BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪತ್ರಕರ್ತರೆಂದರೆ ಟೀಕೆ ಮಾಡುವವರಲ್ಲ: ಬಿಎಸ್‍ವೈ
ಇತರೆ ಸುದ್ಧಿಗಳು

ಪತ್ರಕರ್ತರೆಂದರೆ ಟೀಕೆ ಮಾಡುವವರಲ್ಲ: ಬಿಎಸ್‍ವೈ

By News Desk BenkiyabaleUpdated:June 15, 2022 5:48 pm

ತುಮಕೂರು:


ಸಮಾಜದಲ್ಲಿ “ಪತ್ರಕರ್ತರೆಂದರೆ ಕೇವಲ ಟೀಕೆ ಮಾಡುವವರಲ್ಲ. ತಪ್ಪಾದಾಗ ಎಚ್ಚರಿಸಿ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುವ ನೇರ ಮತ್ತು ನಿಷ್ಠುರವಾದಿಗಳು” ಎಂದು ಪತ್ರಕರ್ತರನ್ನುದ್ದೇಶಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ ಮಾತುಗಳಿವು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿದ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಕ್ಕೆ ಆಯ್ಕೆಯಾಧ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಸುದ್ದಿ ಮಾಧ್ಯಮಗಳು ಸುದ್ದಿ ಬಿತ್ತರಿಸುವ ರಭಸದಲ್ಲಿ ವಸ್ತುಸ್ಥಿತಿಯನ್ನು ಮರೆಮಾಚಬಾರದು ಎಂದು ಕಿವಿ ಮಾತು ಹೇಳಿದರು.
ಮೊದಲಿನಿಂದಲೂ ಪತ್ರಕರ್ತರೊಂದಿಗೆ ನಾನು ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ಅಧಿಕಾರದಲ್ಲಿದ್ದಾಗ ಪತ್ರಕರ್ತರ ಅಭ್ಯುದಯಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆಂಬ ಆತ್ಮತೃಪ್ತಿ, ಸಂತಸ ನನಗಿದೆ. ಸಂವಿಧಾನದ 4ನೇ ಅಂಗವಾದ ಪತ್ರಿಕಾ ರಂಗವು ಕೋವಿಡ್ ಸಂದರ್ಭದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿರುವುದು ಶ್ಲಾಘನೀಯವಾದುದು. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಕೋವಿಡ್ ವಾರಿಯರ್‍ಗಳೆಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25000ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕೆಯನ್ನು ಹಾಕಿಸಲು ಕ್ರಮ ಕೈಗೊಳ್ಳಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಹೊಣೆಗಾರಿಕೆಯಿಂದ ದುಡಿದು ಸೋಂಕಿನಿಂದ ಮೃತಪಟ್ಟ ರಾಜ್ಯದ ಅರ್ಹ ಪತ್ರಕರ್ತ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದ ಅವರು ಕೋರೋನಾ ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ದಿನಸಿ ಕಿಟ್‍ಗಳನ್ನು ವಿತರಿಸಿ ನೆರವಿಗೆ ಧಾವಿಸಿರುವುದು ನಿಜಕ್ಕೂ ಅಭಿನಂದನಾರ್ಹ ಎಂದು ತಿಳಿಸಿದರು.
ನಾನು ಮುಖ್ಯ ಮಂತ್ರಿಯಾಗಿದ್ದಾಗ ತುಮಕೂರು ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕಾಗಿ 25ಲಕ್ಷ ರೂ.ಗಳನ್ನು ನೀಡಲಾಗಿತ್ತು. ಎಲ್ಲರ ಸಹಕಾರದಿಂದ ಪತ್ರಿಕಾಭವನ ಕಟ್ಟಡ ನಿರ್ಮಾಣ ಪೂರ್ಣವಾಗಿದ್ದರೂ ಹಲವಾರು ತಾಂತ್ರಿಕ ಕಾರಣಗಳಿಂದ ನಿರ್ವಹಣೆ ಮಾಡಲಾಗದೆ ಮುಚ್ಚಲಾಗಿತ್ತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನೀ. ಪುರುಷೋತ್ತಮ್ ಹಾಗೂ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಪರಿಶ್ರಮದಿಂದ ಪತ್ರಿಕಾಭವನ ಕಾರ್ಯನಿರ್ವಹಿಸುವಂತಾಗಿದೆ. ಅಲ್ಲದೆ ಪತ್ರಿಕಾಭವನದ ನವೀಕರಣಕ್ಕಾಗಿ ಪಾಲಿಕೆಯಿಂದ 18ಲಕ್ಷ ರೂ. ಮಂಜೂರಾಗಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.
