BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ
  • ‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’
  • ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್
  • ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ
  • ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ
  • ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ
  • ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ
  • ತಿರುಪತಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ಗೆ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ರಚಿಸದ ಸಾಹಿತ್ಯ ಪ್ರಕಾರವಿಲ್ಲ: ಸಾಹಿತಿ ಡಾ.ದೊಡ್ಡರಂಗೇಗೌಡ
Trending

ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ರಚಿಸದ ಸಾಹಿತ್ಯ ಪ್ರಕಾರವಿಲ್ಲ: ಸಾಹಿತಿ ಡಾ.ದೊಡ್ಡರಂಗೇಗೌಡ

By News Desk BenkiyabaleUpdated:December 30, 2021 5:11 pm

 ತುಮಕೂರು :

     ಆಡು ಮುಟ್ಟದ ಸೊಪ್ಪಿಲ್ಲ, ಕುವೆಂಪು ರಚಿಸದ ಸಾಹಿತ್ಯ ಪ್ರಕಾರವಿಲ್ಲ ಎಂದು ಕವಿ, ಚಿತ್ರ ಸಾಹಿತಿ ಹಾಗೂ ನಿಯೋಜಿತ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ ನುಡಿದರು.

      ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ, ಕುವೆಂಪು ಜಯಂತಿ, ಅಭಿನಂದನಾ ಸಮಾರಂಭ ಹಾಗೂ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನಕ್ಕೆ ಮತ್ತೊಂದು ಹೆಸರೇ ಕುವೆಂಪು. ಅವರು ತಮ್ಮ ಜ್ಞಾನದಿಂದ ವಸ್ತು-ವಿಷಯದ ನಿಜವಾದ ಸಾರಸಂಗ್ರಹವನ್ನು ಸಮರ್ಥವಾಗಿ ಬಣ್ಣಿಸುವ ಶಕ್ತಿ ಹೊಂದಿದ್ದರು. ಆದ್ದರಿಂದಲೇ ಅವರೊಬ್ಬ ವಾಗ್ದೇವಿಯ ಶಬ್ದ ಭಂಡಾರವನ್ನು ಸೂರೆಗೈದ ಕನ್ನಡದ ಏಕೈಕ ಮೇರು ಕವಿ ಎಂದರಲ್ಲದೆ, ಕನ್ನಡದ ಮತ್ತೋರ್ವ ಸಾಹಿತ್ಯ ಶ್ರೇಷ್ಠ ವರಕವಿ ದ.ರಾ.ಬೇಂದ್ರೆಯವರು ಕುವೆಂಪು ಅವರನ್ನು ಯುಗದ ಕವಿ, ಜಗದ ಕವಿ ಎಂದು ಬಣ್ಣಿಸಿದ್ದಾರೆಂಬುದನ್ನು ಸ್ಮರಿಸಿದರು.

      ಕನ್ನಡ ಸಾಹಿತ್ಯ ಕ್ಷೇತ್ರಕಂಡ ಕವಿ ರತ್ನ ಕುವೆಂಪು. ಅವರು ಹಸಿರೇ ಉಸಿರೆಂದು ನಂಬಿದ್ದವರು. ಅವರ ಪ್ರಕೃತಿ ಆರಾಧನೆಯನ್ನು ಅವರ ಸಾಹಿತ್ಯದಲ್ಲಿ ಕಾಣಬಹುದಾಗಿದೆ. ಕಾರ್ಯಕ್ರಮಗಳಲ್ಲಿ ಹಾರ, ಶಾಲುಗಳಿಗೆ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡುವ ಪ್ರವೃತ್ತಿ ಬೆಳೆಯಬೇಕು. ಕುವೆಂಪು ಅವರಂತೆಯೇ ಸಾಹಿತ್ಯವನ್ನು ಬೆಳೆಸುವ ಕಾರ್ಯಗಳಾಗಬೇಕು ಎಂದು ತಿಳಿಸಿದರು.

      ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ ಮಾತನಾಡಿ, ಜೀವನದಲ್ಲಿ ಗುರಿ ತಲುಪಲು ಗುರು ಇರಬೇಕು. ಕುವೆಂಪು ಅವರಿಗೆ ಸ್ವಾಮಿ ರಾಮಕೃಷ್ಣ ಪರಮಹಂಸರು ಹಾಗೂ ಸ್ವಾಮಿ ವಿವೇಕಾನಂದರು ಗುರುಗಳಾಗಿದ್ದರು. ಪ್ರಕೃತಿ ಮತ್ತು ಆಧ್ಯಾತ್ಮ ಕುವೆಂಪು ಅವರ ಸಾಹಿತ್ಯದ ಎರಡು ಕಣ್ಣುಗಳಾಗಿದ್ದವು ಎಂದು ತಿಳಿಸಿದರಲ್ಲದೆ, ಕಸಾಪ ಚುನಾವಣೆ ರಾಜಕೀಯ ಚುನಾವಣೆಯಂತಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ನಿಂತ 20 ಜನರು ಠೇವಣಿಯನ್ನು ಕಳೆದುಕೊಂಡಿರುವುದು ಇದೇ ಮೊದಲು. ನಂಬಿಕೆಯಿಟ್ಟು ಮತ ನೀಡಿದವರ ವಿಶ್ವಾಸ ಉಳಿಸಿಕೊಂಡು ಹೋಗುವ ಕೆಲಸ ಮಾಡಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಪರಿಷತ್ತನ್ನಾಗಿ ಮಾಡಲಾಗುವುದು ಎಂದರು.

