BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು
  • ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ
  • ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು
  • ಬಡವರ್ಗದವರ ಏಳ್ಗೆಗಾಗಿ ಶ್ರಮಿಸುತ್ತೆನೆ: ಕೆಎನ್‌ಆರ್
  • ನ.೧೬ರಿಂದ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ
  • ಕನ್ನಡ ಭಾಷಾಪ್ರೇಮ, ನಾಡಪ್ರೇಮ ಮಾತಿನಲ್ಲಿ ತಿಳಿಸುವಂತದಲ್ಲ
  • ಕಸಬಾ ವಿಎಸ್‌ಎಸ್‌ಎನ್ ಅಧ್ಯಕ್ಷರ ಆಯ್ಕೆ
  • ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಲಾನಯನ ಅಭಿವೃದ್ಧಿ ಕಾಮಗಾರಿಗಳನ್ನು ನರೇಗ ಯೋಜನೆಯಡಿ ಕೈಗೊಳ್ಳಲು ನಿರ್ದೇಶನ
ತುಮಕೂರು ಜಿಲ್ಲಾ ಸುದ್ಧಿಗಳು

ಜಲಾನಯನ ಅಭಿವೃದ್ಧಿ ಕಾಮಗಾರಿಗಳನ್ನು ನರೇಗ ಯೋಜನೆಯಡಿ ಕೈಗೊಳ್ಳಲು ನಿರ್ದೇಶನ

By News Desk BenkiyabaleUpdated:November 24, 2018 4:24 pm

ತುಮಕೂರು :

      ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳಂತೆ ಜಲಾನಯನ ಅಭಿವೃದ್ಧಿ ಇಲಾಖೆಯ ಕಾಮಗಾರಿಗಳನ್ನೂ ಸಹ ನರೇಗಾ ಯೋಜನೆಯಡಿ ಕೈಗೊಳ್ಳಬೇಕೆಂದು ಜಲಾನಯನ ಅಭಿವೃದ್ದಿ ಇಲಾಖಾಯುಕ್ತ ಪ್ರಭಾಷ್ ಚಂದ್ರ ರೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಪಂಚಾಯತಿಯ ಜಂಟಿ ಆಶ್ರಯದಲ್ಲಿ ಶನಿವಾರ ಬಾಲಭವನದಲ್ಲಿ ನರೇಗಾ ಯೋಜನಾನುಷ್ಠಾನಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೂ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಉದ್ಯೋಗ ನೀಡುವಲ್ಲಿ ನಿರ್ಗತಿಕರು, ಕಡು ಬಡವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚಿನ ಪ್ರಥಮಾದ್ಯತೆ ನೀಡಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾನವ ದಿನಗಳನ್ನು ಸೃಜಿಸುವ ಪ್ರಮಾಣವನ್ನು 100 ರಿಂದ 150ಕ್ಕೆ ಹೆಚ್ಚಿಸಲಾಗಿದ್ದು, ಎಲ್ಲಾ ಅನುಷ್ಠಾನಾಧಿಕಾರಿಗಳು ಕಡ್ಡಾಯವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗಧಿತ ಗುರಿಯನ್ನು ಮೀರಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.

      ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳು ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳುವ ಕೃಷಿ ಹೊಂಡ, ಗೋಕಟ್ಟೆ, ನಾಲಾಬದು, ಅರಣ್ಯೀಕರಣ, ಗೋಮಾಳ, ನೆಡುತೋಪು, ಬಂಡು ನಿರ್ಮಾಣ, ಬದು, ಕೊಟ್ಟಿಗೆ ನಿರ್ಮಾಣ ಕಾಮಗಾರಿಗಳಂತೆ ನೀರು ಸಂಗ್ರಹವಾಗುವಂತಹ ಉಪ ಜಲಾನಯನ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಮಿಸುವ ಮೂಲಕ ಗ್ರಾಮೀಣ ಪ್ರದೇಶದವರಿಗೆ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲು ಅನುವಾಗುವಂತೆ ಕಾರ್ಯನಿರ್ವಹಿಸಬೇಕೆಂದರು.

