BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ
  • ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ
  • ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ
  • ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ
  • ತಿರುಪತಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ಗೆ ಚಾಲನೆ
  • ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಡೀಸಿ ಸೂಚನೆ
  • ೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿ
  • ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಕಾಲ ಸೇವೆ : ತುಮಕೂರಿಗೆ 2ನೇ ಸ್ಥಾನ!!
Trending

ಸಕಾಲ ಸೇವೆ : ತುಮಕೂರಿಗೆ 2ನೇ ಸ್ಥಾನ!!

By News Desk BenkiyabaleUpdated:April 04, 2022 6:35 pm

      ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯಡಿ ಸೇವೆ ನೀಡುವಲ್ಲಿ ತುಮಕೂರು ಜಿಲ್ಲೆ 2ನೇ ಸ್ಥಾನ ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಸ್ವೀಕಾರ:

      ನಾಗರಿಕರ ಸೇವೆಗೆ ಸಾರ್ಥಕತೆ ತಂದ ಸಕಾಲ ಸೇವೆ ಜಾರಿಗೆ ಬಂದು 2022ರ ಏಪ್ರಿಲ್ 2ಕ್ಕೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿಂದು ಜರುಗಿದ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪ್ರಮಾಣ ಪತ್ರ ನೀಡಿ ಗೌರವಿಸಿದರು.

     ಜಿಲ್ಲೆಯಲ್ಲಿ ಸಕಾಲ ಸೇವೆ ಅನುಷ್ಠಾನದಲ್ಲಿ 2022ರ ಮಾರ್ಚ್ ಮಾಹೆಯ ಪ್ರಗತಿಯನ್ನಾಧರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

1,55,378 ಅರ್ಜಿ ವಿಲೇವಾರಿ
       ನಾಗರಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಸೇವೆಗಳನ್ನು ನಿಗಧಿತ ಕಾಲಮಿತಿಯೊಳಗೆ ನೀಡುವ ಸಲುವಾಗಿ 2012ರ ಏಪ್ರಿಲ್ 2ರಂದು ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹತ್ತು ವರ್ಷಗಳಲ್ಲಿ ರಾಜ್ಯದ ನಾಗರಿಕರು ಸೇವೆ ಕೋರಿ ಸಲ್ಲಿಸಿರುವ ಅರ್ಜಿಗಳಲ್ಲಿ 95.07ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಯ ಸೇವೆಗಾಗಿ ಸಕಾಲ ಯೋಜನೆಯಡಿ 2022ರ ಮಾರ್ಚ್ ಮಾಹೆಯಲ್ಲಿ 148639 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 155378(ಜನವರಿಯಿಂದ ಬಾಕಿಯಿರುವ) ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ವಿವಿಧ ಇಲಾಖೆಗಳ 1115 ಸೇವೆ:

      ಸಕಾಲ ಯೋಜನೆಯಡಿ ಕಂದಾಯ ಇಲಾಖೆಯ 53 ಸೇವೆ ಸೇರಿದಂತೆ 1115 ಸೇವೆಗಳನ್ನು ಒದಗಿಸಲಾಗುತ್ತಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಸತಿ ದೃಢೀಕರಣ ಪತ್ರ, ಜನನ ಮತ್ತು ಮರಣ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಜೀವಂತ ಪ್ರಮಾಣ ಪತ್ರ, ಕೃಷಿ ಕುಟುಂಬ ಸದಸ್ಯ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಭೂರಹಿತ ಪ್ರಮಾಣ ಪತ್ರ, ನಿರ್ಗತಿಕ ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ವೇತನ, ಭೂ ಹಿಡುವಳಿ ಪ್ರಮಾಣ ಪತ್ರ, ವಂಶವೃಕ್ಷ ಪ್ರಮಾಣ ಪತ್ರ, ಮೈತ್ರಿ, ಮನಸ್ವಿನಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆ ಜಾರಿಗೆ ಬಂದ ಆರಂಭದಲ್ಲಿ ವಿವಿಧ ಇಲಾಖೆಗಳಡಿ ಬರುವ 281 ಸೇವೆಗಳನ್ನು ಒದಗಿಸಲಾಗುತ್ತಿತ್ತು.

ಇತರೆ ರಾಜ್ಯಗಳಿಗೂ ಪ್ರೇರಣೆ:

      ರಾಜ್ಯದ ಈ ಸಕಾಲ ಯೋಜನೆಯ ಯಶಸ್ಸಿನಿಂದ ಪ್ರೇರಣೆಗೊಂಡು ದೇಶದ ಇತರೆ ರಾಜ್ಯ ಸರ್ಕಾರಗಳು ಸಕಾಲ ಯೋಜನೆಯನ್ನು ಅಳವಡಿಸಿಕೊಂಡಿರುವುದು ಯೋಜನೆಯ ಹೆಗ್ಗಳಿಕೆಯಾಗಿದೆ.

