BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತ ಮುಖಂಡರ ವಿರುದ್ಧ ಕೇಸು ದಾಖಲು: ಪ್ರತಿಭಟನೆ
ಇತರೆ ಸುದ್ಧಿಗಳು

ರೈತ ಮುಖಂಡರ ವಿರುದ್ಧ ಕೇಸು ದಾಖಲು: ಪ್ರತಿಭಟನೆ

By News Desk BenkiyabaleUpdated:July 08, 2022 6:24 pm

ತುಮಕೂರು:


ಕುಣಿಗಲ್ ಶಾಸಕರ ಹೆಸರಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಸುತ್ತಮುತ್ತಲ ಗ್ರಾಮಗಳ ಜನರಿಗೆ ಆಗುತ್ತಿರುವ ತೊಂದರೆ ಕುರಿತಂತೆ ಪ್ರತಿಭಟನೆ ಮಾಡಿದ್ದನ್ನೇ ನೆಪ ಮಾಡಿಕೊಂಡು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಹಾಗೂ ಅವರ ಸಂಗಡಿಗರ ವಿರುದ್ದ ಪೊಲೀಸರು ಐಪಿಸಿ ಕಲಂ 307ರ ಅಡಿಯಲ್ಲಿ ಕೇಸು ದಾಖಲಿಸಿದ್ದು, ಕೂಡಲೇ ಕೇಸು ಹಿಂಪಡೆಯುವಂತೆ ಆಗ್ರಹಿಸಿ ಇಂದು ರೈತ ಸಂಘದ ಪದಾಧಿಕಾರಿಗಳು, ಕೆ.ಆರ್.ಎಸ್ ಪಾರ್ಟಿಯ ಸಹಕಾರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಣ್ಣ ಅವರ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ರೈತ ಮುಖಂಡರು, ಬೀಸೆಗೌಡನದೊಡ್ಡಿ, ರಾಜಪ್ಪನದೊಡ್ಡಿ, ಹೊನ್ನಮಾಚನಹಳ್ಳಿ, ಹೊಸಹಳ್ಳಿದೊಡ್ಡಿ,ನಿಡಶಾಲೆ ಗ್ರಾಮಪಂಚಾಯಿತಿಗಳ ಸಾರ್ವಜನಿಕರ ಮೇಲೆ ಶಾಸಕರ ಕುಮ್ಮಕ್ಕಿನಿಂದ ಕೊಲೆಯತ್ನ ಪ್ರಕರಣ ದಾಖಲು ಮಾಡಿರುವುದು ಖಂಡನೀಯ.ಕೂಡಲೇ ಕೇಸ್‍ಗೆ ಬಿ.ರಿಪೋರ್ಟ್ ಹಾಕಿ, ಶಾಸಕರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆ ನಿರತ ರೈತ ಸಂಘದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ವೀರಣ್ಣ,ಬೀಸೆಗೌಡನದೊಡ್ಡಿ ಗ್ರಾಮದ ಸರ್ವೆ ನಂ 82ರಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರ ಹೆಸರಿನ್ಲಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಪ್ರಶ್ನಿಸಲು ತೆರಳಿದ್ದ ಆನಂದ ಪಟೇಲ್ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರ ಮೇಲೆ ಶಾಸಕರ ಕುಮ್ಮಕ್ಕಿನಿಂದ ಸುಳ್ಳು ಪ್ರಕರಣ ದಾಖಲಿಸಿ,ಕೆಲವರನ್ನು ಬಂಧಿಸಿದ್ದು, ಇದು ಖಂಡನೀಯ.ಕೂಡಲೇ ಇದನ್ನು ಕೈಬಿಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.
