BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಕ್ಕೆ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಜಯಕರ್ನಾಟಕ ಜನಪರ ವೇದಿಕೆ: ಜೆ.ಶ್ರೀನಿವಾಸ್
ಇತರೆ ಸುದ್ಧಿಗಳು

ಸರ್ಕಾರಕ್ಕೆ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಜಯಕರ್ನಾಟಕ ಜನಪರ ವೇದಿಕೆ: ಜೆ.ಶ್ರೀನಿವಾಸ್

By News Desk BenkiyabaleUpdated:August 24, 2022 5:27 pm

ತುಮಕೂರು:

ಸರ್ಕಾರಕ್ಕೆ ಮತ್ತು ಸಾರ್ವಜನಿಕರ ಮಧ್ಯೆ
ಸೇತುವೆಯಾಗಿ ಜಯಕರ್ನಾಟಕ ಜನಪರ ವೇದಿಕೆ ಕೆಲಸ
ಮಾಡುತ್ತಿದೆ ಎಂದು ಜಯಕರ್ನಾಟಕ ಜನಪರ ವೇದಿಕೆ
ಬೆಂಗಳೂರು ನಗರ ಅಧ್ಯಕ್ಷ ಹಾಗೂ ತುಮಕೂರು ಜಿಲ್ಲಾ
ವೀಕ್ಷಕ ಜೆ.ಶ್ರೀನಿವಾಸ್ ತಿಳಿಸಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ಜಯಕರ್ನಾಟಕ ಜನಪರ
ವೇದಿಕೆ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಂಘಟನೆಯ
ಯುವಸಂಸ್ಥಾಪಕ ಅಧ್ಯಕ್ಷರು ಪರಿಸರವಾದಿಗಳಾದ
ಬಿ.ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನ ಮತ್ತು
ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಅವರ ನೇತೃತ್ವದಲ್ಲಿ
ಹಲವಾರು ಸಮಾಜಮುಖಿ ಕೆಲಸಗಳು, ಪರಿಸರ ಕಾಳಜಿ
ಇಟ್ಟುಕೊಂಡು ರಾಜ್ಯಾದ್ಯಂತ ಸಂಘಟನೆ ಕೆಲಸ ಮಾಡುತ್ತಿದೆ
ಎಂದರು.
ನಮ್ಮ ಸಂಘಟನೆ ವತಿಯಿಂದ ಹಲವಾರು ಕೆರೆಗಳ ಅಭಿವೃದ್ಧಿ
ಮಾಡಲಾಗಿದೆ. ಕೆರೆಗಳನ್ನು ದತ್ತು ಪಡೆದು ಸಸಿ,
ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳಲಾಗಿದೆ. 75ನೇ ಸ್ವಾತಂತ್ರ್ಯದ
ಅಮೃತಮಹೋತ್ಸವದ ಅಂಗವಾಗಿ ಅರಣ್ಯ ಇಲಾಖೆಯವರು
ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರ
ಮತ್ತು ಅರಣ್ಯ ಇಲಾಖೆಯ ಜೊತೆಗೂಡಿ ಜಯಕರ್ನಾಟಕ ಜನಪರ
ವೇದಿಕೆ ಕೆ.ಆರ್.ಪುರ ಮತ್ತು ಮಹದೇವಪುರ ವಿಧಾನಸಭಾ
ಕ್ಷೇತ್ರದ ಸಂಡೂರು ಮತ್ತು ಜ್ಯೋತಿಪುರ ಅರಣ್ಯ ಇಲಾಖೆ
