BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
  • ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
  • ೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ
  • ಐದು ಜನರ ಮೇಲೆ ಚಿರತೆ ದಾಳಿ
  • ಮಕ್ಕಳಲ್ಲಿ ದಂತಗಳ ಸಂರಕ್ಷಣೆ ಬಗ್ಗೆ ಜಾಗೃತಿ ಅತ್ಯಗತ್ಯ
  • ಮಾರ್ಗಸೂಚಿಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು: ಸಂಜಯ್ ಬಿಜ್ಜೂರು
  • ಸಿದ್ದರಬೆಟ್ಟ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿಗಳ ೪೪ನೇ ಜನ್ಮವರ್ದಂತಿ ಆಚರಣೆ ಕಾರ್ಯಕ್ರಮ
  • ಆ.೧ರಂದು ವ್ಯಸನಮುಕ್ತ ದಿನಾಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಹಿಂದುಳಿದ ವರ್ಗದವರ ಪರ ನಿಲ್ಲುವೆ ಎಂದಿದ್ದ ಶಾಸಕರು ಉಲ್ಟಾ ಹೊಡೆದಿದ್ದಾರೆ’!
ಇತರೆ ಸುದ್ಧಿಗಳು

‘ಹಿಂದುಳಿದ ವರ್ಗದವರ ಪರ ನಿಲ್ಲುವೆ ಎಂದಿದ್ದ ಶಾಸಕರು ಉಲ್ಟಾ ಹೊಡೆದಿದ್ದಾರೆ’!

By News Desk BenkiyabaleUpdated:June 07, 2022 5:17 pm

ತುಮಕೂರು:


