BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ
  • ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ
  • ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ
  • ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ
  • ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ
  • ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ
  • ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೇ.20ರೊಳಗೆ ವಿದ್ಯಾರ್ಥಿ ನಿಲಯಗಳ ಅವ್ಯವಸ್ಥೆಯ ಸರಿಪಡಿಸಲು ಸಿಇಓ ಸೂಚನೆ
Trending

ಮೇ.20ರೊಳಗೆ ವಿದ್ಯಾರ್ಥಿ ನಿಲಯಗಳ ಅವ್ಯವಸ್ಥೆಯ ಸರಿಪಡಿಸಲು ಸಿಇಓ ಸೂಚನೆ

By News Desk BenkiyabaleUpdated:May 02, 2019 6:58 pm

 ತುಮಕೂರು:

      ಈಗ ರಜಾ ದಿನವಾಗಿರುವುದರಿಂದ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿರುವ ಅವ್ಯವಸ್ಥೆಯನ್ನು ಮೇ 20ರೊಳಗಾಗಿ ಸರಿಪಡಿಸಿ ಫೋಟೋ ಸಹಿತ ತಮಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ವಸತಿ ನಿಲಯಗಳ ಮೇಲ್ವಿಚಾರಕರು/ಪಾಲಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಜಾ ದಿನಗಳು ಮುಗಿಯುವುದರೊಳಗೆ ಜಿಲ್ಲೆಯ ಸರ್ಕಾರಿ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರ ಮತ್ತು ಸರ್ಕಾರಿ ವಸತಿ ನಿಲಯಗಳಲ್ಲಿ ದುರಸ್ಥಿಯಲ್ಲಿರುವ ಶೌಚಾಲಯ, ಅಡುಗೆ ಮನೆ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯಾರ್ಥಿಗಳ ಕೊಠಡಿಗಳನ್ನು ದುರಸ್ಥಿಪಡಿಸಿ ಅಗತ್ಯ ಮೂಲಭೂತ ಸೌರ್ಕಯಗಳನ್ನು ಕಲ್ಪಿಸಬೇಕೆಂದು ಅವರು ನಿರ್ದೇಶನ ನೀಡಿದರು.

      ನಗರ, ಗ್ರಾಮೀಣ ಪ್ರದೇಶಗಳಲ್ಲಿರುವ ವಸತಿ ನಿಲಯಗಳಲ್ಲಿ ಶೌಚಾಲಯ ಹಾಗೂ ಸ್ನಾನದ ಕೊಠಡಿಗಳಿಗೆ ಮೊದಲ ಆದ್ಯತೆ ನೀಡಬೇಕು. ಪ್ರತಿದಿನ ಸ್ವಚ್ಛತೆ ಕಾಪಾಡಲು ಚಾರ್ಟ್ ಬಳಸಬೇಕು. ಸ್ವಚ್ಛ ಮಾಡುವವರು ಈ ಚಾರ್ಟ್‍ನಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು. ಹಾರ್ಪಿಕ್ ಬಳಸಿಯೇ ಶೌಚಾಲಯ ಸ್ವಚ್ಛಗೊಳಿಸಬೇಕು. ಶೌಚಾಲಯಗಳು ಸ್ವಚ್ಛತೆಯಿಂದ ಕೂಡಿದ್ದರೆ ಮಾತ್ರ ಮಕ್ಕಳಿಗೆ ಬಳಸಲು ಮನಸ್ಸಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಹಾಸ್ಟೆಲ್‍ಗಳಲ್ಲಿ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಮೇಲ್ವಿಚಾರಕರಿಗೆ ಅವರು ಸೂಚನೆ ನೀಡಿದರು.

      ಹಾಸ್ಟೆಲ್ ವಾರ್ಡನ್‍ಗಳು ಮಕ್ಕಳ ಪೋಷಕರಿದ್ದಂತೆ. ಅವರ ಮೇಲೆ ಕಾಳಜಿ ವಹಿಸುವುದು ವಾರ್ಡನ್‍ಗಳ ಜವ್ದಾಬಾರಿ. ವಾರ್ಡನ್‍ಗಳು ವಿದ್ಯಾರ್ಥಿಗಳ ನೆನಪಿನಲ್ಲಿ ಉಳಿಯುವಂತೆ ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದರಲ್ಲದೆ ಹಾಸ್ಟೆಲ್ ಹೊರಾಂಗಣದಲ್ಲಿ ಕೈತೋಟ ನಿರ್ಮಾಣ ಮಾಡಿ ಉತ್ತಮ ಪರಿಸರ ಕಲ್ಪಿಸಬೇಕು. “ನಮ್ಮ ಮನೆ-ನಮ್ಮ ಮಕ್ಕಳು” ಎಂಬ ಭಾವನೆಯಿಂದ ವಿದ್ಯಾರ್ಥಿ ನಿಲಯಗಳನ್ನು ಹಾಗೂ ವಿದ್ಯಾರ್ಥಿಗಳನ್ನು ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

