BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ; ತಿರುಗಿಬಿದ್ದ ಎಂಡಿಎಲ್!
Trending

ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ; ತಿರುಗಿಬಿದ್ದ ಎಂಡಿಎಲ್!

By News Desk BenkiyabaleUpdated:June 30, 2022 5:18 pm

ತುಮಕೂರು:


ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ.
ವಿಧಾನಪರಿಷತ್ ಸದಸ್ಯ ಸ್ಥಾನ ಸಿಗದ ಕಾರಣಕ್ಕೆ ಮಾಜಿ ಸಚಿವ ಎಂ.ಆರ್.ಸೀತಾರಾಂ ಇತ್ತೀಚೆಗಷ್ಟೆ ಬೆಂಬಲಿಗರ ಸಭೆ ನಡೆಸಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
ಅದರ ಬೆನ್ನಲ್ಲೆ ಎಂ.ಡಿ.ಲಕ್ಷ್ಮೀನಾರಾಯಣ ಕೂಡ ವಿಧಾನ ಪರಿಷತ್ ಸ್ಥಾನ ಸಿಗದ ಕಾರಣಕ್ಕೆ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷ ತೊರೆಯುವ ಸಿದ್ಧತೆಯಲ್ಲಿದ್ದಾರೆ. ನನ್ನಹುಟ್ಟುಹಬಕ್ಕೆ ಬಂದು ನೀವು ಮಾತು ಕೊಟ್ಟಿದ್ದೇನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ನಾನು ತುರುವೇಕೆರೆ ಕ್ಷೇತ್ರದ ಟಿಕೆಟ್ ಬಯಸಿದ್ದೆ, ನೀವೇ ನನ್ನನ್ನ ಸಮಾಧಾನ ಪಡಿಸಿದ್ದಿರಿ. ಕಾಂತರಾಜುಗೆ ತುರುವೇಕೆರೆ ಟಿಕೆಟ್ ನೀಡುವ ಭರವಸೆ ನೀಡಿದ್ದೇನೆ. ನೀವು ಪಕ್ಷದ ಸಂಘಟನೆಯಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಾ. ನಿಮ್ಮನ್ನು ವಿಧಾನ ಪರಿಷತ್ ಸದಸ್ಯನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಡಿ.ಕೆ.ಶಿವಕುಮಾರ್ ಕೂಡ ಇದೇ ಭರವಸೆ ನೀಡಿದ್ದರು.
ಈಗ ಇಬ್ಬರು ಕೊಟ್ಟ ಮಾತನ್ನು ಮರೆತು ಬಿಟ್ಟಿದ್ದಾರೆ. ಇದು ನಿಮಗೆ ಒಪ್ಪುತ್ತಾ ಎಂದು ಲಕ್ಷ್ಮೀನಾರಾಯಣ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಬಿಟ್ಟು ಬಂದ ಬಳಿಕ ಹಲವಾರು ವರ್ಷಗಳಿಂದ ಮನೆ ಮಠ ತೊರೆದು ರಾತ್ರಿ ಹಗಲೆನ್ನದೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಸಂಘಟನೆ ಮಾಡಿದ ನಾನು ಈ ಘೋರ ಆನ್ಯಾಯ ಸಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ತುಮಕೂರು ಸಭೆ ಮುಗಿಸಿ ದಾಬಸ್ ಪೇಟೆ ಹತ್ತಿರ ಕಾಂತರಾಜು, ಗುಬ್ಬಿ ಶ್ರೀನಿವಾಸ್, ಮನೋಹರ್ ಜೊತೆ ಮಧ್ಯಾಹ್ನ ಊಟ ಮಾಡುವಾಗ. ತುರುವೇಕೆರೆಗೆ ಕಾಂತರಾಜು, ಗುಬ್ಬಿಗೆ ಶ್ರೀನಿವಾಸ್, ತಿಪಟೂರಿಗೆ ಷಡಾಕ್ಷರಿಯವರಿಗೆ ಸೀಟು ಕೊಡುತ್ತೇವೆ. ನಿಮ್ಮ ಸಂಘಟನೆ ರಾಜ್ಯಾದ್ಯಂತ ತುಂಬಾ ಒಳ್ಳೆಯ ಮಾಹಿತಿ ಬರುತ್ತಿದೆ. ಆದ್ದರಿಂದ ನಿಮ್ಮನ್ನು ಎಂ.ಎಲ್.ಸಿ ಮಾಡುತ್ತೇವೆ ಎಂದಿದ್ದರು. ದೆಹಲಿಯಲ್ಲಿ ನಿಮ್ಮಿಬ್ಬರ ಮಧ್ಯೆ ಇಡೀ ದಿವಸ ನಡೆಸಿದ ಗುದ್ದಾಟವೇನು? ಪಕ್ಷದ ಸಂಘಟನೆ ಬಗ್ಗೆ ಗುದ್ದಾಟ ಮಾಡಿ ಬರೀಗೈಯಲ್ಲಿ ವಾಪಾಸು ಬರಲು ಕಾರಣವೇನು? ಹೈಕಮಾಂಡ್ ನೀವಿಬ್ಬರೂ ಕೊಟ್ಟ ಹೆಸರುಗಳನ್ನು ಸಾರಾಸಗಟಾಗಿ ತಿರಸ್ಕಾರ ಮಾಡಲು ಕಾರಣವೇನು? ನಂತರ ತಾವೊಬ್ಬರೆ ದೆಹಲಿಗೆ 22 ರಾತ್ರಿ ಹೋಗಿ 23 ರಂದು ಇಡೀ ದಿವಸ ಸುಮ್ಮನಿದ್ದು, ಸಂಜೆ ಯಾರ ಒತ್ತಡಕ್ಕೆ ಮಣಿದು ಹೆಸರು ಬದಲಾವಣೆ ಮಾಡಿ ದೆಹಲಿ ಏರ್‍ಪೋರ್ಟ್ ನಿಂದ ನನಗೆ ದೂರವಾಣಿ ಮಾಡಿ ಹೇಳಿದ ಮಾತೇನು ? ಎಂದು ಪ್ರಶ್ನಿಸಿದ್ದಾರೆ.
