BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್
  • ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
  • ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಜಿಲ್ಲೆಯಲ್ಲಿ ರೆಡ್‍ಜೋನ್ ಸಂಖ್ಯೆ ಇಳಿಕೆ!!
Trending

ತುಮಕೂರು : ಜಿಲ್ಲೆಯಲ್ಲಿ ರೆಡ್‍ಜೋನ್ ಸಂಖ್ಯೆ ಇಳಿಕೆ!!

By News Desk BenkiyabaleUpdated:June 03, 2021 6:04 pm

ತುಮಕೂರು:

     ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ 50 ರೆಡ್ ಜೋನ್ ಸಂಖ್ಯೆ ಕಡಿಮೆಯಾಗಿದೆ. ಮೇ.25ರಂದು 76 ಇದ್ದ ರೆಡ್ ಜೋನ್‍ಗಳ ಸಂಖ್ಯೆ ಜೂನ್ 2ರಂದು 27ಕ್ಕೆ ಇಳಿದಿದೆ. ಅದರಂತೆಯೇ ಹಾಟ್ ಸ್ಪಾಟ್‍ಗಳ ಸಂಖ್ಯೆಯೂ ಸಹ 240 ರಿಂದ 123ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

ಅದೇ ರೀತಿ ಶೇ.48ರಷ್ಟಿದ್ದ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ. 17ಕ್ಕೆ ಇಳಿದಿದ್ದು, 2500 ರಿಂದ 3000ದವರೆಗೆ ದೃಢವಾಗುತ್ತಿದ್ದ ಸೋಂಕಿನ ಪ್ರಕರಣಗಳ ಸಂಖ್ಯೆಯೂ 750-850ಕ್ಕೆ ಇಳಿದಿದೆ. ಪಾಸಿಟಿವಿಟಿ ಪ್ರಮಾಣ ಮತ್ತಷ್ಟು ಇಳಿಕೆಯಾಗಲಿದೆ.

      ಗ್ರಾಮೀಣ ಭಾಗದಲ್ಲಿಯೂ ಸೋಂಕಿನ ಪ್ರಮಾಣ ತಗ್ಗಿದ್ದು, ಮೇ.25ರಂದು ಒಂದೂ ಪ್ರಕರಣವಿಲ್ಲದ 810 ಹಳ್ಳಿಗಳಿದ್ದವು. ಆದರೆ ಜೂ.2ಕ್ಕೆ 1242 ಹಳ್ಳಿಗಳಲ್ಲಿ ಸೋಂಕಿನ ಪ್ರಕರಣಗಳೇ ಇಲ್ಲ. ಒಂದೇ ಒಂದು ಸೋಂಕಿನ ಪ್ರಕರಣವಿರುವ 503 ಗ್ರಾಮಗಳಿವೆ.

ಕೋವಿಡ್ ಪರೀಕ್ಷೆ ಹೆಚ್ಚಳ:

      ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನಗಳಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು. ಸೋಂಕು ದೃಢಪಟ್ಟವರಿಗೆ ತಕ್ಷಣವೇ ಕೋವಿಡ್ ಔಷಧ ಕಿಟ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿ ನೀಡುವ ಔಷಧಗಳನ್ನು ಹೊರತುಪಡಿಸಿ ಈಗಾಗಲೇ 35 ಸಾವಿರ ಮೆಡಿಸನ್ ಕಿಟ್ ಸಿದ್ಧಪಡಿಸಿ 31 ಸಾವಿರ ಕಿಟ್ ವಿತರಣೆ ಮಾಡಿದ್ದೇವೆ. ಅದೇ ರೀತಿಯಲ್ಲಿಯೇ ವಿವಿಧ ದಾನಿಗಳೂ ಸಹಿತ ಆಹಾರ ಕಿಟ್ ಗಳನ್ನು ಸೋಂಕಿತರಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಅವರವರ ಮಟ್ಟದಲ್ಲಿಯೇ ನೆರವು ನೀಡುತ್ತಿದ್ದು, ಅವರೆಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಸೋಂಕಿನ ಇಳಿಕೆಗೆ ಕಟ್ಟುನಿಟ್ಟಿನ ಕ್ರಮ:

