BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ; ತಿರುಗಿಬಿದ್ದ ಎಂಡಿಎಲ್!
Trending

ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ; ತಿರುಗಿಬಿದ್ದ ಎಂಡಿಎಲ್!

By News Desk BenkiyabaleUpdated:June 30, 2022 5:18 pm

ತುಮಕೂರು:


ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ.
ವಿಧಾನಪರಿಷತ್ ಸದಸ್ಯ ಸ್ಥಾನ ಸಿಗದ ಕಾರಣಕ್ಕೆ ಮಾಜಿ ಸಚಿವ ಎಂ.ಆರ್.ಸೀತಾರಾಂ ಇತ್ತೀಚೆಗಷ್ಟೆ ಬೆಂಬಲಿಗರ ಸಭೆ ನಡೆಸಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
ಅದರ ಬೆನ್ನಲ್ಲೆ ಎಂ.ಡಿ.ಲಕ್ಷ್ಮೀನಾರಾಯಣ ಕೂಡ ವಿಧಾನ ಪರಿಷತ್ ಸ್ಥಾನ ಸಿಗದ ಕಾರಣಕ್ಕೆ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷ ತೊರೆಯುವ ಸಿದ್ಧತೆಯಲ್ಲಿದ್ದಾರೆ. ನನ್ನಹುಟ್ಟುಹಬಕ್ಕೆ ಬಂದು ನೀವು ಮಾತು ಕೊಟ್ಟಿದ್ದೇನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ನಾನು ತುರುವೇಕೆರೆ ಕ್ಷೇತ್ರದ ಟಿಕೆಟ್ ಬಯಸಿದ್ದೆ, ನೀವೇ ನನ್ನನ್ನ ಸಮಾಧಾನ ಪಡಿಸಿದ್ದಿರಿ. ಕಾಂತರಾಜುಗೆ ತುರುವೇಕೆರೆ ಟಿಕೆಟ್ ನೀಡುವ ಭರವಸೆ ನೀಡಿದ್ದೇನೆ. ನೀವು ಪಕ್ಷದ ಸಂಘಟನೆಯಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಾ. ನಿಮ್ಮನ್ನು ವಿಧಾನ ಪರಿಷತ್ ಸದಸ್ಯನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಡಿ.ಕೆ.ಶಿವಕುಮಾರ್ ಕೂಡ ಇದೇ ಭರವಸೆ ನೀಡಿದ್ದರು.
ಈಗ ಇಬ್ಬರು ಕೊಟ್ಟ ಮಾತನ್ನು ಮರೆತು ಬಿಟ್ಟಿದ್ದಾರೆ. ಇದು ನಿಮಗೆ ಒಪ್ಪುತ್ತಾ ಎಂದು ಲಕ್ಷ್ಮೀನಾರಾಯಣ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಬಿಟ್ಟು ಬಂದ ಬಳಿಕ ಹಲವಾರು ವರ್ಷಗಳಿಂದ ಮನೆ ಮಠ ತೊರೆದು ರಾತ್ರಿ ಹಗಲೆನ್ನದೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಸಂಘಟನೆ ಮಾಡಿದ ನಾನು ಈ ಘೋರ ಆನ್ಯಾಯ ಸಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ತುಮಕೂರು ಸಭೆ ಮುಗಿಸಿ ದಾಬಸ್ ಪೇಟೆ ಹತ್ತಿರ ಕಾಂತರಾಜು, ಗುಬ್ಬಿ ಶ್ರೀನಿವಾಸ್, ಮನೋಹರ್ ಜೊತೆ ಮಧ್ಯಾಹ್ನ ಊಟ ಮಾಡುವಾಗ. ತುರುವೇಕೆರೆಗೆ ಕಾಂತರಾಜು, ಗುಬ್ಬಿಗೆ ಶ್ರೀನಿವಾಸ್, ತಿಪಟೂರಿಗೆ ಷಡಾಕ್ಷರಿಯವರಿಗೆ ಸೀಟು ಕೊಡುತ್ತೇವೆ. ನಿಮ್ಮ ಸಂಘಟನೆ ರಾಜ್ಯಾದ್ಯಂತ ತುಂಬಾ ಒಳ್ಳೆಯ ಮಾಹಿತಿ ಬರುತ್ತಿದೆ. ಆದ್ದರಿಂದ ನಿಮ್ಮನ್ನು ಎಂ.ಎಲ್.ಸಿ ಮಾಡುತ್ತೇವೆ ಎಂದಿದ್ದರು. ದೆಹಲಿಯಲ್ಲಿ ನಿಮ್ಮಿಬ್ಬರ ಮಧ್ಯೆ ಇಡೀ ದಿವಸ ನಡೆಸಿದ ಗುದ್ದಾಟವೇನು? ಪಕ್ಷದ ಸಂಘಟನೆ ಬಗ್ಗೆ ಗುದ್ದಾಟ ಮಾಡಿ ಬರೀಗೈಯಲ್ಲಿ ವಾಪಾಸು ಬರಲು ಕಾರಣವೇನು? ಹೈಕಮಾಂಡ್ ನೀವಿಬ್ಬರೂ ಕೊಟ್ಟ ಹೆಸರುಗಳನ್ನು ಸಾರಾಸಗಟಾಗಿ ತಿರಸ್ಕಾರ ಮಾಡಲು ಕಾರಣವೇನು? ನಂತರ ತಾವೊಬ್ಬರೆ ದೆಹಲಿಗೆ 22 ರಾತ್ರಿ ಹೋಗಿ 23 ರಂದು ಇಡೀ ದಿವಸ ಸುಮ್ಮನಿದ್ದು, ಸಂಜೆ ಯಾರ ಒತ್ತಡಕ್ಕೆ ಮಣಿದು ಹೆಸರು ಬದಲಾವಣೆ ಮಾಡಿ ದೆಹಲಿ ಏರ್‍ಪೋರ್ಟ್ ನಿಂದ ನನಗೆ ದೂರವಾಣಿ ಮಾಡಿ ಹೇಳಿದ ಮಾತೇನು ? ಎಂದು ಪ್ರಶ್ನಿಸಿದ್ದಾರೆ.
