ತುಮಕೂರು: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ತಿಳಿಸಿದರು.
ನಗರದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ವಿದ್ಯಾರ್ಥಿ ನಿಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಕ್ಕೂಟದಿಂದ ನಿರಂತರ ಹೋರಾಟ ನಡೆಸಲಾಗುವುದು. ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ಜಾತಿಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದು, ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಶೋಷಿತರನ್ನು ಮುನ್ನೆಲೆಗೆ ತರುವ ಕೆಲಸ ಮಾಡಿದ್ದಾರೆ. ಸದ್ಯ ಮಧುಸೂದನ್ ನಾಯಕ್ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಈ ಸಮಾವೇಶದ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು” ಎಂದರು.
ಹಿAದುಳಿದ ವರ್ಗಗಳ ಆಯೋಗದ ಮಾಜಿ ಜೆ.ಡಿ. ಗೋಪಾಲ್ ಮಾತನಾಡಿ ೫-೨-೨೦೦೧ರಂದು ಅಧಿಕೃತವಾಗಿ ನೋಂದಾ ಯಿಸಲ್ಪಟ್ಟ ನಮ್ಮ ಒಕ್ಕೂಟವು ಕಳೆದ ೨೫ ವರ್ಷಗಳಿಂದ ಹಿಂದುಳಿದವರ ನೋವಿಗೆ ಧ್ವನಿಯಾಗಿ, ಹಕ್ಕುಗಳು ಹಾಗೂ ಸಾಂವಿಧಾನಿಕ ಸವಲತ್ತುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನೇಕ ಸವಲತ್ತುಗಳನ್ನು ಕೊಡಿಸುವಲ್ಲಿ ಒಕ್ಕೂಟ ಯಶಸ್ವಿಯಾಗಿದೆ ಎಂದರು.
ಕರ್ನಾಟಕ ಪ್ರದೇಶ ಕುರುಬರ ಸಂಘ ಚಿತ್ರದುರ್ಗದ ನಿರ್ದೇಶಕ ಬಿ.ಟಿ. ಜಗದೀಶ್ ಮಾತನಾಡಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶ್ರೀ ಮಧುಸೂಧನ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-೨೦೨೫ರ ವರದಿಯು ಸಮಸ್ತ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವರದಾನವಾಗಲಿದೆ. ಈ ಬೃಹತ್ ಸಮಾವೇಶದ ಪ್ರಮುಖ ನಿರ್ಣಯವಾಗಿದೆ.
ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ಕೆಂಪರಾಜು ಮಾತನಾಡಿ “ಒಕ್ಕೂಟವು ೨೫ ವರ್ಷ ಪೂರೈಸಿ ಯಶಸ್ವಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಹಾಗೂ ರಾಜ್ಯದ ಇತಿಹಾಸದಲ್ಲಿ ಸುದೀರ್ಘವಾಗಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ಹಿಂದುಳಿದ ವರ್ಗದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಆಗಮಿಸಲಿದ್ದು, ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಟಿ ಈ ರಘುರಾಮ್, ಸುನಿತ ನಟರಾಜು, ಧರ್ಮರಾಜು, ದೇವರಾಜ್, ರವೀಶ್, ಬಸವರಾಜ್, ಸುಕನ್ಯ, ಹರೀಶ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
(Visited 1 times, 1 visits today)