ಚುನಾವಣಾ ಪೂರ್ವದಲ್ಲಿ ಹಿಂದುಳಿದ ವರ್ಗಗಳಿಗೆ ಮೊದಲ ಅದ್ಯತೆ ನೀಡುವುದಾಗಿ ಹೇಳಿದ್ದ ತುಮಕೂರು ನಗರ ಶಾಸಕರು, ನಗರದಲ್ಲಿ ನಿರ್ಮಾಣವಾದ ದೇವರಾಜು ಅರಸು ಭವನ ಉದ್ಘಾಟನೆಗೆ ಹಿಂದುಳಿದ ವರ್ಗಗಳ ಮುಖಂಡರಿಗೆ ಕನಿಷ್ಠ ಆಹ್ವಾನವನ್ನು ನೀಡದೆ ಅಪಮಾನ ಮಾಡಿದ್ದಾರೆ. ಇದು ಖಂಡನೀಯ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್ ಆರೋಪಿಸಿದ್ದಾರೆ.
ನಗರದ ಯಾದವ ಹಾಸ್ಟಲ್‍ನಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಳಿದ ವರ್ಗದವರು ನನ್ನನ್ನು ಬೆಂಬಲಿಸಿ, ನಾನು ನಿಮ್ಮ ಬೆನ್ನಿಗೆ ನಿಂತು ಕೆಲಸ ಮಾಡುತ್ತೇನೆ ಎಂದಿದ್ದ ಶಾಸಕರು, ಈಗ ಉಲ್ಟಾ ಹೊಡೆದಿದ್ದಾರೆ ಎಂದರು.
ದೇವರಾಜ ಅರಸು ಎಂಬುದು ಒಂದು ಹೆಸರಲ್ಲ. ಅದು ಹಿಂದುಳಿದ ವರ್ಗಗಳ ಶಕ್ತಿ. ಸಣ್ಣ ಸಣ್ಣ ಶ್ರಮ ಸಂಸ್ಕøತಿಯ ಜಾತಿಗಳನ್ನು ಗುರುತಿಸಿ, ಅವರಿಗೆ ರಾಜಕೀಯ ಅಧಿಕಾರ ನೀಡುವ ಮೂಲಕ ನಿಮ್ನ ವರ್ಗಗಳಿಗೆ ಅವಕಾಶದ ಭಾಗಿಲುಗಳು ತೆರೆದುಕೊಳ್ಳುವಂತೆ ಮಾಡಿ, ಸಮಾಜದ ಮುಖ್ಯವಾಹಿನಿಗೆ ಬರಲು ಕಾರಣಕರ್ತರಾದರು. ಜೀತಪದ್ದತಿ ರದ್ದು, ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಮೂಲಕ ಸಣ್ಣ ಸಮುದಾಯಗಳು ಒಂದಿಷ್ಟು ಭೂಮಿಯ ಹಕ್ಕು ಪಡೆಯಲು ಸಾಧ್ಯವಾಯಿತು ಎಂದು ಧನಿಯಕುಮಾರ್ ತಿಳಿಸಿದರು.
ಹಿಂದುಳಿದ ವರ್ಗಗಳ ಒಕ್ಕೂಟದ ಟಿ.ಎನ್.ಮಧುಕರ್ ಮಾತನಾಡಿ, ಅವಮಾನಗಳನ್ನೇ ಮೆಟ್ಟಿನಿಂತು,ತನ್ನಂತಹ ದ್ವನಿ ಇಲ್ಲದ ಸಮುದಾಯಗಳಿಗೆ ಹೊಸ ಕಾಯ್ದೆ, ಕಾನೂನುಗಳ ಮೂಲಕ ನ್ಯಾಯ ಒದಗಿಸಿದ ದೇವರಾಜ ಅರಸು ಅವರ ಜಯಂತಿ ಆಚರಣೆ, ಅವರ ತತ್ವ ಸಿದ್ದಾಂತ, ಕಾಳಜಿಯನ್ನು ನಾವೆಲ್ಲರೂ ಅಳವಡಿಸಿಕೊಂಡರೆ ಮಾತ್ರ ಆರ್ಥಪೂರ್ಣವಾಗಲಿದೆ.ನಮ್ಮನ್ನು ಶೋಷಣೆ ಮಾಡುವವರ ಜೊತೆ ಸೇರಿ, ಮತ್ತಷ್ಟು ಶೋಷಣೆಗೆ ಒಳಗಾಗುತ್ತಿದ್ದೇವೆ.ಅಂದು ಉಳುವವನೇ ಭೂಮಿಯ ಒಡೆಯ ಕಾನೂನಿನ ಅನ್ವಯ ನಮ್ಮ ಆಸ್ಮಿತೆಯನ್ನು ಕಾಣುತ್ತಿದ್ದೇವೆ.ಇದಕ್ಕೆ ದೇವರಾಜ ಅರಸು ಕಾರಣ.ಇಲ್ಲದಿದ್ದಲ್ಲಿ ಸಿಎಎ ಮತ್ತು ಎನ್.ಆರ್.ಸಿಯಂತಹ ಕಾನೂನಿನ ಅಡಿಯಲ್ಲಿ ಗಡಿಪಾರಾಗಬೇಕಾಗುತ್ತಿತ್ತು.ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ, ಮಕ್ಕಳಿಗೆ ಒಳ್ಳೆಯ ಭವಿಷ್ಯ ಕಟ್ಟಿಕೊಡುವತ್ತ ಹಿಂದುಳಿದ ವರ್ಗಗಳ ಜನರು ಆಲೋಚಿಸಬೇಕಾಗಿದೆ ಎಂದರು.
ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಹಿಂದುಳಿದ ವರ್ಗದವರ ನೋವನ್ನು ಅರ್ಥ ಮಾಡಿಕೊಂಡ ಯಾರಾದರು ನಾಯಕರಿದ್ದರೆ ಅವರೇ ದೇವರಾಜ ಅರಸು ಮಾತ್ರ..ಆದರೆ ತುಮಕೂರು ನಗರ ಶಾಸಕರಾದ ಜೋತಿಗಣೇಶ್, ನಿಮ್ಮನ್ನು ದೇವರಾಜ ಅರಸು ತರಹ ನೋಡುತ್ತೇನೆ ಎಂದು ಭರವಸೆ ನೀಡಿ, ನಂಬಿಸಿ,ಈಗ ತಿರಸ್ಕಾರ ಮಾಡಿದ್ದಾರೆ. ನುಡಿದಂತೆ ನಡೆಯದ ಇವರನ್ನು ಹಿಂದುಳಿದ ವರ್ಗಗಳು ಹೇಗೆ ನಂಬಬೇಕು ಎಂದು ಪ್ರಶ್ನಿಸಿದ ಅವರು,ಇಂದು ಸಂವಿಧಾನದ ಆಶಯಗಳಿಗೆ ವಿರುದ್ದವಾಗಿ ಖಾಸಗೀಕರಣ ಅತಿ ವೇಗವಾಗಿ ನಡೆಯುತ್ತಿದ್ದು, ಬಡವರು, ಹಿಂದುಳಿದವರು ಶಿಕ್ಷಣ ಪಡೆಯುವುದೇ ಕಷ್ಟವಾಗಿದೆ. ಹಾಗಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಹೆಚ್ಚು ಹಾಸ್ಟಲ್‍ಗಳ ನಿರ್ಮಾಣವಾಗಬೇಕು. ಹಾಗೆಯೇ ನೂತನವಾಗಿ ಸ್ಮಾರ್ಟ್‍ಸಿಟಿಯಿಂದ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ.ಹೊಸ ಬಸ್ ನಿಲ್ದಾಣಕ್ಕೆ ದೇವರಾಜ ಅರಸು ಅವರ ಹೆಸರಿಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಹಾಗೂ ಹಿಂದುಳಿದ ವರ್ಗದ ನಾಯಕ ಮಲ್ಲಸಂದ್ರ ಶಿವಣ್ಣ ಮಾತನಾಡಿ,ದೇವರಾಜ ಅರಸು ನಂತರ ಬಹುತೇಕ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ಕೇವಲ ಮತ ಬ್ಯಾಂಕಾಗಿ ಪರಿಗಣಿಸುತ್ತಿವೆ. ಅವರ ಸಾಮಾಜಿಕ, ಅರ್ಥಿಕ, ರಾಜಕೀಯ ಅಭಿವೃದ್ದಿಗೆ ಯೋಜನೆಗಳಿಲ್ಲ. ಚುನಾವಣೆ ಟಿಕೇಟ್‍ಗೆ ಜನಪರಕ್ಕಿಂತ ಹಣಬಲಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.ಇದನ್ನು ಕೊನೆಗಾಣಿಸಲು ನಾವೆಲ್ಲರೂ ಅಮಿಷ ರಹಿತ ಮತದಾನಕ್ಕೆ ಮುಂದಾಗಬೇಕಿದೆ ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕ ಹಾಗೂ ತಿಗಳ ಸಮಾಜದ ಮುಖಂಡರ ಪ್ರೆಸ್ ರಾಜಣ್ಣ ಮಾತನಾಡಿ, ಭೂ ಮಾಲೀಕರ ಅಡಿಯಾಳಾಗಿ ದುಡಿಯುತಿದ್ದ ಗೇಣಿದಾರರಿಗೆ ಉಳುವವನೇ ಭೂಮಿ ಒಡೆಯ ಎಂಬ ಕಾನೂನು ತಂದು,ಭೂಮಿ ಹಕ್ಕು ಪಡೆಯುವಂತೆ ಮಾಡಿದರು.ಮೈಸೂರು ರಾಜ್ಯಕ್ಕೆ ಬದಲಾಗಿ ಕರ್ನಾಟಕ ಎಂದು ಮರುನಾಮಕರಣ ಮಾಡಿದರು.2016-17ರಲ್ಲಿ ತುಮಕೂರು ನಗರಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣಕ್ಕೆ ದೇವರಾಜ ಅರಸು ಅವರ ಹೆಸರಿಡಲು ನಿರ್ಣಯ ಕೈಗೊಳ್ಳಲಾಗಿದೆ.ಈಗ ಅದನ್ನು ಮತ್ತೆ ಸಭೆಗೆ ಮಂಡಿಸಿ,ಅನುಮೋಧನೆ ಪಡೆದು ಹೆಸರಿಸಬೇಕೆಂಬ ಒತ್ತಾಯ ನಮ್ಮದು ಎಂದರು.
ನಿವೃತ್ತ ಅಧಿಕಾರಿ ಜಿ.ಎಂ.ಸಣ್ಣಮುದ್ದಯ್ಯ ಮಾತನಾಡಿ, 1976-77 ರಲ್ಲಿ ಉದ್ಯೋಗದಲ್ಲಿ ಓಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಹಿಂದುಳಿದ ವರ್ಗದ ವಿದ್ಯಾವಂತರು ಸರಕಾರಿ ನೌಕರಿ ಪಡೆಯುವಂತೆ ಮಾಡಿದವರು ದೇವರಾಜ ಅರಸು,ಎಂದಿಗೂ ಸ್ವಜಾತಿ, ಸ್ವಕುಟುಂಬಕ್ಕೆ ಅಂಟಿಕೊಂಡವರಲ್ಲ. ಅಡಿದಂತೆ ಮಾಡಿ ತೋರಿಸಿದರು.ಅರಸು ಅವರಲ್ಲಿ ಶೇ10ರಷ್ಟು ಸಾಮಾಜಿಕ ಕಾಳಜಿಯನ್ನು ನಾವೆಲ್ಲರೂ ಮೈಗೂಡಿಸಿಕೊಂಡರೆ ಈ ಆಚರಣೆ ಸಾರ್ಥಕ ಎಂದರು.

