BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

ಸಹಕಾರ ಸಂಘಗಳ ಸಹಾಯಕ ನಿಬಂಧಕರ ವಿರುದ್ಧ ಪಟ್ಟಣದಲ್ಲಿ ಪ್ರತಿಭಟನೆ
By News Desk BenkiyabaleUpdated:November 21, 2025 3:27 pm

ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ ನೀಡದೆ, ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ನೇತೃತ್ವದಲ್ಲಿ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದರು.

ನಗರದ ಟೌನ್‌ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆಯ ಬಳಿ ಸಮಾವೇಶಗೊಂಡ ಗುಬ್ಬಿ ತಾಲೂಕಿನ ವಿವಿಧ ಗ್ರಾಮಗಳ ಜನರು ಎ.ಆರ್. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೂಡಲೇ ಗುಬ್ಬಿ ತಾಲೂಕಿನಲ್ಲಿ ಪ್ರಾಸ್ತಾವನೆ ಸಲ್ಲಿಸಿರುವ ಗ್ರಾಮಗಳಲ್ಲಿ ಹಾಲಿನ ಡೈರಿ ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತಿ ಶ್ರೀನಿವಾಸ್, ತುಮಕೂರು ಡೈರಿಗೆ ಬರುವ ಹಾಲಿನಲ್ಲಿ ಗುಬ್ಬಿ ತಾಲೂಕಿನ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹೆಚ್ಚು ಹಾಲು ಉತ್ಪಾಧಿಸುತ್ತಿರುವ ಸುಮಾರು ೩೨ ಉಪಕೇಂದ್ರಗಳಲ್ಲಿ ೯ ಕೇಂದ್ರಗಳಲ್ಲಿ ಮುಖ್ಯ ಡೈರಿಗಳಾಗಿ ಪರಿವರ್ತಿಸಲು ಅನುಮತಿ ಕೋರಿ ೬ ತಿಂಗಳ ಹಿಂದೆಯೇ ಸಹಕಾರ ಇಲಾಖೆಗಳ ಸಹಾಯಕ ನಿಬಂಧಕರಿಗೆ ಮನವಿ ಸಲ್ಲಿಸಲಾಗಿದೆ.ಆದರೆ ಇದುವರೆಗೂ ಒಂದು ಡೈರಿ ಸ್ಥಾಪನೆಗೂ ಅನುಮತಿ ನೀಡಿಲ್ಲ.ಕಡಬ ಮತ್ತಿತರ ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅಲ್ಲಿನ ತೀರ್ಮಾನದಂತೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಅನುಮತಿ ನೀಡಲು ಮೀನಾಮೇಷ ಎಣಿಸಲಾಗುತ್ತಿದೆ.ಸಕಾರಣ ನೀಡದೆ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.

ಕಡಬ ಗ್ರಾಮಕ್ಕೆ ಸಂಬ0ಧಪಡದ ವ್ಯಕ್ತಿಯೊಬ್ಬರು ನೀಡಿದ ತಕರಾರು ಅರ್ಜಿಯನ್ನು ಮುಂದಿಟ್ಟುಕೊ0ಡು ಹಲವರು ಗ್ರಾಮಗಳ ಡೈರಿ ತೆರೆಯಲು ಅನುಮತಿ ನಿರಾಕರಿಸುವ ಕೆಲಸವನ್ನು ಎ.ಆರ್.ರವರು ಮಾಡಿದ್ದಾರೆ.ನಿಯಮದ ಪ್ರಕಾರ ಖಾಸಗಿ ಡೈರಿಗೆ ಹಾಲು ಹಾಕುತ್ತಿರುವ ವ್ಯಕ್ತಿಯಿಂದ ತುಮುಲ್ ಡೈರಿ ನಿರ್ಮಾಣಕ್ಕೆ ಷೇರ ಸಂಗ್ರಹಿಸಲು ಅವಕಾಶವಿಲ್ಲ.ಆದರೆ ತುಮುಲ್‌ನ ಎಂ.ಡಿ ಮತ್ತು ಅಧಿಕಾರಿಗಳು ಯಾರದೋ ಮುಲಾಜಿಗೆ ಒಳಗಾದವಂತೆ ಖಾಸಗಿ ಡೈರಿಗೆ ಹಾಲು ಹಾಕುವವರಿಂದಲೂ ಷೇರು ಸಂಗ್ರಹಿಸಿ ಎಂದು ಮೌಖಿಕವಾಗಿ ಹೇಳುತ್ತಾರೆ.ಲಿಖಿತ ರೂಪದಲ್ಲಿ ಕೊಡಿ ಎಂದರೆ ನೀಡಲು ಹಿಂಜರಿಯುತ್ತಿದ್ದಾರೆ. ಇದರ ಹಿಂದೆ ಮೂರನೇ ವ್ಯಕ್ತಿಯ ಕೈವಾಡ ಇರುವುದು ಕಂಡು ಬರುತ್ತಿದೆ.ಎ.ಆರ್.ಅವರ ವರ್ತನೆ ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಡೈರಿಗಾಗಿ ಅರ್ಜಿ ಸಲ್ಲಿಸಿರುವ ೩೨ ಗ್ರಾಮಗಳ ಜನರು ತಮ್ಮ ಎಮ್ಮೆ, ಹಸು,ಕರುಗಳೊಂದಿಗೆ ಎ.ಆರ್.ಕಚೇರಿ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಭಾರತಿ ಶ್ರೀನಿವಾಸ್ ಎಚ್ಚರಿಸಿದರು.

