BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ
  • ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
  • ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
  • ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಲಗುಂಡಿ ಸ್ವಚ್ಚಗೊಳಿಸುವ ಕಾರ್ಮಿಕರ ಸಾವು: ಸರ್ಕಾರವೇ ಅಪರಾಧಿ
ಇತರೆ ಸುದ್ಧಿಗಳು

ಮಲಗುಂಡಿ ಸ್ವಚ್ಚಗೊಳಿಸುವ ಕಾರ್ಮಿಕರ ಸಾವು: ಸರ್ಕಾರವೇ ಅಪರಾಧಿ

By News Desk BenkiyabaleUpdated:June 28, 2022 6:07 pm

ತುಮಕೂರು:


ದೇಶದ ಸರ್ವೋಚ್ಚ ನ್ಯಾಯಾಲಯ 2014ರಲ್ಲಿಯೇ ಯಾವುದೇ ಮುಂಜಾಗ್ರತಾ ಪರಿಕರಗಳಿಲ್ಲದೆ ಪೌರಕಾರ್ಮಿ ಕರನ್ನು ಕೆಲಸಕ್ಕೆ ನಿಯೋಜಿಸಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ. ಆದರೆ ವರ್ಷಕ್ಕೆ ನೂರಾರು ಪಿ.ಕೆ.ಎಸ್‍ಗಳು ಮಲಗುಂಡಿ ಸ್ವಚ್ಚಗೊಳಿಸುವ ವೇಳೆ ಮೃತಪಟ್ಟರು ಇದುವರೆಗೂ ಯಾವ ಅಧಿಕಾರಿ ವಿರುದ್ದವೂ ಶಿಕ್ಷೆಯಾಗಿಲ್ಲ. ಈ ವಿಚಾರದಲ್ಲಿ ಸರ್ಕಾರವೇ ಮೊದಲ ಅಪರಾಧಿ ಎಂದು ನ್ಯಾ.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಬಾಲಭವನದಲ್ಲಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘ ಮುನ್ಸಿಪಲ್ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಲಕ್ಷಾಂತರ ಸಂಖ್ಯೆಯಲ್ಲಿರುವ ಮುನ್ಸಿಪಲ್ ನೌಕರರನ್ನು ಕಸ ಗುಡಿಸುವವರು, ಕಸ ಎತ್ತುವವರು, ಸಾಗಿಸುವವರು ಹೀಗೆ ಹಲವು ವಿಭಾಗಗಳಾಗಿ ವಿಂಗಡಿಸಿ, ಒಡೆದು ಆಳುವ ನೀತಿಯನ್ನು ಅನುಸರಿಸುವ ಮೂಲಕ ನಮ್ಮ ದ್ವನಿ ಹೆಚ್ಚಾಗದಂತೆ ಮಾಡುತ್ತಿದೆ ಎಂದರು.
ನಿರುದ್ಯೋಗವೆಂದರೆ ಕೇವಲ ಕೆಲಸವಿಲ್ಲದೆ ಇರುವುದು ಎಂದರ್ಥವಲ್ಲ. ಇದರ ಹಿಂದೆ ಕಳ್ಳತನ, ಸುಲಿಗೆ, ದರೋಡೆ, ಭಯೋತ್ಪಾಧನೆ ಯಂತಹ ಸಮಾಜ ವಿದ್ರೋಹಿ ಕೃತ್ಯಗಳು ಅಡಗಿರುವುದರಿಂದ ಸರಕಾರಗಳು ನಿರುದ್ಯೋಗ ಸಮಸ್ಯೆಯ ನಿವಾರಣೆಗೆ ಮುಂದಾಗಬೇಕು. ಆದರೆ ಆಳುವ ಸರಕಾರಗಳಿಗೆ ನಿರುದ್ಯೋಗ ಒಂದು ರಾಜಕೀಯ ವಿಷಯವಾಗಿದೆಯೇ ಹೊರತು ಇದರ ಹಿಂದಿನ ಸಮಾಜೋ ಅರ್ಥಿಕ ಸಮಸ್ಯೆಗಳ ಪರಿಚಯವೇ ಇಲ್ಲ. ಎಲ್ಲವನ್ನು ಚುನಾವಣೆಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ ಎಂದು ನ್ಯಾ.ನಾಗಮೋಹನ್ ದಾಸ್ ನುಡಿದರು.
