BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಸವಣ್ಣನ ನೀರಾವರಿ ಯೋಜನೆ ಇಂದಿಗೂ ಮಾದರಿ
ತುಮಕೂರು

ಬಸವಣ್ಣನ ನೀರಾವರಿ ಯೋಜನೆ ಇಂದಿಗೂ ಮಾದರಿ

By News Desk BenkiyabaleUpdated:May 03, 2022 5:24 pm

ತುಮಕೂರು:
ಜಗತ್ತಿಗೆ ಬೇಕಾದ ಇಬ್ಬರು ಮಹಾನ್ ದಾರ್ಶನಿಕರು ಬಸವಣ್ಣ, ಸಿದ್ದರಾಮೇಶ್ವರರು, ಕೆರೆಕಟ್ಟೆಗಳನ್ನು ಕಟ್ಟಿಸಿ ನೀರಾವರಿ ಯೋಜನೆ ಮಾಡಿದರು, ಅದೇ ಇಂದಿಗೂ ಮಾದರಿಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
ನಗರದ ಸ್ನೇಹ ಸಂಗಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದಿಂದ ಹಮ್ಮಿಕೊಂಡಿದ್ದ ಜಗಜ್ಜ್ಯೋತಿ ಬಸವವೇಶ್ವರ ಮತ್ತು ಕಾಯಕಯೋಗಿ ಸಿದ್ದರಾಮೇಶ್ವರರ ಜಯಂತಿಯಲ್ಲಿ ಅವರು ಮಾತನಾಡಿದರು.
ಸಮಾಜದ ಋಣ ತೀರಿಸುವ ನಿಟ್ಟಿನಲ್ಲಿ ಎಲ್ಲರು ಚಿಂತಿಸಬೇಕಿದೆ, ಇರುವುದರಲ್ಲಿಯೇ ಸಮಾಜಕ್ಕೆ ಒಳಿತನ್ನೇ ಮಾಡುವ ಮನೋಭಾವನೆಯನ್ನು ರೂಢಿಸಿಕೊಂಡಾಗ ಮಾತ್ರ ಸಮುದಾಯ ಶಕ್ತವಾಗಲಿದೆ, ಸಮುದಾಯಕ್ಕೆ ಕೊಡುವ ನಿಟ್ಟಿನಲ್ಲಿ ಸಮುದಾಯ ಮುಖಂಡರು ಚಿಂತಿಸಬೇಕಿದೆ ಎಂದು ಹೇಳಿದರು.
ವೀರಶೈವ ಬ್ಯಾಂಕ್ ಮಾಜಿ ನಿರ್ದೇಶಕ ಹೆಚ್.ಜಿ.ಬಸವರಾಜು ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಅವರು ದೇಶದ ಸಮಾನತೆಯ ಆಶಯಗಳು, ಭಗವಾನ್ ಬುದ್ಧ ವೈಚಾರಿಕ ವಿಚಾರಗಳನ್ನು ತಿಳಿಸಿದರೆ ಅಣ್ಣ ಬಸವಣ್ಣ ಅದಕ್ಕೆ ಸ್ಥಿತಪ್ರಜ್ಞೆಯನ್ನು ಮೂಡಿಸಿದರು, ಅಂಬೇಡ್ಕರ್ ಅದಕ್ಕೊಂದು ಚೌಕಟ್ಟು ನೀಡಿದರು ಅದನ್ನು ಪಾಲಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಿದೆ, ದೇಶ ಇರುವವರೆಗೆ ಬುದ್ಧ, ಬಸವ, ಅಂಬೇಡ್ಕರ್ ಪ್ರಾಂತಸ್ಮರಣೀಯರು ಎಂದು ಹೇಳಿದರು.
ಯುವ ಪೀಳಿಗೆಗೆ ಮಾರ್ಗದರ್ಶನ ಮಾಡುವ ಹೊಣೆಗಾರಿಕೆ ಪೋಷಕರ ಮೇಲಿದೆ, 12ನೇ ಶತಮಾನದಲ್ಲಿಯೇ ವಚನಗಳ ಮೂಲಕ ಕ್ರಾಂತಿ ಮಾಡಿದರು, ವಚನ ಎಂದರೆ ಮಾತು, ಮಾತಿಗೆ ಬೆಲೆ ಕಟ್ಟಲಾಗುವುದಿಲ್ಲ, ಜಾತಿಗೆ ಹೊರತಾದ ವ್ಯವಸ್ಥೆ ತುಮಕೂರಿನಲ್ಲಿದೆ, ಭಾವನಾತ್ಮಕ ಸಂಬಂಧ ಎಲ್ಲರೊಳಗೆ ಒಂದಾಗಿದೆ ಎಂದು ಹೇಳಿದರು.
