BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಜಾರಾಜ್ಯ ಅವಶ್ಯಕತೆ ಎತ್ತಿ ಹಿಡಿದ ಅಂಬೇಡ್ಕರ್
Trending

ಪ್ರಜಾರಾಜ್ಯ ಅವಶ್ಯಕತೆ ಎತ್ತಿ ಹಿಡಿದ ಅಂಬೇಡ್ಕರ್

By News Desk BenkiyabaleUpdated:April 14, 2022 7:06 pm

ತುಮಕೂರು :
ಸ್ವರಾಜ್ಯದ ಜೊತೆಗೆ ಪ್ರಜಾ ರಾಜ್ಯದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿ, ಪ್ರಜಾರಾಜ್ಯಕ್ಕಾಗಿ ಮೊಟ್ಟ ಮೊದಲಿಗನಾಗಿ ಧ್ವನಿ ಎತ್ತಿದ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು, ಮಹಾನ್ ರಾಷ್ಟ್ರ ಭಕ್ತರು ಕೂಡ ಆಗಿದ್ದರು ಎಂದು ಪ್ರೊ. ಶ್ರೀ ಹರಿ ರಾಂ ಅವರು ತಿಳಿಸಿದರು.
ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರ 115ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಭಾಷಣಾಕಾರರಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತಿನಾದ್ಯಂತ ಜನಸಾಮಾನ್ಯರು ಹಬ್ಬದ ರೀತಿ ಆಚರಿಸಿ ಸಂಭ್ರಮಿಸುವ ಏಕೈಕ ಹಬ್ಬ ಅದುವೇ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಎಂದರು. ಮಹಾನಾಯಕ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತವಾಗಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಅವರು ಕೇವಲ ಒಂದು ದೇಶ, ಒಂದು ರಾಜ್ಯ, ಒಂದು ಜಾತಿಗೆ ಸೀಮಿತವಲ್ಲ, ಅವರು ವಿಶ್ವ ನಾಯಕ. ದಲಿತ ಪರ ಹೋರಾಟ, ಮೀಸಲಾತಿ ಹೋರಾಟ ಅಲ್ಲದೇ ದೇಶಕ್ಕಾಗಿ ಸಾಮಾಜಿಕ ಚಳುವಳಿ ಮಾಡಿದಂತಹ ಮಹಾನ್ ನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು ಎಂದರು.
ದೇಶದ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಬದಲಾಯಿಸಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಓಟಿನ ಹಕ್ಕನ್ನು ಈ ದೇಶದ ಜನತೆಗೆ ಕೊಟ್ಟ ಮಹಾನಾಯಕ ಅವರು. ಟ್ರೇಡ್ ಯೂನಿಯನ್ ಕಾಯಿದೆಗಳ ಮೂಲಕ ಟ್ರೇಡ್ ಯೂನಿಯನ್‍ಗಳನ್ನು ಗುರುತಿಸುವ, ಕಾರ್ಮಿಕರು ಕೆಲಸ ಮಾಡುವ ವಾತಾವರಣ ಉತ್ತಮವಾಗಿಸುವ, ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ತಂದಂತಹ, ರಜಾ ದಿನದ ಸಂಬಳ ಅಥವಾ ಬದಲಿ ರಜೆ, ಇಎಸ್‍ಐ, ಪಿಎಫ್, ಕಾರ್ಮಿಕರಿಗೆ 8 ಗಂಟೆಗಳ ಕೆಲಸ, ಮಹಿಳೆಯರಿಗೆ ಪ್ರಸೂತಿ ರಜೆ ಮುಂತಾದ ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಬ್ರಿಟೀಷ್ ಪರಕೀಯ ಸರ್ಕಾರದಲ್ಲಿ ಕಾನೂನು ಮಂತ್ರಿಯಾಗಿ ಅವರು ಭಾರತೀಯರ ಪರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಕಾನೂನು ಮೂಲಕ ಜಾರಿಗೆ ತಂದರು ಎಂದು ಹರಿ ರಾಂ ಅವರು ವಿವರಿಸಿದರು.
