BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ
  • ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು
  • ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
  • ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ
  • ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜ. ೦5: ಅತಿಥಿ ಉಪನ್ಯಾಸಕರ ಹೋರಾಟ
ಇತರೆ ಸುದ್ಧಿಗಳು

ಜ. ೦5: ಅತಿಥಿ ಉಪನ್ಯಾಸಕರ ಹೋರಾಟ

By News Desk BenkiyabaleUpdated:December 23, 2025 4:18 pm

ತುಮಕೂರು: ನ್ಯಾಯಾಲಯಕ್ಕೆ ನೀಡಿದ ಮೌಖಿಕಭರವಸೆ ಹುಸಿಗೊಳಿಸಿ, ೬೦೦೦ಕ್ಕು ಹೆಚ್ಚು ಅತಿಥಿ ಉಪನ್ಯಾಸಕರನ್ನು, ಅವರ ೨೦ ವರ್ಷಗಳ ಸೇವೆಯನ್ನು ಪರಿಗಣಿಸಿದೆ, ಆರ್ನಹ ಎಂಬ ಹಣೆಪಟ್ಟಿ ಕಟ್ಟಿ, ಸೇವೆಯಿಂದ ತೆಗೆದು ಹಾಕಿರುವ ಉನ್ನತ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿ,೨೦೨೬ರ ಜನವರಿ ೦೫ ರಂದು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಮುಖ್ಯಮಂತ್ರಿಗಳ ಮನೆಯ ಮುಂದೆ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷರಾದ ಲೋಕೇಶ್.ಪಿ.ಸಿ.ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೨೦ಕ್ಕೂ ಹೆಚ್ಚು ವರ್ಷಗಳ ಕಾಲ ನಮ್ಮಿಂದ ಸೇವೆ ಪಡೆದು, ಈಗ ಅನರ್ಹಎಂದು ಹೇಳಿ ಕೆಲಸದಿಂದ ತೆಗೆಯುವ ಮೂಲಕ ಹೈಕೋರ್ಟ ಆದೇಶ ಉಲ್ಲಂಘನೆಯ ಜೊತೆಗೆ, ಯುಜಿಸಿ ನಿಯಮವನ್ನು ರಾಜ್ಯ ಸರಕಾರ ಗಾಳಿಗೆ ತೂರಿದೆ. ಸರಕಾರದ ಈ ಜನವಿರೋಧಿ ನಡೆಯ ವಿರುದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಜೊತೆಗೆ, ಪ್ರಾಥಮಿಕ ಶಾಲೆಗಳಲ್ಲಿ ಕೆಪಿಎಸ್ ಮ್ಯಾಗ್ನಟ್ ಶಾಲೆಯ ಹೆಸರಿನಲ್ಲಿ ಅತಂತ್ರರಾಗಿರುವ ೭೦ ಸಾವಿರ ಅತಿಥಿ ಉಪನ್ಯಾಸಕರು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಳ್ಳ ಲಾಗುವುದು ಎಂದರು.
ನಾವು ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಸೇರುವ ಸಂದರ್ಭದಲ್ಲಿ ಶೇ೬೫ ರಷ್ಟು ಅಂಕಗಳೊ0ದಿಗೆ ಸ್ನಾತಕೋತ್ತರ ಪದವಿ ಪಡೆದಿದ್ದರೆ ಸಾಕು ಎಂಬ ಮಾನದಂಡ ಮುಂದಿಟ್ಟು, ನಮ್ಮನ್ನು ಅತ್ಯಂತ ಕಡಿಮೆ ಗೌರವಧನಕ್ಕೆ ದುಡಿಸಿಕೊಂಡು, ಇನೇನು ನಿವೃತ್ತಿಯ ವಯಸ್ಸು ಹತ್ತಿರವಾಗುತ್ತಿದೆ ಎನ್ನುವ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ೬ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳಿದೆ. ಕರ್ನಾಟಕ ಹೈಕೋರ್ಟಿಗೆ ೨೪-೧೧-೨೦೨೫ರಂದು ಸರಕಾರದ ಪರವಾಗಿ ಅಡ್ವಕೇಟ್ ಜನರಲ್ ಅವರು ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಯಾವುದೇ ತೊಂದರೆ ನೀಡು ವುದಿಲ್ಲ ಎಂದು ನ್ಯಾಯಪೀಠಕ್ಕೆ ಮೌಖಿಕ ಭರವಸೆ ನೀಡಿ, ಡಿಸೆಂಬರ್ ೦೮ ರಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಹಾಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊ ಳಿಸ ಲು ಆದೇಶ ಮನೆ ಮುಂದೆ ಹೋರಾಟ ಹಮ್ಮಿಕೊಂ ಡಿರು ವುದಾಗಿ ತಿಳಿಸಿದರು.
ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಸದಸ್ಯರಾದ ಮಂಜುನಾಥ್ ಜೋಗಿ ಮಾತನಾಡಿ, ಸುಪ್ರಿಂಕೋರ್ಟಿನ ಆದೇಶದಂತೆ ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಜೊತೆಗೆ, ಸತತ ೧೦ ವರ್ಷ ಕಾರ್ಯನಿರ್ವಹಿಸಿದ ಉಪನ್ಯಾಸಕರನ್ನು ಖಾಯಂ ಗೊಳಿಸಬೇಕು ಎಂಬ ಆದೇಶವನ್ನು ಪಾಲಿಸುತ್ತಿಲ್ಲ. ಬದಲಿಗೆ ಯುಜಿಸಿ ನಿಯಮದ ಕೆಲವೇ ಅಂಶಗಳನ್ನು ಮುಂದಿಟ್ಟು, ನೀವು ನೆಟ್, ಸ್ಲಟ್, ಎಂ.ಫೀಲ್, ಪಿಹೆಚ್‌ಡಿ ಪಡೆದಿಲ್ಲ. ಹಾಗಾಗಿ ನೀವು ಆರ್ಹರಲ್ಲಎಂದು ಬೀದಿಗೆ ತಳ್ಳಲು ಹೊರಟಿದೆ. ನಮ್ಮನ್ನು ಸೇವೆಗೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಅಗತ್ಯವಿಲ್ಲದ ಈ ಆರ್ಹತೆಗಳು, ೨೦ ವರ್ಷ ಪಾಠ ಮಾಡಿ, ಸಾವಿರಾರು ಮಕ್ಕಳಿಗೆ ಪದವಿ ಶಿಕ್ಷಣ ನೀಡಿ, ಅವರಿಗೆದಾರಿ ದೀಪ ಕಲ್ಪಿಸಿದ ನಂತರ ಉದ್ಬವಿಸಿದ್ದು ಏಕೇ, ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ.ನಾವು ಆನರ್ಹರು ಎಂದಾದರೆ, ನಮ್ಮ ಪಾಠ ಕೇಳಿ ಪದವಿಧರರಾದವರುಆರ್ಹ ಪದವಿಧರರೇ? ಈ ಪ್ರಶ್ನೆಗೆ ಸರಕಾರವೇ ಉತ್ತರ ನೀಡಬೇಕು ಎಂದರು.
ಇಡೀ ರಾಷ್ಟಕ್ಕೆ ಇರುವುದು ಒಂದೇ ಯುಜಿಸಿ ನಿಯಮ.ಆದರೆ ರಾಜ್ಯ ಸರಕಾರ ಮಾತ್ರ ಕರ್ನಾಟಕಲ್ಲಿ ೪೫೦ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕದಲ್ಲಿ ನ್ಯಾಯಾಲಯಕ್ಕೆ ಯುಜಿಸಿ ನಿಯಮಗಳ ತಪ್ಪು ವ್ಯಾಖ್ಯಾನ ಮಾಡಿ, ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಯಮದ ಪ್ರಕಾರ ನೆಟ್, ಸ್ಲೆಟ್,ಪಿ.ಹೆಚ್.ಡಿಕಡ್ಡಾಯ.ಆದರೆ ಈಗಾಗಲೇ ಹತ್ತಾರು ವರ್ಷ ಸೇವೆ ಸಲ್ಲಿಸಿರುವವರಿಗೆ ವಿನಾಯಿತಿ ಇದೆ. ಆದನ್ನು ಮುಚ್ಚಿಟ್ಟು ನ್ಯಾಯಾಲಯದ ದಾರಿ ತಪ್ಪಿಸುವುದರ ಜೊತೆಗೆ, ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ದಿ ಸಂಘದ ಖಜಾಂಚಿ ಮನೋಹರ್.ಎಸ್, ರಂಗಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ
Next Article ಚಿಂತೆ ಚಿಂತನಗೊ0ಡಾಗ ಬಾಳು ವಿಕಾಸ: ರಂಭಾಪುರಿ ಶ್ರೀ
News Desk Benkiyabale

Related Posts

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm news

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm news

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm news
ತಾಜಾ ಸುದ್ಧಿಗಳು

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm
Our Youtube Channel
Our Picks

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

By News Desk BenkiyabaleJuly 07, 2026 5:18 pm

ತುಮಕೂರು: ಜಮೀನನ ಸರ್ವೆ ನೆಪದಲ್ಲಿ ಹಾಲಿ ಮಾಲೀಕರಿಗೆ ಯಾವುದೇ ನೋಟಿಷ್ ನೀಡದೆ ದಲಿತರ ಒಡೆತನದಲ್ಲಿರುವ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ,…

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.