BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
  • ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ
  • ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

By News Desk BenkiyabaleUpdated:July 04, 2026 4:18 pm

ತುಮಕೂರು: ದೇಶದಲ್ಲಿ ೧,೫೦೦ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿದ್ದು, ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದಾರೆ.ಆದರೂ ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ಶೆಟ್ಟಿಹಳ್ಳಿಯ ಸುಫಿಯಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು,
ಭಾರತ ಇಂದು ಅಂತರರಾಷ್ಟಿçÃಯ ಮಟ್ಟದಲ್ಲಿ ಕಾನೂನು ಕ್ಷೇತ್ರದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದ್ದು, ಭಾರತೀಯ ಕಾನೂನು ತಜ್ಞರು ಜಾಗತಿಕ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ವೇಳೆ, ದೇಶದಲ್ಲಿ ಸೈಬರ್ ಅಪರಾಧ ದೊಡ್ಡ ಸವಾಲಾಗಿದ್ದು,ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕಾನೂನುಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದರು.
ಸAವಿಧಾನದ ಪೂರ್ವ ಪೀಠಿಕೆಯಲ್ಲಿ ಸಮಾನತೆಗೆ ಮಹತ್ವ ನೀಡಲಾಗಿದ್ದರೂ, ಕಾನೂನು ಮತ್ತು ಸಮಾಜದ ದೃಷ್ಟಿಯಲ್ಲಿ ಅದು ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎಂಬ ಬಗ್ಗೆ ಗಂಭೀರ ವಿಶ್ಲೇಷಣೆ ಅಗತ್ಯವಿದೆ. ಸ್ವಾತಂತ್ರ?ಯದ ಸಮಯದಲ್ಲಿ ದೇಶದ ಸಾಕ್ಷರತೆ ಪ್ರಮಾಣ ಕೇವಲ ೧೨ ಶೇಕಡಾ ಇದ್ದರೆ, ಈಗ ಅದು ಸುಮಾರು ಶೇ. ೮೦ಕ್ಕೆ ಏರಿಕೆಯಾಗಿದೆ. ಕಾನೂನು ಪದವಿ ಪಡೆದವರು ಕೇವಲ ವೃತ್ತಿ ದೃಷ್ಟಿಯಿಂದಲ್ಲ,ಕಾನೂನಿನ ರಕ್ಷಣೆ ಮತ್ತು ನ್ಯಾಯ ಸೇವೆಯ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವ ಹಿಸಬೇಕು ಎಂದು ಡಾ.ಜಿ.ಪರಮೇಶ್ವರ್ ಕರೆ ನೀಡಿದರು.
ಸಂವಿಧಾನದ ವಿಧಿ ೫೧(ಎ) ಹಾಗೂ ವಿಧಿ ೧೨ ರಿಂದ ೩೫ರವರೆಗೆ ನಾಗರಿಕರ ಕರ್ತವ್ಯಗಳು ಹಾಗೂ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳು ಮತ್ತು ಹಕ್ಕುಗಳನ್ನು ಸರಿಯಾಗಿ ಅರ್ಥಮಾಡಿ ಕೊಂಡಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳನ್ನು ಪರಿಣಾಮಕಾರಿಯಾಗಿ ಎತ್ತಿಹಿಡಿಯಲು ಸಾಧ್ಯ ಎಂದರು.
