BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪರಮೇಶ್ವರ ಹೇಳಿಕೆ ದಲಿತ ಜನಾಂಗಕ್ಕೆ ಆಘಾತಕಾರಿ!
Trending

ಪರಮೇಶ್ವರ ಹೇಳಿಕೆ ದಲಿತ ಜನಾಂಗಕ್ಕೆ ಆಘಾತಕಾರಿ!

By News Desk BenkiyabaleUpdated:April 18, 2022 4:44 pm

ತುಮಕೂರು:
ಕೊರಟಗೆರೆಯಲ್ಲಿ 14.04.2022 ರಂದು ಆಚರಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್.ಆಂಬೇಡ್ಕರ್ ರವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಮಾಡಲಾದ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವರಾದ ಮಾನ್ಯ ಡಾ.ಜಿ.ಪರಮೇಶ್ವರ್ ರವರ ಭಾಷಣ ರಾಜ್ಯದ ದಲಿತ ಜನಾಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ ಎಂದು ಭಾ.ಜ.ಪಾ ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ತಿಳಿಸಿದರು.
ನಾನು ಪಿಹೆಚ್‍ಡಿ ಮಾಡಿದ್ದೇನೆ, ವಿದೇಶಗಳಿಗೆ ಹೋಗಿ ಬಂದಿದ್ದೇನೆ, ಹಿಂದೆ ಸಚಿವನಾಗಿದ್ದೆ. ಈಗ ಶಾಸಕನಾಗಿದ್ದೆನೆ. ರಾಜ್ಯದಲ್ಲಿ ಹಿರಿಯ ರಾಜಕಾರಣಿಯಾಗಿದ್ದೇನೆ. ಆದರೂ ದೇವಸ್ಥಾನದ ಒಳಗೆ ಬಿಟ್ಟುಕೊಳ್ಳುವುದಿಲ್ಲ ದೇವಸ್ಥಾನದ ಒಳಗೆ ಬರುತ್ತಾರೆಂದು, ಮಂಗಳಾರತಿಯನ್ನು ಹಿಡಿದು ದೇವಸ್ಥಾನದ ಹೊರಗಡೆ ನಾನಿರುವ ಜಾಗಕ್ಕೆ ಓಡಿ ಬರುತ್ತಾರೆಂದು ತಿಳಿಸಿ, ಪ್ರಪಂಚದ ಯಾವುದೇ ದೇಶದಲ್ಲಿಯೂ ಇಂತಹ ಕೀಳು ಮಟ್ಟದ ವ್ಯವಸ್ಥೆ ಕೇಳಿಲ್ಲ ಎಂದು ಇಷ್ಟೆಲ್ಲಾ ಅಧಿಕಾರ ನಡೆಸಿರುವ ವ್ಯಕ್ತಿಯಾಗಿದ್ದರೂ, ಏನೂ ಮಡಲಾಗದ ಒಬ್ಬ ಅಸಹಾಯಕ ವ್ಯಕ್ತಿಯಂತೆ ಮಾತನಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದರು.
ನನಗೆ ಎಲ್ಲಾ ಅರ್ಹತೆಗಳಿದ್ದರೂ ನನ್ನನ್ನು ದಲಿತ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಮಾಡಲ್ಲಿಲ್ಲ ಎಂದು ಅಳುಬುರುಕನಂತೆ ಕೊರಗುವ ಇವರು ಮುಖ್ಯಮಂತ್ರಿಯಾದರೆ ರಾಜ್ಯದ ದಲಿತರಿಗೆ ಯಾವ ರಕ್ಷಣೆಯೂ ಸಿಗುವುದಿಲ್ಲ ಹಾಗೂ ದಲಿತರ ಉದ್ಧಾರವೂ ಆಗುವುದಿಲ್ಲ. ದೇವಸ್ಥಾನದ ಒಳಗಡೆ ಬಿಡಲಿಲ್ಲ ಎಂದು ಹೇಳುವ ಪರಮೇಶ್ವರ್ ಗೃಹಸಚಿವರಾಗಿ ಇಂತಹ ಜಾತಿ ಆದಾರಿತ ತಾರತಮ್ಯ, ಅಶ್ಪøಶ್ಯತೆ ಆಚರಣೆ ವಿರುದ್ಧ ಅಂದೇ ಏಕೆ ಕಾನೂನು ಕ್ರಮ ಜರುಗಿಸಲಿಲ್ಲ ಅಥವಾ ಈ ರೀತಿಯ ಜಾತಿ ತಾರತಮ್ಯ, ಅಶ್ಪøಶ್ಯತೆ ಆಚರಣೆ ಮಾಡಿದವರ ಮನಃ ಪರಿವರ್ತನೆಗೆ ಏಕೆ ಪ್ರಯತ್ನಿಸಲಿಲ್ಲ.
ಅವರು ಗೃಹ ಸಚಿವರಾಗಿದ್ದ ಕಾಲದಲ್ಲಿ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಒಬ್ಬ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಮಾರಣಾಂತಿಕ ಹಲ್ಲೆ ಮಾಡಿದಾಗ ಕನಿಷ್ಠ ಸೌಜನ್ಯಕ್ಕೂ ಭೇಟಿ ನೀಡಿ ನೊಂದ ಸಂತ್ರಸ್ತನಿಗೆ ಸಾಂತ್ವನ ಹೇಳದೆ ತನಗೂ ಈ ವಿಚಾರಕ್ಕೂ ಸಂಬಂಧವೇ ಇಲ್ಲದಂತೆ ಜಾಣಕುರುಡುತನ ಪ್ರದರ್ಶಿಸಿದ ನೀವು ಈಗ ಭಾಷಣದಲ್ಲಿ ದಲಿತರ ಮೇಲೆ ದೌರ್ಜನ್ಯ, ತಾರತಮ್ಯ ನಡೆಯುತ್ತಿದೆ ಎಂದು ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಿಮ್ಮನ್ನು ರಾಜಕೀಯ ಬೂಟಾಟಿಕೆ ಚಾಂಪಿಯನ್ ಎಂದರೆ ತಪ್ಪಾಗಲಾರದು ಎಂದರು.
ಅಧಿಕಾರಕ್ಕಾಗಿ ಎಂದೂ ಜೋತುಬೀಳದೆ ದಲಿತರಿಗೆ ಸಮಾನತೆಗಾಗಿ ಹಾಗೂ ಅವರ ಸಾಮಾಜಿಕ ಅಭಿವೃದ್ಧಿಗಾಗಿ ತನ್ನ ಜೀವಿತದ ಕೊನೆಯ ಗಳಿಗೆಯವರೆಗೂ ಅವಿಶ್ರಾಂತಿ ಹೋರಾಟ ಮಾಡಿ, ಶಿಕ್ಷಣ, ಸಂಘಟನೆ, ಹೋರಾಟದ ಬೀಜಮಂತ್ರ ಸಾರಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ||.ಬಿ.ಆರ್.ಆಂಬೇಡ್ಕರ್ ರವರ ಮೀಸಲಾತಿ ಬಿಕ್ಷೆಯಿಂದ ದಲಿತರ ಹೆಸರಿನಲ್ಲಿ ರಾಜಕೀಯ ಅಧಿಕಾರ, ಶಿಕ್ಷಣ ಸಂಸ್ಥೆಗಳು, ಹಣ, ಸೌಲಭ್ಯ ಎಲ್ಲವನ್ನೂ ಅನುಭವಿಸುತ್ತಿರುವ ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿದ್ದಾಗ ಸಾರ್ವಜನಿಕರಿಗೆ ಮುಕ್ತವಾಗಿದ್ದಂತ ವಿಧಾನಸೌಧದ 3ನೇ ಮಹಡಿಯ ತನ್ನ ಕಛೇರಿಗೆ ಪೋಲೀಸ್ ಸರ್ಪಗಾವಲಿನಲ್ಲಿ, ಪತ್ರಕರ್ತರನ್ನೊಳಗೊಂಡು ಯಾರನ್ನೂ ಒಳಬಿಡದೆ ರಹಸ್ಯವಾಗಿ ಹೋಮ ಹವನ, ಪೂಜೆ ಪುನಸ್ಕಾರಗಳನ್ನು ಪುರೋಹಿತರ ತಂಡವನ್ನೇ ಕರೆಸಿ ಮಾಡಿಸಿದ ನೀವು ಈಗ ದೇವಸ್ಥಾನಗಳಿಗೆ ನನ್ನನ್ನು ಬಿಡುತ್ತಿಲ್ಲ ಎಂದು ಹೇಳುತ್ತಿರುವುದು ನಿಮ್ಮ ಡÀಬ್ಬಲ್ ಸ್ಟಾಂಡರ್ಡ್ ನಡವಳಿಕೆಗೆ ಸ್ಪಷ್ಠ ಉದಾಹರಣೆಯಾಗಿದೆ. ಇದರಿಂದ ನೀವು ಕ್ಷೇತ್ರದ ದಲಿತ ಹಾಗೂ ರಾಜ್ಯ ದಲಿತರ ನೈತಿಕ ಮನೋಸ್ಥೈರ್ಯವನ್ನು ಕುಗ್ಗಿಸುವ ಪಾಪದ ಕೆಲಸ ಮಾಡುತ್ತಿದ್ದೀರಿ ಎಂದರು.
