BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç
  • ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ
  • ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ
  • ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
  • ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
  • ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ
  • ಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ
  • “ಸಿದ್ಧಾರ್ಥ ಸಂಪದ” ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎರಡು ವರ್ಷದ ನಂತರದಲ್ಲಿ ಶಾಲೆಗಳ ಆರಂಭ ಸಂತಸ ತಂದಿದೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ತುಮಕೂರು

ಎರಡು ವರ್ಷದ ನಂತರದಲ್ಲಿ ಶಾಲೆಗಳ ಆರಂಭ ಸಂತಸ ತಂದಿದೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

By News Desk BenkiyabaleUpdated:May 16, 2022 7:42 pm

ತುಮಕೂರು:
ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು, ಇದನ್ನು ಸರಿದೂಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಕಲಿಕಾ ಅಂತರವನ್ನು ಸರಿದೂಗಿಸಲೆಂದೇ 2022-23ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ವರ್ಷ ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ತಿಳಿಸಿದರು.
ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಶಾಲಾ ಪ್ರಾರಂಭೋತ್ಸವ ಒಂದು ಮಹತ್ವದ ಕಾರ್ಯಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕರುನಾಡ ಮಕ್ಕಳಿಗೆ ಗುಣಮಟ್ಟದ ಮೂಲಭೂತ ಶಿಕ್ಷಣ ಅತ್ಯವಶ್ಯಕ. ಮಕ್ಕಳಿಗೆ ಅಕ್ಷರ ಜ್ಞಾನ ಮತ್ತು ಸಂಖ್ಯಾ ಜ್ಞಾನದ ಕೊರತೆ ಉಂಟಾಗಬಾರದು. ಅಕ್ಷರ ಜ್ಞಾನ, ಸಂಖ್ಯಾ ಜ್ಞಾನ ಪಡೆದಂತಹ ಮಕ್ಕಳು ಭವಿಷ್ಯದಲ್ಲಿ ಯಾವುದೇ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆಯಬಲ್ಲರು. ವಿಶೇಷ ಪಠ್ಯ ಕ್ರಮದ ಮೂಲಕ 2 ವರ್ಷದಿಂದ ಕಲಿಯದ್ದನ್ನು ಕಲಿಸಿ, ಭದ್ರ ಶೈಕ್ಷಣಿಕ ಬುನಾದಿ ಹಾಕುವುದೇ ಈ ಕಾರ್ಯಕ್ರಮದ ವಿಶೇಷತೆಯಾಗಿರುತ್ತದೆ ಎಂದರು.
ರಾಜ್ಯದಲ್ಲಿ ಈ ವರ್ಷ ಅತಿ ಹೆಚ್ಚು ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದ ಅವರು, 15ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಜ್ಞಾನ ನೀಡುವ ಕಾಯಕ ಮಧ್ಯದಲ್ಲಿ ನಿಲ್ಲಬಾರದು. ಒಂದು ದೇಶ ಮುಂದೆ ಬರಬೇಕಾದರೆ, ಪ್ರಗತಿಯ ಹಾದಿಯಲ್ಲಿ ಸಾಗಬೇಕಾದರೆ ಆ ದೇಶದ ಸುಶಿಕ್ಷಿತ ಜನತೆ ಎಷ್ಟು ಕೌಶಲ್ಯಾಧಾರಿತ ಜ್ಞಾನ ಹೊಂದಿದ್ದಾರೆ, ತಂತ್ರಜ್ಞಾನಾಧಾರಿತ ಶಿಕ್ಷಣ ಪಡೆದಿದ್ದಾರೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿಂದೆ ಅಪಾರ ಭೂಮಿಯುಳ್ಳವನೇ, ವ್ಯಾಪಾರ ಬಂಡವಾಳ ಹೂಡುವವನೇ ಶಕ್ತಿಶಾಲಿ ಎಂಬ ಪ್ರತೀತಿ ಇತ್ತು. ಆದರೆ ಇಂದು 21ನೇ ಶತಮಾನದಲ್ಲಿ ಯಾರ ಹತ್ತಿರ ಜ್ಞಾನವಿದೆಯೋ ಅವರು ಜಗತ್ತನ್ನೇ ಆಳುತ್ತಾರೆ ಎಂದ ಮುಖ್ಯಮಂತ್ರಿಗಳು, ವಿದೇಶಿ ಮಕ್ಕಳಿಗಿಂತ ನಮ್ಮ ಹಳ್ಳಿಯ ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದೆ. ನಮ್ಮ ಹಳ್ಳಿಯ ಮಕ್ಕಳು 2ನೇ ತರಗತಿಯಿಂದಲೇ ಗುಣಾಕಾರ, ಭಾಗಾಕಾರ ಮಾಡಲು ಪ್ರಾರಂಭಿಸುತ್ತಾರೆ. ವಿದೇಶದಲ್ಲಿ ಈ ಪ್ರಕ್ರಿಯೆ 6ನೇ ತರಗತಿಯಿಂದ ಆರಂಭವಾಗುತ್ತದೆ. ನಮ್ಮ ಮಕ್ಕಳಿಗೆ ಜಾಗತಿಕ ಮಟ್ಟದಲ್ಲಿ ಬೆಳೆಯಲು ಸೂಕ್ತ ವೇದಿಕೆಯನ್ನು ನಾವುಗಳು ಕಲ್ಪಿಸಿಕೊಡಬೇಕಿದೆ. ನಮ್ಮ ಮಕ್ಕಳಲ್ಲಿ ಜಗತ್ತನ್ನೇ ಗೆಲ್ಲುವ ಶಕ್ತಿ ಇದೆ ಎಂದರು.
