BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
  • ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಪತ್ರಕರ್ತರು ಪತ್ರಿಕಾ ಮೌಲ್ಯಗಳಿಗೆ ಹೆಚ್ಚು ಒತ್ತು ಕೊಡಿ’ – ಬಿ.ಸುರೇಶ್‍ಗೌಡ
Trending

‘ಪತ್ರಕರ್ತರು ಪತ್ರಿಕಾ ಮೌಲ್ಯಗಳಿಗೆ ಹೆಚ್ಚು ಒತ್ತು ಕೊಡಿ’ – ಬಿ.ಸುರೇಶ್‍ಗೌಡ

By News Desk BenkiyabaleUpdated:March 12, 2022 7:00 pm

ತುಮಕೂರು :

ಪತ್ರಕರ್ತರು ಪತ್ರಿಕಾ ಮೌಲ್ಯಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಬಿ.ಸುರೇಶ್‍ಗೌಡ ತಿಳಿಸಿದರು.
ನಗರದ ಹೊರಪೇಟೆ ಮುಖ್ಯರಸ್ತೆಯಲ್ಲಿರುವ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಹಾಲ್‍ನಲ್ಲಿ “ಬೆಂಕಿಯ ಬಲೆ” ಕನ್ನಡ ದಿನಪತ್ರಿಕೆಯ 18 ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಕವಿಕಾವ್ಯ ಮೇಳ, ಪ್ರತಿಭಾ ಪುರಸ್ಕಾರ ಹಾಗೂ ಅನಾಥ, ಬಡ, ವಿಶೇಷ ಚೇತನ ಮಕ್ಕಳಿಗೆ ಉಚಿತ ವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇಂದಿನ ದಿನಗಳಲ್ಲಿ ಪತ್ರಿಕೆಗಳನ್ನು ನಡೆಸುವುದು ಅತ್ಯಂತ ಕಷ್ಟದಾಯಕ ಕೆಲಸವಾಗಿದೆ. ಆದರೂ ಸಹ ಸತ್ಯ, ವಸ್ತುನಿಷ್ಠ ಹಾಗೂ ಜನರಿಗೆ ಅಗತ್ಯವಿರುವ ಸುದ್ದಿಗಳನ್ನು ಬಿತ್ತರಿಸಲು ಪ್ರಯತ್ನಿಸಬೇಕು. ವೃತ್ತಿ ಜೀವನದಲ್ಲಿ ಕೇವಲ ನಕಾರಾತ್ಮಕ ವಿಷಯಗಳಿಗೆ ಆದ್ಯತೆ ನೀಡದೇ ಉತ್ತಮ ಕೆಲಸಗಳನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮಾತನಾಡಿ, ದೇಶ ಕಟ್ಟುವುದರಲ್ಲಿ ಪತ್ರಿಕೋದ್ಯಮದ ಜವಾಬ್ದಾರಿಯೂ ಪ್ರಮುಖ ಪಾತ್ರ ವಹಿಸಲಿದೆ. ಸಮಾಜದಲ್ಲಿ ನಡೆಯುವ ಹೆಚ್ಚು ಹೆಚ್ಚು ವಿಚಾರಗಳನ್ನು ಜನತೆಗೆ ತಿಳಿಸುವ ಮೂಲಕ ತನ್ನದೇ ಆದ ಸ್ವಾಯತ್ತತೆಯನ್ನು ಉಳಿಸಿಕೊಂಡಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಗುಬ್ಬಿ ತಾಲ್ಲೂಕು ಬೆಟ್ಟದಹಳ್ಳಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ, ಕವಿಗೋಷ್ಠಿಯಲ್ಲಿ ಅನೇಕ ಮಂದಿ ತಮ್ಮ ಕವಿತೆಗಳನ್ನು ವಾಚನ ಮಾಡಿದ್ದೀರಿ, ನಿಮ್ಮ ಕವಿತೆಗಳು ಅನೇಕರಿಗೆ ಜೀವನವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿರಬೇಕು ಕವಿತೆ ಬರೆಯುವವರಿಗೆ ಹೃದಯ ಶ್ರೀಮಂತಿಕೆ ಇರಬೇಕು ಎಂದು ನುಡಿದರು.