      ಮುಂದಿನ ವಾರ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳು, ತಾಲೂಕು ಪಂಚಾಯಿತಿಯ ಆಡಳಿತಾಧಿಕಾರಿಗಳು ಸೇರಿದಂತೆ ಇತರೆ ಎಲ್ಲಾ ಅಧಿಕಾರಿಗಳ ಸೇವೆ ಉಪಯೋಗಿಸಿಕೊಂಡು ಸಂಪೂರ್ಣವಾಗಿ ಕೊರೋನಾ ನಿಯಂತ್ರಣಕ್ಕೆ ಪ್ರಯತ್ನ ಮಾಡಲಾಗುತ್ತಿದೆ.

ಲಸಿಕೆ ಸಮರ್ಪಕವಾಗಿ ವಿತರಣೆ:

      ಕೋವಿಡ್ ಲಸಿಕೆ ವಿತರಣೆ ಸಂಬಂಧ ಈಗಾಗಲೇ ಸಭೆ ನಡೆಸಿ, ಎಲ್ಲಾ ಪಿಎಚ್‍ಸಿ ವೈದ್ಯಾಧಿಕಾರಿ ತಾಲೂಕು ವೈದ್ಯಾಧಿಕಾರಿ, ತಹಸೀಲ್ದಾರ್, ತಾಲೂಕು ಪಂಚಾಯತಿ ಇಒ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರ್ಕಾರದಿಂದ ಪೂರೈಕೆಯಾಗುತ್ತಿರುವ ಲಸಿಕೆಯನ್ನು 45ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಅದರಂತೆಯೇ 18 ರಿಂದ 44 ವರ್ಷದೊಳಗಿನ ಪ್ರಿಯಾರಿಟಿ ಗುಂಪುಗಳಿಗೆ ಲಸಿಕೆ ಬಂದ ದಿನವೇ ಸಮರ್ಪಕ ಮಾಹಿತಿಯನ್ನು ಒದಗಿಸಿ ವಿತರಣೆ ಮಾಡಬೇಕೆಂದು ಸೂಚಿಸಿದ್ದು, ಅದರಂತೆ ಲಸಿಕಾಕರಣ ನಡೆಯುತ್ತಿದೆ. ಸರ್ಕಾರದಿಂದ ಬರುವ ಲಸಿಕೆಯನ್ನು ಸರಿಯಾದ ರೀತಿಯಲ್ಲಿ ವಿತರಣೆ ಮಾಡಲು ಸೂಕ್ತ ಕ್ರಮ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ. 51ರಷ್ಟು ಲಸಿಕೆ ನೀಡಲಾಗಿದೆ. ಅಂತೆಯೇ 18 ರಿಂದ 44 ವರ್ಷದೊಳಗಿನ ಪ್ರಿಯಾರಿಟಿ ಗುಂಪುಗಳ 24ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ.

ಮತದಾನ ಗುರುತಿನ ಚೀಟಿ ನೆರವಿನಿಂದ ಲಸಿಕೆಯ ಸಮರ್ಪಕ ವಿತರಣೆ:

      ಗ್ರಾಮ ಮಟ್ಟದಲ್ಲಿ ಲಸಿಕಾ ವಿತರಣೆಗೆ ಗ್ರಾಮಲೆಕ್ಕಿಗ ಮತ್ತು ಪಿಡಿಒಗಳನ್ನು ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲಸಿಕೆ ಪೂರೈಕೆಯಾದಾಗ ವಿತರಣೆಗೆ ಸಂಬಂಧಿಸಿದ ಮಾಹಿತಿಯನ್ನು ಗ್ರಾಮದ ಜನರಿಗೆ ತಲುಪಿಸಬೇಕು. ಮಾಹಿತಿ ಮತ್ತು ಲಸಿಕೆ ಆಧಾರದ ಮೇಲೆ ಆಶಾ ಕಾರ್ಯಕರ್ತೆಯರು ಅμÉ್ಟೀ ಪ್ರಮಾಣದ ಜನರನ್ನು ಲಸಿಕೆ ಹಾಕಿಸಲು ಕರೆತರಬೇಕು. ಇದಲ್ಲದೆ, ಗ್ರಾಮಲೆಕ್ಕಿಗರು ಪ್ರತಿ ಗ್ರಾಮದ ಪ್ರತಿಯೊಬ್ಬರ ಮತದಾನದ ಗುರುತಿನ ಚೀಟಿ ಮಾಹಿತಿ ಇಟ್ಟುಕೊಂಡು ಲಸಿಕೆ ಯಾರಿಗೆ ನೀಡಿಲ್ಲ, ಯಾರಿಗೆ ನೀಡಲಾಗಿದೆ ಎಂಬುದನ್ನು ಗುರುತು(ಮಾರ್ಕ್) ಮಾಡಿಕೊಳ್ಳಬೇಕು.ಯಾರು ಲಸಿಕೆ ಪಡೆದಿಲ್ಲವೋ ಅವರ ಮಾಹಿತಿಯನ್ನು ಆಶಾ ಕಾರ್ಯಕರ್ತೆಯರಿಗೆ ಒದಗಿಸಬೇಕು. ಈ ಮಾಹಿತಿ ಆಧಾರದಲ್ಲಿ ಲಸಿಕೆ ಲಭ್ಯವಿದ್ದಾಗ ಲಸಿಕೆ ಪಡೆಯದವರಿಗೆ ಆಶಾ ಕಾರ್ಯಕರ್ತೆಯರು ಲಸಿಕೆ ಹಾಕಿಸಬೇಕು ಎಂದು ಸೂಚಿಸಲಾಗಿದೆ. ಅಂತೆಯೇ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪಾಲಿಕೆ ಆಯುಕ್ತರು, ಚೀಫ್ ಆಫಿಸರ್, ಬಿಲ್ ಕಲೆಕ್ಟರ್ ಸೇರಿದಂತೆ ವಿವಿಧ ಸಿಬ್ಬಂದಿಗಳನ್ನು ಬಳಸಿಕೊಂಡು ಹೆಚ್ಚು ಜಾಗೃತಿ ಮೂಡಿಸಿ ಲಸಿಕೆ ನೀಡಲಾಗುತ್ತಿದೆ.

       ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ 751243 ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಈಗಾಗಲೇ 384908 ಜನರಿಗೆ ಲಸಿಕೆ ನೀಡಲಾಗಿದೆ. ಇದಲ್ಲದೆ ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಇತರೆ ಸಿಬ್ಬಂದಿಗಳಿಗೆ 450808 ಮೊದಲನೇ ಡೋಸ್ ಮತ್ತು 115215 ಎರಡನೇ ಡೋಸ್ ಸೇರಿದಂತೆ ಒಟ್ಟು 566023 ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 

(Visited 5 times, 1 visits today)
Previous Articleವಿಶ್ವ ಪರಿಸರ ದಿನ: ರೈತರ ಜಮೀನಿನಲ್ಲಿ ಗಿಡ ನೆಡಲು ಸಿಇಓ ಸೂಚನೆ
Next Article ಚಲನಚಿತ್ರಗಳು ಪೈಪೋಟಿ ನೀಡಲು ಡಬ್ಬಿಂಗ್ ಅಗತ್ಯ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm
ಇತರೆ ಸುದ್ಧಿಗಳು

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
Our Youtube Channel
Our Picks

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

By News Desk BenkiyabaleAugust 09, 2025 2:01 pm

ತುಮಕೂರು: ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ…

ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ

August 09, 2025 1:59 pm

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.