BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
  • ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
  • ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
  • ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
  • ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ
  • ವೃಕ್ಷಮಾತೆ ಅಜಾರಾಮರ
  • ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
  • ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
ತುಮಕೂರು

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿ: ಕೂಡಲೇ ತೆರವುಗೊಳಿಸಲು ಪಾಲಿಕೆಗೆ ಉಪಲೋಕಾಯುಕ್ತರ ಸೂಚನೆ
By News Desk BenkiyabaleUpdated:November 15, 2025 4:32 pm

ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೆ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ ಅವರಿಗೆ ಸೂಚನೆ ನೀಡಿದರು.
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಿಗ್ಗೆಯೇ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡು ಈ ಸೂಚನೆ ನೀಡಿದರು.
ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡಬೇಕೇ ಹೊರತು ಕಸ ಹಾಕಲು ಬಳಸಬಾರದು. ಇದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತ ವಾಗುತ್ತದೆ. ಹೂವು-ಹಣ್ಣು-ತರಕಾರಿ ತ್ಯಾಜ್ಯ ಕೊಳೆತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮಾರುಕಟ್ಟೆ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ನಿರ್ವ ಹಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಸ್ ನಿಲ್ದಾಣದ ಅಂಗಡಿ ಮಳಿಗೆಗಳಲ್ಲಿ ಅವಧಿ ಮೀರಿದ ತಿಂಡಿ-ತಿನಿಸುಗಳನ್ನು ಜನರಿಗೆ ಮಾರಾಟ ಮಾಡುತ್ತಿ ದ್ದರೂ ಕೆಎಸ್‌ಆರ್‌ಟಿಸಿ ಹಾಗೂ ಪಾಲಿಕೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಂತಹ ಪ್ರಕರಣಗಳು ಮರು ಕಳಿಸಿದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಕಾಲಕಾಲಕ್ಕೆ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಮಾರಾಟ ಪರವಾನಗಿ, ಸ್ವಚ್ಛತೆ, ಆಹಾರ ತಿನಿಸುಗಳನ್ನು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವಧಿ ಮೀರಿದ ತಂಪು ಪಾನೀಯವನ್ನು ನೀವು ಕುಡಿದು ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಪ್ರಸಂಗ ನಡೆಯಿತು.
ಶ್ರೀ ಕೃಷ್ಣ ಕಾಂಡಿಮೆAಟ್ಸ್ನಲ್ಲಿ ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದನ್ನು ಕಂಡ ಅವರು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಗಳನ್ನು ಮಾರಾಟ ಮಾಡಬಾರದೆಂದು ನಿಯಮ ವಿದ್ದರೂ ನಿಯಮವನ್ನು ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಈ ಅಂಗಡಿ ಮಾಲೀಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.
ನಂತರ ನಿಲ್ದಾಣದ ಶೌಚಾಲಯ ಬಳಕೆಗಾಗಿ ನಿಗದಿಪಡಿಸಿ ರುವ ಶುಲ್ಕವನ್ನು ಪಾವತಿಸಲು ಸಾರ್ವಜನಿಕರ ಅನುಕೂಲಕ್ಕೆ ಕ್ಯೂಆರ್ ಕೋಡ್ ಅನ್ನು ಲಗತ್ತಿಸಬೇಕೆಂದು ಸೂಚನೆ ನೀಡಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಅನ್ನಪೂರ್ಣೇ ಶ್ವರಿ ಗ್ರಾö್ಯಂಡ್ ವೆಜ್ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ, ಮೆನು ಚಾರ್ಟ್ನಲ್ಲಿ ಆಹಾರ ಪದಾರ್ಥಗಳ ನಿಗದಿತ ದರಗಳ ವಿವರ ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅವರು, ತಕ್ಷಣವೇ ದರ ಪಟ್ಟಿ ಪ್ರಕಟಿಸುವಂತೆ ಹೋಟೆಲ್ ಮಾಲೀಕರಿಗೆ ಆ ದೇಶಿಸಿದರಲ್ಲದೆ, ಆಹಾರ ಗುಣಮಟ್ಟ ಹಾಗೂ ರುಚಿ ಬಗ್ಗೆ ಊಟ ಮಾಡುತ್ತಿದ್ದವರನ್ನು ವಿಚಾರಿಸಿದರು.
ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಗುಂಪಾಗಿ ಬಂದು ಬೆಳಿಗ್ಗೆ ೭.೩೦ರ ನಂತರ ಗುಬ್ಬಿ ಸಿಐಟಿ ಕಾಲೇಜಿಗೆ ಬಸ್ ಸೌಕರ್ಯ ಕಲ್ಪಿಸಬೇಕು. ನಗರದ ಶ್ರೀದೇವಿ ಕಾಲೇಜಿನ ಬಳಿ ಬಸ್ ನಿಲುಗಡೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ನಿಗಮಕ್ಕೆ ಸೂಚನೆ ನೀಡಬೇಕೆಂದು ಉಪಲೋಕಾಯುಕ್ತರಲ್ಲಿ ಮನವಿ ಮಾಡಿದರು.
ಬಳಿಕ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಸುತ್ತಮುತ್ತ ಕಸ ಚದುರಿರುವುದು ಕಂಡು ಅಸಮಾ ಧಾನ ವ್ಯಕ್ತಪಡಿಸಿದ ಅವರು, ತಕ್ಷಣ ಸ್ವಚ್ಛತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿನ ಕೆಲವು ಅಂಗಡಿಗಳಲ್ಲಿ ಹಾಳಾದ ಆಹಾರ ಪದಾರ್ಥಗಳನ್ನು ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಇದಾದ ನಂತರ ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಿ ರೋಗಿಗಳ ಅನುಕೂಲಕ್ಕಾಗಿ ಪ್ರತಿ ಕೋಣೆಯ ಹೊರಭಾಗದಲ್ಲಿ ವೈದ್ಯರ ಭೇಟಿ ಸಮಯ, ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು. ಪ್ರತಿ ಮಹಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರಲ್ಲದೆ, ಯಾವುದೇ ಸಂದರ್ಭದಲ್ಲೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಡೆ ಔಷಧ ಬರೆಯಬಾರದು ಎಂದು ಸ್ಪಷ್ಟ ಸೂಚನೆ ನೀಡಿದರು. ಔಷಧಿಗಳ ಅವಧಿ ದಿನಾಂಕವನ್ನು ಕಾಲಕಾಲಕ್ಕೆ ಪರಿಶೀಲಿಸುವುದು ಎಲ್ಲ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅರವಿಂದ ಎನ್.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇ ಖರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಅಸ್ಗರ್ ಬೇಗ್, ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷಿö್ಮ ನಾರಾಯಣ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
Next Article ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm
ಇತರೆ ಸುದ್ಧಿಗಳು

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
ಇತರೆ ಸುದ್ಧಿಗಳು

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
Our Youtube Channel
Our Picks

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

November 15, 2025 4:33 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ: ಸಂಭ್ರಮ

November 15, 2025 4:27 pm

ವೃಕ್ಷಮಾತೆ ಅಜಾರಾಮರ

November 15, 2025 4:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ಬೆಳವಣಿಗೆ

By News Desk BenkiyabaleNovember 15, 2025 4:33 pm

ತುಮಕೂರು: ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದಲ್ಲಿ ಇರುವುದನ್ನು ಯಥಾವತ್ತಾಗಿ ತಿಳಿಸುವುದಷ್ಟೇ ಅಲ್ಲ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು…

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

November 15, 2025 4:31 pm

ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ

November 15, 2025 4:29 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.