ರಾಜ್ಯದ ಜನರ ನೆಮ್ಮದಿಯನ್ನು ಕಿತ್ತುಕೊಂಡಿದ್ದ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವ-ಜೀವನವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸಿದ ಪತ್ರಕರ್ತರ ಸೇವೆಯನ್ನು ನಾನೆಂದೂ ಮರೆಯುವುದಿಲ್ಲ. ನನ್ನ ಅಧಿಕಾರಾವಧಿಯ ಕೆಲಸಕಾರ್ಯಗಳನ್ನು ಮೆಚ್ಚಿ ಸಂಘದ ವತಿಯಿಂದ ನನ್ನನ್ನು ಅಭಿನಂದಿಸಿದ್ದಕ್ಕೆ ಆಭಾರಿಯಾಗಿದ್ದೇನೆ ಎಂದು ಮನತುಂಬಿ ಹೇಳಿದರು.
ಸಂಘಕ್ಕೆ ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಹುಟ್ಟು ಹಾಕಿರುವ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭವು ಅರ್ಥಪೂರ್ಣವಾದುದು. ಜನತಂತ್ರ ವ್ಯವಸ್ಥೆಯಲ್ಲಿ 4ನೇ ಸ್ಥಂಭವಾದ ಪತ್ರಿಕಾರಂಗದ ಶಕ್ತಿ ಪತ್ರಕರ್ತನ ಹೊಣೆಗಾರಿಕೆ ಮೇಲೆ ನಿಂತಿದೆ. ಪತ್ರಕರ್ತರ ಲೇಖನಗಳಿಗೆ ಸರ್ಕಾರಗಳೇ ಉರುಳಿ ಹೋದ ನಿದರ್ಶನಗಳಿವೆ. ಪತ್ರಕರ್ತನು ಪ್ರಜೆಗಳ ದನಿಯಾಗಿ ಅವರ ತುಡಿತಗಳನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡಬೇಕಾಗುತ್ತದೆ. ಪತ್ರಿಕಾ ವೃತ್ತಿಯಲ್ಲಿ ಹಣ ಮಾಡಲು ಬರುವವರು ಕ್ಷಣಿಕ ಆನಂದವನ್ನಷ್ಟೆ ಹೊಂದಬಹುದು. ಆದರೆ ಉತ್ತಮ ಧ್ಯೇಯೋದ್ದೇಶಗಳನ್ನಿಟ್ಟುಕೊಂಡ ವೃತ್ತಿಧರ್ಮ ಪಾಲಿಸುವ ಪತ್ರಕರ್ತ ಮಾತ್ರ ಯಶಸ್ವಿ ಕಾಣುತ್ತಾನೆ. ಪತ್ರಿಕಾ ವೃತ್ತಿಯನ್ನು ವ್ಯವಹಾರ/ವ್ಯಾಪಾರದ ದೃಷ್ಟಿಯಲ್ಲಿ ನೋಡದೆ ಅರ್ಪಣಾ ಮನೋಭಾವದಿಂದ ಅಪ್ಪಿಕೊಂಡಾಗ ಮಾತ್ರ ಸಮಾಜದ ಪಾವತ್ರ್ಯತೆ ಉಳಿಯುತ್ತದೆ ಎಂದರಲ್ಲದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಳಿತದಲ್ಲಿ ಚತುರರಷ್ಟೆ ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಹೃದಯವಂತಿಕೆಯಿಂದ ನಾಡಿನ ಪ್ರಜೆಗಳಿಗೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ರೂಪಿಸಿ ಎಲ್ಲರ ಮನದಲ್ಲಿ ಮನೆ ಮಾಡಿದ್ದಾರೆ. ಹಾಗಾಗಿ ಬಿಎಸ್‍ವೈ ಅವರನ್ನು ನಾಡಿನ ಎಲ್ಲರೂ ಗೌರವಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.


