ಕೊಡಿಗೇನಹಳ್ಳಿ:

      ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರ ವಾಹನದಿಂದ ಬಿದ್ದ ವ್ಯಕ್ತಿಗೆ ಗಂಭಿರ ಗಾಯಗಳಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

      ತಾಲೂಕಿನ ಕೋಡ್ಗದಾಲ ಮೂಲಕ ಬ್ಯಾಲ್ಯ ಗ್ರಾಮಕ್ಕೆ ಹೋಗುತಿದ್ದ ಅಗ್ರಹಾರ ಗ್ರಾಪಂ ಸದಸ್ಯ ಉಗ್ರಪ್ಪನ ವಾಹನಕ್ಕೆ ದಿಢೀರ ಬೀದಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದ್ದಾರೆ.

       ಅದೆ ರಸ್ತೆಯಲ್ಲಿ ಸಂಚರಿಸುತಿದ್ದ ಪರಿಚಿತ ವ್ಯಕ್ತಿ ಹನುಮಂತರಾಯಪ್ಪ ತಕ್ಷಣ ಗಾಯಾಳಾನ್ನು ಆಂಬುಲೆನ್ಸ್ ಮೂಲಕ ಮಧುಗಿರಿ ಆಸ್ಪತ್ರೆಗೆ ರವಾನಿಸಿದ್ದು, ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

(Visited 26 times, 1 visits today)