ಹಾಲು ಉತ್ಪಾದಕರು ನನಗೆ ಮತ ನೀಡಿ, ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ನನ್ನ ಗುರಿ ಇರುವುದು ಜಿಲ್ಲೆಯಲ್ಲಿ ಗುಬ್ಬಿ ತಾಲೂಕು ಹಾಲು ಹಾಕುವುದರಲ್ಲಿ ಪ್ರಥಮ ಸ್ಥಾನದಲ್ಲಿ ಇರಬೇಕು ಎಂಬುದು,ನಮ್ಮ ತಾಲೂಕಿನಲ್ಲಿ ಅಷ್ಟು ಹಾಲು ಉತ್ಪಾಧನೆ ಯಾಗುತ್ತಿದೆ.ಸಿಕ್ಕ ಅವಕಾಶವನ್ನು ಬಳಸಿಕೊಂಡು ನಾಲ್ಕು ಜನರಿಗೆ ಅನುಕೂಲ ಮಾಡಿಕೊಡುವ ಕೆಲಸಕ್ಕೆ ಮುಂದಾದರೆ ಕಾಣದ ಕೈಗಳು ಅದನ್ನು ತಡೆಯಲು ಪ್ರಯತ್ನಿಸುತ್ತಿದೆ.ಬೇರೆ ತಾಲೂಕುಗಳಿಗೆ ಇಲ್ಲದೆ ನಿರ್ಭಂಧ ನಮ್ಮ ಗುಬ್ಬಿ ತಾಲೂಕಿಗೆ ಇದೆ.ತುಮುಲ್ ಮತ್ತು ಖಾಸಗಿ ಡೈರಿಯವರ ನಡುವೆ ಒಳಒಪ್ಪಂದ ನಡೆದಿದೆಯೇ ಎಂಬ ಅನುಮಾನ ಮೂಡುತ್ತಿದೆ.ಮಾವಿನ ಹಳ್ಳಿಯ ವ್ಯಕ್ತಿ ಕಡಬದಲ್ಲಿ ಡೈರಿ ಮಾಡಲು ಅಕ್ಷೇಪ ಸಲ್ಲಿಸಿದರೆ ಒಪ್ಪಿಕೊಳ್ಳಲು ಸಾಧ್ಯವೇ ? ಇದರ ಹಿಂದೆ ಇರುವವರು ಯಾರು ಎಂಬುದು ಜನತೆಗೆ ತಿಳಿಯಬೇಕು. ನಮಗೆ ಜನರು ಕೊಟ್ಟಿರುವ ಅಧಿಕಾರವನ್ನು ಬಳಕೆ ಮಾಡಿಕೊಳ್ಳಲು ಅಡ್ಡಿ ಪಡಿಸಬಾರದು ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಾಕೀತು ಮಾಡಿದರು.

ಪ್ರತಿಭಟನೆಯಲ್ಲಿ ಕೋಡಿಯಾಲ ಮಹದೇವ್,ಮಳೆನಹಳ್ಳಿ ನಟರಾಜು, ಲಿಂಗಮನಹಳ್ಳಿ ಚೇತನ್, ಚೇಳೂರು ಸೋಮೇಶ್, ಕಡಬ ದರ್ಶನ್, ಯೋಗೀಶ್‌ಗೌಡ ಎಂ.ಹೆಚ್.ಪಟ್ನ,ಗುರುರೇಣುಕರಾಧ್ಯ, ಸಣ್ಣ ರಂಗಯ್ಯ ಹೂವಿನಕಟ್ಟೆ, ಯೋಗೀಶ್, ಫಣೀಂದ್ರ ಬಿದರೆ ಹಳ್ಳ ಕಾವಲ್, ಆರೀಫ್ ಸೋನಿ ಲಿಂಗಮನಹಳ್ಳಿ ಹಾಗೂ ಗುಬ್ಬಿ ತಾಲೂಕಿನ ವಿವಿಧ ಹಳ್ಳಿಗಳ ಜನರು ಭಾಗವಹಿಸಿದ್ದರು.

 

(Visited 1 times, 1 visits today)
Previous Articleಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ
Next Article ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಶಾಸಕ ಹೆಚ್.ವಿ.ವೆಂಕಟೇಶ್ ಸೂಚನೆ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.