BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ
  • ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ
  • ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ
  • ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ
  • ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ
  • ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ
  • ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ
  • ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಸ್ಮಾರ್ಟ್ ರಸ್ತೆಗಳಿಗೆ “ಟೆಂಡರ್ ಶ್ಯೂರ್” ಟಚ್
Trending

ತುಮಕೂರು ಸ್ಮಾರ್ಟ್ ರಸ್ತೆಗಳಿಗೆ “ಟೆಂಡರ್ ಶ್ಯೂರ್” ಟಚ್

By News Desk BenkiyabaleUpdated:August 29, 2019 7:10 pm

ತುಮಕೂರು:

    ಇತಿಚೀನ ದಿನಗಳಲ್ಲಿ ಕೇಬಲ್, ನೀರಿನ ಪೈಪ್, ಗ್ಯಾಸ್ ಸಂಪರ್ಕ, ಮತ್ತಿತರ ತಾಂತ್ರಿಕ ಕಾರಣಗಳಿಂದಾಗಿ ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಿಸಿದ ರಸ್ತೆಯನ್ನು ಕೆಲವೇ ದಿನಗಳಲ್ಲಿ ಅಗೆಯುವುದು, ಮತ್ತೆ ತೇಪೆ ಹಾಕುವುದು ಸಾಮಾನ್ಯವಾಗಿದೆ. ಮತ್ತೆ ಮತ್ತೆ ರಸ್ತೆಗಳನ್ನು ಅಗೆದು ವಿರೂಪಗೊಳಿಸುವ ಬದಲು ರಸ್ತೆ ಕಾಮಗಾರಿ ನಡೆಯುವಾಗಲೇ ಭವಿಷ್ಯದ ಬಗ್ಗೆ ಯೋಚಿಸಿ ಪೂರಕ ವ್ಯವಸ್ಥೆಗಳನ್ನು ಒದಗಿಸಿದರೆ ವ್ಯವಸ್ಥಿತ ರಸ್ತೆಯಾಗಿ ರೂಪುಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳನ್ನು ಅಗೆಯದಂತೆ ಸ್ಮಾರ್ಟ್ ಸಿಟಿ ಲಿಮಿಟೆಡ್‍ನಿಂದ ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ರಸ್ತೆಗಳಿಗೆ “ಟೆಂಡರ್ ಶ್ಯೂರ್” ಟಚ್ ನೀಡುವ ಹೊಸ ಯೋಜನೆಯೊಂದನ್ನು ವಿನ್ಯಾಸಗೊಳಿಸಲಾಗಿದೆ.

  ಏನಿದು ಟೆಂಡರ್ ಶ್ಯೂರ್?

      ಯಾವುದೇ ಕಾರಣಕ್ಕೂ ರಸ್ತೆಗಳನ್ನು ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ವಿನ್ಯಾಸಗೊಳಿಸುವ ಯೋಜನೆಯೇ ಟೆಂಡರ್ ಶ್ಯೂರ್. ಜಗತ್ತಿನ ಬಹುತೇಕ ಪ್ರಮುಖ ನಗರಗಳ ರಸ್ತೆಗಳು ಈ ಟೆಂಡರ್ ಶ್ಯೂರ್ ವಿನ್ಯಾಸವನ್ನು ಹೊಂದಿವೆ.

     ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ನಗರದ ವಿವಿಧ ಕಡೆ ಕೈಗೆತ್ತಿಕೊಂಡಿರುವ 17 ಸ್ಮಾರ್ಟ್ ರಸ್ತೆಗಳನ್ನು ಟೆಂಡರ್ ಶ್ಯೂರ್ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗುವುದು. ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ|| ಶಾಲಿನಿ ರಜನೀಶ್ ಅವರ ಮಾರ್ಗದರ್ಶನದಲ್ಲಿ, ಕಾಮಗಾರಿ ನಿರ್ವಹಣೆ ಹೊತ್ತಿರುವ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆನ್ಸಿ(ಪಿಎಂಸಿ) ಸಂಸ್ಥೆಯಾದ ಐಪಿಇ ಗ್ಲೋಬಲ್ ಲಿಮಿಟೆಡ್‍ನ ತಜ್ಞರು ಈ ವಿನ್ಯಾಸದ ಯೋಜನೆಯನ್ನು ಸಿದ್ಧಪಡಿಸಿದ್ದಾರೆ.

      ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ, ಪೊಲೀಸ್ ಇಲಾಖೆಗಳು ಸೇರಿದಂತೆ ಎಲ್ಲ ನಾಗರಿಕ ಸೇವಾ ಸಂಸ್ಥೆಗಳ ಸಮನ್ವಯತೆ ಹಾಗೂ ಸೂಕ್ತ ಮಾರ್ಗದರ್ಶನವಿಲ್ಲದೆ ನಗರದ ರಸ್ತೆಗಳನ್ನು ಯರ್ರಾಬಿರ್ರಿ ಅಗೆಯುವುದನ್ನು ತಡೆಗಟ್ಟಿ ಪರಿಕಲ್ಪಿತ ರೂಪದಲ್ಲಿ ಸುಂದರವಾಗಿ ನಿರ್ಮಿಸುವುದು ಈ ಟೆಂಡರ್‍ಶ್ಯೂರ್‍ನ ಉದ್ದೇಶವಾಗಿದೆ. ಎಲ್ಲ ಸೇವಾ ಸಂಸ್ಥೆಗಳನ್ನೊಳಗೊಂಡ ಏಕಗವಾಕ್ಷಿ ವ್ಯವಸ್ಥೆಯಡಿ ನಾಗರಿಕ ಸೌಲಭ್ಯ ಒದಗಿಸಲು ಕುಡಿಯುವ ನೀರಿನ ಕೊಳವೆ, ಒಳಚರಂಡಿ ಮಾರ್ಗ, ಬೆಸ್ಕಾಂ ಸಂಪರ್ಕ ಜಾಲ, ಆಪ್ಟಿಕಲ್ ಫೈಬರ್ ಕೇಬಲ್(ಓಎಫ್‍ಸಿ), ಬೀದಿ ದೀಪ, ಸಿಗ್ನಲ್ ದೀಪ, ಸಿಸಿ ಟಿ.ವಿ. ಕೇಬಲ್, ಗ್ಯಾಸ್ ಸಂಪರ್ಕ ಜಾಲ, ಈ ಎಲ್ಲ ಸೌಲಭ್ಯಗಳಿಗೂ ರಸ್ತೆ ಬದಿಯಲ್ಲಿ ಯುಟಿಲಿಟಿ ಡಕ್ಟ್(ಸೇವಾ ಸಂಪರ್ಕ ಜಾಲದ ನೆಲದಡಿ ಮಾರ್ಗ)ವ್ಯವಸ್ಥೆ ಕಲ್ಪಿಸುವ ಮಹತ್ವದ ಯೋಜನೆ ಇದಾಗಿದೆ.

      ಈ ಯೋಜನೆಯನ್ನು ಕಾರ್ಯಗತಗೊಳಿಸುವುದರಿಂದ ಯಾವುದೇ ನಾಗರಿಕ ಸೇವಾ ಸೌಲಭ್ಯದ ದುರಸ್ತಿ ಇದ್ದರೂ ರಸ್ತೆ ಅಗೆಯುವ ಪ್ರಮೇಯವೇ ಬರುವುದಿಲ್ಲ. ಸಮಸ್ಯೆ ಇದ್ದಲ್ಲಿ ಡಕ್ಟ್‍ಗಳನ್ನು ತೆರೆದು ದುರಸ್ತಿ ಕಾರ್ಯ ಕೈಗೊಳ್ಳಬಹುದು. ಈ ಸಂಪರ್ಕ ಜಾಲಗಳಿಗೆ ಒಂದರಿಂದ ಮತ್ತೊಂದಕ್ಕೆ ತೊಂದರೆಯಾಗದಂತೆ ಸಂಪರ್ಕ ಕಲ್ಪಿಸಿದ್ದು, ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕ ಜಾಲಗಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡಲಾಗುವುದು.