ಸಮಾನ ಶಿಕ್ಷಣ ಎಂಬುದು ಮರೀಚಿಕೆಯಾಗಿದೆ. ಐಸಿಎಇ, ಸಿಬಿಎಸ್‍ಐ, ಖಾಸಗಿ, ಸರಕಾರಿ, ಅನುದಾನಿತ, ಅನುದಾನ ರಹಿತ ಹೀಗೆ ಹಲವು ಭಾಗಗಳಾಗಿ ವಿಂಗಡಿಸಿ, ಬಡವರು, ತಳಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದಿಂದ ವಂಚಿಸಲಾಗುತ್ತಿದೆ. ದೊಡ್ಡ ಕಟ್ಟಡ, ಪೀಠೋಪಕರಣ, ಪ್ರಯೋಗಾಲಯಗಳೇ ಶಿಕ್ಷಣವೆಂದು ಸರಕಾರಗಳು ತಿಳಿದಂತಿದೆ. ಮಾನವೀಯ ಕಳಕಳಿ, ಸಾಮಾಜಿಕ ಸ್ಪಂದನೆ ಇಲ್ಲದ ಶಿಕ್ಷಣ, ಜನರ ಕಷ್ಟಗಳಿಗೆ ಪರಿಹಾರ ದೊರಕಿಸುವಂತಹ ಶಿಕ್ಷಣ ಇಲ್ಲವಾಗಿದೆ. ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮಕ್ಕಳಲ್ಲಿ ವಿಷಬೀಜ ಬಿತ್ತಿ, ಹಾಳು ಮಾಡಲಾಗುತ್ತಿದೆ ಎಂದು ನಾಗಮೋಹನ್ ದಾಸ್ ಕಳವಳ ವ್ಯಕ್ತಪಡಿಸಿದರು.
ಇಂದು ಶಿಕ್ಷಣ ಪಡೆದವರಲ್ಲಿ ನಿರುದ್ಯೋಗಿಗಳು, ಅರೆಉದ್ಯೋಗಿಗಳು, ಉದ್ಯೋಗಕ್ಕೆ ಆರ್ಹರಲ್ಲದವರ ಕಾಣಬಹುದಾಗಿದೆ. ಪದವಿ ಪಡೆದ ಶೇ80ರಷ್ಟು ಯುವಜನರಿಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯವೇ ಇಲ್ಲ.ದೇಶದಲ್ಲಿ 60.40 ಲಕ್ಷ ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿಯೇ ಸುಮಾರು 2.59 ಲಕ್ಷ ಮಂಜೂರಾದ ಹುದ್ದೆಗಳೇ ಖಾಲಿ ಇವೆ. ಇವುಗಳನ್ನು ತುಂಬುವಾಗ ರೋಸ್ಟರ್ ಪದ್ದತಿ ಅನುಸರಿಸಬೇಕು.ಆಗ ತಳಸಮುದಾಯಗಳಿಗೆ ಉದ್ಯೋಗ ದೊರೆತು ಅವರು ಅರ್ಥಿಕವಾಗಿ, ಸಾಮಾಜಿಕವಾಗಿ ಮುಂದೆ ಬರುತ್ತಾರೆ ಎಂಬ ಕಾರಣಕ್ಕೆ ಹುದ್ದೆಗಳನ್ನು ತುಂಬದೆ,ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಜೀತದಾಳುಗಳಂತೆ ದುಡಿಸಿಕೊಳ್ಳ ಲಾಗುತ್ತಿದೆ.ರಾಜ್ಯದ 29 ಇಲಾಖೆಗಳಲ್ಲಿ ಶೇ30ರಷ್ಟು ಉದ್ಯೋಗಿಗಳು ಹೊರಗುತ್ತಿಗೆ ಆಧಾರದಲ್ಲಿಯೇ ನೇಮಕಗೊಂಡವರು. ಇವರಿಗೆ ಯಾವುದೇ ಕಾರ್ಮಿಕ ಕಾಯ್ದೆ ಅನ್ವಯ ಆಗಲ್ಲ. ಇದು ಈ ದೇಶದ ದುರಂತ ಎಂದರು.
ದೇಶದಲ್ಲಿ ವಿಜ್ಞಾನ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದರೂ ಪೌರಕಾರ್ಮಿಕರ ಕೆಲಸಗಳಿಗೆ ಇವು ಬಳಕೆಯಾಗುತ್ತಿಲ್ಲ. ಇಂದಿಗೂ ಶೌಚಗುಂಡಿಗೆ ಪೌರಕಾರ್ಮಿಕರೇ ಇಳಿದು ಸ್ವಚ್ಚಗೊಳಿಸಬೇಕಿದೆ. ಒಂದು ವರದಿಯ ಪ್ರಕಾರ ವರ್ಷಕ್ಕೆ 300 ಜನ ಪೌರಕಾರ್ಮಿಕರು ತಾವು ಸೇವಾನಿರತರಾಗಿರುವಾಗಲೇ ಸಾವನ್ನಪ್ಪುತಿದ್ದಾರೆ.ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂಬ ನಿಮ್ಮ ಬೇಡಿಕೆ ನ್ಯಾಯಯುತವಾಗಿದೆ. 2017ರಲ್ಲಿ ಸರಕಾರದ ಆದೇಶ ಇದೆ. ಹಾಗಾಗಿ ಕಾನೂನಾತ್ಮಕ ಹೋರಾಟದಲ್ಲಿ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಜನಪರ ಹೋರಾಟಗಳೇ ಜನರ ಸಮಸ್ಯೆಗಳ ಪರಿಹಾರಕ್ಕೆ ಇರುವ ಮದ್ದು, ಹಾಗಾಗಿ ಎಲ್ಲರೂ ಒಗ್ಗೂಡಿ ಹೋರಾಟ ನಡೆಸುವಂತೆ ನ್ಯಾ.ನಾಗಮೋಹನ್ ದಾಸ್ ಪೌರಕಾರ್ಮಿಕರಿಗೆ ಸಲಹೆ ನೀಡಿದರು.
ಹಿರಿಯ ಚಿಂತಕ ಕೆ.ದೊರೆರಾಜು ಮಾತನಾಡಿ, ಪೌರಕಾರ್ಮಿಕರನ್ನು ಘನತೆಯಿಂದ ನಡೆಸಿಕೊಳ್ಳದಿರುವುದು ಈ ದೇಶದ ದುರಂತ. ಒಂದು ದಿನ ಅವರ ಕೆಲಸಕ್ಕೆ ಸಾಮೂಹಿಕ ರಜೆ ಹಾಕಿದರೆ, ಇಡೀ ದೇಶವೇ ಕೊಚ್ಚೆಗುಂಡಿಯಂತಾಗುತ್ತದೆ.ಹಾಗಾಗಿ ಪೌರಕಾರ್ಮಿಕರ ವೇತನ ಕುರಿತಂತೆ ಒಂದು ರಾಷ್ಟ್ರೀಯ ನೀತಿಯ ಅಗತ್ಯವಿದೆ. ಪೌರಕಾರ್ಮಿಕರನ್ನು ತಮ್ಮ ಬದುಕಿನ ಉನ್ನತ್ತಿಕರಣದತ್ತ ಗಮನಹರಿಸಬೇಕು. ನಮ್ಮಂತೆ ನಮ್ಮ ಮಕ್ಕಳು ಪೌರಕಾರ್ಮಿಕರಂತೆ ನೋಡಿಕೊಂಡರೆ, ಅದಕ್ಕಿಂತ ದೊಡ್ಡ ಬದಲಾವಣೆ ಮತ್ತೊಂದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಪೌರಕಾರ್ಮಿಕರು ಚಿಂತನೆ ನಡೆಸಬೇಕಿದೆ ಎಂದರು.
ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ ಮಾತನಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಕುರಿತಂತೆ ನಿರ್ದೇಶಕರ ಕಚೇರಿಯಲ್ಲಿ ಈಗಾಗಲೇ ಚರ್ಚೆ ಸಾಧ್ಯವಾದಷ್ಟು ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿಸಿ, ಉತ್ತಮ ಪ್ರಜೆಗಳಾಗಿ ರೂಪಿಸಿ ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಸ್ಲಂ ಜನಾಂದೋಲನದ ನರಸಿಂಹಮೂರ್ತಿ ಅವರು ಮಾತನಾಡಿ ಮುನಿಸಿಪಲ್ ಕಾರ್ಮಿಕರ ಐಕ್ಯ ಹೋರಾಟವನ್ನು ನಡೆಸಬೇಕಾಗಿದೆ ಎಂದರು.
ಪ್ರಾಸ್ತವಿಕ ನುಡಿಗಳನ್ನು ಅಡಿದ ಸೈಯದ್ ಮುಜೀಬ್ ಅವರು ನಾಗರಿಕ ಅಗತ್ಯಗಳಾದ ಸ್ವಚ್ಚತೆ, ನೀರು ಸರಬರಾಜು, ಒಳ ಚರಂಡಿ, ಪಾರ್ಕ , ಸ್ಮಶಾಣ, ಗಳಲ್ಲಿ ದುಡಿಯುವ ಕಾರ್ಮಿಕರು 80% ರಷ್ಟು ಗುತ್ತಿಗೆಆಧಾರದಲ್ಲಿ ಇದೆ , ಕಾನೂನು ಬದ್ದ ಸೌಲಭ್ಯಗಳನ್ನು ನೀಡದ ವಂಚಿಸಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮುನ್ಸಿಪಲ್ ಸಂಘದ ಅಧ್ಯಕ್ಷ ಹರೀಶ್ ನಾಯ್ಕ ವಹಿಸಿದ್ದರು.

