BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್‍ನ ಯೋಜನೆಗಳ ಹೆಸರು ಬದಲಾವಣೆಯಷ್ಟೇ ಬಿಜೆಪಿ ಸಾಧನೆ: ಆರ್.ರಾಜೇಂದ್ರ
Trending

ಕಾಂಗ್ರೆಸ್‍ನ ಯೋಜನೆಗಳ ಹೆಸರು ಬದಲಾವಣೆಯಷ್ಟೇ ಬಿಜೆಪಿ ಸಾಧನೆ: ಆರ್.ರಾಜೇಂದ್ರ

By News Desk BenkiyabaleUpdated:May 30, 2022 6:34 pm

ತುಮಕೂರು:


ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಇಂದು ಯುವಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಜನಾಕ್ರೋಶ ಪ್ರತಿಭಟನಾ ರ್ಯಾಲಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್, ಎಂ.ಎಲ್.ಸಿ. ಆರ್.ರಾಜೇಂದ್ರ ಸೇರಿದಂತೆ ನೂರಾರು ಕಾರ್ಯಕರ್ತರು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ನಗರದ ಟೌನ್‍ಹಾಲ್ ವೃತ್ತದಲ್ಲಿ ಸಾರ್ವಜನಿಕ ಸಮಾರಂಭ ನಡೆಸಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ದ ಘೋಷಣೆ ಕೂಗುತ್ತಾ ಬಿ.ಹೆಚ್.ರಸ್ತೆ, ಎಂ.ಜಿ.ರಸ್ತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ರಕ್ಷಣೆಗೆಂದು ನಿಯೋಜಿಸಲಾಗಿದ್ದ ಪೊಲೀಸರ ತಂಡ, ಅವರನ್ನು ತಡೆದು ಪೊಲೀಸ್ ವಾಹನಕ್ಕೆ ತುಂಬಲು ಮುಂದಾದಾಗ ಕೆಲ ಕಾಲ ಬೀಗುವಿನ ವಾತಾವರಣ ನಿರ್ಮಾಣವಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹರಸಾಹಸ ಪಟ್ಟು ಪೊಲೀಸರು ವಾಹನಕ್ಕೆ ತುಂಬುವಲ್ಲಿ ಯಶಸ್ವಿಯಾದರು.
ಇದಕ್ಕೂ ಮುನ್ನ ಟೌನ್‍ಹಾಲ್ ವತ್ತದಲ್ಲಿ ನಡೆದ ಜನಾಕ್ರೋಶ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಸಾಧನೆ ಎಂದರೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಯೋಜನೆಗಳ ಹೆಸರು ಬದಲಾವಣೆಯಷ್ಟೇ. ಇಂದು ದೇಶದಲ್ಲಿ 60 ಲಕ್ಷ ಸರಕಾರಿ ನೌಕರಿ ಖಾಲಿ ಇದೆ.ಈ ಬಗ್ಗೆ ಪ್ರಶ್ನಿಸಿದರೆ ಇಡಿ, ಐಟಿ ಹೆಸರಿನಲ್ಲಿ ಬೆದರಿಸುವ ಕುತಂತ್ರದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದವರದ್ದು ಗಾಂಧಿ ಹಿಂದುತ್ವ, ಬಿಜೆಪಿಯದ್ದು ಗೂಡ್ಸೆ ಹಿಂದುತ್ವ.ನಿಮಗೆ ನಾಚಿಕೇಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸತ್ತರೆ ನಿಷೇಧಾಜ್ಞೆಯನ್ನು ಮೀರಿ ಮೃತದೇಹದ ಮೆರವಣಿಗೆ ನಡೆಸಿ, ಸರಕಾರದ ಹಣದಲ್ಲಿ ಪರಿಹಾರ ನೀಡುವ ಬಿಜೆಪಿ ಪಕ್ಷದವರು, ಕಳೆದ ಒಂದು ತಿಂಗಳ ಹಿಂದೆ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದರೂ ಜಿಲ್ಲೆಯಲ್ಲಿರುವ ಮೂವರು ಮಂತ್ರಿಗಳು, ನಾಲ್ವರು ಶಾಸಕರು ಕನಿಷ್ಠಪಕ್ಷ ತಿರುಗಿಯೂ ನೋಡಿಲ್ಲ. ಪರಿಹಾರವೆಂಬುದು ಮರೀಚಿಕೆಯಾಗಿದೆ.