BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಎಸ್‍ವೈ ಬರಿಗೈಯಲ್ಲಿ ವಾಪಸ್ಸಾಗಿರುವುದು ಸಿ.ಎಂ.ಬದಲಾವಣೆ ಮುನ್ಸೂಚನೆ
Trending

ಬಿಎಸ್‍ವೈ ಬರಿಗೈಯಲ್ಲಿ ವಾಪಸ್ಸಾಗಿರುವುದು ಸಿ.ಎಂ.ಬದಲಾವಣೆ ಮುನ್ಸೂಚನೆ

By News Desk BenkiyabaleUpdated:November 19, 2020 6:59 pm

ತುಮಕೂರು:

      ಸಚಿವ ಸಂಪುಟ ವಿಸ್ತರಣೆಯ ಪಟ್ಟಿ ಇಟ್ಟುಕೊಂಡು ಪಕ್ಷದ ಹೈಕಮಾಂಡ್‍ನ್ನು ಭೇಟಿಯಾಗಿ ಬರಿಗೈಯಲ್ಲಿ ಬಿ.ಎಸ್.ಯಡಿಯೂರಪ್ಪ ಮರಳಿರುವುದು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ರಾಜ್ಯ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

      ನಗರದ ಟಿ.ಎ.ಪಿ.ಸಿ.ಎಂ. ಮುಂಭಾಗದಲ್ಲಿ ಏರ್ಪಡಿಸಿದ್ದ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ 103ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ಎಸ್.ವೈ ಅವರನ್ನು ಮುಂದುವರೆಸುವ ಇರಾಧೆ ಬಿಜೆಪಿ ಪಕ್ಷಕ್ಕೆ ಇದ್ದರೆ, ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋಧನೆ ನೀಡುತಿದ್ದರು.ಬಿಜೆಪಿ ಪಕ್ಷಕ್ಕೆ ಈಗ ಬಿ.ಎಸ್.ವೈ ಬೇಕಾಗಿಲ್ಲ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.

      ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದು ರಾಜ್ಯವನ್ನು ಪ್ರತಿನಿಧಿಸುವ ವ್ಯಕ್ತಿ. ಇಂತಹವರಿಗೆ ಕೇಂದ್ರದ ಗೃಹಸಚಿವರನ್ನು ಭೇಟಿಯಾಗಲು ಐದು ನಿಮಿಷ ಕಾಲಾವಕಾಶ ಕೊಡಲಿಲ್ಲವೆಂದರೆ, ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅಪಮಾನವಲ್ಲ. ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದು ಖಂಡನೀಯ ಎಂದು ಕೆ.ಎನ್.ರಾಜಣ್ಣ, ಕರ್ನಾಟಕವೆಂದರೆ ಅಷ್ಟು ತಾತ್ಸಾರವೇ ಎಂದು ಪ್ರಶ್ನಿಸಿದರು.

       ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಬಿಜೆಪಿ ಪಕ್ಷ ಮತದಾರರಿಗೆ ನೀಡಿದ ಅತಿಯಾದ ಸುಳ್ಳೇ ಕಾರಣ. ಮದಲೂರು ಕೆರೆಗೆ ನೀರು ಹರಿಸುತ್ತೇವೆ, ಮುಂದಿನ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ, ಕಾಡುಗೊಲ್ಲರ ಅಭಿವೃದ್ದಿ ನಿಗಮ, ಮಾದನಾಯಕನಹಳ್ಳಿ ಬೋವಿ ಸಮುದಾಯಕ್ಕೆ ಕ್ವಾರಿ ಲೀಸ್ ಸೇರಿದಂತೆ ಹಲವಾರು ಹಸಿ ಸುಳ್ಳುಗಳನ್ನು ಸತ್ಯದ ತಲೆಯ ಮೇಲೆ ಹೊಡದಂತೆ ಹೇಳಿದರಿಂದ ಮತದಾರರು ನಂಬಿ, ಅತ್ತ ಕಡೆಗೆ ವಾಲಿದರು.ಇಂದು ಕಾಡುಗೊಲ್ಲ ಹೋಗಿ ಗೊಲ್ಲ ಅಭಿವೃದ್ದಿ ನಿಗಮದ ಪ್ರಸ್ತಾಪವಾಗುತ್ತಿದೆ.ನಿಗಮದ ಆದೇಶ ಆಗಿ ಒಂದುವರೆ ತಿಂಗಳು ಕಳೆದರೂ ಒಂದು ನೈಯಾ ಪೈಸೆ ಹಣ ನೀಡಿಲ್ಲ. ಬಿಜೆಪಿ ಮತದಾರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂಜರಿದರೆ, ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಕೆ.ಎನ್.ರಾಜಣ್ಣ ಎಚ್ಚರಿಸಿದರು.

      ಅಭಿವೃದ್ದಿ ಪ್ರಾಧಿಕಾರಗಳ ರಚನೆಗೆ ಸಂಬಂಧಿಸಿದಂತೆ ನಾನು ಸಿದ್ದಗಂಗಾ ಮಠದ ಶ್ರೀಸಿದ್ದಲಿಂಗಸ್ವಾಮೀಜಿಗಳ ಹೇಳಿಕೆಯನ್ನು ಒಪ್ಪುತ್ತೇನೆ. ಸರಕಾರದ ಸವಲತ್ತುಗಳು ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ಜನಗಳಿಗೆ ಸಿಗಬೇಕೆ ಹೊರತು, ಎಲ್ಲವನ್ನು ಅನುಭವಿಸಿದವರಿಗಲ್ಲ ಎಂದ ಕೆ.ಎನ್.ಆರ್,ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ.
ಅಲ್ಲದೆ ಪ್ರಧಾನಿ ಮೋದಿಗಳ ಸಬ್‍ಕಾ ಸಾತ್, ಸಬ್‍ಕ ವಿಕಾಶ ಬರಿ ಬೋಗಳೆ,ಬಸವಕಲ್ಯಾಣ ಮತ್ತು ಬೆಳಗಾವಿ ಉಪಚುನಾವಣೆ ಸಂದರ್ಭದಲ್ಲಿ ಮರಾಠಿಗರು ನೆನಪವಾಗಿದ್ದಾರೆ.