ಅಧಿಕಾರ ಇದ್ದಾಗ ಅಧಿಕಾರದ ಅಮಲಿನಲ್ಲಿ, ಕೇವಲ “0” ಟ್ರಾಫಿಕ್ ಮಂತ್ರಿಯಾಗಿ ಕಾಲ ಹರಣ ಮಾಡಿದ ನೀವು ಇಡೀ ದಲಿತ ಸಮುದಾಯದ ಏಳಿಗೆಗೆ ರೂಪಿಸಿದ ಯಾವ ಯೋಜನೆಗಳೂ ಇಲ್ಲ.
ದಲಿತರಿಗೆ ಸಾಮಾಜಿಕ ನ್ಯಾಯ, ಸಾಮಾಜಿಕ ಅಭಿವೃದ್ಧಿಯನ್ನು ರಾಜಕೀಯ ಅಧಿಕಾರದಿಂದ ಮಾಡದೆ ಕೇವಲ ತನ್ನ ಶಿಕ್ಷಣ ಸಂಸ್ಥೆಗಳ ವಿಸ್ತರಣೆ ಹಾಗೂ ಅವುಗಳ ರಕ್ಷಣೆಗಾಗಿ ಮಾತ್ರವೇ ಕ್ಷೇತ್ರದ ಮತದಾರರಿಂದ ಪಡೆದ ಅಧಿಕಾರ ಸೀಮಿತವಾಗಿದೆಯೇ ಹೊರತು ನೀವು ಪ್ರತಿನಿಧಿಸಿದ ಇಷ್ಟೆಲ್ಲಾ ರಾಜಕೀಯ ಅಧಿಕಾರ ನೀಡಿದ ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದ ಜನರಿಗೆ ನಿಮ್ಮ ಕೊಡುಗೆ ಶೂನ್ಯವಾಗಿದೆ ಎಂದು ತಿಳಿಸಿದರು.

(Visited 3 times, 1 visits today)
Parameshwar tumkur YH Huchhaiah
Previous Articleಎಸ್ಪಿ ರಾಹುಲ್ ಕುಮಾರ್ ಗೆ ವಂಚಕನಿಂದ ಆತ್ಮಹತ್ಯೆ ಬೆದರಿಕೆ!?
Next Article ಬಿ.ಎಚ್ ರಸ್ತೆಯಲ್ಲಿ ಮರ ಕಡಿದಿರುವ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ
News Desk Benkiyabale

Related Posts

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news
ತಾಜಾ ಸುದ್ಧಿಗಳು
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
Our Youtube Channel
Our Picks

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

By News Desk BenkiyabaleAugust 03, 2026 4:50 pm

ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟಕರೆ ನೀಡಿರುವ ಈ ತಿಂಗಳ ೧೩ರ ಕರ್ನಾಟಕ ಬಂದ್‌ಗೆ…

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.