ನಮ್ಮಲ್ಲಿ ಶಿಶು ವಿಹಾರದಿಂದ ಶಿಕ್ಷಣ ನೀತಿ ಪ್ರಾರಂಭವಾಗುತ್ತದೆ. ಈ ಹಂತದಿಂದ ಮಕ್ಕಳ ಮನೋಜ್ಞಾನ ವಿಕಸನ ಮಾಡಲು ಪಠ್ಯಕ್ರಮ ಅಳವಡಿಸಿಕೊಳ್ಳಲಾಗುತ್ತದೆ. ಪ್ರಶ್ನೆ ಕೇಳುವ ಮಕ್ಕಳ ಕುತೂಹಲವನ್ನು ನಾವು ತಣಿಸಬೇಕಿದೆ. ಮಕ್ಕಳು ವಿಷಯಧಾರಿತವಾಗಿ ಎಲ್ಲಿ, ಏಕೆ, ಎಷ್ಟು, ಏನು ಎಂದು ಯೋಚಿಸಿದಾಗ ಮಾತ್ರ ಅವರಲ್ಲಿ ತಾಂತ್ರಿಕ ಹಾಗೂ ಜ್ಞಾಪಕ ಶಕ್ತಿ ಹೆಚ್ಚುತ್ತದೆ ಎಂದರು.
ಜೀವನದಲ್ಲಿ ಒಮ್ಮೆ ವಿದ್ಯಾಭ್ಯಾಸ ಮುಗಿದರೆ ಕಲಿಕೆ ಮುಗಿಯಿತು ಎನ್ನುವ ಭಾವನೆ ಬೇಡ, ಕಲಿಕೆ ನಿರಂತರ. ಜೀವನ ಪೂರ್ತಿ ನಾವು ವಿದ್ಯಾರ್ಥಿಯಾಗಿ ಜ್ಞಾನದ ದಾಹವನ್ನು ಬೆಳೆಸಿಕೊಳ್ಳಬೇಕು ಎಂದರು.
ನಮ್ಮೊಳಗಿನ ಜ್ಞಾನದ ಬಾಗಿಲನ್ನು ತೆರೆದಾಗ ಮಾತ್ರ ಜ್ಞಾನದ ದಾಹ ತೀರುತ್ತದೆ. ಮಕ್ಕಳು ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ದೊಡ್ಡ ಗುರಿ ಇಟ್ಟುಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮೀಕ್ಷೆಯ ಪ್ರಕಾರ ಕೋವಿಡ್-19ನಿಂದ ಕಳೆದ ಎರಡು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹೊಡೆತ ಬಿದ್ದಿರುತ್ತದೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಇಲಾಖೆಗೆ ಸರ್ವ ರೀತಿಯ ನೆರವು ನೀಡಲು ಮಾನ್ಯ ಮುಖ್ಯ ಮಂತ್ರಿಗಳು ಸಮ್ಮತಿಸಿರುತ್ತಾರೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಿಂದ ಹಿಡಿದು ಎಲ್ಲಾ ಅಧಿಕಾರಿಗಳು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಅತೀವ ಶ್ರಮ ವಹಿಸಿದ್ದಾರೆ. ಈ ವರ್ಷ ರಜಾ ಅವಧಿ ಕಡಿಮೆಯಾಗಬೇಕು ಮತ್ತು ಕಲಿಕಾ ಚೇತರಿಕೆ ಹೆಚ್ಚಿಸಬೇಕು ಎಂಬ ಇಲಾಖೆಯ ಆಶಯಕ್ಕೆ ಎಲ್ಲಾ ಶಿಕ್ಷಕರು ಕೈ ಜೋಡಿಸಿರುವುದು ಸಂತಸದ ವಿಷಯವಾಗಿದ್ದು, ಕಲಿಕಾ ಚೇತರಿಕೆ ಕೇವಲ 15 ದಿನಗಳ ಕಾರ್ಯಕ್ರಮವಲ್ಲ, ಇದು ಇಡೀ ವರ್ಷದ ಕಾರ್ಯಕ್ರಮ. ಹತ್ತನೇ ತರಗತಿಯ ಮಕ್ಕಳಿಗೆ ಮತ್ತಷ್ಟು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭ ಶಾಲಾ ಪ್ರಾರಂಭೋತ್ಸವದ ‘ಮಾರ್ಗದರ್ಶಿ’ ಬಿಡುಗಡೆ ಮಾಡಲಾಯಿತು, ‘ಕಲಿಕಾ ಚೇತರಿಕೆ ಕೈಪಿಡಿ’ಯನ್ನು ಅನಾವರಣಗೊಳಿಸಲಾಯಿತು ಮತ್ತು ಸಾಂಕೇತಿಕವಾಗಿ 6-10ನೇ ತರಗತಿಯವರೆಗಿನ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕವನ್ನು ವಿತರಿಸಲಾಯಿತು.
ಇದಕ್ಕೂ ಮುನ್ನ ಸನ್ಮಾನ್ಯ ಮುಖ್ಯ ಮಂತ್ರಿಗಳು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್‍ಕ್ಲಬ್ ಇವರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಘಟಕ ತುಮಕೂರು ಇವರ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಸಂಸದರಾದ ಜಿ.ಎಸ್. ಬಸವರಾಜು, ಸರ್ಕಾರಿ ಮುಖ್ಯ ಸಚೇತಕರಾದ ವೈ.ಎ. ನಾರಾಯಣಸ್ವಾಮಿ, ಶಾಸಕರುಗಳಾದ ಡಾ. ಸಿ.ಎಂ. ರಾಜೇಶ್ ಗೌಡ, ಚಿದಾನಂದ ಎಂ ಗೌಡ, ಕರ್ನಾಟಕ ರೇಷ್ಮೆ ಉದ್ಯಮ ನಿಗಮದ ಅಧ್ಯಕ್ಷರಾದ ಎಸ್.ಆರ್.ಗೌಡ, ಮಹಾಪೌರರಾದ ಬಿ.ಜಿ. ಕೃಷ್ಣಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕಿತರಾದ ಡಾ. ವಿಶಾಲ್ ಆರ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಪಲ್ಲವಿ ಅಕುರಾತಿ, ಜಿಲ್ಲಾಧಿಕಾರಿ ಡಾ. ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಸಿಇಓ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‍ವಾಡ್, ಸಾ.ಶಿ.ಇ. ಉಪನಿರ್ದೇಶಕರಾದ ಸಿ. ನಂಜಯಯ್ ಮತ್ತು ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

