಯಿಂದ ಕಾಪಾಡಿಕೊಂಡು ಬೆಳೆಸಬೇಕು ಎಂದು ಮನವಿ ಮಾಡಿದರು.
ಆಗಿನ ಶಾಸಕ ಮೂಡಲಗಿರಿಯಪ್ಪನವರು ಹಾಗೂ ಮೈಸೂರು ಮಹಾರಾಜರು ಅಡಿಗಲ್ಲು ಹಾಕಿದ್ದ ನಾಗವಲ್ಲಿ ಸರ್ಕಾರಿ ಶಾಲೆ ವಿಶೇಷ ಮಹತ್ವ ಪಡೆದುಕೊಂಡಿದೆ, ರಾಜ್ಯ ಸರ್ಕಾರದ ಗೋವಿಂದೇಗೌಡ ಉತ್ತಮ ಶಾಲೆ ಪ್ರಶಸ್ತಿಯನ್ನು ಈ ಶಾಲೆ ಪಡೆದುಕೊಂಡಿದೆ. ಮುಂದೆ ರಾಷ್ಟçಮಟ್ಟದಲ್ಲಿಯೂ ಶಾಲೆ ಹೆಸರಾಗುವಂತೆ ಪ್ರಯತ್ನ ಮಾಡಿರಿ. ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ಪಡೆಯಲು ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.
ಅನುದಾನಕ್ಕಾಗಿ ಹೋರಾಟ
ನಾಗವಲ್ಲಿ ಕೆಪಿಎಸ್ ಶಾಲೆ ಕಟ್ಟಡ ನಿರ್ಮಾಣಕ್ಕೆ ಈ ಹಿಂದೆ ಮಂಜೂರಾಗಿದ್ದ ಅನುದಾನ ಕಾರಣಾಂತರದಿAದ ಸರ್ಕಾರಕ್ಕೆ ವಾಪಸ್ಸಾಗಿತ್ತು. ಅನುದಾನವನ್ನು ವಾಪಸ್ ತರಲು ತಾವು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಸದನದಲ್ಲಿ ದೊಡ್ಡ ಹೋರಾಟವನ್ನೇ ಮಾಡಬೇಕಾಯಿತು. ಈಗ ಎಲ್ಲವೂ ಸುಖಾಂತ್ಯವಾಗಿ ಅನುದಾನ ಬಂದಿದೆ ಅದರಲ್ಲಿ ಮಾರ್ಚ್ ವೇಳೆಗೆ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲಾಗುತ್ತದೆ ಎಂದು ಸುರೇಶ್ಗೌಡರು ಹೇಳಿದರು.
ಸಂಸ್ಕಾರವAತ ಶಿಕ್ಷಣ ಬೇಕು
ಪ್ರಸ್ತುತ ಶಿಕ್ಷಣ ಪದ್ದತಿ ಬದಲಾಗಬೇಕು. ಶಿಕ್ಷಣವು ಕೇವಲ ಅಂಕ ಗಳಿಕೆ, ಸರ್ಟಿಫಿಕೇಟ್ಗೆ ಮೀಸಲಾಗಬಾರದು. ಮಕ್ಕಳಲ್ಲಿ ಶಿಸ್ತು, ಸಂಸ್ಕಾರ, ಉತ್ತಮ ನಡವಳಿಕೆ ಕಲಿಸುವಂತಾಗಬೇಕು. ಶಿಕ್ಷಣವು ಮಕ್ಕಳಿಗೆ ಶಕ್ತಿಯಾಗಿ ಅವರು ಮುಂದೆ ದೇಶಕಟ್ಟಲು ಸಿದ್ಧರಾಗುವಂತಹ ದೇಶಪ್ರೇಮವನ್ನೂ ಬೆಳೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಸಾಮಾಜಿಕ ಜವಾಬ್ದಾರಿಯೊಂದಿಗೆ ಮಕ್ಕಳಿಗೆ ಉತ್ತಮ ಅಂಶಗಳನ್ನು ಬೋಧಿಸಬೇಕು ಎಂದು ತಿಳಿಸಿದರು.
ನಾಗವಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಗಳಗೌರಮ್ಮ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ರೇಣುಕಮ್ಮ, ಸುಮಿತ್ರಾದೇವಿ, ಎಸ್ಡಿಎಂಸಿ ಉಪಾಧ್ಯಕ್ಷ ನಾಗರಾಜು, ಪ್ರಾಂಶುಪಾಲರಾದ ನಾಗರಾಜು, ಸಿದ್ಧರಾಜು, ಪ್ರಾಥಮಿಕ ಶಾಲೆಯ ಲಲಿತಮ್ಮ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ರಾಮಣ್ಣ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಾಶ್, ಗುತ್ತಿಗೆದಾರ ಕೋಡಿಪಾಳ್ಯ ನಾಗಣ್ಣ ಸೇರಿದಂತೆ ಗ್ರಾಮದ ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದೇದಿನ ಶಾಸಕ ಸುರೇಶ್ಗೌಡರು ನಾಗವಲ್ಲಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಓವರ್ಹೆಡ್ ಟ್ಯಾಂಕ್ ನಿರ್ಮಾಣ, ಮನೆಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ೧೭೪ ಲಕ್ಷ ರೂ. ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಹೊನ್ನಡಿಕೆಯಲ್ಲಿ ೧೫೫ ಲಕ್ಷ ರೂ. ಹಾಗೂ ಸಾಸಲಯ್ಯನಪಾಳ್ಯದಲ್ಲಿ ೮.೬೪ ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಮನೆಮನೆಗೆ ನಲ್ಲಿ ಸಂಪರ್ಕ ಕಾಮಗಾರಿಗೆ ಗುದ್ದಲಿಪೂಜೆ ಮಾಡಿದರು.