ಪ್ರದೇಶದಲ್ಲಿ 500 ಸಸಿಗಳನ್ನು ನೆಡಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ
ಎಸ್.ಎಸ್.ಘಾಟ್‍ನಲ್ಲೂ ಸಹ ಅರಣ್ಯ ಇಲಾಖೆ ಜೊತೆಯಲ್ಲಿ 1500
ಗಿಡಗಳನ್ನು ನೆಟ್ಟು ಪರಿಸರ ಉಳಿಸುವಂತಹ
ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸರ್ಕಾರಿ ಜಾಗಗಳು,
ಗುಂಡುತೋಪು, ಸರ್ಕಾರಿ ಗೋಮಾಳ, ಕೆರೆ ಅಂಗಳ, ಬಫರ್
ಜೋನ್ಸ್ , ಕೆರೆ, ಕುಂಟೆಗಳು, ಗೋ ಕಟ್ಟೆಗಳು,
ಈತರಹದ ಸರ್ಕಾರಿ ಜಾಗಗಳನ್ನು ಎಲ್ಲಾ ಭೂ ಮಾಫಿಯಾದವರು
ಕಬಳಿಸಿ ಅವರು ಲೇಔಟ್ ಮಾಡಿ ಮಾರಾಟ ಮಾಡುವಂತಹ ಕೆಲಸ
ಮಾಡುತ್ತಿದ್ದಾರೆ ಅದು ಆಗಬಾರದು. ಸರ್ಕಾರಿ ಜಾಗ ಎಲ್ಲೇ
ಇದ್ದರೂ ನಮ್ಮ ಸಂಘಟನೆಗೆ ಕೊಡಿ ಗಿಡ ಹಾಕಿ ಅಭಿವೃದ್ಧಿ ಪಡಿಸಿ
ಮತ್ತೆ ನಾವು ಸರ್ಕಾರಕ್ಕೆ ವಾಪಸ್ ಕೊಡುತ್ತೇವೆ ಎಂದು ರಾಜ್ಯದ
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ ಎಂದು
ಹೇಳಿದರು.
ಈಗಾಗಲೇ ಸುಮಾರು 4 ಕೆರೆಗಳನ್ನು ದತ್ತು
ತೆಗೆದುಕೊಂಡು ಅಭಿವೃದ್ಧಿಪಡಿಸಲಾಗುತ್ತಿದೆ. ತುಮಕೂರು
ಜಿಲ್ಲೆಯಲ್ಲೂ ಸಹ ಎಲ್ಲೇ ಸಕಾರಿ ಜಾಗಗಗಳಿದ್ದರೂ ಆ
ಜಾಗಗಳನ್ನು ನಮಗೆ ಕೊಡಿ ನಮ್ಮ ಸಂಘಟನೆಯಿಂದ
ಅಭಿವೃದ್ಧಿ ಪಡಿಸಿ ಮತ್ತೆ ನಿಮಗೆ ವಾಪಸ್ ಕೊಡುತ್ತೇವೆ ಎಂದು
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಮೇಲೆ
ಲೈಂಗಿಕ ದೌರ್ಜನ್ಯ ತಡೆಗೆ ನಮ್ಮ ಸಂಘಟನೆ ಮೂಲಕ ಎಲ್ಲಾ
ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ
ಕೊಡುವುದರ ಮೂಲಕ ಸರ್ಕಾರದ ಬಾಗಿಲನ್ನು ತಟ್ಟಿದ್ದೇವೆ.
ಬೆಳಗಾವಿಯಲ್ಲಿ ರಾಷ್ಟ್ರಧ್ವಜ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು
ಸಂಘಟನೆಗಳು ನಡೆಸಿದ ಬೆಂಗಳೂರು ಬಂದ್‍ಗೆ ಕಿವಿಗೊಡದೆ
ಬೆಂಗಳೂರಿನಿಂದ ದೆಹಲಿ ಚಲೋ ಕಾರ್ಯಕ್ರಮ ಆಯೋಜನೆ
ಮಾಡಿ ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸಿ ಅಲ್ಲಿನ
ಗೃಹಮಂತ್ರಿಗಳು, ಪ್ರಧಾನಮಂತ್ರಿಗಳ ಕಚೇರಿಗೆ ಮನವಿ
ಕೊಡಲಾಗಿತ್ತು ಎಂದರು.