ಕಾಯಕಯೋಗಿ ಸಿದ್ದರಾಮೇಶ್ವರರು ಕಾಯಕವನ್ನು ಮಾಡಲು ಉತ್ತೇಜಿಸಿದರು, ಬಸವಣ್ಣ ಅದರಲ್ಲಿಯೇ ಕೈಲಾಸವನ್ನು ಕಾಣುವಂತೆ ಹೇಳಿದರು, ಪ್ರಪಂಚದ ಎಲ್ಲ ದಾರ್ಶನಿಕರಲ್ಲಿಯೂ ಬಸವಣ್ಣನವರ ಕೊಡುಗೆಯೇ ಹೆಚ್ಚಿದೆ, ಅವರು ನಮ್ಮವರು ಎಂಬ ಹೆಮ್ಮೆ ಇದ್ದರಷ್ಟೇ ಸಾಲದು, ಅವರ ಆದರ್ಶಗಳನ್ನು ಪಾಲಿಸಬೇಕೆಂದು ಹೇಳಿದರು.
ಸಮಾಜ ಬದಲಾಗುತ್ತಿದೆ ಆದರೆ ಮನಸ್ಸು ಬದಲಾಗುವುದು ಬೇಡ, ತುಮಕೂರು ವೀರಶೈವ ಸಮಾಜ ಇಡೀ ರಾಜ್ಯದಲ್ಲಿಯೇ ಉತ್ತಮ ಸೇವೆಯನ್ನು ಮಾಡಿದೆ, ಡಾ.ಶಿವಕುಮಾರಸ್ವಾಮೀಜಿ ಪ್ರಭಾವದಿಂದ ಉತ್ತಮ ಸಂಸ್ಕಾರವನ್ನು ವೀರಶೈವ ಸಮಾಜ ಅಳವಡಿಸಿಕೊಂಡಿದೆ, ಸಮಾಜದ ಸೇವೆಯನ್ನು ನಿಷ್ಕಳಂಕದಿಂದ ಮಾಡುತ್ತಿರುವ ಬಾವಿಕಟ್ಟೆ ಮಂಜಣ್ಣ ಅವರ ಬ್ಯಾಂಕ್ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಆಶಿಸಿದರು.
ಟಿ.ಆರ್.ಲೋಕೇಶ್ ಅವರು ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಹಣಕಾಸು ಸಂಸ್ಥೆಗಳನ್ನು ನಡೆಸುವುದು ಸುಲಭದ ವಿಚಾರವಲ್ಲ, ಹಣಕಾಸು ಸಂಸ್ಥೆಗಳು ದಾಸೋಹ, ಉತ್ಸವ ನಡೆಸುವುದರಿಂದ ಸಮಾಜಕ್ಕೆ ಯಾವುದೇ ಉಪಯೋಗವಿಲ್ಲ, ಸಮುದಾಯದಲ್ಲಿರುವ ಬಡವರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸುವ ಮೂಲಕ ಸಮುದಾಯವನ್ನು ಬಲಿಷ್ಠಗೊಳಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವಹಿಸಿ ಆರ್ಶೀವಚನ ನೀಡಿದ ಕಾರದಮಠದ ಸ್ವಾಮೀಜಿ, 12ನೇ ಶತಮಾನದಲ್ಲಿಯೇ ಎರಡು ಮಾತಿನಲ್ಲೇ ಬಸವಣ್ಣ ಸಮಾಜದ ಒಳಿತು, ಕೆಡತನ್ನು ಹೇಳಿದ್ದಾರೆ, ಒಳಿತನ್ನು ಪಾಲಿಸುವ ಸಂಕಲ್ಪವನ್ನು ಎಲ್ಲರು ಮಾಡಬೇಕಿದೆ, ದೀಪದಂತಹ ಭಾವೈಕ್ಯತೆಯನ್ನು ರೂಢಿಸಿಕೊಳ್ಳಬೇಕಿದೆ ಎಂದರು.