      ಇದುವರೆಗೂ ಅವರು ನಮ್ಮ ಜೊತೆ ಇರಲಿಲ್ಲವೇ,ನವೆಂಬರ್ 1 ರಂದು ಕನ್ನಡ ರಾಜೋತ್ಸವದ ದಿನ ಕಪ್ಪು ಭಾವುಟ ಹಾರಿಸಿ, ಕರಾಳ ದಿನ ಆಚರಿಸಿದವರ ಅಭಿವೃದ್ದಿಗೆ ಪ್ರಾಧಿಕಾರ, ಇದು ನ್ಯಾಯವೇ ಎಂದು ಕೆ.ಎನ್.ರಾಜಣ್ಣ ಪ್ರಶ್ನಿಸಿದರು.

      ನಾನು ಶ್ರೀಮತಿ ಇಂದಿರಾಗಾಂಧಿ ಅವರ ಅನುಯಾಯಿ, 1971ರಲ್ಲಿ ಅವರು ತೆಗೆದುಕೊಂಡ ಸಾಮಾಜಿಕ ಕ್ರಾಂತಿಯ ನಿರ್ಣಯಗಳಿಂದ ಪ್ರಜಾ ಸೊಷಿಯಲಿಷ್ಟ್ ಪಾರ್ಟಿ ಬಿಟ್ಟು ಕಾಂಗ್ರೆಸ್ ಸೇರಿದೆ.ಇಂದಿಗೂ ಅವರ ಅನುಯಾಯಿಯಾಗಿಯೇ ಮುಂದುವರೆದಿದ್ದೇನೆ.

      ದೇಶದ ಅಭಿವೃದ್ದಿ ದೃಷ್ಟಿಯಿಂದ ಬ್ಯಾಂಕ್‍ಗಳ ರಾಷ್ಟ್ರೀಕರಣ, ರಾಜಧನ ರದ್ದು ಸೇರಿದಂತೆ ಹಲವಾರು ಐತಿಹಾಸಿಕ ನಿರ್ಧಾರಗಳು ಇಂದಿಗೂ ಮಾದರಿ. ಬಾಂಗ್ಲಾ ದೇಶದ ಉದಯ ಸೇರಿದಂತೆ ಹಲವಾರು ನಿರ್ಧಾರಗಳು ಭಾರತವನ್ನು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿಸಲು ಸಾಧ್ಯವಾಯಿತು ಎಂದರು.

      ಕಾಂಗ್ರೆಸ್ ಪಕ್ಷಕ್ಕೆ ಇಂದು ಹೊಸ ಮುಖಗಳ ಅಗತ್ಯವಿದೆ.ದೇಶದ ಸುಮಾರು 30 ಕೋಟಿಗೂ ಹೆಚ್ಚು ಯುವ ಮತದಾರರಿದ್ದಾರೆ. ಅವರನ್ನು ಪಕ್ಷದತ್ತ ಸೆಳೆಯಬೇಕೆಂದರೆ ಪಕ್ಷದ ಹೊಸ ಮುಖಂಡರ ಅಗತ್ಯವಿದೆ ಎಂದ ಕೆ.ಎನ್.ಆರ್,ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಈಗ ಅಪ್ರಸ್ಥುತ.ಮೊದಲು 113 ಸೀಟು ಗೆಲ್ಲುವ ಕಡೆಗೆ ಎಲ್ಲಾ ಗಮನಹರಿಸಬೇಕಾಗಿದೆ.

      ಆ ನಂತರ ಪಕ್ಷದ ಹೈಕಮಾಂಡ್ ಸಿ.ಎಂ. ಯಾರಾಗಬೇಕು ಎಂದು ತೀರ್ಮಾನಿಸುತ್ತದೆ.ಕಾಂಗ್ರೆಸ್ ಪಕ್ಷದಲ್ಲಿ ಸಿ.ಎಂ. ಆಗುವ ಆರ್ಹತೆ ಇರುವ ಅನೇಕ ಮುಖಂಡರಿದ್ದಾರೆ.ಡಿ.ಕೆ.ಶಿ, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಸೇರಿದಂತೆ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಮೊದಲು ಚುನಾವಣೆಯಲ್ಲಿ ಬಹುಮತ ಗಳಿಸುವತ್ತ ಎಲ್ಲರು ಗಮನಹರಿಸಬೇಕಾಗಿದೆ ಎಂದು ಕೆ.ಎನ್.ರಾಜಣ್ಣ ನುಡಿದರು.

      ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಕೆ.ಪಿಸಿಸಿ ರಾಜ್ಯ ಕಾರ್ಯದರ್ಶಿ ವೇಣುಗೋಪಾಲ್,ಸಹಕಾರ ಮಹಾಮಂಡಳದ ರಾಜ್ಯ ಅಧ್ಯಕ್ಷ ಗಂಗಣ್ಣ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ನಾರಾಯಣಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 16 times, 1 visits today)
Previous Articleಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್
Next Article 30 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು : ಜೆ.ಸಿ.ಮಾಧುಸ್ವಾಮಿ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.