BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್ಪಿ ರಾಹುಲ್ ಕುಮಾರ್ ಗೆ ವಂಚಕನಿಂದ ಆತ್ಮಹತ್ಯೆ ಬೆದರಿಕೆ!?
Trending

ಎಸ್ಪಿ ರಾಹುಲ್ ಕುಮಾರ್ ಗೆ ವಂಚಕನಿಂದ ಆತ್ಮಹತ್ಯೆ ಬೆದರಿಕೆ!?

By News Desk BenkiyabaleUpdated:April 15, 2022 5:14 pm

ತುಮಕೂರು:
ನಗರದ ವಾಸಿ ಲಕ್ಷ್ಮೀಕಾಂತ ಅಲಿಯಾಸ್ ಚಂದು ಪೊಲೀಸ್ ಇಲಾಖೆಗೆ ಆತ್ಮಹತ್ಯೆ ಬೆದರಿಕೆ ಹಾಕುವ ಮುಖೇನ ಇಡೀ ಇಲಾಖೆಯನ್ನೇ ಬೆದರಿಸಲು ಹೊರಟಿರುವ ಅಪರೂಪದ ಘಟನೆ ವರದಿಯಾಗಿದೆ.
ಸುಮಯ್ಯ ಭಾನು ಎಂಬ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಆಕೆಯ ಮಗಳಿಗೂ ತೊಂದರೆ ಕೊಡುವ ಬೆದರಿಕೆಯ ಆರೋಪದ ಮೇಲೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 13.04.2022ರಂದು ದೂರು ದಾಖಲಾಗಿದೆ.
ದೂರು ದಾಖಲಾಗಿದ್ದರೂ ಸಹ ಲಕ್ಷ್ಮೀಕಾಂತ ಅಲಿಯಾಸ್ ಚಂದು ಎಂಬ ವಂಚಕನನ್ನು ಪೊಲೀಸರು ಬಂಧಿಸದೆ ಮೀನಾಮೇಷ ಎಣಿಸುತ್ತಿದ್ದಾರೆ. ದೂರು ದಾಖಲಾದ ನಂತರ ತನ್ನ ವಾಟ್ಸಪ್‍ನಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್ ಮತ್ತು ಅವರ ಅಧೀನ ಅಧಿಕಾರಿಗಳ ವಿರುದ್ಧ ಪ್ರಾಣ ಬೆದರಿಕೆ ಹಾಕಿದ್ದಾನೆ.
ಹಿನ್ನೆಲೆ
ಲಕ್ಷ್ಮೀಕಾಂತ ಅಲಿಯಾಸ್ ಚಂದು ತುಮಕೂರು ನಗರದ ವಾಸಿಯಾಗಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಲಿ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರ ಸೋದರ ಅಳಿಯನೆಂದು ಬೊಗಳೆ ಬಿಡುತ್ತಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪರಿಚಯಿಸಿಕೊಂಡು ನಮ್ಮ ಮಾವ ಪ್ರಭಾವಿ ರಾಜಕಾರಿಣಿ ಹಾಲಿ ಗೃಹ ಸಚಿವರಾಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕರ್ನಾಟಕ ಸರ್ಕಾರದ ಪ್ರಭಾವಿ ಸಚಿವ ಹುದ್ದೆಗಳನ್ನು ಅಲಂಕರಿಸಿರುವ ಡಾ.ಜಿ.ಪರಮೇಶ್ವರ್ ಅವರ ಸೋದರ ಅಳಿಯ ಎಂದು ಸುಳ್ಳು ಹೇಳುತ್ತಾ ಬಹುತೇಕ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳನ್ನು ಯಾಮಾರಿಸಿ ವರ್ಗಾವಣೆ ಮಾಡಿಸಿಕೊಡುತ್ತೇನೆ ಎಂದು ಹಣ ಪಡೆದು ವಂಚಿಸುತ್ತಿದ್ದ.
ಡಾ.ಜಿ.ಪರಮೇಶ್ವರ್ ಅವರ ಹೆಸರನ್ನು ದುರುಪಯೋಗ ಪಡಿಸಿಕೊಂಡು ವಂಚಿಸುತ್ತಿರುವ ವಿಚಾರ ಸ್ವತಃ ಪರಮೇಶ್ವರ್ ಅವರಿಗೂ ತಿಳಿದಿರಲಿಲ್ಲ.
ಬ್ರಿಕ್ಸ್ ಇಂಡಸ್ಟ್ರಿ ನಡೆಸುತ್ತಿದ್ದ ಚಂದು ರಿಯಲ್ ಎಸ್ಟೇಟ್ ವ್ಯವಹಾರದ ಕಡೆ ಆಸಕ್ತಿ ಹೊಂದಿದ್ದ.
ವಾರಸುದಾರರಿಲ್ಲದ ಜಮೀನುಗಳಿಗೆ ನಕಲಿ ವಾರಸುದಾರರನ್ನು ಸೃಷ್ಟಿಸಿ ಸುಳ್ಳು ದಾಖಲಾತಿಗಳನ್ನು ಸಿದ್ದಪಡಿಸಿ ಅನ್ಯರಿಗೆ ಮಾರಾಟ ಮಾಡಿ ದುಡ್ಡು ಮಾಡುತ್ತಿದ್ದ ಎಂಬ ಆರೋಪವಿದೆ.
ಇದರ ಸಂಬಂಧ ಚಂದು ಮತ್ತು ಇತರರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಇದರಲ್ಲಿ ಕೆಲವರನ್ನು ಬಂಧಿಸಲಾಗಿತ್ತು. ಪೊಲೀಸರ ಪರಿಚಯವನ್ನೇ ದುರ್ಬಳಕೆ ಮಾಡಿಕೊಂಡು ತನ್ನ ಬಂಧನವಾಗದಂತೆ ನಿರೀಕ್ಷಣಾ ಜಾಮೀನು ಪಡೆದಿದ್ದ.