(Visited 10 times, 1 visits today)
Bommai CM tumkur
Previous Articleಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ
Next Article ಗರಿಷ್ಠ ಪ್ರಮಾಣದಲ್ಲಿ ಆಯುಷ್ಮಾನ್ ಕಾರ್ಡ್ ನೀಡಲು ಜಿಲ್ಲಾಧಿಕಾರಿ ಸೂಚನೆ
News Desk Benkiyabale

Related Posts

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm ಇತರೆ ಸುದ್ಧಿಗಳು

ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ

May 23, 2025 2:53 pm ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm ತುಮಕೂರು
ತಾಜಾ ಸುದ್ಧಿಗಳು

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm
ತುಮಕೂರು

ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ

May 23, 2025 2:53 pm
ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm
ಇತರೆ ಸುದ್ಧಿಗಳು

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
ತುಮಕೂರು

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm
ತುಮಕೂರು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm
Our Youtube Channel
Our Picks

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

By News Desk BenkiyabaleMay 23, 2025 2:55 pm

ತುರುವೇಕೆರೆ: ನಮ್ಮ ಭಾರತೀಯ ಪರಪಂಪರೆಯಲ್ಲಿ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆಯಲ್ಲಿ ಹೊಂದಿರುವ ಶ್ರೀಮಂತ ರಾಷ್ಟç ಎಂದು ಬೆಂಗಳೂರು ವಿಶ್ವವಿದ್ಯಾಲಯ ಅಮೃತ ಸಿಂಚನ…

ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ

May 23, 2025 2:53 pm

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.