BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ
  • ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ
  • ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ
  • ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
  • ವೃದ್ಧಿ ಕಾಮತ್ ರಂಗಪ್ರವೇಶ
  • ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಪ್ರತಿಷ್ಠಾಪನೆ
  • ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ
  • ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈಜ್ಞಾನಿಕ ಕಸ ವಿಲೇವಾರಿ : ಸ್ಮಾರ್ಟ್ ಸಿಟಿ ವತಿಯಿಂದ ಸಾರ್ವಜನಿಕ ಅರಿವು ಕಾರ್ಯಕ್ರಮ
Trending

ವೈಜ್ಞಾನಿಕ ಕಸ ವಿಲೇವಾರಿ : ಸ್ಮಾರ್ಟ್ ಸಿಟಿ ವತಿಯಿಂದ ಸಾರ್ವಜನಿಕ ಅರಿವು ಕಾರ್ಯಕ್ರಮ

By News Desk BenkiyabaleUpdated:August 27, 2019 6:38 pm

ತುಮಕೂರು:

      ಹಸಿ ಕಸ-ಒಣ ಕಸವನ್ನು ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬಗ್ಗೆ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಚರ್ಚಾ/ಪ್ರಬಂಧ ಸ್ಪರ್ಧೆ, ಮಕ್ಕಳಿಂದ ಜಾಗೃತಿ ಜಾಥಾ, ವಿದ್ಯಾರ್ಥಿಗಳಿಗಾಗಿ ಸಾಂಸ್ಕøತಿಕ ಕಾರ್ಯಕ್ರಮ, ಪ್ರತೀ ವಾರ್ಡಿನಲ್ಲಿ ಬೀದಿ ನಾಟಕ, ಸ್ಥಳೀಯ ಮಖಂಡರು ಹಾಗೂ ಸ್ವಸಹಾಯ ಗುಂಪಿನ ಸದಸ್ಯರೊಂದಿಗೆ ಗುಂಪು ಚರ್ಚೆ ನಡೆಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ತಿಳಿಸಿದರು.

       ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ಪತ್ರಿಕಾ ಹೇಳಿಕೆ ನೀಡಿದ ಅವರು ಸ್ವಚ್ಛ, ಸುಂದರ ಹಸಿರು ತುಮಕೂರನ್ನಾಗಿಸಲು ಸ್ಮಾರ್ಟ್ ಸಿಟಿ ಲಿಮಿಟೆಡ್, ಮಹಾನಗರ ಪಾಲಿಕೆ ಹಾಗೂ ಭಗೀರಥ ಸಂಸ್ಥೆಯ ಸಹಕಾರದಲ್ಲಿ ಈ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ನಗರದ ಎಲ್ಲ ಮನೆ-ಮನೆಗೆ ಭೇಟಿ ನೀಡಿ ಕರಪತ್ರ, ಫ್ಲೈಯರ್, ಬ್ಯಾನರ್, ಸ್ಟಿಕರ್, ಪೋಸ್ಟರ್‍ಗಳನ್ನು ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆ ಕುರಿತು ಪಾಲಿಕೆ ಸದಸ್ಯರು, ಆರೋಗ್ಯ ನಿರೀಕ್ಷಕರು, ಪೌರ ಕಾರ್ಮಿಕರಿಗೆ ಅವರ ಜವಾಬ್ದಾರಿಗಳ ಬಗ್ಗೆ ತರಬೇತಿ ನೀಡಲಾಗಿದೆ ಎಂದರು.

      ಪಾಲಿಕೆ ವತಿಯಿಂದ ಮನೆಯಲ್ಲಿಯೇ ಉತ್ಪತ್ತಿಯಾಗುವ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ವಿಧಾನದ ತರಬೇತಿಯನ್ನು ನೀಡಿ 500 ಮನೆಗಳಲ್ಲಿ ಪರಿವರ್ತನಾ ಘಟಕಗಳನ್ನು ನಿರ್ಮಿಸಿಕೊಡಲಾಗಿದೆ. ಈ ಘಟಕಕ್ಕಾಗಿ ಪೂರಕ ಸಾಮಗ್ರಿಗಳನ್ನು ಒದಗಿಸಿದ್ದು, ಈಗಾಗಲೇ ನಾಗರಿಕರು ಘಟಕದಲ್ಲಿ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲದೇ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮನೆಗಳಲ್ಲಿ ಕಡ್ಡಾಯವಾಗಿ ಆಗಸ್ಟ್ ಮಾಹೆಯೊಳಗಾಗಿ ಈ ಗೊಬ್ಬರ ಪರಿವರ್ತನಾ ಘಟಕವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