ಬಸವಣ್ಣ, ಡಾ.ಶಿವಕುಮಾರಸ್ವಾಮೀಜಿ ಹೇಳಿದ್ದು ದಾಸೋಹ ಮಾಡಿ ಎಂದದರು, ಅವರು ಹೇಳಿದಂತೆ ದಾಸೋಹದ ನಗರಿ ತುಮಕೂರಿನಲ್ಲಿ ಇಂದು ಎಲ್ಲೆಡೆ ದಾಸೋಹ ನಡೆಯುತ್ತಿದೆ ಇದೇ ನಮ್ಮ ಸಮುದಾಯದ ಆಶಯ, ನಮ್ಮ ಸಂಸ್ಕಾರ ಎಂದು ಹೇಳಿದ ಅವರು, 889 ವರ್ಷಗಳಾದರೂ ಬಸವಣ್ಣನವರ ಜಯಂತಿ ಮಾಡುತ್ತಿದ್ದೇವೆ ಎಂದರೆ ಬಸವಣ್ಣನವರು ಸಮುದಾಯಕ್ಕೆ ನೀಡಿರುವುದು ಎಂತಹ ಕೊಡುಗೆ ಎಂಬುದನ್ನು ಸ್ಮರಿಸಬೇಕು ಎಂದು ಹೇಳಿದರು.
ಬಸವಣ್ಣನವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರೂ ಸಾಗುವ ನಿಟ್ಟಿನಲ್ಲಿ ಜಯಂತಿಗಳನ್ನು ಮಾಡುತ್ತೇವೆ, ಜಯಂತಿಗಳನ್ನು ಮಾಡಿ, ದಾಸೋಹ ಮಾಡಿ ಸುಮ್ಮನಾಗದೇ ಅವರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.
ಈ ವೇಳೆ ಮೈತ್ರಿ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಹೇಮಾ ಪಂಚಾಕ್ಷರಿ,ಸ್ನೇಹ ಸಂಗಮ ಸೌಹಾರ್ದ ಸಹಕಾರಿಯ ಅಧ್ಯಕ್ಷ ಬಾವಿಕಟ್ಟೆ ಮಂಜುನಾಥ್, ಉಪಾಧ್ಯಕ್ಷ ನಾಗೇಶ್,ಕೊಪ್ಪಳ್ ನಾಗರಾಜು, ಉಪಾಧ್ಯಕ್ಷ ನಾಗೇಶ್ ಹೆಚ್.ಆರ್, ನಿರ್ದೇಶಕರಾದ ನಳಿನಾ ಟಿ.ಎಸ್, ಮೃತ್ಯುಂಜಯ ಟಿ.ಬಿ, ಶಾಂತಕುಮಾರಿ ಟಿ.ಎಸ್, ಹೆಚ್.ಎನ್.ಶಿವಕುಮಾರ್, ಪ್ರವೀಣ್ ಪ್ರಸಾದ್, ಪ್ರಭಾಕರ್, ಅರುಣ್ ಕುಮಾರ್, ಟಿ.ಎಸ್.ಚಿದಾನಂದ, ಲೋಕೇಶ್ ಕುಮಾರ್, ಜಗದೀಶ್ ಟಿ.ಎಸ್, ಸಿದ್ದರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಇತರರಿದ್ದರು.ಇದೇ ವೇಳೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ವಿಶ್ವರಾಧ್ಯ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಉದ್ಯಮಿ ಹೆಚ್.ಕೆ.ನಟೇಶ್, ಮೈತ್ರಿ ಮಹಿಳಾ ಸಂಘದ ಹೇಮಾ ಪಂಚಾಕ್ಷರಿ ಅವರನ್ನು ಸನ್ಮಾನಿಸಲಾಯಿತು.

(Visited 21 times, 1 visits today)
Basavajayanti tumkur
Previous Articleರಂಜಾನ್ ಉಪವಾಸ ಸೌಹಾರ್ದತೆಯ ಬದುಕಿನ ಸಂದೇಶ
Next Article ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ರಂಜಾನ್ ಸಡಗರ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.