BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
ತುಮಕೂರು

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿ: ಕೂಡಲೇ ತೆರವುಗೊಳಿಸಲು ಪಾಲಿಕೆಗೆ ಉಪಲೋಕಾಯುಕ್ತರ ಸೂಚನೆ
By News Desk BenkiyabaleUpdated:November 15, 2025 4:32 pm

ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೆ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ ಅವರಿಗೆ ಸೂಚನೆ ನೀಡಿದರು.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಿಗ್ಗೆಯೇ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡು ಈ ಸೂಚನೆ ನೀಡಿದರು.
ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡಬೇಕೇ ಹೊರತು ಕಸ ಹಾಕಲು ಬಳಸಬಾರದು. ಇದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತ ವಾಗುತ್ತದೆ. ಹೂವು-ಹಣ್ಣು-ತರಕಾರಿ ತ್ಯಾಜ್ಯ ಕೊಳೆತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮಾರುಕಟ್ಟೆ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ನಿರ್ವ ಹಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಸ್ ನಿಲ್ದಾಣದ ಅಂಗಡಿ ಮಳಿಗೆಗಳಲ್ಲಿ ಅವಧಿ ಮೀರಿದ ತಿಂಡಿ-ತಿನಿಸುಗಳನ್ನು ಜನರಿಗೆ ಮಾರಾಟ ಮಾಡುತ್ತಿ ದ್ದರೂ ಕೆಎಸ್‌ಆರ್‌ಟಿಸಿ ಹಾಗೂ ಪಾಲಿಕೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಂತಹ ಪ್ರಕರಣಗಳು ಮರು ಕಳಿಸಿದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಕಾಲಕಾಲಕ್ಕೆ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಮಾರಾಟ ಪರವಾನಗಿ, ಸ್ವಚ್ಛತೆ, ಆಹಾರ ತಿನಿಸುಗಳನ್ನು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವಧಿ ಮೀರಿದ ತಂಪು ಪಾನೀಯವನ್ನು ನೀವು ಕುಡಿದು ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಪ್ರಸಂಗ ನಡೆಯಿತು.
ಶ್ರೀ ಕೃಷ್ಣ ಕಾಂಡಿಮೆAಟ್ಸ್ನಲ್ಲಿ ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದನ್ನು ಕಂಡ ಅವರು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಗಳನ್ನು ಮಾರಾಟ ಮಾಡಬಾರದೆಂದು ನಿಯಮ ವಿದ್ದರೂ ನಿಯಮವನ್ನು ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಈ ಅಂಗಡಿ ಮಾಲೀಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.
ನಂತರ ನಿಲ್ದಾಣದ ಶೌಚಾಲಯ ಬಳಕೆಗಾಗಿ ನಿಗದಿಪಡಿಸಿ ರುವ ಶುಲ್ಕವನ್ನು ಪಾವತಿಸಲು ಸಾರ್ವಜನಿಕರ ಅನುಕೂಲಕ್ಕೆ ಕ್ಯೂಆರ್ ಕೋಡ್ ಅನ್ನು ಲಗತ್ತಿಸಬೇಕೆಂದು ಸೂಚನೆ ನೀಡಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಅನ್ನಪೂರ್ಣೇ ಶ್ವರಿ ಗ್ರಾö್ಯಂಡ್ ವೆಜ್ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ, ಮೆನು ಚಾರ್ಟ್ನಲ್ಲಿ ಆಹಾರ ಪದಾರ್ಥಗಳ ನಿಗದಿತ ದರಗಳ ವಿವರ ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅವರು, ತಕ್ಷಣವೇ ದರ ಪಟ್ಟಿ ಪ್ರಕಟಿಸುವಂತೆ ಹೋಟೆಲ್ ಮಾಲೀಕರಿಗೆ ಆ ದೇಶಿಸಿದರಲ್ಲದೆ, ಆಹಾರ ಗುಣಮಟ್ಟ ಹಾಗೂ ರುಚಿ ಬಗ್ಗೆ ಊಟ ಮಾಡುತ್ತಿದ್ದವರನ್ನು ವಿಚಾರಿಸಿದರು.
ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಗುಂಪಾಗಿ ಬಂದು ಬೆಳಿಗ್ಗೆ ೭.೩೦ರ ನಂತರ ಗುಬ್ಬಿ ಸಿಐಟಿ ಕಾಲೇಜಿಗೆ ಬಸ್ ಸೌಕರ್ಯ ಕಲ್ಪಿಸಬೇಕು. ನಗರದ ಶ್ರೀದೇವಿ ಕಾಲೇಜಿನ ಬಳಿ ಬಸ್ ನಿಲುಗಡೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ನಿಗಮಕ್ಕೆ ಸೂಚನೆ ನೀಡಬೇಕೆಂದು ಉಪಲೋಕಾಯುಕ್ತರಲ್ಲಿ ಮನವಿ ಮಾಡಿದರು.
ಬಳಿಕ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಸುತ್ತಮುತ್ತ ಕಸ ಚದುರಿರುವುದು ಕಂಡು ಅಸಮಾ ಧಾನ ವ್ಯಕ್ತಪಡಿಸಿದ ಅವರು, ತಕ್ಷಣ ಸ್ವಚ್ಛತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿನ ಕೆಲವು ಅಂಗಡಿಗಳಲ್ಲಿ ಹಾಳಾದ ಆಹಾರ ಪದಾರ್ಥಗಳನ್ನು ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಇದಾದ ನಂತರ ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಿ ರೋಗಿಗಳ ಅನುಕೂಲಕ್ಕಾಗಿ ಪ್ರತಿ ಕೋಣೆಯ ಹೊರಭಾಗದಲ್ಲಿ ವೈದ್ಯರ ಭೇಟಿ ಸಮಯ, ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು. ಪ್ರತಿ ಮಹಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರಲ್ಲದೆ, ಯಾವುದೇ ಸಂದರ್ಭದಲ್ಲೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಡೆ ಔಷಧ ಬರೆಯಬಾರದು ಎಂದು ಸ್ಪಷ್ಟ ಸೂಚನೆ ನೀಡಿದರು. ಔಷಧಿಗಳ ಅವಧಿ ದಿನಾಂಕವನ್ನು ಕಾಲಕಾಲಕ್ಕೆ ಪರಿಶೀಲಿಸುವುದು ಎಲ್ಲ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅರವಿಂದ ಎನ್.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇ ಖರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಅಸ್ಗರ್ ಬೇಗ್, ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷಿö್ಮ ನಾರಾಯಣ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
Next Article ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.