ಸ್ವಂತ ಕಟ್ಟಡಕ್ಕೆ ನಿವೇಶನ ಒದಗಿಸಲು ತುಮಕೂರು ಜಿಲ್ಲೆಯ ಪತ್ರಕರ್ತರ ಸಂಘದ ಬೇಡಿಕೆಯಂತೆ ಶಾಸಕರು, ಸಂಸದರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸಾಮಾಜಿಕ ಜಾಲತಾಣಗಳ ಭರಾಟೆ ಹೆಚ್ಚುತ್ತಿರುವುದರಿಂದ ಪತ್ರಕರ್ತರು ತಂತ್ರಜ್ಞಾನದಲ್ಲಿ ಅಪ್‍ಡೇಟ್ ಆಗಬೇಕು. ಈ ನಿಟ್ಟಿನಲ್ಲಿ ಸಂಘದ ವತಿಯಿಂದ ಪತ್ರಕರ್ತರಿಗೆ ವೃತ್ತಿ ನೈಪುಣ್ಯತೆ ತರಬೇತಿ, ಸಂವಾದ, ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ ನೆರವು ನೀಡುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರು ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರಿತು ಅಭಿನಂದನೆ ನುಡಿಗಳನ್ನಾಡುತ್ತಾ ಬಿ.ಎಸ್.ವೈ. ಅವರು ತಮ್ಮ ಅಧಿಕಾರಾವಧಿಯಲ್ಲಿ ಪತ್ರಕರ್ತ ಸ್ನೇಹಿಯಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರು. ಕೋವಿಡ್‍ನಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಇಡೀ ಜನತೆ ಸುರಕ್ಷಿತವಾಗಿ ಮನಯಲ್ಲಿರಿ ಎಂದು ಎಚ್ಚರಿಕೆ ಸಂದೇಶದ ವರದಿಗಳನ್ನು ಮಾಡುತ್ತಾ ತಮ್ಮ ಸುರಕ್ಷತೆಯನ್ನೇ ಪಣಕ್ಕಿಟ್ಟು ಮೃತಪಟ್ಟ ರಾಜ್ಯದ ಸುಮಾರು 55 ಪತ್ರಕರ್ತ ಕುಟುಂಬಗಳಿಗೆ ತಲಾ 5ಲಕ್ಷ ರೂ.ಗಳ ಪರಿಹಾರ ನೀಡಲು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರಿಂದ ಸಾಧ್ಯವಾಯಿತು. ಅಲ್ಲದೆ ಕೋವಿಡ್‍ನಿಂದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ಮಾಧ್ಯಮಗಳಿಗೆ ಒಂದೂವರೆ ವರ್ಷಗಳಿಂದ ಬಾಕಿ ಬರಬೇಕಿದ್ದ 56 ಕೋಟಿ ರೂ.ಗಳ ಜಾಹೀರಾತು ವೆಚ್ಚವನ್ನು ಬಿಡುಗಡೆ ಮಾಡಲು ತಕ್ಷಣವೇ ಆದೇಶ ಮಾಡುವ ಮೂಲಕ ಪತ್ರಕರ್ತರ ನೆರವಿಗೆ ನಿಂತರಲ್ಲದೆ ಪತ್ರಕರ್ತರಿಗಾಗಿ ಆರೋಗ್ಯ ಕಾರ್ಡು ವಿತರಿಸುವ ಮಹತ್ತರ ನಿರ್ಣಯ ಕೈಗೊಂಡರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ತಲಾ 25ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದ ಕೀರ್ತಿ ಯಡಿಯೂರಪ್ಪ ಅವರದು. ಯಡಿಯೂರಪ್ಪ ಅವರ ಎಲ್ಲ ಕೆಲಸಕಾರ್ಯಗಳು ಮನಸಿನಲ್ಲುಳಿವಂತಹವು ಎಂದು ಅವರ ಗುಣಗಾನ ಮಾಡಿದರು.