ಮಾಜಿ ಸಚಿವ ಹಾಗೂ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ,ನಾನು ಕೂಡು ರಾಜಕಾರಣಿಯಾಗುವ ಮೊದಲು ವಕೀಲರಾಗಿ ೧೯೮೪ರಿಂದ ೯೪ವರೆಗೆ ಕ್ರಿಮಿನಲ್ ಲಾಯರ್ ಆಗಿ ಪ್ರಾಕ್ಟಿಸ್ ಮಾಡುತ್ತಿದೆ.ಕಾನೂನಿನ ಸರಳ ವ್ಯಾಖ್ಯಾನವೆಂದರೆ, ಸಾಮಾಜಿಕ ಜ್ಞಾನ.ಇಂದು ಕಾನೂನು ಪದವಿ ಪಡೆದಿರುವ ನಿಮ್ಮ ಮುಂದೆ ಗುರುತರ ಜವಾಬ್ದಾರಿಗಳಿವೆ. ಅಸಹಾಯಕರು,ದ್ವನಿಯಿಲ್ಲದವರ ಪರ ಕೆಲಸ ಮಾಡಿದರೆ ನಿಮ್ಮ ಪದವಿಗೆ ಗೌರವ ಸಿಗುತ್ತದೆ.ಎಲ್ಲಾ ಕ್ಷೇತ್ರಗಳಲ್ಲಿ ಇದ್ದಂತೆ ಕಾನೂನು ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆ ಇದೆ. ಅದಕ್ಕೆ ತಕ್ಕಂತೆ ತಾವು ಸಹ ಸಿದ್ದರಾಗಬೇಕು.ಕೋರ್ಟ್ ಕಲಾಪದ ವೇಳೆ ಹಿರಿಯ ನ್ಯಾಯವಾದಿಗಳು ವಾದ ಮಂಡಿಸುವ ವೇಳೆ ಅವುಗಳನ್ನು ಶ್ರದ್ಧೆಯಿಂದ ಆಲಿಸಿ, ಅಲ್ಲಿ ಪ್ರಸ್ತಾಪಿಸುವ ವಿಷಯಗಳನ್ನು ಗಮನದಲ್ಲಿಟ್ಟುಕೊಂಡರೇ, ನೀವು ವಾದ ಮಂಡಿಸುವ ವೇಳೆ ಅನುಕೂಲಕ್ಕೆ ಬರಲಿದೆ.ಪ್ರಾಮಾಣಿಕತೆ ಮತ್ತು ಸತತ ಪರಿಶ್ರಮದಿಂದ ಮಾತ್ರ ವಕೀಲರಾಗಿ ಮೇಲೆ ಬರಲು ಸಾಧ್ಯ ಎಂದರು.
ಇAದು ಕ್ರಿಮಿನಲ್ ಕೇಸುಗಳಲ್ಲಿ ಅಪರಾಧಿಗಳಾಗುತ್ತಿರುವವ ಸಂಖ್ಯೆಯಲ್ಲಿ ಹೆಚ್ಚಿನವರು ಬಡವರೇ ಆಗಿರುತ್ತಾರೆ. ಈ ಲೋಪದೋಷಕ್ಕೆ ಕಾರಣ ಎನು ಎಂಬುದು ನಿಜಕ್ಕೂ ದುಖಃದ ವಿಷಯ.ಎಲ್ಲಾ ಕ್ಷೇತ್ರಗಳಂತೆ ನ್ಯಾಯಾಂಗ ಕ್ಷೇತ್ರವೂ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಮಾತುಗಳು ಇತ್ತೀಚಗೆ ಹೆಚ್ಚಾಗಿವೆ.ಹಾಗಾಗಿ ಜನರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಕೀಲರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ನುಡಿದರು.
ವಿಜ್ಞಾನಿ ಡಾ.ಪ್ರಶಾಂತ ಕಾಳಪ್ಪ ಪ್ರಧಾನ ಭಾಷಣ ಮಾಡಿ,ವಿಜ್ಞಾನಕ್ಕೆ ಬಡವರು, ಶ್ರೀಮಂತರು ಎಂಬ ಭೇಧ ಭಾವವಿಲ್ಲ. ಆದರೆ ಸಮಾಜ ವಿಜ್ಞಾನದ ತಳಹದಿಯೇ ಬಡತನ, ಸಿರಿತನ,ವಿಜ್ಞಾನ ಮತ್ತು ಕಾನೂನು ಎರಡು ಕೂಡ ಸತ್ಯವನ್ನೇ ಹುಡುಕುವ ಕೆಲಸ ಮಾಡುತ್ತೇವೆ.ಪದವಿಯಂಬುದು ಜೀವನದ ಆರಂಭ.ಗಾAಧಿ ಮತ್ತು ಅಂಬೇಡ್ಕರ್ ಕೋರ್ಟುಗಳಿಗಿಂತ, ಜನಸಾಮಾನ್ಯರ ನಡುವೆ ಇದ್ದೇ ಪ್ರಖ್ಯಾತರಾದರು. ಕಾನೂನು ಪದವಿಧರರು ಕಾನೂನಿನ ರಕ್ಷಕರಾಗಿ, ನ್ಯಾಯಾಂಗವನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸ ಮಾಡಬೇಕು.ಸೋಲೆ ಗೆಲುವಿನ ಮೆಟ್ಟಿಲು ಎಂಬುದು ನಿಮಗೆ ಪಾಠವಾ ಗಬೇಕು.ತಂತ್ರಜ್ಞಾನವನ್ನು ತಮ್ಮ ವೃತ್ತಿ ನೈಪುಣ್ಯತೆ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಚ್.ಎಂ.ಎಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಎಸ್.ಷಪಿ ಅಹಮದ್ ಮಾತನಾಡಿ, ೧೯೮೦ ರಿಂದಲೂ ಹೆಚ್.ಎಂ.ಎಸ್ ಶಿಕ್ಷಣ ಸಂಸ್ಥೆ ಬಡವರು, ಶೋಷಿತರಿಗೆ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕಳೆದ ೧೨ ವರ್ಷಗಳಿಂದ ಸೂಫಿಯಾ ಲಾ ಕಾಲೇಜು ನಡೆಯುತ್ತಿದ್ದು,ಕಾಲೇಜನ್ನು ಅನುದಾನಕ್ಕೆ ಒಳಪಡಿಸಬೇಕು,ಉಪನ್ಯಾಸಕರ ನೇಮಕಕ್ಕೆ ಅವಕಾಶ ಕಲ್ಪಿಸಬೇಕು. ಹೊಸದಾಗಿ ತುಮಕೂರಿನಲ್ಲಿ ನಿರ್ಮಾಣವಾಗುವ ನ್ಯಾಯಾಲಯ ಸಮುಚ್ಚಯದಲ್ಲಿ ಜುಡಿಷಿಯಲ್ ಹೆರಿಟೇಜ್ ಮ್ಯೂಸಿಯಂ ಸ್ಥಾಪಿಸುವಂತೆ ಕಂದಾಯ ಸಚಿವರಿಗೆ ಮನವಿ ಮಾಡಿದರು.