      ಗ್ರಾಮೀಣ ಪ್ರದೇಶದವರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಜಾರಿಗೆ ತಂದಿದ್ದು, 2014ರ ನರೇಗಾ ಯೋಜನೆಯ ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬವೂ ಉದ್ಯೋಗ ಪಡೆಯುವ ಹಕ್ಕನ್ನು ಹೊಂದಿರುತ್ತದೆ. ಈ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿದ ಪ್ರತಿ ಫಲಾನುಭವಿಗಳಿಗೂ ಉದ್ಯೋಗ ನೀಡಿ ನಿಗಧಿತ ಅವಧಿಯಲ್ಲಿ ಕೂಲಿ ಪಾವತಿ ಮಾಡಬೇಕು. ನರೇಗಾ ಯೋಜನೆಯ ಅನುದಾನವನ್ನು ದುರುಪಯೋಗಪಡಿಸಿಕೊಂಡ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದರು.

      ಪ್ರಗತಿ ಸಾಧಿಸುವತ್ತ ಮಾತ್ರ ಒಲವು ತೋರದೆ ಕಾಮಗಾರಿಗಳನ್ನು ನಿರ್ಮಿಸುವ ಮುನ್ನ ಇದರಿಂದ ಜನರಿಗಾಗುವ ಪ್ರಯೋಜನವನ್ನು ಅರಿತು ಕೈಗೆತ್ತಿಕೊಳ್ಳಬೇಕು. ಯೋಜನೆಯ ನಿಯಮವನ್ನು ಉಲ್ಲಂಘಿಸದೆ ಮುಂದಿನ 50 ವರ್ಷಗಳವರೆಗೆ ಬಳಸಲು ಯೋಗ್ಯವಿರುವಂತಹ ಕಾಮಗಾರಿಗಳನ್ನು ನಿರ್ಮಿಸಬೇಕು. ಮಕ್ಕಳು ಹಾಗೂ ಜಾನುವಾರುಗಳು ಬೀಳದಂತೆ ಮುಂಜಾಗ್ರತೆಯಾಗಿ ಹೆಚ್ಚಿನ ಆಳದ ಕೃಷಿ ಹೊಂಡಗಳನ್ನು ನಿರ್ಮಿಸಬೇಡಿ ಎಂದು ಸಲಹೆ ನೀಡಿದರಲ್ಲದೆ ಯಂತ್ರಗಳನ್ನು ಬಳಸಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ ಎಂದು ನಿರ್ದೇಶನ ನೀಡಿದರು.

      ನರೇಗಾ ಯೋಜನೆಯಡಿ ಪ್ರತಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಕನಿಷ್ಠ 50 ಕೃಷಿ ಹೊಂಡಗಳ ನಿರ್ಮಾಣಕ್ಕೆ ಮುಂದಾಗಬೇಕು. ಇದರಿಂದ ಕೃಷಿ/ತೋಟಗಾರಿಕೆ ಚಟುವಟಿಕೆಗಳಿಗೆ ಪ್ರಯೋಜನವಾಗಲಿದೆ. ನರೇಗಾ ಯೋಜನೆಯಡಿ ಶೇ. 60ರಷ್ಟು ಅನುದಾನವನ್ನು ಕೃಷಿ, ರೇಷ್ಮೆ, ತೋಟಗಾರಿಕೆ, ಅರಣ್ಯೀಕರಣ ಚಟುವಟಿಕೆಗಳಿಗೆ ವಿನಿಯೋಗಿಸಬೇಕು. ಇಲ್ಲದಿದ್ದಲ್ಲಿ ಕೇಂದ್ರದಿಂದ ಬರುವ ಅನುದಾನವನ್ನು ಕಡಿತಗೊಳಿಸುವ ಸಾಧ್ಯತೆಯಿರುತ್ತದೆ ಎಂದು ತಿಳಿಸಿದರು.

      ನರೇಗಾ ಯೋಜನೆಯ ಪ್ರಗತಿ ಕುಂಠಿತವಾದಲ್ಲಿ ಸಿಬ್ಬಂದಿ ಕೊರತೆ, ಮತ್ತಿತರ ಸಬೂಬುಗಳನ್ನು ಹೇಳದೆ, ಇರುವ ಮಾನವ ಶಕ್ತಿಯನ್ನು ಬಳಸಿಕೊಂಡು ಪ್ರಗತಿ ಸಾಧಿಸಬೇಕು. ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಆದಾಯ, ನೀರಾವರಿ ಸೌಲಭ್ಯ, ಅಧಿಕ ಇಳುವರಿ ಲಾಭವಾಗುವಂತಹ ಕಾಮಗಾರಿಗಳನ್ನು ನಿರ್ಮಿಸಬೇಕಲ್ಲದೆ ವಾರ್ಷಿಕವಾಗಿ ಪ್ರತೀ ತಾಲ್ಲೂಕಿನಲ್ಲಿ ಅಂದಾಜು 2 ಕೋಟಿ ರೂ.ಗಳ ಅನುದಾನವನ್ನು ಖರ್ಚು ಮಾಡಬೇಕೆಂದರು.

      ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ನರೇಗಾ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲಾನಯನ ಅಭಿವೃದ್ಧಿ ಕಾಮಗಾರಿಗಳನ್ನು ಈಗಾಗಲೇ ಜಿಲ್ಲೆಯ ಚಿಕ್ಕನಾಯನಕಹಳ್ಳಿ ಹಾಗೂ ಗುಬ್ಬಿ ತಾಲ್ಲೂಕಿನಲ್ಲಿ ನಿರ್ಮಿಸಲಾಗಿದ್ದು, ಜಿ.ಪಂ.ಯ ಸಮನ್ವಯ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಿದರೆ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯ. ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾದಲ್ಲಿ ಮುಂದೆ ಬರ ಪರಿಸ್ಥಿತಿ ಬಂದರೆ ಎದುರಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ಜಿಲ್ಲೆಯ ರೈತರ ಸಂಕಷ್ಟವನ್ನು ಅರಿತು ಇಚ್ಛಾಶಕ್ತಿಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಿದಲ್ಲಿ ಮಾತ್ರ ಅಭಿವೃದ್ಧಿ ಕಾಣಬಹುದೆಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಹಾಗೂ ಮತ್ತಿತರ ಇಲಾಖೆಗಳು ಅಧಿಕಾರಿಗಳು ನರೇಗಾ ಯೋಜನೆಯ ಪ್ರಗತಿ ಕುರಿತು ಪಿಪಿಟಿ ಪ್ರದರ್ಶನ ನೀಡಿದರು.

     ಈ ಸಂದರ್ಭದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ, ಜಿ.ಪಂ. ಉಪಕಾರ್ಯದರ್ಶಿ(ಅಭಿವೃದ್ಧಿ) ಮಹಾಂಕಾಳಪ್ಪ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

(Visited 20 times, 1 visits today)
Previous Articleಮಂಡ್ಯ : ನಾಲೆಗೆ ಉರುಳಿದ ಬಸ್, 30 ಜನರ ಜಲಸಮಾಧಿ
Next Article ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತೀ.ನಂ.ಶ್ರೀ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಒತ್ತಾಯ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

November 13, 2025 2:43 pm

ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ

November 13, 2025 2:33 pm
ಇತರೆ ಸುದ್ಧಿಗಳು

ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು

November 13, 2025 2:29 pm
ಇತರೆ ಸುದ್ಧಿಗಳು

ಬಡವರ್ಗದವರ ಏಳ್ಗೆಗಾಗಿ ಶ್ರಮಿಸುತ್ತೆನೆ: ಕೆಎನ್‌ಆರ್

November 13, 2025 2:27 pm
ಇತರೆ ಸುದ್ಧಿಗಳು

ನ.೧೬ರಿಂದ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ

November 13, 2025 2:03 pm
ಇತರೆ ಸುದ್ಧಿಗಳು

ಕನ್ನಡ ಭಾಷಾಪ್ರೇಮ, ನಾಡಪ್ರೇಮ ಮಾತಿನಲ್ಲಿ ತಿಳಿಸುವಂತದಲ್ಲ

November 13, 2025 1:54 pm
Our Youtube Channel
Our Picks

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

November 13, 2025 2:43 pm

ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ

November 13, 2025 2:33 pm

ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು

November 13, 2025 2:29 pm

ಬಡವರ್ಗದವರ ಏಳ್ಗೆಗಾಗಿ ಶ್ರಮಿಸುತ್ತೆನೆ: ಕೆಎನ್‌ಆರ್

November 13, 2025 2:27 pm

ನ.೧೬ರಿಂದ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ

November 13, 2025 2:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

By News Desk BenkiyabaleNovember 13, 2025 2:43 pm

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಚೌಡನಕುಪ್ಪೆ ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಒ ಕಾರಣದಿಂದ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು…

ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ

November 13, 2025 2:33 pm

ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು

November 13, 2025 2:29 pm

ಬಡವರ್ಗದವರ ಏಳ್ಗೆಗಾಗಿ ಶ್ರಮಿಸುತ್ತೆನೆ: ಕೆಎನ್‌ಆರ್

November 13, 2025 2:27 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.