ದಲಿತರನ್ನು ಕಂಡರೆ ಇಷ್ಟು ತಾತ್ಸಾರ ಏಕೇ, ಇದನ್ನು ಪ್ರತಿಯೊಬ್ಬ ಯುವಜನತೆಯೂ ಅರ್ಥ ಮಾಡಿಕೊಳ್ಳಬೇಕು. ಎಂ.ಎಲ್.ಸಿ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಿದಂತೆ ಮುಂಬರುವ ಚುನಾವಣೆಗಳಲ್ಲಿಯೂ ಒಗ್ಗೂಡಿ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಮಂತ್ರಿ ಟಿ.ಬಿ.ಜಯಚಂದ್ರ, ರಾಜ್ಯದಲ್ಲಿರುವ ಬಿಜೆಪಿ ಸರಕಾರ ಸಂವಿಧಾನದ ಚೌಕಟ್ಟು ಮೀರಿ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಶೇ10 ರ ಕಮಿಷನ್ ಸರಕಾರ ಎಂದು ಸಿದ್ದರಾಮಯ್ಯ ಸರಕಾರವನ್ನು ಟೀಕಿಸಿದ್ದ ಮೋದಿ,ಶೇ40ರ ಕಮಿಷನ್ ನೀಡಬೇಕೆಂದು ಸ್ವತಹಃ ಸಂತ್ರಸ್ಥರೇ ಪತ್ರ ಬರೆದರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಂತಹ ಸರಕಾರಕ್ಕೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ.ಯುವ ಕಾಂಗ್ರೆಸ್‍ನ ಜನಾಕ್ರೋಶ ಹೋರಾಟ ಪ್ರತಿ ಹಳ್ಳಿ, ಹೋಬಳಿಗಳನ್ನು ಮುಟ್ಟಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಯುವ ಮುಖಂಡ ನಿಕೇತ್‍ರಾಜ್ ಮೌರ್ಯ ಮಾತನಾಡಿ, 2011-12ರಲ್ಲಿ ಕೈಗಾರಿಕಾ ಹೂಡಿಕೆಯಲ್ಲಿ 11ನೇ ಸ್ಥಾನದಲ್ಲಿದ್ದ ಕರ್ನಾಟಕವನ್ನು 2013ರಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರಸ್ವೀಕರಿಸಿದ ಸಿದ್ದರಾಮಯ್ಯ ನಂಬರ್ 1 ಸ್ಥಾನಕ್ಕೆ ತಂದು ಕೂರಿಸಿದರು.ಐಟಿ, ಬಿಟಿ, ಜನರಿಗೆ ಶುದ್ದ ಕುಡಿಯುವ ನೀರು, ಎಲೆಕ್ಟ್ರಿಕಲ್ ವಾಹನ, ಸೋಲಾರ್ ಪಾರ್ಕು ಸೇರಿದಂತೆ, ಹೂಡಿಕೆ ಮತ್ತು ಮೂಲಭೂತ ಸೌಕರ್ಯಗಳಲ್ಲಿ ಮುಂದಿರುವಂತೆ ನೋಡಿಕೊಂಡರು,ಅಂದಿನ ಕೇಂದ್ರ ಸರಕಾರ ಆರ್‍ಡಿಪಿಆರ್ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನಾಲ್ಕು ವರ್ಷಗಳ ಕಾಲ ಸತತವಾಗಿ ಕರ್ನಾಟಕಕ್ಕೆ ಪ್ರಶಸ್ತಿ ನೀಡಿ ಗೌರವಿಸಿತ್ತು.ಆದರೆ ಇಂದು ರಾಜ್ಯದಲ್ಲಿ ಕೋಮವಾದ ಬೇರೂರಿದ್ದು,ಬಂಡವಾಳಗಾರರು ಹೂಡಿಕೆಗೆ ಹಿಂದೇಟು ಹಾಕುವಂತಾಗಿದೆ.ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಸದಾ ಮುಂದೆ ಇರುತ್ತಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಹಿಜಾಬ್, ನೈತಿಕ ಪೊಲೀಸ್ ಗಿರಿ, ಲವ್ ಜಿಹಾದ್ ನಂತಹ ಪೊಳ್ಳು ಹೋರಾಟಗಳಿಗೆ ಸಿಕ್ಕಿ 20ನೇ ಸ್ಥಾನಕ್ಕೆ ಕುಸಿದಿವೆ. ಕಾಂಗ್ರೆಸ್ ಅಭಿವೃದ್ದಿಯ ಪ್ರತೀಕವಾಗಿ ಸ್ಥಾಪಿಸಿದ್ದ ಸಾರ್ವಜನಿಕ ಉದ್ದಿಮೆಗಳಾದ ಏರ್‍ಲೈನ್ಸ್, ರೈಲ್ವೆ,ಬಿ.ಎಸ್.ಎನ್.ಎಲ್,ಎಲ್.ಐ.ಸಿ ಸಂಸ್ಥೆಗಳನ್ನು ಮಾರಾಟ ಮಾಡಿ ದೇಶವನ್ನು ಆದೋಗತಿಗೆ ತಳ್ಳುತ್ತಿದೆ.ಈ ದೇಶದ ಸಂವಿಧಾನ ಉಳಿಯಬೇಕಾದರೆ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದರು.