ತತ್ವಭರಿತ, ಸತ್ವಭರಿತ ಪದಗಳನ್ನು ಬಳಸಿದರೆ ಚಂದಸ್ಸು ತಾನಾಗಿಯೇ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಾಹಿತಿ ಹಾಗೂ ಮಹಿಳಾ ಹೋರಾಟಗಾರ್ತಿ ಡಾ.ಬಿ.ಸಿ.ಶೈಲಾನಾಗರಾಜ್ ಮಾತನಾಡಿ, ಪತ್ರಕರ್ತರು ಅವಸರದ ಸಾಹಿತಿಗಳು, ಅವಸರವಾಗಿ ಉತ್ತಮವಾಗಿ ಜನರಿಗೆ ವಿಷಯವನ್ನು ತಲುಪಿಸುವಂತಹ ಕಾರ್ಯ ಅವಸರ ಅವಸರವಾಗಿಯೇ ಮಾಡುತ್ತಾರೆ ಎಂದರು.
ಪತ್ರಕರ್ತರ ಕೆಲಸ ಸವಾಲಿನ ಕೆಲಸ, ಸಾಮಾಜಿಕವಾಗಿ ನ್ಯಾಯವನ್ನು ಕೊಡಿಸುವ ಜವಾಬ್ದಾರಿಯನ್ನು ಪತ್ರಕರ್ತರು ಹೊಂದಿರುತ್ತಾರೆ, ಇಂತಹುದರಲ್ಲಿ ಬೆಂಕಿಯಬಲೆ ಪತ್ರಿಕೆ ಪ್ರತಿ ವರ್ಷದಂತೆ ಈ ಭಾರಿಯೂ ವಾರ್ಷಿಕೋತ್ಸವದ ಮೂಲಕ ಸಾಮಾಜಿಕ ಕಾರ್ಯ ಮಾಡುತ್ತಿರುವ ಪತ್ರಿಕೆಯ ಸಂಪಾದಕ ಧನಂಜಯ ಅವರ ವೈಖರಿ ಮೆಚ್ಚುವಂತಹದ್ದು ಎಂದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ, ಜ್ಞಾನಕ್ಕಿಂತ ಶಕ್ತಿಶಾಲಿ ಅಸ್ತ್ರ ಇನ್ನೊಂದು ಇರುವುದಿಲ್ಲ. ಹಾಗಾಗಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಹೊಸತನ್ನು ತಿಳಿಯಲು ಯತ್ನಿಸಬೇಕು. ತಾವು ಮಾಡುವ ಸುದ್ದಿಗಳು ಸತ್ಯ ಮತ್ತು ನಿಷ್ಪಕ್ಷಪಾತತೆಯಿಂದ ಕೂಡಿರುವಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಹಾಗೂ ನಾಟಕಕಾರ ಎ.ಎನ್.ರಮೇಶ್‍ಗುಬ್ಬಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಕವಿಗಳನ್ನು ಕೇವಲ ಪ್ರೇಕ್ಷಕರನ್ನಾಗಿ ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದರು. ಕವಿಗೋಷ್ಠಿಯಲ್ಲಿ 330 ಕವಿತೆಗಳು ಬಂದಿದ್ದು, ಅದರಲ್ಲಿ 30 ಕವಿತೆಗಳನ್ನು ಆಯ್ಕೆ ಮಾಡಲಾಗಿತ್ತು, 30 ಕವಿತೆಗಳನ್ನು ಉತ್ತಮವಾಗಿ ಕವಿತೆ ರಚಿಸಿ, ವಾಚಿಸಿದ ಐವರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಹಾಗೂ ರಾಜ್ಯದ ವಿವಿಧ ಕಡೆಗಳಿಂದ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸ್ಮರಣಿಕೆ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಿ.ನಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಕಾರ್ಯದರ್ಶಿ ರಂಗಧಾಮಯ್ಯ, ನೂತನ ನಿರ್ದೇಶಕರಾದ ಟಿ.ಎಸ್.ಕೃಷ್ಣಮೂರ್ತಿ, ಪಿ.ಎಸ್.ಮಲ್ಲಿಕಾರ್ಜುನಸ್ವಾಮಿ ಕೊರಟಗೆರೆ ನರಸಿಂಹಮೂರ್ತಿ, ತುರುವೇಕೆರೆ ನಂದೀಶ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬೆಂಕಿಯ ಬಲೆ ಪತ್ರಿಕೆ ಸಂಪಾದಕ ಎ.ಎನ್.ಧನಂಜಯ, ಕಾಳಿದಾಸ ವಿದ್ಯಾವಧ್ಕ ಸಂಘದ ನೂತನ ಅಧ್ಯಕ್ಷ ಮೈಲಪ್ಪ, ನಾರಾಯಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 21 times, 1 visits today)
Previous Articleತುಮಕೂರು : 108 ಆ್ಯಂಬುಲೆನ್ಸ್: 24 x 7 ಕಾಲ ಸೇವೆ ಒದಗಿಸಲು ಸೂಚನೆ
Next Article ಸಿದ್ದಗಂಗಾ ಮಠದಲ್ಲಿ ಶ್ರಮದಾನ ಮತ್ತು ಸ್ಚಚ್ಛತಾ ಆಂದೋಲನ ಕಾರ್ಯಕ್ರಮ
News Desk Benkiyabale

Related Posts

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm news
ತಾಜಾ ಸುದ್ಧಿಗಳು
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm
news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
news

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
Our Youtube Channel
Our Picks

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

By News Desk BenkiyabaleAugust 24, 2026 5:49 pm

ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ – ಶಿಸ್ತು ಅಗತ್ಯ. ಕೆಲಸ ಮಾಡುವಾಗ ಸಣ್ಣಪುಟ್ಟ ತಪುö್ಪಗಳು ಆಗುವುದು ಸಹಜ. ಆದರೆ,…

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.