BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ
  • ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ
  • ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು
  • ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ
  • ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ
  • ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ
  • ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ
Trending

ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ

By News Desk BenkiyabaleUpdated:December 28, 2020 7:08 pm

ತುಮಕೂರು : 

      ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ಜ. 9 ರಂದು ರಾಜ್ಯಾದ್ಯಂತ ರೈಲು ಬಂದ್ ಚಳವಳಿ ಹಮ್ಮಿಕೊಂಡಿರುವುದಾಗಿ ವಾಟಾಳ್ ನಾಗರಾಜ್ ತಿಳಿಸಿದರು.

      ರಾಜ್ಯದಲ್ಲಿ ಮರಾಠ ಪ್ರಾಧಿಕಾರವನ್ನು ರಚನೆ ಮಾಡಿರುವ ಸರ್ಕಾರ ಹಿಂದಕ್ಕೆ ಪಡೆಯುವ ಸೂಚನೆಯನ್ನು ತೋರಿಸುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲ ಕಡೆ ಚಳವಳಿ ನಡೆಸಲಾಗುತ್ತಿದೆ ಎಂದರು.

     ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 9 ರಂದು ರಾಜ್ಯದ 500 ಸ್ಥಳಗಳಲ್ಲಿ ರೈಲು ಸಂಚಾರ ಬಂದ್ ಮಾಡಿ ರೈಲ್ವೆ ಹಳಿಗಳ ಮೇಲೆ ಕುಳಿತು ಸತ್ಯಾಗ್ರಹ ನಡೆಸುವುದಾಗಿ ಹೇಳಿದರು.

      ಜ. 9 ರಂದು ರೈಲುಗಳನ್ನು ಓಡಿಸುವಾಗ ಎಚ್ಚರದಿಂದ ಓಡಿಸಬೇಕು. ಈಗ ನಿಗದಿಪಡಿಸಿರುವ 500 ಸ್ಥಳಗಳು ಮುಂದೆ 1 ಸಾವಿರ ಸ್ಥಳಗಳಾಗಬಹುದು. ಹಾಗಾಗಿ ಅಂದು ರೈಲುಗಳನ್ನು ಚಾಲಕರು ಎಚ್ಚರಿಕೆಯಿಂದ ಓಡಿಸಬೇಕು ಎಂದು ಅವರು ಒತ್ತಾಯಿಸಿದರು.

      ಮರಾಠ ಪ್ರಾಧಿಕಾರ ರಚನೆ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ದ್ವಂದ್ವ ನೀತಿಯನ್ನು ಕೈ ಬಿಡಬೇಕು. ಮರಾಠ ಪ್ರಾಧಿಕಾರವನ್ನು ರಚನೆಯಿಂದ ಕನ್ನಡಿಗರಿಗೆ ಭಾರೀ ಅಪಾಯ ಇದೆ ಎಂದರು.

      ರಾಜ್ಯದ ಬೆಳಗಾವಿ, ಖಾನಾಪುರ, ಕಾರವಾರ ಇವೆಲ್ಲವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಸುಪ್ರೀಂ ಕೋರ್ಟ್‍ನಲ್ಲಿ ದಾವೆ ಹೂಡಲಾಗಿದೆ. ಅವರು ನಮ್ಮ ಮೇಲೆ ದಾಳಿ ಆಗಾಗ್ಗೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿ ಭಾಗವನ್ನು ಬಿಟ್ಟು ಕೊಡುವುದಿಲ್ಲ ಎಂದರು.

      ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಪ್ರಾಧಿಕಾರ ರಚನೆ ಮಾಡುವಾಗ ಯಾವುದೇ ಚಿಂತನೆ ಮಾಡದೆ, ಶಾಸನ ಸಭೆಯಲ್ಲೂ ಚರ್ಚೆ ಮಾಡದೆ, ಮಂತ್ರಿ ಮಂಡಲದಲ್ಲೂ ಚರ್ಚಿಸದೆ ತಾವೇ ನಿರ್ಧಾರ ಕೈಗೊಂಡು ಪ್ರಾಧಿಕಾರ ರಚನೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಪರಭಾಷೆಯ ಪ್ರಾಧಿಕಾರ ಮಾಡಿ ಮಂತ್ರಿ ಸ್ಥಾನಮಾನ ಕೊಡುತ್ತಿರುವುದು ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲು. ಯಾವ ಮುಖ್ಯಮಂತ್ರಿಗಳು ಇಂಥ ಕೆಲಸವನ್ನು ಮಾಡಿಲ್ಲ. ಈ ಮುಖ್ಯಮಂತ್ರಿಗಳಿಗೆ ಗಡಿನಾಡ ಬಗ್ಗೆ ಚಿಂತನೆ ಇಲ್ಲ, ಕನ್ನಡ ಬೆಳೆಸುವ ಕಾಳಜಿ ಇಲ್ಲ, ಪ್ರಾಮಾಣಿಕತೆಯೂ ಇಲ್ಲ ಎಂದು ಹರಿಹಾಯ್ದರು.

