BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭೂ ಸ್ವಾಧೀನ ಪಡಿಸಿಕೊಂಡು ಶ್ರೀಗಂಧ ಬೆಳೆಗಾರರಿಗೆ ತೊಂದರೆ
Trending

ಭೂ ಸ್ವಾಧೀನ ಪಡಿಸಿಕೊಂಡು ಶ್ರೀಗಂಧ ಬೆಳೆಗಾರರಿಗೆ ತೊಂದರೆ

By News Desk BenkiyabaleUpdated:December 18, 2020 6:17 pm

ತುಮಕೂರು : 

      ರಾಷ್ಟ್ರೀಯ ಹೆದ್ದಾರಿ-206ಕ್ಕಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ ಭೂಮಿ ಹಾಗೂ ಶ್ರೀಗಂಧ ಮರಗಳಿಗೆ ಪರಿಹಾರವನ್ನು ನೀಡದೇ ಶ್ರೀಗಂಧ ಬೆಳೆಗಾರರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಶ್ರೀಗಂಧ ಬೆಳೆಗಾರರು ಮತ್ತು ಬಳಕೆದಾರರ ಸಂಘದ ರಾಜ್ಯಾಧ್ಯಕ್ಷ ರಘುರಾವ್.ಬಿ.ಆರ್. ಆರೋಪಿಸಿದರು.

      ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ-206 ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿದ್ದು, 22 ರೈತರ ಶ್ರೀಗಂಧ ಬೆಳೆಗೆ 62 ಕೋಟಿ ಪರಿಹಾರವನ್ನು ನಿಗದಿ ಪಡಿಸಿ, ಅರಣ್ಯ ಇಲಾಖೆ ವರದಿ ನೀಡಿದ್ದರು ಸಹ ಕಳೆದ ನಾಲ್ಕು ವರ್ಷಗಳಿಂದ ಪರಿಹಾರವನ್ನು ನೀಡಿಲ್ಲ ಎಂದು ದೂರಿದರು.

      ಅರಣ್ಯ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 2002ರಲ್ಲಿ ಸರ್ಕಾರ ಶ್ರೀಗಂಧ ಬೆಳೆಯಲು ಮುಕ್ತ ಅವಕಾಶವನ್ನು ಕಲ್ಪಿಸಿದ್ದು, ಮಳೆಯಾಶ್ರಿತ ಭೂಮಿಯಲ್ಲಿ ಶ್ರೀಗಂಧ ಬೆಳೆಯುವುದರಿಂದ ಉತ್ತಮ ಲಾಭವನ್ನು ರೈತರು ಪಡೆದುಕೊಳ್ಳಬಹುದಾಗಿದ್ದು, ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿಯೂ ಅರಣ್ಯ ಕೃಷಿ ಮಾಡುವುದು ಅವಶ್ಯಕವಾಗಿದ್ದು, ಸರ್ಕಾರದ ಯೋಜನೆಗಳಿಗೆ ಭೂ ಸ್ವಾಧೀನ ಮಾಡಿಕೊಂಡಾಗ ಶೀಘ್ರ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.

      ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರದ ತುಮಕೂರು ವಿಭಾಗದ ಯೋಜನಾ ನಿರ್ದೇಶಕರು ಸಂತ್ರಸ್ಥ ರೈತರಿಗೆ ಪರಿಹಾರವನ್ನು ಶೀಘ್ರ ನೀಡದೇ ಹೋದರೆ ಕಚೇರಿ ಎದುರು ಶ್ರೀಗಂಧ ಬೆಳೆಗಾರರು ಮತ್ತು ಬಳಕೆದಾರರ ಸಂಘ ಸೇರಿದಂತೆ ಎಲ್ಲ ಶ್ರೀಗಂಧ ಬೆಳೆಗಾರರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ಬೆಳಿಗ್ಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

      ಶ್ರೀಗಂಧ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್.ವಿಶುಕುಮಾರ್ ಮಾತನಾಡಿ, ತರೀಕೆರೆ ಭಾಗದಲ್ಲಿ ಭೂ ಸ್ವಾಧೀನ ಮಾಡಿರುವ ಭೂಮಿಗೆ ಸರಿಯಾದ ಪರಿಹಾರವನ್ನು ನೀಡಿಲ್ಲ, ರೈತರು ಭೂಮಿಯನ್ನು ಖರೀದಿ ಮಾಡಿದ್ದಕ್ಕಿಂತ ಕಡಿಮೆ ದರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೀಡುತ್ತಿದೆ ಹಾಗೆಯೇ ರೈತರು ಬೆಳೆದಿರುವ ಶ್ರೀಗಂಧ ಮರಗಳಿಗೆ ಸೂಕ್ತ ಪರಿಹಾರವನ್ನು ನೀಡಲು ಹಿಂದೇಟು ಹಾಕುತ್ತಿದೆ ಎಂದು ಹೇಳಿದರು.