ಸಮಾರಂಭದಲ್ಲಿ ಹೆಚ್.ಎಂ.ಎಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಅಫ್ತಾಬ್ ಅಹಮದ್,ಸಿಇಓ ಮಹಮದ್ ಜುನೈದ್,ಸೂಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಸ್,ಕಾನೂನು ವಿವಿಯ ಸಿಂಡಿಕೇಟ್ ಸದಸ್ಯ ರಾಜಣ್ಣ, ಹೆಚ್.ಎಂ.ಎಸ್. ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅದೀಬ್ ಅಹಮದ್, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ ಮುಂತಾದವರು ಇದ್ದರು.

(Visited 1 times, 1 visits today)
dcm dr.g.parameshwar K.N.Rajanna kannada news karnataka knr local news Mla tumkur tumkur news ಕಾಂಗ್ರೆಸ್
Previous Articleಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
Next Article ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
News Desk Benkiyabale

Related Posts

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm news

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm news

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm news
ತಾಜಾ ಸುದ್ಧಿಗಳು
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
news

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm
news

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm
news

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm
news

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
Our Youtube Channel
Our Picks

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

By News Desk BenkiyabaleAugust 18, 2026 5:00 pm

ಕೊರಟಗೆರೆ: ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವುದಿಲ್ಲ ಎಂದು ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು…

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.