BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಿಳಾ ಪೊಲೀಸ್ ಠಾಣೆಯನ್ನು ಮತ್ತಷ್ಟು ಬಲವರ್ಧನೆಗೆ ಕ್ರಮ
Trending

ಮಹಿಳಾ ಪೊಲೀಸ್ ಠಾಣೆಯನ್ನು ಮತ್ತಷ್ಟು ಬಲವರ್ಧನೆಗೆ ಕ್ರಮ

By News Desk BenkiyabaleUpdated:January 18, 2019 4:30 pm

 ತುಮಕೂರು:

       ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಅಗತ್ಯ ಸಿಬ್ಬಂದಿಗಳನ್ನು ಒದಗಿಸಿ ಮತ್ತಷ್ಟು ಬಲವರ್ಧನೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೋನ ವಂಶಿಕೃಷ್ಣ ಅವರು ತಿಳಿಸಿದರು.

      ತಮ್ಮ ಕಛೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನತೆ ನಿರ್ಭಯವಾಗಿ ಓಡಾಡಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ಇಲಾಖೆಯ ಪ್ರಥಮಾದ್ಯತೆ. ಜನರ ಸುರಕ್ಷತೆಗಾಗಿ ಮಾಧ್ಯಮದವರು ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಹಕರಿಸಬೇಕೆಂದು ಮನವಿ ಮಾಡಿದರು.

ಈ ವಾರದಲ್ಲಿ ರೌಡಿ ಪರೇಡ್ :-

      ಜಿಲ್ಲೆಯಲ್ಲಿ ಯಾವುದೇ ರೀತಿಯ ಅಪರಾಧಗಳು ನಡೆಯದಂತೆ ಕ್ರಮ ಕೈಗೊಳ್ಳಲು ಈ ವಾರದಲ್ಲಿ ಜಿಲ್ಲಾ ಮಟ್ಟದ “ರೌಡಿ ಪರೇಡ್” ನಡೆಸಲಾಗುವುದು. ಈ ಪರೇಡ್‍ನಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿರುವವರ ಮೇಲೆ ನಿಗಾ ಇಡಲಾಗುವುದು. ಪ್ರತೀ ದಿನ ಅವರ ಮೊಬೈಲ್ ಸಂಖ್ಯೆ ಹಾಗೂ ಠಿಕಾಣಿಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಾಗುವುದೆಂದು ತಿಳಿಸಿದರು.

ಹೆಚ್ಚಿದ ಸೈಬರ್ ಕ್ರೈಮ್ ನಿಯಂತ್ರಣಕ್ಕೆ ತರಬೇತಿ :-

      ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂಗಳ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವುದು ಅಷ್ಟೊಂದು ಸುಲಭವಲ್ಲ. ಇದಕ್ಕಾಗಿ ಸೂಕ್ತ ತರಬೇತಿ ಅಗತ್ಯವಿದ್ದು, ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಹೈದ್ರಾಬಾದ್‍ನಲ್ಲಿ ಅಗತ್ಯ ತರಬೇತಿ ಪಡೆಯಲು ನಿಯೋಜಿಸಲಾಗುವುದು. ಮೊಬೈಲ್ ಕರೆ ಮೂಲಕ ಬ್ಯಾಂಕಿನ ಮಾಹಿತಿ ಪಡೆದು ಹಣ ದೋಚುವವರ ಬಗ್ಗೆ ಸಾರ್ವಜನಿಕರು ಎಚ್ಚರವಹಿಸುವುದು ಅಗತ್ಯ. ಬ್ಯಾಂಕುಗಳು ಯಾವುದೇ ರೀತಿಯ ಮಾಹಿತಿಯನ್ನು ಮೊಬೈಲ್ ಕರೆ ಮೂಲಕ ತನ್ನ ಗ್ರಾಹಕರಿಂದ ಪಡೆಯುವುದಿಲ್ಲ ಎಂಬ ಅರಿವು ಸಾರ್ವಜನಿಕರಲ್ಲಿ ಮೂಡುವಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಗಾಂಜಾ ಮಾರಾಟದ ಶಂಕೆ-ಹದ್ದಿನ ಕಣ್ಣು:

Displaying DSC_7703.JPG

      ಕಾಲೇಜು ವಿದ್ಯಾರ್ಥಿಗಳಿಗೆ ಟೀ-ಶಾಪ್‍ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಶಂಕೆಯಿದೆ ಎಂದು ಪತ್ರಕರ್ತರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇಂತಹ ಟೀ ಶಾಪ್‍ಗಳ ಮೇಲೆ ಇಂಟೆಲಿಜೆನ್ಸ್‍ನವರಿಂದ ಗೌಪ್ಯವಾಗಿ ಮಾಹಿತಿ ಪಡೆದು ಹದ್ದಿನ ಕಣ್ಣಿಡಲು ಕ್ರಮವಹಿಸಲಾಗುವುದೆಂದರು.

      ಆಂಧ್ರಪ್ರದೇಶದ ಹಳದಿ ಬೋರ್ಡ್ ವಾಹನಗಳು ರಾಜ್ಯದೊಳಗೆ ಯಾವುದೇ ಅಡ್ಡಿಯಿಲ್ಲದೆ ಸಂಚರಿಸುತ್ತವೆ. ಆದರೆ ನಮ್ಮ ರಾಜ್ಯದ ಹಳದಿ ಬೋರ್ಡ್ ವಾಹನಗಳನ್ನು ಆಂಧ್ರದ ಗಡಿ ಪ್ರದೇಶ ಮಡಕಶಿರಾದ ಬಳಿ ತಡೆದು ಪೊಲೀಸರು ತಮಗಿಷ್ಟ ಬಂದಂತೆ ದಂಡ ವಿಧಿಸುತ್ತಿದ್ದಾರೆ ಎಂಬ ದೂರಿಗೆ ಸ್ಪಂದಿಸಿದ ಅವರು ಅಂತರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದರು.