ಸ್ಮಾರ್ಟ್ ರಸ್ತೆಗಳ ವಿಶೇಷತೆ:/

      ಸ್ಮಾರ್ಟ್ ಸಿಟಿ ಲಿಮಿಟೆಡ್ ಕೈಗೊಂಡಿರುವ ನಗರದ ಸ್ಮಾರ್ಟ್ ರಸ್ತೆಗಳು ಟೆಂಡರ್ ಶ್ಯೂರ್ ವಿನ್ಯಾಸದೊಂದಿಗೆ ಪಾದಚಾರಿಗಳಿಗೆ ಸಮರ್ಪಕವಾದ ಫುಟ್‍ಪಾತ್ ಸೌಲಭ್ಯ, ಸೈಕಲ್‍ಗಳಿಗೆ ಪ್ರತ್ಯೇಕ ಮಾರ್ಗ, ದೊಡ್ಡ ವಾಹನ/ ಮಧ್ಯಮ ಗಾತ್ರದ ವಾಹನ/ ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಲೇನ್, ಮಾರ್ಗ ಮಧ್ಯದಲ್ಲಿ ವಾಹನಗಳು ರಸ್ತೆಗೆ ನುಗ್ಗದಂತೆ ತಡೆ ನಿರ್ಮಾಣ, ಇ-ಶೌಚಗೃಹ, ಸ್ಮಾರ್ಟ್ ಬಳಸುವ ಸೈಕಲ್ ಮತ್ತು ಇ-ಆಟೋ ನಿಲುಗಡೆ, ಕುಡಿಯುವ ನೀರಿನ ಘಟಕ, ಎಟಿಎಂ, ಸೆನ್ಸಾರ್ ಆಧರಿತ ಡಸ್ಟ್‍ಬಿನ್, ಮೊದಲಾದ ವಿಶೇಷಗಳನ್ನು ಸ್ಮಾರ್ಟ್ ರಸ್ತೆಗಳು ಹೊಂದಿವೆ.

      ಪಾದಚಾರಿ ಮಾರ್ಗ ನೆಲಮಟ್ಟಕ್ಕಿಂತ ಎತ್ತರವಾಗಿದ್ದರೆ, ಸೈಕಲ್ ಮಾರ್ಗ ತುಸು ಕೆಳಗಿರುತ್ತದೆ. ಮಳೆನೀರು ಯಾವುದೇ ಅಡೆತಡೆ ಇಲ್ಲದಂತೆ ಹರಿದು ಹೋಗುವಂತೆ ಯೋಜನೆ ರೂಪಿಸಲಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ಪಾದಚಾರಿ ಮಾರ್ಗ, ಯುಟಿಲಿಟಿ ಡಕ್ಟ್, ಬಸ್ ಬೇ, ರಸ್ತೆ ಬದಿ ವ್ಯಾಪಾರದ ಸ್ಥಳಗಳೆಲ್ಲವನ್ನೂ ಅಂತರಾಷ್ಟ್ರೀಯ ಗುಣಮಟ್ಟದಲ್ಲಿರುವಂತೆ ನಿರ್ಮಿಸಲಾಗುವುದು.

      ಇದರಿಂದ ರಸ್ತೆಗಳ ಬೇಕಾಬಿಟ್ಟಿ ಅಗೆತವನ್ನು ತಡೆದು ಸುಸ್ಥಿತಿಯನ್ನು ಕಾಯ್ದುಕೊಳ್ಳಲು ಪೂರಕವಾಗಲಿದೆ.