ಮಹಿಳೆಯರಿಗೆ ಮತ್ತು ದೀನದಲಿತರಿಗೆ ಶೋಷಣೆಯಾದಾಗ
ಧ್ವನಿ ಎತ್ತುವಂತಹ ಕೆಲಸವನ್ನು ನಮ್ಮ ಸಂಘಟನೆ
ಮಾಡಿಕೊಂಡು ಬರುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಇಂದು
ವಿಶೇಷ ಸಭೆಯನ್ನು ನಡೆಸಲಾಗುತ್ತಿದೆ. ನೂತನ ಜಿಲ್ಲಾ ಘಟಕ
ಮತ್ತು ಎಲ್ಲಾ ತಾಲ್ಲೂಕು ಘಟಕಗಳ ಪುನರ್ ರಚನೆ
ಮಾಡುವ ಸಂಬಂಧ ಇಂದು ವಿಶೇಷ ಸಭೆಯಲ್ಲಿ
ತೀರ್ಮಾನಿಸಲಾಗುತ್ತಿದೆ ಎಂದರು.
ಶಾಲೆಗಳಿಗೆ ಸರಿಯಾಗಿ ಹೋಗದ ಶಿಕ್ಷಕರು ಮತ್ತು
ಇಲಾಖೆಗಳಿಗೆ ಗೈರಾಗುವ ಅಧಿಕಾರಿಗಳನ್ನು ಸಸ್ಪೆಂಡ್
ಮಾಡಿಸುವಂತಹ ಕೆಲಸ ನಮ್ಮ ಸಂಘಟನೆ ಮಾಡಿದೆ ಎಂದರು.
ಸಮಾಜದಲ್ಲಿ ಒಳ್ಳೆಯವರು ಸುಮ್ಮನೆ ಕುಳಿತಿರುವುದರಿಂದ
ಕೆಟ್ಟವರು ಹೆಚ್ಚಾಗುತ್ತಿದ್ದಾರೆ. ಒಳ್ಳೆಯವರು ಧ್ವನಿ ಎತ್ತಿದಾಗ
ಮಾತ್ರ ಕೆಟ್ಟವರು ಸುಮ್ಮನಾಗುತ್ತಾರೆ. ಒಳ್ಳೆಯವರು ಧ್ವನಿ
ಎತ್ತದೆ ಸುಮ್ಮನೆ ಕುಳಿತಿರುವುದರಿಂದ ಕೆಟ್ಟವರು ಹೆಚ್ಚಾಗಲು
ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಪ್ರಧಾನ
ಕಾರ್ಯದರ್ಶಿ ಸೇವ ರಾಧಾಕೃಷ್ಣ, ರಾಜ್ಯ ಸಂಚಾಲಕ ಪ್ರಕಾಶ್‍ಗೌಡ,
ರಾಜ್ಯ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷ
ಕೆ.ಎನ್.ಜಗದೀಶ್, ಬೆಂಗಳೂರು ನಗರ ಸಂಚಾಲಕ ರಾಹುಲ್
ಆಚಾರ್ಯ, ನೀಲಕಂಠೇಗೌಡ, ಅನಿಲ್ ಶೆಟ್ಟಿ, ಉಮೇಶ್‍ಪೂಂಜಾ, ಜಿಲ್ಲಾ
ಪದಾಧಿಕಾರಿಗಳಾದ ಮಂಜುನಾಥ್, ಶ್ರೀಧರ್, ಜಯಪ್ರಕಾಶ್,
ಬಿ.ಟಿ.ಕುಮಾರ್, ಬಸವರಾಜ್, ರಾಘವೇಂದ್ರ, ದಯಾನಂದ್,
ಯೂನಸ್, ಸಚಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 2 times, 1 visits today)
Previous Articleಮಕ್ಕಳ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡಾಗ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ :ಪರಶಿವಮೂರ್ತಿ
Next Article ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿಯುವಂತೆ ಮಾಡುವುದು ಪಕ್ಷದ ಗುರಿಯಾಗಬೇಕು : ಮಯೂರ ಜಯಕುಮಾರ್
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.