ನಕಲಿ ಲೈಸೆನ್ಸ್‍ಗೆ ಕಡಿವಾಣ :-

      ಜಿಲ್ಲೆಯಲ್ಲಿ ನಕಲಿ ಲೈಸೆನ್ಸ್‍ಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಕಡಿವಾಣ ಹಾಕಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡದಂತೆ ಪೋಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸೈಲೆನ್ಸರ್ ಇಲ್ಲದ ದ್ವಿಚಕ್ರ ವಾಹನ ಚಾಲನೆ, ಬೇರೆ ರೀತಿಯಲ್ಲಿ ಸದ್ದು ಮಾಡುವ ಹಾರ್ನ್‍ಗಳು, ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಚಾಲಕರು ಹಾಗೂ ನಂಬರ್ ಬೋರ್ಡ್ ಇಲ್ಲದ ವಾಹನಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

      ನಗರದಲ್ಲಿ ರಾತ್ರಿ 10 ಗಂಟೆ ನಂತರ ಹೋಟೆಲ್‍ಗಳು ಮುಚ್ಚುವ ಕ್ರಮದಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆಂಬ ಸಮಸ್ಯೆಯನ್ನು ಆಲಿಸಿದ ಅವರು ತಡರಾತ್ರಿ ಬರುವ ರೈಲು ಹಾಗೂ ಬಸ್ ಪ್ರಯಾಣಿಕರಿಗೆ ಅನುವಾಗುವಂತೆ ಊಟದ ಹೋಟೆಲ್‍ಗಳನ್ನು 10 ಗಂಟೆಗೆ ಮುಚ್ಚದಿರುವ ಬಗ್ಗೆ ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದೆಂದರಲ್ಲದೆ, ರಾತ್ರಿ 11.30ರ ನಂತರ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‍ಗಳು ಕಡ್ಡಾಯವಾಗಿ ಮುಚ್ಚಬೇಕು. ಬಾಗಿಲು ಮುಚ್ಚಿ 11.30 ಗಂಟೆಯ ನಂತರವೂ ವ್ಯವಹರಿಸುವ ಬಾರ್‍ಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದೆಂದರು.

ಉತ್ತಮ ಸೇವೆಗೆ ನಗದು ಬಹುಮಾನ :-

      ರಾತ್ರಿ ಕಳ್ಳತನ, ಅಪಘಾತ, ದರೋಡೆ, ಮತ್ತಿತರ ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ನಗದು ಬಹುಮಾನ ನೀಡಲಾಗುವುದು. ಎಲ್ಲಾ ಪೊಲೀಸ್ ಕಾನ್ಸ್‍ಟೇಬಲ್, ಹೆಡ್ ಕಾನ್ಸ್‍ಟೇಬಲ್‍ಗಳನ್ನು ಸರದಿಯನುಸಾರ ತಪ್ಪದೇ ರಾತ್ರಿ ಗಸ್ತಿಗೆ ನಿಯೋಜಿಸಲಾಗುವುದು. ನಗರದಲ್ಲಿ ಸಂಭವಿಸುವ ವಾಹನ ಅಪಘಾತಗಳ ಮೇಲೆ ಕಟ್ಟೆಚ್ಚರ ವಹಿಸಲು ಸಿಸಿ ಟಿವಿ ಹಾಗೂ ಸ್ಮಾರ್ಟ್ ಪೊಲೀಸ್ ಸಲಕರಣೆಗಳನ್ನು ಖುದ್ದಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.

      ಆಂಧ್ರದ ಗಡಿ ಪಾವಗಡ, ಶಿರಾ ಹಾಗೂ ತಿಪಟೂರಿನಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಅಕ್ರಮ ಮರಳು ಮಾಫಿಯಾ, ಮಟ್ಕಾ ದಂಧೆಗಳನ್ನು ನಿಯಂತ್ರಿಸಲು ತಂಡಗಳ ರಚನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮಠದಲ್ಲಿ ಗಣ್ಯರ ಭದ್ರತೆಗಾಗಿ ಪೊಲೀಸ್ ನಿಯೋಜನೆ :-

       ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಣೆಗಾಗಿ ಪ್ರತೀ ದಿನ ಮಠಕ್ಕೆ ಭೇಟಿ ನೀಡುವ ಗಣ್ಯರಿಗೆ ಸೂಕ್ತ ಭದ್ರತೆ ಒದಗಿಸುವುದು ಇಲಾಖೆಯ ಕರ್ತವ್ಯ. ಈ ನಿಟ್ಟಿನಲ್ಲಿ ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರಲ್ಲದೆ ದೊಡ್ಡ ಜಿಲ್ಲೆಯಾಗಿರುವ ತುಮಕೂರಿನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಶಿಸ್ತಿನಿಂದ ಪ್ರಾಮಾಣಿಕ ಸೇವೆ ಮಾಡುವ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

(Visited 22 times, 1 visits today)
Previous Articleಶ್ರೀಗಳ ದರ್ಶನಕ್ಕೆ ಗಣ್ಯರ ಆಗಮನ : ಹೆಲಿಪ್ಯಾಡ್ ನಿರ್ಮಾಣ
Next Article ಫೆ.3ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.