ಹೈಟೆಕ್ ತುಮಕೂರು:

      ಕಲ್ಪತರು ನಾಡು ಎಂದೇ ಖ್ಯಾತಿ ಗಳಿಸಿರುವ ತುಮಕೂರು ನಗರಿ ಮತ್ತಷ್ಟು ಹೈಟಕ್ ಆಗಲಿದೆ. ಬೆಂಗಳೂರಿನ ಭವಿಷ್ಯದ ಉಪನಗರಿಯಾಗಲು ತುಮಕೂರು ನಗರ ಎಲ್ಲ ರೀತಿಯಲ್ಲೂ ‘ಸ್ಮಾರ್ಟ್’ ಆಗಲು ಸಜ್ಜಾಗುತ್ತಿದೆ. ಸ್ಮಾರ್ಟ್ ಸಿಟಿ ಲಿಮಿಟೆಡ್ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಗರದ 17 ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೈಗೆತ್ತಿಕೊಂಡಿರುವ ಸ್ಮಾರ್ಟ್ ರಸ್ತೆಗಳ ಪಟ್ಟಿಗೆ ಮತ್ತಷ್ಟು ರಸ್ತೆಗಳು ಸೇಪರ್ಡೆಯಾಗಲಿವೆ.

      ಹೊಸರೂಪ ಪಡೆಯುತ್ತಿರುವ ಈ ಎಲ್ಲ ರಸ್ತೆಗಳು ಒಟ್ಟು 14.75 ಕಿ.ಮೀ. ಉದ್ದವಿದ್ದು, 150.69 ಕೋಟಿ ರೂ. ವೆಚ್ಚದ 5 ಪ್ಯಾಕೇಜ್‍ಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಪೂರೈಸಲು 12 ತಿಂಗಳ ಕಾಲಾವಕಾಶ ನಿಗಧಿ ಮಾಡಲಾಗಿದೆ.

      ಈ ರಸ್ತೆಗಳು ಸ್ಮಾರ್ಟ್ ರಸ್ತೆಯಾದ ಬಳಿಕ, ಸಂಚಾರ ವ್ಯವಸ್ಥೆಯ ದಿಕ್ಕನ್ನು ಬದಲಾಯಿಸಲಿದ್ದು , ಸ್ಮಾರ್ಟ್ ರಸ್ತೆಯಿಂದ “ಝೀರೊ ಟ್ರಾಫಿಕ್ ಜಾಮ್” ಆಗಲಿದೆ ಎಂದು ಸ್ಮಾರ್ಟ್ ಸಿಟಿ ಪಿಎಂಸಿಯ ತಾಂತ್ರಿಕ ತಜ್ಞ ಪಿ.ಕೆ ಸೈನಿ ತಿಳಿಸಿದ್ದಾರೆ.

   ಸ್ಮಾರ್ಟ್ ಆಗಲಿರುವ ರಸ್ತೆಗಳು:

      ಪೈಲೆಟ್ ಪ್ರಾಜೆಕ್ಟ್ ಆಗಿ ಫೀಲ್ಡ್ ಮಾರ್ಷಲ್ ಕಾರಿಯಪ್ಪ ರಸ್ತೆಯನ್ನು ಸ್ಮಾರ್ಟ್ ರಸ್ತೆಯನ್ನಾಗಿ ಪರಿವರ್ತಿಸುವ ಕಾಮಗಾರಿಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಪ್ಯಾಕೇಜ್-1ರಲ್ಲಿ ಜೆಸಿ ರಸ್ತೆ, ಎಂಜಿ ರಸ್ತೆ, ವಿವೇಕಾನಂದ ರಸ್ತೆ, ಹೊರಪೇಟೆ ರಸ್ತೆ ಹಾಗೂ ಪ್ಯಾಕೇಜ್-2ರಲ್ಲಿ ಮಂಡಿಪೇಟೆ ರಸ್ತೆ, ಮಂಡಿಪೇಟೆ ಒಂದು ಮತ್ತು ಎರಡನೇ ರಸ್ತೆಗಳು, ಖಾಸಗಿ ಬಸ್ ನಿಲ್ದಾಣ ರಸ್ತೆ, ಬಸ್ ನಿಲ್ದಾಣ ಉತ್ತರ ಹಾಗೂ ದಕ್ಷಿಣ ದಿಕ್ಕಿನ ರಸ್ತೆಗಳು, ಮಹಾವೀರ್ ಜೈನ್ ಭವನ್ (ರೈಲ್ವೇ ಸ್ಟೇಷನ್) ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