      ಮಕ್ಕಳ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರನ್ನು ಬಳಸಬೇಕು. ಇಡ್ಲಿ ಮಾಡುವಾಗ ಬಟ್ಟೆಯನ್ನು ಬಳಸಬೇಕು. ವಾರಕ್ಕೊಮ್ಮೆ ಫ್ರೀಡ್ಜ್ ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ರೋಗಾಣುಗಳು ಉತ್ಪತ್ತಿಯಾಗುತ್ತವೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

      ಶಿರಾ, ಮಧುಗಿರಿ, ಕೊರಟಗೆರೆ ತಾಲೂಕಿನಲ್ಲಿರುವ ವಸತಿ ನಿಲಯಗಳ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಮಕ್ಕಳನ್ನು ವೈದ್ಯ ತಪಾಸಣೆಗೊಳಪಡಿಸಬೇಕು. ಕಡಿಮೆ ತೂಕವಿರುವ ಮಕ್ಕಳ ಪಟ್ಟಿ ಮಾಡಿ ನನಗೆ ವರದಿ ನೀಡಬೇಕು. ಸೆಪ್ಟಂಬರ್ ತಿಂಗಳೊಳಗೆ ಮಕ್ಕಳು ಬೆಳವಣಿಗೆ ಹೊಂದಿಲ್ಲದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

      ಉಪ ಕಾರ್ಯದರ್ಶಿ ಡಾ|| ಪ್ರೇಮ್‍ಕುಮಾರ್ ಮಾತನಾಡಿ ಹಾಸ್ಟೆಲ್ ಅಂದರೆ ಊಟ ಹಾಕುವ ಛತ್ರಗಳ ರೀತಿ ಭಾವಿಸಿಬೇಡಿ. ಅಂತಹ ಪರಿಕಲ್ಪನೆಯಿದ್ದರೆ ಮಕ್ಕಳಿಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುವುದಿಲ್ಲ, ನಮ್ಮ ಕುಟುಂಬ ಎಂಬಂತೆ ಭಾವಿಸಬೇಕು ಎಂದು ಸಲಹೆ ಹೇಳಿದರು.

      ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ|| ಜಿ.ಪಿ ದೇವರಾಜು ಮಾತನಾಡಿ ಈ ಬಾರಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿಸುವ ಫಲಿತಾಂಶ ಬಂದಿಲ್ಲದಿದ್ದರೂ ಸಮಾಧಾನಕರ ಫಲಿತಾಂಶ ಬಂದಿದೆ. ಆದರೂ ಹಾಸ್ಟೆಲ್ ವಿದ್ಯಾರ್ಥಿಗಳ ಓದಿನ ಬಗ್ಗೆ ಗಮನಹರಿಸಬೇಕು. ಓದಿನಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಿ ಉತ್ತಮ ಅಂಕ ಗಳಿಸುವಂತೆ ವಾರ್ಡನ್‍ಗಳು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್‍ಕುಮಾರ್ ಮಾತನಾಡಿದರು. ಪಿಯುಸಿ ಪರೀಕ್ಷೆಯಲ್ಲಿ 574 ಅಂಕ ಗಳಿಸಿರುವ ತಿಪಟೂರಿನ ಮೌನೇಶ್ ಹಾಗೂ ಅಂಬರೀಶ್ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಫೌಂಡೇಶನ್ ವತಿಯಿಂದ 50ಸಾವಿರ ರೂ.ಗಳ ಚೆಕ್ ಅನ್ನು ವಿತರಿಸಲಾಯಿತು.
ಸಭೆಯಲ್ಲಿ ವಿದ್ಯಾರ್ಥಿ ನಿಲಯಗಳ ಪಾಲಕರು ಹಾಗೂ ಮೇಲ್ವಿಚಾರಕರು ಹಾಜರಿದ್ದರು.

(Visited 23 times, 1 visits today)
Previous Article ತುಮಕೂರು: ಶುದ್ಧಕುಡಿಯುವ ನೀರು ಘಟಕಕ್ಕೆ ಬೀಗ: ನಾಗರೀಕರ ಪರದಾಟ
Next Article ಮಾಸ್ಟರ್ ಹಿರಣ್ಣಯ್ಯ ವಿಧಿವಶ!!
News Desk Benkiyabale

Related Posts

October 10, 2025 1:18 pm ತುಮಕೂರು

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm ತುಮಕೂರು

ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ

October 10, 2025 1:13 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm
ಇತರೆ ಸುದ್ಧಿಗಳು

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm
ಇತರೆ ಸುದ್ಧಿಗಳು

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm
ಇತರೆ ಸುದ್ಧಿಗಳು

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm
ಇತರೆ ಸುದ್ಧಿಗಳು

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm
ಇತರೆ ಸುದ್ಧಿಗಳು

ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ

October 13, 2025 2:36 pm
Our Youtube Channel
Our Picks

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

By News Desk BenkiyabaleOctober 15, 2025 12:03 pm

ತುಮಕೂರು:  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಶರಣಪ್ರಕಾಶ ಆರ್. ಪಾಟೀಲ ಅವರು ಮಂಗಳವಾರ…

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.