ಜನಾಕ್ರೋಶ ಪ್ರತಿಭಟನೆಯನ್ನು ಕುರಿತು ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಮಾತನಾಡಿ,ಈ ದೇಶದ ಪ್ರಧಾನಿಯಾಗಿ ಓರ್ವ ಟೀ ಮಾರಾಟ ಮಾಡುವ ವ್ಯಕ್ತಿ ಆಯ್ಕೆಯಾಗಿದ್ದರೆ, ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವೇ ಕಾರಣ. ಇಂತಹ ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್ ಅವರ ಹೆಸರು ಹೇಳುವ ನೈತಿಕತೆ ಇದೆಯೇ,ಒಮ್ಮೆಯೂ ರಾಜ್ಯದ ಜನತೆಗೆ ಬಹುಮತ ನೀಡದಿದ್ದರೂ, ಪ್ರತಿಪಕ್ಷಗಳ ಶಾಸಕರನ್ನು ಅಪರೇಷನ್ ಕಮಲದ ಮೂಲಕ ಸೆಳೆದು,ಹಿಂಬಾಗಿಲಿನ ಮೂಲಕ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷಕ್ಕೆ ಜನಸಾಮಾನ್ಯರ ಹಿತಬೇಕಿಲ್ಲ, ಕಪ್ಪು ಹಣ ವಾಪಸ್, ಉದ್ಯೋಗ ನೀಡುವ ಭರವಸೆ ನೀಡಿದ್ದ ಬಿಜೆಪಿ,ಬದಲಾಗಿದೆ ಸಾರ್ವಜನಿಕ ಉದ್ದಿಮೆಗಳ ಮಾರಾಟ,ಜಿ.ಎಸ್.ಟಿ. ಹೆಸರಿನಲ್ಲಿ ಜನರಿಗೆ ತೆರಿಗೆ ಹೇರಿ ಜನರನ್ನು ಸಂಕಷ್ಟದ ಕೂಪಕ್ಕೆ ತಳ್ಳಿದೆ.ರಾಜ್ಯಕ್ಕೆ ಜಿ.ಎಸ್.ಟಿ ಪಾಲು ನೀಡಲು ಅಡ್ಡಗಾಲು ಹಾಕಿದ ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಮತ್ತೊಮ್ಮೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ,ಇಡೀ ರಾಜ್ಯದ ಮಾನ ಹರಾಜಿಗಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಮಾಜಿ ಶಾಸಕ ಡಾ.ರಫೀಕ್ ಅಹಮದ್,ವಕ್ಪ್ ಬೋರ್ಡ್ ಮಾಜಿ ಚೇರ್ಮನ್ ಇಕ್ಬಾಲ್ ಅಹಮದ್,ರೇವಣ್ಣಸಿದ್ದಯ್ಯ, ಕಲ್ಲಹಳ್ಳಿ ದೇವರಾಜು,ಯುವಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾರೆಡ್ಡಿ, ಸುನೀಲ್, ಪ್ರದೀಪ್, ಆಶಿಕಾ,ದಿವ್ಯಾ, ಖಾಲಿದ್, ಅನಿಲ್, ಹಿಲಾಯಿ ಸಿಖಂದರ್, ರಾಜೇಶ್ ದೊಡ್ಡಮನೆ, ಶ್ರೀನಿವಾಸ್, ಜಿ.ಎನ್.ಮೂರ್ತಿ, ಚಿದಾನಂದ್ ಮತ್ತಿತರರು ಉಪಸ್ಥಿತರಿದ್ದರು.

(Visited 6 times, 1 visits today)
Congress mlc r.rajendra tumkur
Previous Articleಜಿಂಕೆ ಬದುಕಿಗಾಗಿ ಓಡುವಂತೆ ವಿದ್ಯಾರ್ಥಿಗಳು ಕಲಿಕೆಯಿಂದೆ ಓಡಬೇಕು
Next Article ಲೂಟಿ ಮಾಡಿ ದೇಶ ಮಾರಿದ ಕಾಂಗ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಆರೋಪ
News Desk Benkiyabale

Related Posts

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
Our Youtube Channel
Our Picks

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleOctober 29, 2025 2:01 pm

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ…

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.