      ನಂತರದ ಹಂತಗಳಲ್ಲಿ ಅಶೋಕ ರಸ್ತೆ, ಡೀಸಿ ಕಚೇರಿ ರಸ್ತೆ, ಚಾಮುಂಡೇಶ್ವರಿ ದೇವಸ್ಥಾನದ ರಸ್ತೆ, ಡಾ. ರಾಧಾಕೃಷ್ಣನ್ ರಸ್ತೆ, ಬೆಳಗುಂಬ ರಸ್ತೆ ಹಾಗೂ ಬಿಹೆಚ್ ರಸ್ತೆಯನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದು, ಹಲವೆಡೆ ಕಾಮಗಾರಿ ಆರಂಭವಾಗಿವೆ.

      ಪ್ರಸ್ತುತ ವಿವಿಧ ರಸ್ತೆಗಳಲ್ಲಿ ಯುಟಿಲಿಟಿ ಡಕ್ಟ್ ನಿರ್ಮಾಣದ ಕೆಲಸ ಆರಂಭವಾಗಿದ್ದು, ಇದರಿಂದ ಸದರಿ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ.
ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ.

      ವಿಳಂಬ ಮಾಡಲಾಗುತ್ತಿದೆ ಎಂಬುದು ನಾಗರೀಕರಿಂದ ದೂರುಗಳು ಕೇಳಿ ಬರುತ್ತಿವೆ. ಕಾಮಗಾರಿಯಿಂದ ಸಾರ್ವಜನಿಕರಿಗೆ ತಾತ್ಕಾಲಿಕ ತೊಂದರೆ ಆಗಬಹುದು. ಸ್ಮಾರ್ಟ್ ರಸ್ತೆಗಳ ಯಶಸ್ವಿ ಅನುಷ್ಠಾನದ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಬೇಕೆಂದು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದ್ದಾರೆ.

(Visited 20 times, 1 visits today)
Previous Articleವೈಜ್ಞಾನಿಕ ಕಸ ವಿಲೇವಾರಿ : ಸ್ಮಾರ್ಟ್ ಸಿಟಿ ವತಿಯಿಂದ ಸಾರ್ವಜನಿಕ ಅರಿವು ಕಾರ್ಯಕ್ರಮ
Next Article ಸ್ಮಾರ್ಟ್‍ಸಿಟಿ : ಜರ್ಮನಿಯ ರಾಜತಾಂತ್ರಿಕರ ನಡುವೆ ಒಪ್ಪಂದ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

October 18, 2025 1:54 pm
ತುಮಕೂರು

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm
ಇತರೆ ಸುದ್ಧಿಗಳು

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm
ಇತರೆ ಸುದ್ಧಿಗಳು

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm
ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm
ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm
Our Youtube Channel
Our Picks

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

October 18, 2025 1:54 pm

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುತ್ತದೆ

By News Desk BenkiyabaleOctober 18, 2025 1:54 pm

ತುಮಕೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ, ಸಹಕಾರ ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತದೆ. ಕ್ರೀಡಾಂಗಣವು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪಾಠಶಾಲೆಯಾಗಿದೆ…

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm

ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ

October 18, 2025 1:51 pm

ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ

October 17, 2025 12:05 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.