      ಜ. 9 ರಂದು ರಾಜ್ಯದಾದ್ಯಂತ ರೈಲು ಬಂದ್ ಮಾಡಿ ಹೋರಾಟ ನಡೆಸುವ ಜತೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಹಾರಿಸಲು ಕನ್ನಡಪರ ಸಂಘಟನೆಗಳು ಸಿದ್ದಗೊಂಡಿವೆ. ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಅನಿವಾರ್ಯ, ನಮ್ಮನ್ನು ಜೈಲಿಗೆ ಹಾಕಿದರೂ ಚಿಂತೆಯಿಲ್ಲ ಹೋರಾಟ ಮಾಡಿಯೇ ತೀರುತ್ತೇವೆ ಎಂದರು.

      ರಾಜ್ಯ ಸರ್ಕಾರದ ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲ ಎಂಬುದಕ್ಕೆ ಇಬ್ಬರು ಐಪಿಎಸ್ ಅಧಿಕಾರಿಗಳು ತಮಗೆ ಮನ ಬಂದಂತೆ ಕೆಸರೆರಚಾಟ, ಜಟಾಪಟಿ ನಡೆಸುತ್ತಿರುವುದೇ ಸಾಕ್ಷಿಯಾಗಿದೆ. ನಿರ್ಭಯ ನಿಧಿ ಟೆಂಡರ್‍ಗೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ಮಾತಿಗೂ ಬೆಲೆ ಇಲ್ಲ ಎಂದರು.

    ನಿರ್ಭಯಾ ನಿಧಿ ಯೋಜನೆಗೆ 612 ಕೋಟಿ ಅವಶ್ಯಕತೆ ಇಲ್ಲ. ನಿರ್ಭಯ ಎನ್ನುವ ಹೆಸರಿನಲ್ಲಿ ಲೂಟಿ ಹೊಡೆಯಲು ಸಂಚು ನಡೆದಿದೆ ಎಂದು ಅವರು ದೂರಿದರು.

       ಟ್ರಾಫಿಕ್‍ಗಳಲ್ಲೂ ಪೊಲೀಸರಂತೆ ಗೊಂಬೆ ನಿಲ್ಲಿಸಲಾಗಿತ್ತು. ಇದಕ್ಕಾಗಿ ಕೋಟಿ ಕೋಟಿ ಖರ್ಚಾಗಿತ್ತು. ಆದರೆ ಈಗ ಆ ಗೊಂಬೆಗಳೇ ಇಲ್ಲ ಎಂದರು.  ಪೊಲೀಸರ ಹಿತರಕ್ಷಣೆಗಾಗಿ ಔರಾದ್‍ಕರ್ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಪೊಲೀಸರ ವಾಸದ ಮನೆಗಳು ಮೋರಿಯಾಗಿವೆ. ಅದನ್ನು ಸರಿಪಡಿಸಿ ಅನುಕೂಲ ಕಲ್ಪಿಸಬೇಕು ಎಂದ ಅವರು ಜನವರಿ ಅಂತ್ಯದವರೆಗೂ ಕಾಯುತ್ತೇವೆ. ಅಷ್ಟರೊಳಗೆ ಔರಾದ್‍ಕರ್ ವರದಿ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

(Visited 16 times, 1 visits today)
Previous Articleಹುಳಿಯಾರಿನಲ್ಲಿ ಅವರೆಕಾಯಿ ಮಾರಾಟ ಜೋರು
Next Article ಗ್ರಾಮ ಪಂಚಾಯಿತಿ ಚುನಾವಣೆ : ಇಂದು ಮತ ಎಣಿಕೆ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

November 05, 2025 3:42 pm
ಇತರೆ ಸುದ್ಧಿಗಳು

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm
ಇತರೆ ಸುದ್ಧಿಗಳು

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm
ಇತರೆ ಸುದ್ಧಿಗಳು

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm
ಇತರೆ ಸುದ್ಧಿಗಳು

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm
Our Youtube Channel
Our Picks

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

November 05, 2025 3:42 pm

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm

ರಾಜ್ಯದಲ್ಲಿ ಗರಿಗೆದರಿದ ಮುಖ್ಯಮಂತ್ರಿ ಬದಲಾವಣೆ ಚರ್ಚೆ

November 05, 2025 2:57 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹೊನ್ನುಡಿಕೆ ದೊಡ್ಡಕೆರೆ ಭರ್ತಿ: ಸಂಭ್ರಮದ ತೆಪ್ಪೋತ್ಸವ

By News Desk BenkiyabaleNovember 05, 2025 3:42 pm

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆಯ ದೊಡ್ಡ ಕೆರೆ ತುಂಬಿದ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಸಕ ಬಿ.ಸುರೇಶ್‌ಗೌಡರು ಗಂಗಾಪೂಜೆ ನೆರವೇರಿಸಿ…

ಮಕ್ಕಳಿಗೆ ಶಿಸ್ತು, ಸಂಸ್ಕಾರದ ಶಿಕ್ಷಣ ಕಲಿಸಿ: ಶಾಸಕ ಸುರೇಶ್‌ಗೌಡ

November 05, 2025 3:27 pm

ಎಸ್‌ಎಸ್‌ಎಲ್‌ಸಿ : ಜಿಲ್ಲೆಗೆ ಶೇ.೧೦೦ರಷ್ಟು ಫಲಿತಾಂಶಕ್ಕೆ ಗೃಹ ಸಚಿವರ ತಾಕೀತು

November 05, 2025 3:12 pm

ಶ್ರೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಗೃಹ ಸಚಿವ

November 05, 2025 3:09 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.