BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತೀ.ನಂ.ಶ್ರೀ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಒತ್ತಾಯ
ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತೀ.ನಂ.ಶ್ರೀ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಒತ್ತಾಯ

By News Desk BenkiyabaleUpdated:November 24, 2018 4:26 pm

ಚಿಕ್ಕನಾಯಕನಹಳ್ಳಿ :

      ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತೀ.ನಂ.ಶ್ರೀ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.
      ಪಟ್ಟಣದಲ್ಲಿ ತೀ.ನಂ.ಶ್ರೀ 113ನೇ ಜನ್ಮದಿನಾಚರಣೆ ಅಂಗವಾಗಿ ಆಚಾರ್ಯ ತೀ.ನಂ.ಶ್ರೀಕಂಠಯ್ಯನವರ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತೀ.ನಂ.ಶ್ರೀ ಗುರು ಪರಂಪರೆಯಲ್ಲಿ ಅದ್ವಿತೀಯ ನಾಯಕ ಹಾಗೂ ಚಿಂತಕ, ವಿದ್ವತ್ ಹಾಗೂ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡು ಸಮಕಾಲೀನ ವಿದ್ವಾಂಸರೊಂದಿಗೆ ವಿನಯತೆಯನ್ನು ಸಾರಿದ ವ್ಯಕ್ತಿ, ತೀ.ನಂ.ಶ್ರೀಯವರ ಕಾವ್ಯಮೀಮಾಂಸೆ ಸಾಹಿತ್ಯದ ಅಧ್ಯಯನಕ್ಕೆ ಭದ್ರ ಬುನಾದಿ ಹಾಕಿದೆ, ಬಿ.ಎಲ್.ಎನ್.ಎನ್, ಬಿ.ಎಂ.ಶ್ರೀ ಮುಂತಾದವರ ಸಾಲಿನಲ್ಲಿ ತೀ.ನಂ.ಶ್ರೀಯವರ ಕಾವ್ಯ ಹೆಚ್ಚು ವಿಶಿಷ್ಠತೆಯನ್ನು ಮೆರೆದಿದೆ.

      ಮರೆಯಾಗುತ್ತಿರುವ ಮಾನವೀಯ ಮೌಲ್ಯಗಳ ನಡುವೆ ತೀ.ನಂ.ಶ್ರೀಯವರ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ಆದರ್ಶ, ತಾಲ್ಲೂಕಿನಲ್ಲಿ ನಿರ್ಮಾಣವಾಗಿರುವ ತೀ.ನಂ.ಶ್ರೀ ಭವನ ಒಂದು ಸಾಂಸ್ಕøತಿಕ ಚಟುವಟಿಕೆಗಳ ಕೇಂದ್ರವಾಗಲಿ, ಶೈಕ್ಷಣಿಕವಾಗಿ ತೀ.ನಂ.ಶ್ರೀ ವಿಚಾರಗಳ ಕುರಿತು ಸಂಶೋಧನೆಗಳಾಗಲಿ ಎಂದು ಆಶಿಸಿದ ಅವರು, ತೀ.ನಂ.ಶ್ರೀ ಅಧ್ಯಯನ ಪೀಠದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು, ತೀ.ನಂ.ಶ್ರೀ ಸಭಾಂಗಣ ಸಾಹಿತ್ಯ ಸಾಂಸ್ಕøತಿಕ ವೇದಿಕೆಯಾಗಬೇಕು ಎಂದರು.