ಮತ್ತೋರ್ವ ಭಾಷಣಾಕಾರ ಡಾ. ರವಿಕುಮಾರ್ ನೀಹ ಅವರು ಮಾತನಾಡಿ, ದಲಿತರ, ದಮನಿತರ, ಮಹಿಳೆಯರ ಏಳ್ಗೆಗಾಗಿ ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರು ನಿರಂತರವಾಗಿ ಹೋರಾಡಿದ್ದಾರೆ. ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ, ರಾಜಕೀಯ ಶೋಷಣೆಗಳು ನಿಲ್ಲಬೇಕು. ಎಲ್ಲಾ ಸಮುದಾಯದವರು ಒಟ್ಟಾಗಿ ಕೆರೆ-ಕಟ್ಟೆ, ದೇವಾಲಯ, ಶಾಲೆಗೆ ಪ್ರವೇಶ ಪಡೆದಾಗ ಸಮಾನತೆ ಸಾಧ್ಯ ಎಂಬುದು ಜಗಜೀವನ ರಾಂ ಅವರ ಆಶಯವಾಗಿತ್ತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಂತಹ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮಾತನಾಡಿ, ತಾವು ಜೀವನದಲ್ಲಿ ಪಟ್ಟಂತಹ ಕಷ್ಟಗಳನ್ನು ಮೆಟ್ಟಿನಿಂತು ದೇಶಕ್ಕಾಗಿ ಸಾಮಾಜಿಕ ಚಳುವಳಿ ಮಾಡಿದಂತಹ ಡಾ|| ಬಿ.ಆರ್. ಅಂಬೇಡ್ಕರ್ ಅವರು ಭಾರತದ ಪ್ರಜಾಪ್ರಭುತ್ವದ ಪಿತಾಮಹ ಎನಿಸಿದ್ದಾರೆ ಎಂದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ ಅಸಮತೋಲನ, ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂಬುದನ್ನು ಪ್ರತಿಪಾದಿಸಿದವರು ಡಾ|| ಬಿ.ಆರ್. ಅಂಬೇಡ್ಕರ್ ಅವರು. ಇಂದು ಅಧಿಕಾರ ವಿಕೇಂದ್ರೀಕರಣ ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಇದೆ ಎಂದಾದರೆ ಇದಕ್ಕೆ ಕಾರಣ ಡಾ|| ಬಿ.ಆರ್. ಅಂಬೇಡ್ಕರ್ ಅವರು ಎಂದರು.
ಇದೇ ಸಂದರ್ಭ ಜಿಲ್ಲೆಯ ವಿವಿಧ ತಾಲ್ಲೂಕುಗಳ 12 ಮಂದಿ ಸಮಾಜ ಸೇವಕರನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂಧ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾಪೌರರಾದ ಬಿ,ಜಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ಕೆ. ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಷಹಪೂರ್‍ವಾಡ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.

(Visited 10 times, 1 visits today)
Ambedkar tumkur
Previous Articleಅನೈತಿಕ ಸಂಬಂಧ : ಪಿಡ್ಲ್ಯೂಡಿ ಇಂಜಿನಿಯರ್ ಶಂಭುಕುಮಾರ್ ವಿರುದ್ಧ ಮೊಕದ್ದಮೆ
Next Article ಅಂಬೇಡ್ಕರ್ ಅಂದರೆ ಎಸ್ಸಿಎಸ್ಟಿ ಎನ್ನುವ ಮನೋಭಾವನೆ ಜನರಲ್ಲಿದೆ: ಡಾ.ಜಿ.ಪರಮೇಶ್ವರ
News Desk Benkiyabale

Related Posts

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news
ತಾಜಾ ಸುದ್ಧಿಗಳು
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
Our Youtube Channel
Our Picks

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

By News Desk BenkiyabaleAugust 05, 2026 5:25 pm

ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು…

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.