ನಾನು ಮುಕ್ತವಾಗಿ ವಿಷಯ ತಿಳಿಸಿರುವೆ ಇನ್ನೂ ಬೇಕಾದಲ್ಲಿ ಅಗಸ್ಟ್‍ನಲ್ಲಿ ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಸಾರ್ವಜನಿಕರಿಗೆ ಕೆಲವು ವಿಷಯ ಬಹಿರಂಗ ಪಡಿಸುವೆ. ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲಿ ಈ ರೀತಿಯ ಕೆಟ್ಟ ನಡವಳಿಕೆಯ ಕಾಂಗ್ರೆಸ್ ಪಕ್ಷದ ನಾಯಕತ್ವ ನೋಡಿರಲಿಲ್ಲ. ನಿಮ್ಮಿಬ್ಬರ ಕುರ್ಚಿಯ ಕಚ್ಚಾಟದಿಂದ ಕಾರ್ಯಕರ್ತರು ಬಲಿಪಶುವಾಗಲಿದ್ದಾರೆ. ದೇವರು ನಿಮ್ಮನ್ನು ಚನ್ನಾಗಿಡಲೆಂದು ಆಶಿಸುತ್ತೇನೆ. ಧನ್ಯವಾದಗಳು ಎಂದು ಪತ್ರ ಮುಗಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಲಕ್ಷ್ಮೀನಾರಾಯಣ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡ್ತಾರೆ. ಈ ಇಬ್ಬರನ್ನು ಕರೆದು ಹೈಕಮಾಂಡ್ ಬುದ್ಧಿ ಹೇಳಬೇಕು. ಇಲ್ಲದೆ ಹೋದರೆ ಕಾರ್ಯಕರ್ತರು ನಿರಾಶರಾಗುತ್ತಾರೆ. ರಾಜ್ಯದಲ್ಲಿ ಏನೂ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಹಿರಿಯ ನಾಯಕರನ್ನಮೂಲೆಗುಂಪು ಮಾಡಲಾಗುತ್ತಿದೆ. ಪಕ್ಷ ಕಟ್ಟಿದವರನ್ನ ನೇಪಥ್ಯಕ್ಕೆ ಸರಿಸಲಾಗುತ್ತಿದೆ. ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂಬ ಎರಡು ಗುಂಪುಗಳಿವೆ. ನಾನು ಸುಮಾರು 70 ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೇನೆ. ಅಲ್ಲಿ ಒಂದು ಬಣ ಸಿದ್ದರಾಮಯ್ಯನ ಪರವಿದ್ದರೆ, ಇನ್ನೊಂದು ಬಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎನ್ನುತ್ತಿದೆ. ಎಷ್ಟೆ ಹೇಳಿದರು ಕಾರ್ಯಕರ್ತರು ಹೊಂದಿಕೊಳ್ಳಲು ತಯಾರಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಈವರೆಗೆ ದಲಿತ ಸಿಎಂ ಮಾಡಿಲ್ಲ. ಇಬ್ಬರನ್ನ ಬಿಟ್ಟು ಪರಮೇಶ್ವರ್ ಸಿಎಂ ಮಾಡಬೇಕು. ಪರಮೇಶ್ವರ್ ದಲಿತ ಸಮುದಾಯದ ನಾಯಕ, ಜೊತೆಗೆ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದವರು ಎಂದು ಹೇಳುವ ಮೂಲಕ ಅಸಮಧಾನಕ್ಕೆ ಸೋಟಕ ತಿರುವು ನೀಡಿದ್ದಾರೆ.

(Visited 27 times, 1 visits today)
Bangalore Congress MDL Siddaramaiah tumkur
Previous Articleಸ್ಮಾರ್ಟ್‍ಸಿಟಿ ಲಿಮಿಟೆಡ್‍ನ 132 ಕಾಮಗಾರಿಗಳು ಪೂರ್ಣ!
Next Article ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮ!
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.