ಪೊಲೀಸರು ಈ ಪ್ರಕರಣದಲ್ಲಿ ರೌಡಿಗಳ ರೀತಿ ವರ್ತಿಸಿದ್ದಾರೆ.ಆನಂದ ಪಟೇಲ್ ಅವರ ಬೆಂಗಳೂರಿನ ಮನೆಗೆ ಹೋಗಿ, ಅವರ ಹೆಂಡತಿ ಒಬ್ಬರೇ ಇರುವಾಗ ಅನುಚಿತವಾಗಿ ವರ್ತಿಸಿರುವುದಲ್ಲದೇ,ಕಬೋರ್ಡ್,ಕಾರು ಅಡಿಯಲ್ಲಿ ಹುಡುಕಿ ಇನ್ನಿಲ್ಲದಂತೆ ಕಿರುಕುಳ ನೀಡಿದ್ದಾರೆ. ಪೊಲೀಸರಿಗೆ ಹೆಂಡತಿ ಮಕ್ಕಳು ಇಲ್ಲವೇ, ಇವರಿಗೆ ಮಾನವೀಯತೆ ಎಂಬುದು ಇಲ್ಲವೇ ಎಂದು ಪ್ರಶ್ನಿಸಿದ ವೀರೇಶ್,ಎಫ್‍ಐಆರ್ ಹಾಕುವ ಮೊದಲೇ ಯಾವುದೇ ಸರ್ಚ ವಾರೆಂಟ್ ಇಲ್ಲದೆ ದಾಳಿ ಮಾಡಲು ಅನುಮತಿ ನೀಡಿದವರು ಯಾರು. ಕೂಡಲೇ ಹುಲಿಯೂರು ದುರ್ಗ ಸಬ್ ಇನ್ಸ್ ಪೆಕ್ಟರ್ ಚೇತನ್ ಕುಮಾರ್ ವಿರುದ್ದ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ರೈತ ಹೋರಾಟಗಾರ ಕೆಂಕರೆ ಸತೀಶ್ ಮಾತನಾಡಿ, ಕಲ್ಲು ಗಣಿಗಾರಿಕೆಯಿಂದ ಬೀಸೆಗೌಡನದೊಡ್ಡಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳೆಯುವ ರೇಷ್ಮೆ ಉಪ್ಪುನೇರಳೆ ಗಿಡದ ಮೇಲೆ ಧೂಳಿನ ಕಣಗಳು ಕುಳಿತು,ರೇಷ್ಮೆ ಗೂಡುಕಟ್ಟುತ್ತಿಲ್ಲ.ತಿನ್ನುವ ಅನ್ನದ ಮೇಲೆ ಕಲ್ಲಿನ ಕಣಗಳಿರುತ್ತವೆ. ಕುಡಿಯುವ ನೀರು ಕೂಡ ಕಲುಷಿತಗೊಂಡಿದೆ.ಜನರು ಹಲವಾರು ರೋಗಗಳಿಂದ ನರಳುತ್ತಿದ್ದಾರೆ. ಇದರ ವಿರುದ್ದ ಗ್ರಾಮಸ್ಥರು, ಅದರಲ್ಲಿ ಮಹಿಳೆಯರು ಅಹೋರಾತ್ರಿ ಧರಣಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಇದುವರೆಗೆ ಕ್ರಮ ಕೈಗೊಂಡಿಲ್ಲ.ಗ್ರಾಮಸ್ಥರ ನಡುವೆ ನಡೆದ ಗಲಾಟೆಗೆ ಆನಂದ ಪಟೇಲ್ ಅವರ ಹೆಸರು ತಳಕು ಹಾಕಿ ಅವರ ವಿರುದ್ದ 8 ವಿವಿಧ ಸಕ್ಷನ್‍ಗಳ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.ಇದು ಖಂಡನೀಯ. ಸರಕಾರದ ಈ ನಡೆ ಅಧಿಕಾರಿ ವರ್ಗದ ದಾಸ್ಯತನಕ್ಕೆ ಸಾಕ್ಷಿಯಾಗಿದೆ ಎಂದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ದಾವಣಗೆರೆ ಜಿಲ್ಲಾಧ್ಯಕ್ಷ ಚನ್ನಬಸಪ್ಪ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ತುಮಕೂರು ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯ್ ಆರಾಧ್ಯ ಹಾಸನ ಜಿಲ್ಲಾಧ್ಯಕ್ಷ ಬಾಬು ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

(Visited 29 times, 1 visits today)
Protest tumkur
Previous Articleರೌಡಿಗಳಿಗೆ ಚಳಿ ಬಿಡಿಸಿದ ಎಸ್ಪಿ ರಾಹುಲ್ ಕುಮಾರ್
Next Article ಆ.16 ರಿಂದ ಎಲ್‍ಸಿಡಿಸಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.