BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್
news

KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್

ಜಿಲ್ಲಾ ಸಂಘದ ನಿರ್ದೇಶಕರ ದೂರಿನ ಮೇರೆಗೆ ನ್ಯಾಯಾಲಯದ ಸೂಚನೆಯಂತೆ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲು
By News Desk BenkiyabaleUpdated:September 19, 2026 5:15 pm

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘದ ಹಾಲಿ ನಿರ್ದೇಶಕ ಹಾಗೂ ಪತ್ರಕರ್ತ ಮಾರುತಿ ಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಖ್ಯೆ ೨೮೧/೨೦೨೬ ರಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂಘದ ನಿರ್ದೇಶಕರೊಬ್ಬರ ಅಮಾನತು, ದಾಖಲೆಗಳ ಸೃಷ್ಟಿ ಹಾಗೂ ನಿರ್ವಹಣೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾದ ವಿಷಯಗಳು ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊAಡು ನೊಂದ ನಿರ್ದೇಶಕ ಮಾರುತಿ ಪ್ರಸಾದ್ ಅವರ ದೂರಿನಲ್ಲಿ ದಾಖಲಾಗಿದೆ.
ದೂರಿನಲ್ಲಿ ಬಿಎನ್‌ಎಸ್ ಸೆಕ್ಷನ್ ೩೩೬, ೩೩೫, ೨೪೮, ೨೪೧,೩೧೮, ಮಾಹಿತಿ ತಂತ್ರಜ್ಞಾನ ಕಾಯ್ದೆ ೨೦೦೦(ಸೆಕ್ಷನ್ ೬೭) ಸೇರಿದಂತೆ ವಿವಿಧ ವಿಧಿಗಳನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಎಲೆಕ್ಟಾçನಿಕ್ ಮಾಧ್ಯಮದಲ್ಲಿ ಅಶ್ಲೀಲ ಅಥವಾ ಅಸಭ್ಯ ವಿಷಯ ಪ್ರಕಟಿಸಿರುವ ಆರೋಪಕ್ಕೆ ಸಂಬ0ಧಿಸಿದ0ತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೭ನ್ನೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಅಮಾನತು ಆದೇಶದ ಬಗ್ಗೆ ಆಕ್ಷೇಪ: ನೊಂದ ದಲಿತ ನಿರ್ಧೇಶಕ ಮಾರುತಿ ಪ್ರಸಾದ್ ಅವರು ತಮ್ಮನ್ನು ಸಂಘದಿAದ ಅಮಾನತುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿದ್ದು, ಸಂಘದ ಬೈಲಾ ಮತ್ತು ನಿಯಮಾವಳಿಗಳಿಗೆ ವಿರುದ್ಧವಾಗಿ ಅಮಾನತು ಆದೇಶ ಹೊರಡಿಸಲಾಗಿದೆ ಎಂಬುದು ಅವರ ಪ್ರಮುಖ ಆಕ್ಷೇಪವಾಗಿದೆ.
ಅಮಾನತು ಕ್ರಮಕ್ಕೆ ಜಿಲ್ಲಾ ಘಟಕಕ್ಕೆ ಅಧಿಕಾರವಿದೆಯೇ, ಸಂಘದ ಬೈಲಾದಲ್ಲಿ ಅಂತಹ ಕ್ರಮಕ್ಕೆ ಅವಕಾಶವಿದೆಯೇ ಹಾಗೂ ಸಂಬ0ಧಿತ ದಾಖಲೆಗಳ ಪ್ರಕ್ರಿಯೆ ನಿಯಮಾನುಸಾರ ನಡೆದಿದೆಯೇ ಎಂಬ ಪ್ರಶ್ನೆಗಳೂ ಇದೀಗ ಚರ್ಚೆಗೆ ಬಂದಿವೆ.
ಇದರ ಜೊತೆಗೆ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯ ಪ್ರಕಟಿಸಲಾಗಿದೆ, ಸುಳ್ಳು ಆರೋಪ ಮಾಡಲಾಗಿದೆ ಹಾಗೂ ದಾಖಲೆಗಳಿಗೆ ಸಂಬ0ಧಿಸಿದ0ತೆ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮಾರುತಿ ಪ್ರಸಾದ್ ಅವರು ದೂರಿನಲ್ಲಿ ಆರೋಪ ಮಾಡಿದ್ದಾರೆ ಎಂದು ದಾಖಲಾಗಿದೆ. ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ
ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳು, ಸಂಬ0ಧಿತ ದಾಖಲೆಗಳು, ಸಂಘದ ಬೈಲಾ, ಅಮಾನತು ಆದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ವಿಷಯಗಳನ್ನು ಪರಿಶೀಲಿಸಬೇಕಿದೆ.
ಪ್ರಕರಣ ದಾಖಲಾಗಿರುವುದೇ ಆರೋಪಗಳು ಸಾಬೀತಾದವು ಎಂಬ ಅರ್ಥವಲ್ಲ. ತನಿಖೆಯ ನಂತರವೇ ಆರೋಪಗಳ ಸತ್ಯಾಸತ್ಯತೆ ಹಾಗೂ ಕಾನೂನುಬದ್ಧ ಹೊಣೆಗಾರಿಕೆ ಕುರಿತು ಸ್ಪಷ್ಟತೆ ದೊರೆಯಲಿದೆ. ಆರೋಪಕ್ಕೆ ಒಳಗಾಗಿರುವ ಯೋಗೀಶ್ ಅವರ ಪ್ರತಿಕ್ರಿಯೆಯೂ ಪ್ರಕಟವಾಗಬೇಕಿದೆ.
ಕೆಯುಡಬ್ಲು÷್ಯಜೆ ಜಿಲ್ಲಾ ಘಟಕದ ಒಳಗಿನ ಭಿನ್ನಾಭಿಪ್ರಾಯ ಇದೀಗ ಪೊಲೀಸ್ ಠಾಣೆ ಮತ್ತು ನ್ಯಾಯಾಲಯದ ಮೆಟ್ಟಿಲೇರಿರುವುದು ಪತ್ರಕರ್ತರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ, ಪತ್ರಕರ್ತರು ಎಂದರೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕಾದವರು ಆದರೆ ಪತ್ರಕರ್ತರ ಸಂಘದಲ್ಲಿಯೇ ಸಂಘರ್ಷ ಏರ್ಪಟ್ಟು ದಲಿತ ನಿರ್ದೇಶಕ ಮನನೊಂದು ನ್ಯಾಯಾಲಯದ ಮೆಟ್ಟಿಲೇರಿರುವುದು ಸರಿಯಲ್ಲ , ಅಧ್ಯಕ್ಷರ ನಡೆ ಸರಿಯಲ್ಲ ಎನ್ನುವ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೇಳಿಕೆ ಮಾತುಗಳನ್ನು ಕೇಳುವ ಆಪಾದನೆ ಹೊತ್ತ ಅನನುಭವಿ ಅಧ್ಯಕ್ಷರ ಈ ರೀತಿಯ ವರ್ತನೆಯಿಂದ ಬಹುತೇಕ ಪತ್ರಕರ್ತರು ಮನ ನೊಂದಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕೇಸಿಗೆ ಸಿಲುಕಿ ಪೇಚಾಡುತ್ತಿರುವ ಜಿಲ್ಲಾಧ್ಯಕ್ಷರು ಇನ್ನಾದರೂ ತಮ್ಮ ವರ್ತನೆಯನ್ನು ಬದಲಾಯಿಸಿ ಪತ್ರಕರ್ತರ ಏಳ್ಗೆಗೆ ನಿಲ್ಲುತ್ತಾರಾ ಅಥವಾ ಪ್ರತ್ರಕರ್ತರ ಸಂಘದ ಮಾನ ಹರಾಜು ಹಾಕುತ್ತಾರಾ ಕಾದುನೋಡೋಣ.

(Visited 1 times, 1 visits today)
HOGHLIGHTS kannada news karnataka KUWJ L. YOGESH KUWJ NEWS KUWJ PRESIDENT local news tumakur tumkur tumkur news tumkur news today ತುಮಕೂರು:
Previous Articleಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್

September 19, 2026 5:15 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
Our Youtube Channel
Our Picks

KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್

September 19, 2026 5:15 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

KUWJ ಅಧ್ಯಕ್ಷ ಯೋಗೀಶ್ ವಿರುದ್ಧ ಎಫ್‌ಐಆರ್

By News Desk BenkiyabaleSeptember 19, 2026 5:15 pm

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ವಿರುದ್ಧ ತುಮಕೂರು ನಗರ ಪೊಲೀಸ್…

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.