(Visited 1 times, 1 visits today)
tumkur
Previous Articleಅಕ್ಷರ, ಆರ್ಥಿಕ ವಿಚಾರದಲ್ಲಿ ದಲಿತರಿಂದ ಕ್ರಾಂತಿ
Next Article ಬಾಲಕಿಯರ ಶಾಲಾ ಜಾಗ ವಿವಾದ: ಸರ್ವೆಗೆ ಮುಂದಾದ ಅಧಿಕಾರಿಗಳು
News Desk Benkiyabale

Related Posts

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
ತುಮಕೂರು

ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ

June 16, 2025 2:16 pm
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

June 16, 2025 2:07 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

By News Desk BenkiyabaleJune 16, 2025 3:18 pm

ತುಮಕೂರು: ಜಿಲ್ಲೆಯು ಪ್ರಾಚೀನ ಇತಿಹಾಸ ಮತ್ತು ಸಾಹಿತ್ಯಿಕ ಇತಿಹಾಸದಿಂದಲೂ ತುಂಬಾ ಪ್ರಸಿದ್ಧವಾಗಿದೆ. ಕೈದಾಳದಲ್ಲಿರುವ ಶಾಸನ ವಿಭಿನ್ನ ಧರ್ಮದ ಸೌಹಾರ್ಧತೆಯನ್ನು ಬಿಂಬಿಸುವAತಿದೆ.…

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.