ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ನವ ಕರ್ನಾಟಕ ಸಂಘಟನೆ, ತುಮಕೂರು ಇವರ ಸಹಭಾಗಿತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಹಗಲು-ರಾತ್ರಿ ಎನ್ನದೆ ದುಡಿಯುವ ಕಟ್ಟಡ ಕಾರ್ಮಿಕರಿಗೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಲು ಸಮಯದ ಕೊರತೆ ಇರುವ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು.
ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿದ ವೈದ್ಯರು, ಆರೋಗ್ಯ ಸಮಸ್ಯೆಗಳ ಕುರಿತು ಕಾರ್ಮಿಕರಿಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಕೆಲಸದ ಸಂದರ್ಭದಲ್ಲಿ ಎದುರಾಗುವ ದೈಹಿಕ ಆಯಾಸ, ಆರೋಗ್ಯ ಸಮಸ್ಯೆಗಳು ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಮಹತ್ವದ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು.
ಆರೋಗ್ಯದ ಬಗ್ಗೆ ನಿರ್ಲಕ್ಷ÷್ಯ ಬೇಡ: ಬ್ಲಾಸೆಮ್ ಹಾಸ್ಪಿಟಲ್ನ ಡಾ. ಪರೀಕ್ಷಿತ್ ಮಾತನಾಡಿ, ಕಟ್ಟಡ ಕಾರ್ಮಿಕರು ಪ್ರತಿದಿನ ಕಷ್ಟಪಟ್ಟು ದುಡಿಯುವವರು. ತಮ್ಮ ಆರೋಗ್ಯದ ಬಗ್ಗೆ ಸಮಯ ಕೊಡುವುದು ಬಹಳ ಮುಖ್ಯ. ರಾತ್ರಿ ೯ ಗಂಟೆಯಾದರೂ ಸರಿ, ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಸಂಪೂರ್ಣ ಆರೋಗ್ಯ ಮಾಹಿತಿ ನೀಡುವುದು ನಮ್ಮ ಕರ್ತವ್ಯ. ಯಾವುದೇ ಆರೋಗ್ಯ ಸಮಸ್ಯೆ ಕಂಡುಬAದರೆ ನಿರ್ಲಕ್ಷ÷್ಯ ಮಾಡದೆ ಆರಂಭದಲ್ಲೇ ವೈದ್ಯರನ್ನು ಸಂಪರ್ಕಿಸಬೇಕು, ಎಂದು ಹೇಳಿದರು.
ನವ ಕರ್ನಾಟಕ ಕಾರ್ಮಿಕ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿಂದು ಮಾತನಾಡಿ, ಕಾರ್ಮಿಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ದಿನನಿತ್ಯದ ದುಡಿಮೆಯ ನಡುವೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶವಿದೆ, ಎಂದರು.
ಕಾರ್ಮಿಕರಿಗೂ ಸೌಲಭ್ಯಗಳ ಅರಿವು ಅಗತ್ಯ: ನವ ಕರ್ನಾಟಕ ನಗರ ಅಧ್ಯಕ್ಷ ಮಲ್ಲೇಶ್ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊAಡಿರುವ ಅರ್ಹ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ವಿವಿಧ ಕಲ್ಯಾಣ ಯೋಜನೆಗಳು ಲಭ್ಯವಿವೆ. ವೈದ್ಯಕೀಯ ನೆರವು, ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ನೆರವು, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣಕ್ಕೆ ಸಹಾಯ, ವಿವಾಹ ಸಹಾಯ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮಂಡಳಿಯ ನಿಯಮಾನುಸಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನೋಂದಾಯಿತ ಕಾರ್ಮಿಕರು ತಮ್ಮ ನೋಂದಣಿ ಹಾಗೂ ಚಂದಾ ಪಾವತಿ ವಿವರಗಳನ್ನು ಸರಿಯಾಗಿ ನಿರ್ವಹಿಸಿಕೊಂಡು, ತಮಗೆ ಅರ್ಹವಾಗಿರುವ ಸೌಲಭ್ಯಗಳ ಕುರಿತು ಕಾರ್ಮಿಕ ಇಲಾಖೆ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಮಾಹಿತಿ ಪಡೆದುಕೊಳ್ಳಬೇಕು. ಕಾರ್ಮಿಕರ ಆರೋಗ್ಯವೇ ಅವರ ಕುಟುಂಬದ ಭದ್ರತೆ, ಎಂದು ಹೇಳಿದರು.
ಕಾರ್ಮಿಕರ ಮೆಚ್ಚುಗೆ: ಕಾರ್ಮಿಕ ಮಹಮ್ಮದ್ ಆರಿಫ್ ಮಾತನಾಡಿ, ಕೆಲಸದ ಒತ್ತಡದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಮಯ ಸಿಗುವುದಿಲ್ಲ. ಇಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಹಾಗೂ ಸಲಹೆ ಪಡೆದುಕೊಂಡಿದ್ದೇವೆ. ಇಂತಹ ಶಿಬಿರಗಳು ನಮ್ಮಂತಹ ಕಾರ್ಮಿಕರಿಗೆ ತುಂಬಾ ಅನುಕೂಲವಾಗಿವೆ, ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಮಿಕ ಸಚಿವರಿಗೆ ಅಭಿನಂದನೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆಯುತ್ತಿದೆ. ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಾಗೂ ಕುಟುಂಬದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಮತ್ತು ಕಾರ್ಮಿಕ ಸಚಿವರ ನೇತೃತ್ವದಲ್ಲಿ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಕಾರ್ಮಿಕರಿಗೂ ತಲುಪಬೇಕಿದೆ.
ಕಾರ್ಯಕ್ರಮದಲ್ಲಿ ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಶ್ವೇತಾ, ಕೊರಟಗೆರೆ ತಾಲೂಕು ಮಹಿಳಾ ಉಪಾಧ್ಯಕ್ಷರು, ಸಂಘಟನೆಯ ಸದಸ್ಯರು, ಬ್ಲಾಸೆಮ್ ಹಾಸ್ಪಿಟಲ್ ತಂಡದ ಟೀಮ್ ಲೀಡರ್ ಡಾ. ಅಭಿಷೇಕ್, ಡಾ. ಪ್ರಥಮ್ ಎ. ಪಾಟೀಲ್, ಡಾ. ಪರೀಕ್ಷಿತ್, ನಿರೋಷ, ಕೀರ್ತಿ ಸೇರಿದಂತೆ ಲ್ಯಾಬ್ ಟೆಕ್ನಿಷಿಯನ್ಗಳು ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.
(Visited 1 times, 1 visits today)