(Visited 1 times, 1 visits today)
tumkur
Previous Articleಇಂದಿನ ದಿನಗಳಲ್ಲಿ ವಿಚಾರಕ್ಕಿಂತ ಆಚಾರ ಮುಖ್ಯ
Next Article ಜಾಮೀನು ರಹಿತ ಪ್ರಕರಣ ದಾಖಲಿಸುವುದು ಸರಿಯಲ್ಲ: ರಕ್ಷಾ ರಾಮಯ್ಯ
News Desk Benkiyabale

Related Posts

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:59 pm ತುಮಕೂರು

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:57 pm ತುಮಕೂರು

೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ

July 31, 2025 2:33 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:59 pm

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:57 pm
ತುಮಕೂರು

೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ

July 31, 2025 2:33 pm
ತುಮಕೂರು

ಐದು ಜನರ ಮೇಲೆ ಚಿರತೆ ದಾಳಿ

July 31, 2025 2:18 pm
ಇತರೆ ಸುದ್ಧಿಗಳು

ಮಕ್ಕಳಲ್ಲಿ ದಂತಗಳ ಸಂರಕ್ಷಣೆ ಬಗ್ಗೆ ಜಾಗೃತಿ ಅತ್ಯಗತ್ಯ

July 31, 2025 2:00 pm
ಇತರೆ ಸುದ್ಧಿಗಳು

ಮಾರ್ಗಸೂಚಿಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು: ಸಂಜಯ್ ಬಿಜ್ಜೂರು

July 24, 2025 3:34 pm
Our Youtube Channel
Our Picks

ಮಕ್ಕಳಲ್ಲಿ ದಂತಗಳ ಸಂರಕ್ಷಣೆ ಬಗ್ಗೆ ಜಾಗೃತಿ ಅತ್ಯಗತ್ಯ

July 31, 2025 2:00 pm

ಮಾರ್ಗಸೂಚಿಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು: ಸಂಜಯ್ ಬಿಜ್ಜೂರು

July 24, 2025 3:34 pm

ಸಿದ್ದರಬೆಟ್ಟ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿಗಳ ೪೪ನೇ ಜನ್ಮವರ್ದಂತಿ ಆಚರಣೆ ಕಾರ್ಯಕ್ರಮ

July 24, 2025 3:33 pm

ಆ.೧ರಂದು ವ್ಯಸನಮುಕ್ತ ದಿನಾಚರಣೆ

July 24, 2025 3:32 pm

ಎತ್ತಿನಹೊಳೆ ಯೋಜನೆ

July 24, 2025 3:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

By News Desk BenkiyabaleJuly 31, 2025 2:59 pm

ಹುಳಿಯಾರು: ವರ್ಷಕ್ಕೆ ಎರಡ್ಮೂರು ಬಾರಿ ಹುಳಿಯಾರು ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ವಿಚಾರ ಮುನ್ನೆಲೆಗೆ ಬರುತ್ತದೆ. ಕಳೆದ ವರ್ಷ ಹರಾಜು…

ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ

July 31, 2025 2:57 pm

೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ

July 31, 2025 2:33 pm

ಐದು ಜನರ ಮೇಲೆ ಚಿರತೆ ದಾಳಿ

July 31, 2025 2:18 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.