ಸೇವಾ ವಿಳಂಬ-ಪರಿಹಾರ ವೆಚ್ಚ:

       ನಾಗರಿಕರು ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿದ ಕೂಡಲೇ 15 ಜಿಎಸ್‍ಸಿ ಸಂಖ್ಯೆಯು ಅರ್ಜಿದಾರರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳಿಸಲಾಗುವುದು. ಈ ಜಿಎಸ್‍ಸಿ ಸಂಖ್ಯೆಯನ್ನು ಬಳಸಿ ತಮ್ಮ ಅರ್ಜಿಗಳ ಹಂತವನ್ನು ತಿಳಿಯಬಹುದಾಗಿದೆ. ನಿಗಧಿತ ಕಾಲ ಮಿತಿಯಲ್ಲಿ ಸೇವೆ ಲಭ್ಯವಾಗದಿದ್ದಲ್ಲಿ ವಿಳಂಬವಾಗುವ ಪ್ರತಿದಿನಕ್ಕೆ 20 ರೂ.ನಂತೆ ಗರಿಷ್ಠ 500 ರೂ.ವರೆಗೆ ನಾಗರಿಕರಿಗೆ ಪರಿಹಾರ ವೆಚ್ಚ ನೀಡಲಾಗುವುದು.

ಜಿಎಸ್‍ಸಿ ಸಂಖ್ಯೆಯಿಂದ ಅರ್ಜಿ ಸ್ಥಿತಿ:


      ಸಕಾಲದಡಿ ಸೇವೆಗೆ ಅರ್ಜಿ ಸಲ್ಲಿಸುವಾಗ ನಾಗರಿಕರು ತಾವು ಬಳಸುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಸೇವೆ ಪಡೆಯಲು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಒದಗಿಸಬೇಕು. ಅರ್ಜಿ ಸಲ್ಲಿಸಿದ ನಂತರ ಜಿಎಸ್‍ಸಿ ಸಂಖ್ಯೆ ಸೃಜನೆಯಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಜಿಎಸ್‍ಸಿ ಸಂಖ್ಯೆಯಿಂದ ಅರ್ಜಿ ಸ್ಥಿತಿಯನ್ನು ಜಾಲತಾಣ ತಿತಿತಿ.sಚಿಞಚಿಟಚಿ.ಞಚಿಡಿ.ಟಿiಛಿ.iಟಿ ಅಥವಾ ಸಹಾಯವಾಣಿ ಸಂಖ್ಯೆ 080-44554455ನ್ನು ಮೂಲಕ ತಿಳಿಯಬಹುದು. ಸಕಾಲ ಯೋಜನೆಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿದ್ದಲ್ಲಿ ಸಕಾಲ ಕರೆ ಕೇಂದ್ರ(ಅಚಿಟಟ ಅeಟಿಣಡಿe)ವನ್ನು ಸಂಪರ್ಕಿಸಬೇಕು.

       ಸಾರ್ವಜನಿಕರು ಸಕಾಲ ಸೇವೆಗಾಗಿ ಸಂಬಂಧಿಸಿದ ಕಚೇರಿಗೆ ಭೇಟಿ ನೀಡುವ/ಆನ್‍ಲೈನ್/ಸಾಮಾನ್ಯ ಸೇವಾ ಕೇಂದ್ರ/ತುಮಕೂರು ಒನ್/ಕರ್ನಾಟಕ ಒನ್/ ಗ್ರಾಮ ಒನ್/ಜನಸೇವಕ/ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಮೇಲ್ಮನವಿಗೆ ಅವಕಾಶ:

      ನಿಗಧಿತ ಕಾಲಮಿತಿಯಲ್ಲಿ ಸೇವೆ ಸ್ವೀಕೃತವಾಗದಿದ್ದಲ್ಲಿ ಹಾಗೂ ಸಮಂಜಸವಲ್ಲದ ಕಾರಣಗಳನ್ನು ನೀಡಿ ಅರ್ಜಿಯನ್ನು ತಿರಸ್ಕರಿಸಿದ್ದಲ್ಲಿ ಅಂತಹ ಅರ್ಜಿಗಳಿಗೆ ನಾಗರಿಕರು ಸಂಬಂಧಪಟ್ಟ ಸಕ್ಷಮ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದು. ಸಕ್ಷಮ ಅಧಿಕಾರಿಯು ತಪ್ಪಿತಸ್ಥ ಎಂದು ಹೆಸರಿಸಲಾದ ಅಧಿಕಾರಿಗಳನ್ನು ವಿಚಾರಣೆ ನಡೆಸಿ ಸೂಕ್ತ ಆದೇಶ ನೀಡುವರು. ಇಂತಹ ಆದೇಶವು ಸಮಾಧಾನಕರವಾಗಿರದಿದ್ದಲ್ಲಿ ಈ ಬಗ್ಗೆ ಸಂಬಂಧಿಸಿದ ಮೇಲ್ಮನವಿ ಪ್ರಾಧಿಕಾರಕ್ಕೆ 2ನೇ ಮೇಲ್ಮನವಿ ಸಲ್ಲಿಸಬಹುದು.