ನಾನು ಮುಕ್ತವಾಗಿ ವಿಷಯ ತಿಳಿಸಿರುವೆ ಇನ್ನೂ ಬೇಕಾದಲ್ಲಿ ಅಗಸ್ಟ್‍ನಲ್ಲಿ ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಸಾರ್ವಜನಿಕರಿಗೆ ಕೆಲವು ವಿಷಯ ಬಹಿರಂಗ ಪಡಿಸುವೆ. ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲಿ ಈ ರೀತಿಯ ಕೆಟ್ಟ ನಡವಳಿಕೆಯ ಕಾಂಗ್ರೆಸ್ ಪಕ್ಷದ ನಾಯಕತ್ವ ನೋಡಿರಲಿಲ್ಲ. ನಿಮ್ಮಿಬ್ಬರ ಕುರ್ಚಿಯ ಕಚ್ಚಾಟದಿಂದ ಕಾರ್ಯಕರ್ತರು ಬಲಿಪಶುವಾಗಲಿದ್ದಾರೆ. ದೇವರು ನಿಮ್ಮನ್ನು ಚನ್ನಾಗಿಡಲೆಂದು ಆಶಿಸುತ್ತೇನೆ. ಧನ್ಯವಾದಗಳು ಎಂದು ಪತ್ರ ಮುಗಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಲಕ್ಷ್ಮೀನಾರಾಯಣ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡ್ತಾರೆ. ಈ ಇಬ್ಬರನ್ನು ಕರೆದು ಹೈಕಮಾಂಡ್ ಬುದ್ಧಿ ಹೇಳಬೇಕು. ಇಲ್ಲದೆ ಹೋದರೆ ಕಾರ್ಯಕರ್ತರು ನಿರಾಶರಾಗುತ್ತಾರೆ. ರಾಜ್ಯದಲ್ಲಿ ಏನೂ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಹಿರಿಯ ನಾಯಕರನ್ನಮೂಲೆಗುಂಪು ಮಾಡಲಾಗುತ್ತಿದೆ. ಪಕ್ಷ ಕಟ್ಟಿದವರನ್ನ ನೇಪಥ್ಯಕ್ಕೆ ಸರಿಸಲಾಗುತ್ತಿದೆ. ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂಬ ಎರಡು ಗುಂಪುಗಳಿವೆ. ನಾನು ಸುಮಾರು 70 ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೇನೆ. ಅಲ್ಲಿ ಒಂದು ಬಣ ಸಿದ್ದರಾಮಯ್ಯನ ಪರವಿದ್ದರೆ, ಇನ್ನೊಂದು ಬಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎನ್ನುತ್ತಿದೆ. ಎಷ್ಟೆ ಹೇಳಿದರು ಕಾರ್ಯಕರ್ತರು ಹೊಂದಿಕೊಳ್ಳಲು ತಯಾರಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಈವರೆಗೆ ದಲಿತ ಸಿಎಂ ಮಾಡಿಲ್ಲ. ಇಬ್ಬರನ್ನ ಬಿಟ್ಟು ಪರಮೇಶ್ವರ್ ಸಿಎಂ ಮಾಡಬೇಕು. ಪರಮೇಶ್ವರ್ ದಲಿತ ಸಮುದಾಯದ ನಾಯಕ, ಜೊತೆಗೆ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದವರು ಎಂದು ಹೇಳುವ ಮೂಲಕ ಅಸಮಧಾನಕ್ಕೆ ಸೋಟಕ ತಿರುವು ನೀಡಿದ್ದಾರೆ.

(Visited 27 times, 1 visits today)
Bangalore Congress MDL Siddaramaiah tumkur
Previous Articleಸ್ಮಾರ್ಟ್‍ಸಿಟಿ ಲಿಮಿಟೆಡ್‍ನ 132 ಕಾಮಗಾರಿಗಳು ಪೂರ್ಣ!
Next Article ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮ!
News Desk Benkiyabale

Related Posts

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm news

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news
ತಾಜಾ ಸುದ್ಧಿಗಳು

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
Our Youtube Channel
Our Picks

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

By News Desk BenkiyabaleJune 26, 2026 5:28 pm

ಕೊರಟಗೆರೆ: ತೋಟದ ಮನೆಯಲ್ಲಿದ್ದ ವೃದ್ದೆಯ ಕೈ ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಕಳ್ಳರನ್ನು ಕೊರಟಗೆರೆ ಸಿಪಿಐ…

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.