      ತರೀಕೆರೆಯಲ್ಲಿ 22 ರೈತರ ಸುಮಾರು ಐನೂರಕ್ಕೂ ಹೆಚ್ಚು ಶ್ರೀಗಂಧದ ಮರಗಳು ಭೂಸ್ವಾಧೀನದಲ್ಲಿ ನೊಟೀಫಿಕೇಷನ್ ಮಾಡಲಾಗಿದೆ, ಈ ಮರಗಳಿಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಹಣವನ್ನು ಅರಣ್ಯ ಇಲಾಖೆ ಅಂದಾಜಿಸಿ ವರದಿ ನೀಡಿದೆ, 62 ಕೋಟಿ ಪರಿಹಾರವನ್ನು ಶ್ರೀಗಂಧ ಬೆಳೆಗಾರರಿಗೆ ನೀಡಲು ಅರಣ್ಯ ಇಲಾಖೆ ವರದಿ ಸಲ್ಲಿಸಿದ್ದರು ಹಣ ನೀಡಲು ಎನ್‍ಎಚ್ ಪ್ರಾಧಿಕಾರ ಹಿಂದೇಟು ಹಾಕುತ್ತಿದೆ ಎಂದರು.

      ಅರಣ್ಯ ಇಲಾಖೆ ನೀಡಿರುವ ವರದಿಯಂತೆ 62 ಕೋಟಿ ಪರಿಹಾರಕ್ಕಾಗಿ ರೈತರನ್ನು ಅಲೆದಾಡಿಸುತ್ತಿರುವ ಬಗ್ಗೆ ಶ್ರೀಗಂಧ ಬೆಳೆಗಾರರು ಹೈಕೋರ್ಟ್ ಮೊರೆ ಹೋದಾಗ, ನ್ಯಾಯಾಲಯ ಶೀಘ್ರ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರ ಮಧ್ಯಂತರ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ, ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದ್ದು, ರೈತರಿಗೆ ಶೀಘ್ರ ಪರಿಹಾರ ವಿತರಿಸುವಂತೆ ಒತ್ತಾಯಿಸಿದರು.

      ತೋಟಗಾರಿಕಾ ಬೆಳೆಗಳಂತೆ ಶ್ರೀಗಂಧಕ್ಕೂ ಜೀವಿತಾವಧಿ ಬೆಲೆಯನ್ನು ನೀಡುವಂತೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ ಅವರು, ನ್ಯಾಯಾಲಯದ ಆದೇಶದಂತೆ ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರ ತುಮಕೂರು ವಿಭಾಗದ ಯೋಜನಾ ನಿರ್ದೇಶಕರು ರೈತರಿಗೆ ಪರಿಹಾರ ನೀಡಲು ಒಪ್ಪದೇ ಇದ್ದಲ್ಲಿ, ಅನಿರ್ದಿಷ್ಟಾವಧಿ ಧರಣಿ ನಡೆಸಲು ಬೆಳೆಗಾರರು ಸಿದ್ಧವಿರುವುದಾಗಿ ತಿಳಿಸಿದರು.

      ಸುದ್ದಿಗೋಷ್ಠಿಯಲ್ಲಿ ಸಂತ್ರಸ್ಥ ರೈತ ಕೆ.ಆರ್.ಪ್ರತಾಪ್‍ಕುಮಾರ್, ರಾಜ್ಯ ಬಿದಿರು ಮತ್ತು ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎ.ಎಸ್.ಈಶ್ವರಪ್ಪ, ರಾಮನಗರ ಭೈರಪ್ಪ, ನಾಗರಾಜು,ಶಿವಕುಮಾರ್, ಎಸ್.ಪಿ.ನಾಗರಾಜು ಸೇರಿದಂತೆ ಶ್ರೀಗಂಧ ಬೆಳೆಗಾರರು ಉಪಸ್ಥಿತರಿದ್ದರು.

(Visited 11 times, 1 visits today)
Previous Articleಗ್ರಾ.ಪಂ.ಯ ಸದಸ್ಯ ಸ್ಥಾನಕ್ಕಾಗಿ ಗುತ್ತಿಗೆ ಪರವಾನಗಿ ತ್ಯಾಗ
Next Article  ಹುಳಿಯಾರು : ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.