      ಸಕಾಲದಡಿ ಅರ್ಜಿ ಸಲ್ಲಿಸಿದ ನಾಗರಿಕರ ಅರ್ಜಿಗಳ ವಿಲೇವಾರಿ ವಿಳಂಬ ಅಥವಾ ತಿರಸ್ಕøತವಾದಲ್ಲಿ ಮೇಲ್ಮನವಿ ಅವಕಾಶ ಲಭ್ಯವಿರುವ ಬಗ್ಗೆ ನಾಗರಿಕರಿಗೆ ಎಸ್‍ಎಂಎಸ್ ಸಂದೇಶ ಕಳುಹಿಸಲಾಗುವುದು. ರಾಜ್ಯದಲ್ಲಿ ಕಳೆದ 2022ರ ಜನವರಿ ಮಾಹೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ. 97.58 ನಾಗರಿಕರು ಸಕಾಲ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ.

ಇದೀಗ ಸಕಾಲ 2.0 :

      ಇಂದು.. ನಾಳೆ… ಇನ್ನಿಲ್ಲ. ಹೇಳಿದ ಸಮಯ ತಪ್ಪೊಲ್ಲ.. ಎನ್ನುವ ಧ್ಯೇಯದೊಂದಿಗೆ ಇದೀಗ ಸಕಾಲ 2.0 ಅಡಿ ಹೊಸದಾಗಿ ಮೊಬೈಲ್ ಸಂದೇಶ, ಡಿಬಿಟಿ(ಆiಡಿeಛಿಣ ಃeಟಿeಜಿiಣ ಖಿಡಿಚಿಟಿsಜಿeಣ), ಸಕಾಲ ಮಿತ್ರ, ಸಕಾಲ ಸಿಟಿಜನ್ ಹ್ಯಾಪಿನೆಸ್ ಇಂಡೆಕ್ಸ್, ಸಕಾಲ ಇಂಟರ್ನ್‍ಶಿಪ್, ಹೆಸರು ಹೊಂದಾಣಿಕೆ ತಂತ್ರಜ್ಞಾನ ಕಾರ್ಯಕ್ರಮಗಳನ್ನು ಪರಿಚಯಿಸಲಾಗಿದೆ.

      ಸಕಾಲದಡಿ ನಿಗಧಿತ ಕಾಲಮಿತಿಯಲ್ಲಿ ಸೇವೆ ವಿಲೇವಾರಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

(Visited 17 times, 1 visits today)
Previous Articleಏ. 8 ರಿಂದ ತುಮಕೂರು – ಬೆಂಗಳೂರು ನಡುವೆ ಮೆಮು ರೈಲು ಸಂಚಾರ
Next Article ತುಮಕೂರು : ಟ್ಯಾಂಕರ್ ಲಾರಿ – ಖಾಸಗಿ ಬಸ್ ಅಪಘಾತ !!
News Desk Benkiyabale

Related Posts

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm
ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm
ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm

ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ

July 16, 2025 3:22 pm
ತುಮಕೂರು

ತಿರುಪತಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ಗೆ ಚಾಲನೆ

July 16, 2025 3:21 pm
ತುಮಕೂರು

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಡೀಸಿ ಸೂಚನೆ

July 16, 2025 3:20 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

By News Desk BenkiyabaleJuly 16, 2025 3:26 pm

ಚಿಕ್ಕನಾಯಕನಹಳ್ಳಿ: ಸರ್ಕಾರಿ ಯೋಜನೆಗಳು ನೈಜ ಪಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ರೂಪಿಸಿದ್ದಕ್ಕು ಸಾ ರ್ಥಕ ರೈತರು ಇಂತಹ ಯೋಜನೆಗಳನ್ನು…

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm

ಅನಧಿಕೃತ ರಸಗೊಬ್ಬರ ಸಾಗಾಣಿಕೆ: ಲಾರಿ ಜಪ್ತಿ

July 16, 2025 3:22 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.