ಸಂಸದ ಜಿ.ಎಸ್. ಬಸವರಾಜು ಮಾತನಾಡುತ್ತಾ, ಬಿಎಸ್‍ವೈ ಅವರಂತೆ ದಾನ-ಧರ್ಮ ಮಾಡಿದ ಮುಖ್ಯಮಂತ್ರಿಗಳು ಮತ್ತಾರು ಇಲ್ಲ. ಹೇಮಾವತಿ ನೀರು ತುಮಕೂರಿಗೆ ಬರಲು ಯಡಿಯೂರಪ್ಪ ಅವರೇ ಮುಖ್ಯ ಕಾರಣ. ಮುಖ್ಯಮಂತ್ರಿಯಾದ ಕೂಡಲೇ ಹೇಮಾವತಿ ನಾಲೆ ಆಧುನೀಕರಣಕ್ಕಾಗಿ 450 ಕೋಟಿ ರೂ. ಮಂಜೂರು ಮಾಡಿದರು. ಹೇಮಾವತಿ ನೀರು ಒದಗಿಸಿದ ಪರಿಣಾಮ ಅತಿ ಹಿಂದುಳಿದ ತಾಲೂಕಿನ ಪಟ್ಟಿಯಲ್ಲಿದ್ದ ಜಿಲ್ಲೆಯ ಗುಬ್ಬಿ ತಾಲೂಕು ಇಂದು ಸಂಪದ್ಭರಿತ ತಾಲೂಕೆನೆಸಿಕೊಂಡಿದೆ ಎಂದು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು. ಕೊರಟಗೆರೆ ತಾಲೂಕು ಶ್ರೀ ಕ್ಷೇತ್ರ ಸಿದ್ಧರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡುತ್ತಾ ಪತ್ರಕರ್ತರ ಸಂಘವು ಗ್ರಾಮೀಣ ಭಾಗದ ಪತ್ರಕರ್ತರ ಶ್ರೇಯೋಭಿವೃದ್ಧಿಯತ್ತ ಗಮನಹರಿಸಬೇಕು ಎಂದರಲ್ಲದೆ ಪತ್ರಕರ್ತರು ನಕರಾತ್ಮಕ ವಿಷಯವನ್ನಷ್ಟೆ ಅಲ್ಲದೆ ಉತ್ತಮ ವಿಷಯ, ಸಾಧನೆಗಳ ಬಗ್ಗೆ ವರದಿ ಮಾಡುವತ್ತ ಒಲವು ತೋರಬೇಕು. ಇಂತಹ ವರದಿಗಳು ಇತರರಿಗೆ ಮಾದರಿಯಾಗುತ್ತದೆ. ಇದರಿಂದ ಉತ್ತಮ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತದೆ ಎಂದರಲ್ಲದೆ ಎರಡನೇ ಬಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಿ.ನೀ. ಪುರುಷೋತ್ತಮ್ ಅವರಿಗೆ ಶುಭ ಹಾರೈಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನೀ. ಪುರುಷೋತ್ತಮ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ 2ನೇ ಬಾರಿಗೆ ಸಂಘದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಸಂಕಷ್ಟದಲ್ಲಿ ನೆರವಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತುಮಕೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿರುವುದು ನನಗೆ ಸಂತಸವಾಗುತ್ತಿದೆ. ಸಂಘದ ಮನವಿ ಮೇರೆಗೆ ಗುಬ್ಬಿ ಜಯಣ್ಣ, ಬೇಡತ್ತೂರು ಶಿವಣ್ಣ, ಪಾವಗಡದ ನಾಗರಾಜು ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತಪಟ್ಟ ಉದಯೋನ್ಮುಖ ಪತ್ರಕರ್ತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಒದಗಿಸುವಲ್ಲಿ ಶ್ರಮಿಸಿದ ಸಂಘದ ರಾಜ್ಯಾಧ್ಯಕ್ಷ ತಗಡೂರು ಅವರಿಗೂ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲೇ ಪ್ರಥಮ ಬಾರಿಗೆ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗೆ ಆಹಾರ ಕಿಟ್ ನೀಡುವ ಮೂಲಕ ತುಮಕೂರು ಜಿಲ್ಲೆಯು ಇಡೀ ರಾಜ್ಯಕ್ಕೆ ಮಾದರಿಯಾಯಿತು ಎಂದು ತಿಳಿಸಿದರು.