      ಸಾಹಿತಿ ವಿದ್ಯಾವಾಚಸ್ಪತಿ ಡಾ.ಕವಿತಾಕೃಷ್ಣ ಕನ್ನಡ ನಾಡು ನುಡಿಗಾಗಿ ಶ್ರಮಿಸಿದವರ ಬಗ್ಗೆ ಅಭಿನಂದನಾ ನುಡಿಗಳನ್ನಾಡುತ್ತಾ, ಇತಿಹಾಸಗಳಲ್ಲಿ ಓದಿರುವಂತೆ ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರಾಯರ ಅವಧಿಯಲ್ಲಿ ಕನ್ನಡ ಸಾಹಿತ್ಯದ ಕಂಪು ದೇಶಾದ್ಯಂತ ಪಸರಿಸಿತ್ತು. ಅಂದಿಗೆ ಅವರನ್ನು ಕರ್ನಾಟಕ ರಾಜ್ಯ ರಮಾರಮಣ ಎಂದೂ ಬಣ್ಣಿಸಲಾಗುತ್ತಿತ್ತು. ನಂತರ ಮೈಸೂರಿನ ಕೃಷ್ಣರಾಜ ಒಡೆಯರ್ ಅವರ ಕಾಲಘಟ್ಟದಲ್ಲಿ ರಾಜ್ಯ ಸಾಹಿತ್ಯದ ಜೊತೆಗೆ ಸಾಂಸ್ಕøತಿಕ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿಯೂ ಉನ್ನತ ಸ್ಥಾನದಲ್ಲಿತ್ತು. ಮಾನವೀಯತೆಯ ಮಂದಾರವಾಗಿದ್ದ ಒಡೆಯರ್ ರೈತರಿಗಾಗಿ ಇಂದಿನ ಕೃಷ್ಣ ರಾಜ ಸಾಗರ ಅಣೆಕಟ್ಟು, ಮೈಸೂರು ವಿಶ್ವ ವಿದ್ಯಾಲಯ, ಮೈಸೂರು ಬ್ಯಾಂಕ್, ಭದ್ರಾವತಿ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ, ಗಂಧದೆಣ್ಣೆ ಕಾರ್ಖಾನೆ, ಕಾಗದದ ಕಾರ್ಖಾನೆ, ವಾಣಿ ವಿಲಾಸ ಸಾಗರ ಅಣೆಕಟ್ಟು, ತುಮಕೂರು ಜಿಲ್ಲೆಯಲ್ಲಿ ಮಾರ್ಕೋನಳ್ಳಿ ಅಣೆಕಟ್ಟು ಹೀಗೆ ಕೃಷಿ, ಕೈಗಾರಿಕೆ, ಕಲೆ, ಸಂಗೀತ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಮಾಡಿದರು ಎಂದು ತಿಳಿಸಿದರು.

      ಕನ್ನಡ ಸಾಹಿತ್ಯವನ್ನು ಪರಿಷತ್ತಿನ ಮೂಲಕ ಹಿಮದ ಗಡಿಯಿಂದ ಕಡಲ ತಡಿಯವರೆಗೂ ಶ್ರೀಗಂಧದಂತೆ ಕನ್ನಡವನ್ನು ಮತ್ತಷ್ಟು ಪಸರಿಸುವ ಕೆಲಸ ಮಾಡುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಪುರಸ್ಕøತ ಡಾ. ಮಹೇಶ್ ಜೋಷಿ ಹಾಗೂ ಚಿತ್ರ ಸಾಹಿತ್ಯದ ಮೂಲಕ ಕನ್ನಡ ನಾಡಿನ ಮನೆ-ಮನಗಳಲ್ಲಿರುವ ನಮ್ಮ ಜಿಲ್ಲೆಯವರೇ ಆಗಿರುವಂತಹ ಪದ್ಮಶ್ರೀ ಪುರಸ್ಕøತ ಡಾ.ದೊಡ್ಡರಂಗೇಗೌಡ ಅವರನ್ನು ಅಭಿನಂದಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಮಾತನಾಡಿ, ಕನ್ನಡ ನಾಡು ರಂಗಭೂಮಿಯ ಜೊತೆಗೆ ಸಾಹಿತ್ಯವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದೆ. ಜಿಲ್ಲೆಗೆ ಕೀರ್ತಿ ತರುವಂತಹ ನವ ಲೇಖಕರು, ಸಾಹಿತಿಗಳು ಹುಟ್ಟಿಕೊಳ್ಳುತ್ತಿದ್ದು, ಅಂತಹವರನ್ನು ಗಟ್ಟಿಗೊಳಿಸುವ ಕಾರ್ಯವನ್ನು ಪರಿಷತ್ತು ಮಾಡಬೇಕಾಗಿದೆ ಎಂದರು.