      ಅಧ್ಯಯನ ಕೇಂದ್ರ ಸ್ಥಾಪಿಸಿದರೆ ಅವರ ಜೀವನ ಚರಿತ್ರೆ ಹಾಗೂ ಹಿಂದಿನ ಗುರು ಪರಂಪರೆ ಹಾಗೂ ಶಿಷ್ಯ ಪರಂಪರೆಯಲ್ಲಿ ಅನೇಕ ಸಾಹಿತಿಗಳು ಬೆಳೆದು ಬಂದಿದ್ದು ತಿಳಿಸಬಹುದು, ತೀ.ನಂ.ಶ್ರೀರವರು 3 ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರು, ಕನ್ನಡ, ಸಂಸ್ಕøತ, ಇಂಗ್ಲೀಷ್‍ನಲ್ಲಿ ಪಾಂಡಿತ್ಯ ಹೊಂದಿದ್ದರಿಂದ ತೀ.ನಂ.ಶ್ರೀಯವರ ಕಾವ್ಯ ಸಮೀಕ್ಷೆ ಪುಸ್ತಕದಲ್ಲಿ ಕಾಳಿದಾಸ ಹಾಗೂ ಕವಿ ರನ್ನ, ಕುಮಾರವ್ಯಾಸ, ಅಕ್ಕಮಹಾದೇವಿಯವರ ಕಾವ್ಯಗಳು ಚರ್ಚಿತವಾಗಿವೆ ಇದರಲ್ಲಿ ತೀ.ನಂ.ಶ್ರೀರವರ ವಿದ್ವತ್ತನ್ನು ಕಾಣಬಹುದು ಎಂದರು.
ತೀ.ನಂ.ಶ್ರೀಯವರಿಗೆ ಎ.ಎನ್.ಮೂರ್ತಿರಾವ್, ಡಿ.ಎಲ್.ನರಸಿಂಹಚಾರ್, ಜಿ.ಹನುಮಮತರಾವ್, ಶಿವರಾಮಶಾಸ್ತ್ರಿಗಳ ಒಡನಾಟವಿತ್ತು, ಕನ್ನಡ, ಇಂಗ್ಲೀಷ್ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಅನೇಕ ಪ್ರತಿಭಾವಂತರು ತೀ.ನಂ.ಶ್ರೀಯವರಿಗೆ ವಿದ್ಯಾರ್ಥಿಗಳಾಗಿದ್ದರು, ಇವರ ಪಾಠ, ಪ್ರವಚನದಲ್ಲಿ ಅವರ ಶಿಷ್ಯರು ಅಪಾರ ಆಸಕ್ತಿಯನ್ನು ತೋರಿಸುತ್ತಿದ್ದರು, ತೀ.ನಂ.ಶ್ರೀಯವರ ಕೆಲವು ಅಮೂಲ್ಯವಾದ ಸಂಶೋಧನೆಗಳು ನಡೆದು ಕೆಲವು ಕೃತಿಗಳು ಲೇಖನಗಳಾಗಿ ಮೂಡಿ ಬರಲು ಸಾಧ್ಯವಾಯಿತು, ತೀ.ನಂ.ಶ್ರೀಯವರು ಓದುತ್ತಿದ್ದರು ಆದರೆ ಬರಹ ಕಡಿಮೆ ಇತ್ತು, ಇವರು ಬರೆಯುವ ಮುನ್ನ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತಿದ್ದರು ಎಂದರು.

      ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ನಮ್ಮ ಕುಟುಂಬದಲ್ಲಿ ತೀ.ನಂ.ಶ್ರೀಗಳ ಬಗ್ಗೆ ಮಾತನಾಡುತ್ತಿದ್ದರು, ತೀ.ನಂ.ಶ್ರೀ ಭವನಕ್ಕೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 1.5ಕೋಟಿ ಹಣ ಬಿಡುಗಡೆ ಮಾಡಿದ್ದರು, ನವಂಬರ್ 26ರಂದು ಕನಕ ಜಯಂತಿ ಕಾರ್ಯಕ್ರಮ ಇರುವುದರಿಂದ ಎರಡು ದಿನ ಮುಂಚಿತವಾಗಿ ತೀ.ನಂ.ಶ್ರೀ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದೇವೆ, ತೀ.ನಂ.ಶ್ರೀ ಸಭಾಭವನಕ್ಕೆ 85ಲಕ್ಷ ರೂ ಮಂಜೂರಾಗಿ ಇನ್ನೂ 75ಲಕ್ಷ ರೂಪಾಯಿ ಬೇಕಾಗಿದೆ, ತೀ.ನಂ.ಶ್ರೀ ಸಭಾಂಗಣದಲ್ಲಿ ತಾಲ್ಲೂಕಿನ ಕೇಂದ್ರದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದರೆ ಪಟ್ಟಣದಲ್ಲಿ ಹೆಚ್ಚು ಹೆಸರು ಬರುತ್ತದೆ ಎಂದರು.

      ನಿವೃತ್ತ ಪ್ರಾಧ್ಯಾಪಕ ಟಿ.ಎಸ್.ನಾಗಭೂಷಣ್ ಮಾತನಾಡಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ನವೋದಯ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತೀ.ನಂ.ಶ್ರೀ ಹೆಸರಿನಲ್ಲಿ ಪ್ರತಿ ಕಾಲೇಜಿಗೆ 10ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷ ನೀಡಲಾಗುವುದು ಎಂದು ತೀ.ನಂ.ಶ್ರೀಯವರ ಮಗ ಭರವಸೆ ನೀಡಿದರು.

      ಸಂಸ್ಕøತಿ ಚಿಂತಕ ಡಾ.ಡಿ.ಆರ್.ನಾಗೇಶ್ ಆಚಾರ್ಯ ತೀ.ನಂ.ಶ್ರೀ ಪುಸ್ತಕ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ತೀ.ನಂ.ಶಂಕರನಾರಾಯಣ, ಸಾಹಿತಿ ಎಂ.ವಿ.ನಾಗರಾಜ್‍ರಾವ್, ಕಸಾಪ ಅಧ್ಯಕ್ಷೆ ಎನ್.ಇಂದಿರಮ್ಮ, ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ, ಉಪನ್ಯಾಸಕ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

 

(Visited 38 times, 1 visits today)
Previous Articleಜಲಾನಯನ ಅಭಿವೃದ್ಧಿ ಕಾಮಗಾರಿಗಳನ್ನು ನರೇಗ ಯೋಜನೆಯಡಿ ಕೈಗೊಳ್ಳಲು ನಿರ್ದೇಶನ
Next Article ಕನ್ನಡ ಶಾಲೆಗಳ ರಕ್ಷಣೆಗೆ ಒತ್ತಾಯ : ಸಾಹಿತಿ ಕವಿತಾಕೃಷ್ಣ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.