ಐ.ಎಫ್.ಡಬ್ಲ್ಯೂ.ಜೆ. ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡುತ್ತಾ ಜಾತ್ಯಾತೀತವಾಗಿ ಎಲ್ಲರಿಗೂ ಸಮಾನ ಸ್ಥಾನಮಾನ ಹಾಗೂ ಹಕ್ಕು ನೀಡಲು ಸಂಕಲ್ಪ ಮಾಡಿದ ಮೊಟ್ಟ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಂದರೆ ಅತಿಶಯೋಕ್ತಿಯಾಗಲಾರದು. ಅವರು ನಂಬಿದವರನ್ನು ಕೈಬಿಟ್ಟವರಲ್ಲ. ಆತ್ಮವಿಶ್ವಾಸದೊಂದಿಗೆ ಜನಸೇವೆ ಮಾಡಿದಂತಹ ಯಡಿಯೂರಪ್ಪನವರನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿ ಎಂದರು. ಪತ್ರಕರ್ತರ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪತ್ರಕರ್ತರು ಕೆಟ್ಟ ಪತ್ರಕರ್ತರ ಸಾಲಿನಲ್ಲಿ ನಿಲ್ಲದೆ ಒಳ್ಳೆಯ ಪತ್ರಕರ್ತರೆನಿಸಿಕೊಳ್ಳಬೇಕು. ಡಿ.ವಿ. ಗುಂಡಪ್ಪ ಅವರಂತಹ ಮಹಾನ್ ವ್ಯಕ್ತಿ ಸ್ಥಾಪಿಸಿದ ಈ ಸಂಘಕ್ಕೆ ಕಳಂಕ ತರುವಂತಹ ಕೆಲಸ ಯಾರೂ ಮಾಡಬಾರದು. ಪ್ರಾಮಾಣಿಕ ಸೇವೆ, ಬದ್ಧತೆಯ ಕೆಲಸ ಮಾಡುವ ಮೂಲಕ ಪತ್ರಿಕೋದ್ಯಮಕ್ಕೆ ಶ್ರೇಷ್ಠತೆ ತರಬೇಕೆಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು. ಸರ್ಕಾರದಿಂದ 5ಲಕ್ಷ ರೂ. ಪರಿಹಾರ ಪಡೆದಿರುವ ಕೋವಿಡ್ ಸೋಂಕಿನಿಂದ ಮೃತಪಟ್ಟ ಗುಬ್ಬಿ ಜಯಣ್ಣ ಅವರು ಪತ್ನಿ ಜ್ಯೋತಿ ಮಾತನಾಡಿ ಪತಿಯನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ನನ್ನ ಹಾಗೂ ಕುಟುಂಬಕ್ಕೆ ನೆರವಾದ ಬಿ.ಎಸ್.ವೈ. ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಗಂಗಹನುಮಯ್ಯ, ಮೇಯರ್ ಬಿ.ಜಿ. ಕೃಷ್ಣಪ್ಪ, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ|| ಎಂ.ಆರ್. ಹುಲಿನಾಯ್ಕರ್, ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

(Visited 58 times, 1 visits today)
journalists tumkur
Previous Articleದಲಿತ ಮುಖಂಡನ ಹತ್ಯೆ: ಶವಾಗಾರಕ್ಕೆ ಗೃಹ ಸಚಿವರ ಭೇಟಿ
Next Article ಜಿಲ್ಲೆಯಲ್ಲಿ ಕೊರೋನಾ ಉಲ್ಬಣವಾಗದಂತೆ ಕಟ್ಟೆಚ್ಚರ ವಹಿಸಿ: ಅರಗ ಜ್ಞಾನೇಂದ್ರ
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.