     ಯಾವುದೇ ಕಾಲಘಟ್ಟವಾದರೂ ಅದಕ್ಕೆ ಚಲನಶೀಲತೆ ಎನ್ನುವುದು ಬಹಳ ಮುಖ್ಯ. ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಪರಿಷತ್ತಿನ ಕೆಲವು ಸದಸ್ಯರಲ್ಲಿ ಸಂಘಟನೆ ಕಡಿಮೆಯಾಗುತ್ತಿದೆ. ಇತಿಹಾಸದಲ್ಲಿ ಮುಚ್ಚಿಹೋಗಿರುವಂತಹ ಸಾಹಿತ್ಯದ ಎಷ್ಟೋ ವಿಷಯಗಳನ್ನು ಮುನ್ನೆಲೆಗೆ ತರುವಂತಹ ಕೆಲಸವಾಗಬೇಕು. ಪರಿಷತ್ತಿನ ಕಚೇರಿಗಳಿಲ್ಲದ ಜಿಲ್ಲೆ/ತಾಲ್ಲೂಕುಗಳಲ್ಲಿ ನಿವೇಶನ ಅಥವಾ ಕಟ್ಟಡವನ್ನು ನಿರ್ಮಿಸಿ ಕೊಡಬೇಕೆಂದು ತಿಳಿಸಿದರು.

      ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ, ಕನ್ನಡದ ಅಗ್ರಮಾನ್ಯ ಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಅವರ ದೈನಂದಿನ ಚಟುವಟಿಕೆ, ಕವಿಯಾಗಿ, ಸಾಮಾನ್ಯ ವ್ಯಕ್ತಿಯಾಗಿ ಅವರು ಮಾಡುತ್ತಿದ್ದ ಸಮಾಜಮುಖಿ ಕಾರ್ಯಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ವಿಶ್ವ ಮಾನವ ದಿನಾಚರಣೆಯನ್ನು ಸಾರ್ಥಕಗೊಳಿಸಬೇಕು ಎಂದರು.

      ಜಿಲ್ಲಾ ಮಟ್ಟದಲ್ಲಿ ಸ್ಥಾಪಿತವಾಗುವ ಸಾಹಿತ್ಯ ಪರಿಷತ್ತಿನ ಘಟಕಗಳು ಜಡತ್ವವನ್ನು ಬಿಟ್ಟು ಸದಾ ಚೈತನ್ಯಶೀಲವಾಗಿರಬೇಕು. ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿನ ಕಚೇರಿಗಳು ಇಲ್ಲದಿರುವ ಕಡೆಗಳಲ್ಲಿ ಸರ್ಕಾರಿ ಕಚೇರಿಗಳನ್ನೇ ಪರಿಷತ್ತಿನ ಚಟುವಟಿಕೆಗಳಿಗಾಗಿ ಬಿಟ್ಟುಕೊಡಲಾಗಿದೆ. ಕಟ್ಟಡ ಇಲ್ಲದಿರುವುದನ್ನೇ ಸವಾಲೆಂದು ನೋಡದೆ ಕನ್ನಡ ಭಾಷೆ, ನಾಡು-ನುಡಿಯ ಏಳ್ಗೆಗಾಗಿ ಮಾಡಬಹುದಾದಂತಹ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

     ಕಾರ್ಯಕ್ರಮದಲ್ಲಿ ಪರಿಷತ್ತಿನ ತಾಲೂಕು ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

 

(Visited 125 times, 1 visits today)
Previous Article ಚಿಕ್ಕನಾಯಕನಹಳ್ಳಿ : ವಿರಕ್ತಮಠಕ್ಕೆ ಭಕ್ತನಾಗಿ ಬಂದ ಎಸ್ಪಿ
Next Article ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ
News Desk Benkiyabale

Related Posts

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ

July 18, 2025 3:15 pm
ಇತರೆ ಸುದ್ಧಿಗಳು

‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’

July 18, 2025 3:13 pm
ಇತರೆ ಸುದ್ಧಿಗಳು

ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್

July 18, 2025 3:13 pm
ತುಮಕೂರು

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm
ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm
ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm
Our Youtube Channel
Our Picks

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ

July 18, 2025 3:15 pm

‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’

July 18, 2025 3:13 pm

ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್

July 18, 2025 3:13 pm

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ

July 18, 2025 3:15 pm

‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’

July 18, 2025 3:13 pm

ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್

July 18, 2025 3:13 pm

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ

By News Desk BenkiyabaleJuly 18, 2025 3:15 pm

ಪಾವಗಡ: ಪಾವಗಡದ ಜನರ ದಹ ನೀಗಿಸಿದ ಭಗೀರಥ ಸಿಎಂ ಸಿದ್ದರಾಮಯ್ಯನವರು ಎಂದು ಪಾವಗಡ ಶಾಸಕ ಹೆಚ್. ವಿ. ವೆಂಕಟೇಶ್ ತಿಳಿಸಿದ್ದಾರೆ…

‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’

July 18, 2025 3:13 pm

ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್

July 18, 2025 3:13 pm

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.