ನಂತರ ಸುಮಯ್ಯ ಭಾನು ಎಂಬ ಮುಸ್ಲಿಂ ವಿವಾಹಿತೆಯೊಂದಿಗೆ ತಾನು ಸ್ಪೆಷಲ್ ಪೊಲೀಸ್ ಆಫೀಸರ್‍ಯೆಂದು ಪರಿಚಯಿಸಿಕೊಂಡು ಆಕೆಯ ಕೌಟುಂಬಿಕ ಕಲಹವನ್ನು ದುರುಪಯೋಗ ಪಡಿಸಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿ ಮಾನಸಿಕವಾಗಿ ಹಿಂಸಿಸುತ್ತಿದ್ದ. ಸಂತ್ರಸ್ತೆಯ ಗಂಡನನ್ನು ಕೊಲೆ ಮಾಡುವಂತೆ ಪ್ರೇರೇಪಿಸುತ್ತಿದ್ದ. ಮನನೊಂದ ಮಹಿಳೆ ತುಮಕೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ 04.08.2021ರಂದು ಈತನ ವಿರುದ್ಧ ದೂರು ನೀಡಿ ಪ್ರಕರಣ ದಾಖಲಾಗಿತ್ತು.
ಅಂದು ಪೊಲೀಸ್ ಅಧಿಕಾರಿಗಳ ಕಾಲು ಕಟ್ಟಿಕೊಂಡು ಪೊಲೀಸರೆದುರೇ ನೊಂದ ಮಹಿಳೆಯ ಕ್ಷಮೆಯಾಚಿಸಿ ರಾಜಿ ಮಾಡಿಕೊಳ್ಳಲು ಅಂಗಲಾಚಿ ಬೇಡಿಕೊಂಡಿದ್ದ ಎಂಬುದಾಗಿ ತಿಳಿದುಬಂದಿದೆ. ಅಂದೇ ಈ ವಂಚಕನನ್ನು ಪೊಲೀಸರು ಬಂಧಿಸಿದ್ದರೆ ಇಂದು ಮತ್ತೆ ಅದೇ ಮಹಿಳೆ ಸಂತ್ರಸ್ತಳಾಗಿ ಮನನೊಂದು ಠಾಣೆಗೆ ಬಂದು ದೂರು ಕೊಡುವ ಪರಿಸ್ಥಿತಿ ಬರುತ್ತಿರಲಿಲ್ಲ. ಮತ್ತೆ ಅದೇ ಮಹಿಳೆಗೆ ಲೈಂಗಿಕ ಕಿರುಕುಳ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಹಿಂಸೆ ನೀಡುತ್ತಿರುವ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಾದ ಕೂಡಲೇ ತುಮಕೂರಿನ ಎಸ್ಪಿರವರು ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂಬ ಬೆದರಿಕೆ ಹಾಕುತ್ತಿರಲಿಲ್ಲ.
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್‍ರವರ ಉತ್ತಮ ಹಾಗೂ ದಕ್ಷ ಆಡಳಿತ ಹಾಗೂ ಸಾರ್ವಜನಿಕರೊಂದಿಗಿನ ಅವಿನಾಭಾವ ಸಂಬಂಧ ರಾಜ್ಯ ವ್ಯಾಪಿ ಪ್ರಶಂಸೆಗೊಳಪಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.
ಇಂತಹವರ ಬಗ್ಗೆ ಈ ವಂಚಕನ ಬಾಯಿಂದ ಕೇಳಿಬಂದಿರುವ ಆರೋಪಕ್ಕೆ ಜನರು ಮಾನ್ಯತೆ ನೀಡುವುದಿಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೆ.ಎಸ್ ಈಶ್ವರಪ್ಪನವರ ಪ್ರಕರಣದ ನಂತರ ತನ್ನ ವಿಡಿಯೋ ಹೇಳಿಕೆಗೆ ಪೊಲೀಸರು ಬೆದರುತ್ತಾರೆ ಎಂಬ ತಂತ್ರಗಾರಿಕೆಯಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿ ತನ್ನ ಬಂಧನವಾಗದಂತೆ ರಕ್ಷಾಕವಚ ಸೃಷ್ಟಿಸಿಕೊಳ್ಳುತ್ತಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಇಡೀ ಪೊಲೀಸ್ ಇಲಾಖೆಗೆ ಬೆದರಿಕೆ ಹಾಕುವ ಮುಖೇನ ಖಾಕಿಗೆ ಸವಾಲಾಗಿರುವ ವಂಚಕನ ಬಗ್ಗೆ ನಿರ್ದಾಕ್ಷಣ್ಯ ತೋರದೆ ಹೆಡೆಮುರಿ ಕಟ್ಟುವ ಅವಶ್ಯಕತೆ ಇದೆ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

(Visited 1,244 times, 1 visits today)
crime tumkur
Previous Articleಅಂಬೇಡ್ಕರ್ – ಜಗಜೀವನ್ ರಾಮ್ ತತ್ವಾದರ್ಶ ಪಾಲನೆಗೆ ಕರೆ
Next Article ಪರಮೇಶ್ವರ ಹೇಳಿಕೆ ದಲಿತ ಜನಾಂಗಕ್ಕೆ ಆಘಾತಕಾರಿ!
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.