      ನಗರದಲ್ಲಿರುವ ಬಾರ್, ಮಾಂಸದಂಗಡಿ, ಕಲ್ಯಾಣ ಮಂಟಪ, ಶಾಲಾ-ಕಾಲೇಜುಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಅವರ ಹಂತದಲ್ಲಿಯೇ ವಿಲೇವಾರಿ ಮಾಡಲು ತರಬೇತಿ ನೀಡಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಸೂಚಿಸಲಾಗಿದೆ. ಮಾಂಸದಂಗಡಿಗಳು ಎಲ್ಲೆಂದರಲ್ಲಿ ಬಿಸಾಡುವ ತ್ಯಾಜ್ಯದಿಂದ ನಗರದ ನೈರ್ಮಲ್ಯ ಹಾಳಾಗುವುದಲ್ಲದೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಎಲ್ಲ ಮಾಂಸದಂಗಡಿಗಳಿಗೂ ಸಮರ್ಪಕವಾಗಿ ತಾಜ್ಯ ನಿರ್ವಹಣೆ ಮಾಡಲು ತಿಳುವಳಿಕೆ ನೀಡಲಾಗಿದೆ ಎಂದರು.

        ಸ್ವಚ್ಛತೆಯ ಬಗ್ಗೆ ಪರಿಣಾಮಕಾರಿಯಾಗಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ತಿಂಗಳೂ ಸ್ವಚ್ಛ ಶಾಲೆ, ಸ್ವಚ್ಛ ಆಸ್ಪತ್ರೆ, ಸ್ವಚ್ಛ ಹೋಟೆಲ್, ಸ್ವಚ್ಛ ಹಾಸ್ಟೆಲ್ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಸಮರ್ಪಕವಾಗಿ ತ್ಯಾಜ್ಯವನ್ನು ನಿರ್ವಹಿಸುವ ಪಾಲಿಕೆಯ ವಾಹನ ಚಾಲಕರು, ಸಹಾಯಕರು, ಪೌರಕಾರ್ಮಿಕರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಸೇರಿದಂತೆ ಎಲ್ಲ ಸಿಬ್ಬಂದಿಗಳಿಗಾಗಿ ಸ್ಪರ್ಧೆ ಏರ್ಪಡಿಸಿ ಪ್ರತೀ ತಿಂಗಳು ಒಬ್ಬರನ್ನು ಗುರುತಿಸಿ ಪ್ರಮಾಣಪತ್ರ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

        ಸ್ವಚ್ಛ ತುಮಕೂರು ಹಾಗೂ ಹಸಿರು ನಗರವನ್ನಾಗಿ ನಿರ್ಮಿಸಲು ಸಾರ್ವಜನಿಕರಿಗೆ ಉತ್ತೇಜನ ನೀಡುವ ಸಲುವಾಗಿ ಸೈಕ್ಲೋಥಾನ್, ವಾಕಥಾನ್, ಸಸಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ನಗರದ ನಾಗರಿಕರೆಲ್ಲರೂ ಸ್ಮಾರ್ಟ್ ಸಿಟಿ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

(Visited 32 times, 1 visits today)
Previous Articleಅಭಿವೃದ್ದಿಗೆ ಯಾರೇ ಆಗಲಿ ರಾಜಕೀಯ ಹೊರತುಪಡಿಸಿ ಸಾಗಬೇಕಿದೆ – ಸಂಸದ
Next Article ತುಮಕೂರು ಸ್ಮಾರ್ಟ್ ರಸ್ತೆಗಳಿಗೆ “ಟೆಂಡರ್ ಶ್ಯೂರ್” ಟಚ್
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm
ಇತರೆ ಸುದ್ಧಿಗಳು

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm
ಇತರೆ ಸುದ್ಧಿಗಳು

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm
ಇತರೆ ಸುದ್ಧಿಗಳು

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm
ಇತರೆ ಸುದ್ಧಿಗಳು

ವೃದ್ಧಿ ಕಾಮತ್ ರಂಗಪ್ರವೇಶ

October 23, 2025 4:37 pm
ಇತರೆ ಸುದ್ಧಿಗಳು

ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಪ್ರತಿಷ್ಠಾಪನೆ

October 23, 2025 2:46 pm
Our Youtube Channel
Our Picks

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

October 23, 2025 4:43 pm

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm

ವೃದ್ಧಿ ಕಾಮತ್ ರಂಗಪ್ರವೇಶ

October 23, 2025 4:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆ ಅಲಂಕರಿಸಲು ಸಾದ್ಯ

By News Desk BenkiyabaleOctober 23, 2025 4:43 pm

ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಸಮಾಜದ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾದ್ಯ ಅದ್ದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕು ಅದ್ಯತೆ ನೀಡಿ ಪರಿಶ್ರಮದ ಅದ್ಯಯನ…

ಸಚಿವ ವಿ. ಸೋಮಣ್ಣ ಅವರಿಂದ ಕಿತ್ತೂರು ರಾಣಿ ಚೆನ್ನಮ್ಮನವರ ೨೦೧ನೇ ವಿಜಯೋತ್ಸವಕ್ಕೆ ಚಾಲನೆ

October 23, 2025 4:42 pm

ಸಾಮಾಜಕ್ಕೆ ನೀನಾಸಂ ನಿಂದ ಸಂದೇಶ

October 23, 2025 4:41 pm

ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ

October 23, 2025 4:39 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.